ವಿಷಯಕ್ಕೆ ಹೋಗಿ

ಧಾರ್ಮಿಕ ಆಚರಣೆಗಳಿಂದ ಸುಖಶಾಂತಿ ಲಭ್ಯ : ನರೇಂದ್ರಬಾಬು ಶರ್ಮ

ಮಾನವ ಜೀವನದಲ್ಲಿ ಆರೋಗ್ಯ ಹಾಗೂ ಸುಖಶಾಂತಿ ಅಗತ್ಯವಾಗಿದ್ದು ಧಾರ್ಮಿಕ ಆಚರಣೆಗಳನ್ನು ನಡೆಸುವುದರಿಂದ ದೇವರ ಕೃಪೆಯುಂಟಾಗಿ ಜೀವನದಲ್ಲಿ ಸುಖಶಾಂತಿ ಲಭಿಸುವುದರ ಜೊತೆಗೆ ಪ್ರಕೃತಿಯೂ ಸಹ ಸುಭಿಕ್ಷವಾಗಿರುತ್ತದೆ ಎಂದು ಬೃಹತ್ ಬ್ರಹ್ಮಾಂಡ ಖ್ಯಾತಿಯ ಶ್ರೀನರೇಂದ್ರಬಾಬು ಶರ್ಮಾಜಿಯವರು ತಿಳಿಸಿದರು.
ಹುಳಿಯಾರು ಹೋಬಳಿ ಪುರದಮಠದ ಪುರಾತನ ಗವಿಯಲ್ಲಿ ಶಿವಪೂಜಾನುಷ್ಠಾನ ಮುಕ್ತಾಯ ಕಾರ್ಯದಲ್ಲಿ ಶ್ರೀನರೇಂದ್ರಬಾಬು ಶರ್ಮಾಜಿ ,ಯಡೆಯೂರು ಕ್ಷೇತ್ರದ ಶ್ರೀ ರೇಣುಕಶಿವಾಚಾರ್ಯ ಮಹಾಸ್ವಾಮೀಜಿ, ಶ್ರೀ ಡಾ.ಯತೀಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಅಶೀರ್ವಚನ ನೀಡಿದರು.
ಹುಳಿಯಾರು ಹೋಬಳಿ ಕೆಂಕೆರೆ ಗ್ರಾಮದ ಪುರದಮಠದ ಪುರಾತನ ಗವಿಯಲ್ಲಿ ಕಳೆದ ಸೋಮವಾರದಿಂದ ಪ್ರಾರಂಭವಾಗಿದ್ದ ಶಿವಪೂಜಾನುಷ್ಠಾನ ಹಾಗೂ ಮೌನಾನುಷ್ಠಾನದ ಮುಕ್ತಾಯ ಸಮಾರಂಭದಲ್ಲಿ ಅವರು ಅಶೀರ್ವಚನ ನೀಡಿದರು.
ಈ ಹಿಂದೆಯಿದ್ದ ಹಲವರು ದೈವಾಂಶ ಸಂಭೂತರಾಗಿದ್ದು ಗ್ರಾಮದ ಏಳ್ಗೆಗಾಗಿ ಧ್ಯಾನ,ತಪ್ಪಸ್ಸು ಮಾಡಿದ್ದಾರೆ. ಅಂತಹವರ ಸಾಲಿನಲ್ಲಿ ಕುಪ್ಪೂರು ಮರುಳಸಿದ್ದೇಶ್ವರರು ಸಹ ಒಬ್ಬರಾಗಿದ್ದು ಅವರು ಧ್ಯಾನ ಮಾಡಿ ಹೋದಂತಹ ಸ್ಥಳದಲ್ಲಿ ಶಿವಪೂಜಾನುಷ್ಠಾನ ಹಾಗೂ ಮೌನಾನುಷ್ಠಾನ ಕಾರ್ಯ ನಡೆದಿರುವುದು ಈ ಕ್ಷೇತ್ರಕ್ಕೆ ಒಳಿತನ್ನುಂಟುಮಾಡಲಿದೆ ಎಂದರು. ಕುಫ್ಫೂರಿನ ಶ್ರೀಗಳು ಲೋಕಕಲ್ಯಾಣಾರ್ಥವಾಗಿ ಕೈಗೊಂಡಿರುವ ಈ ಕಾರ್ಯದಲ್ಲಿ ಯಶಸ್ಸು ಸಿಗಲಿ ಎಂದರು.
ಸೋಮವಾರದಿಂದ ಮೌನವ್ರತಾಚರಣೆಯಲ್ಲಿದ್ದ ಕುಪ್ಪೂರು ಗದ್ದಿಗೆ ಮಠದ ಶ್ರೀ ಡಾ.ಯತೀಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಗವಿಯಲ್ಲೇ ತಂಗಿದ್ದು ಶುಕ್ರವಾರ ಬೆಳಿಗ್ಗೆ ಅಂತಿಮ ಪೂಜೆ ನಡೆಸಿ ಆಗಮಿಸಿದ ಭಕ್ತಾಧಿಗಳಿಗೆ ಆಶೀರ್ವಚನ ನೀಡಿದರು. ಚನ್ನಬಸವೇಶ್ವರರ ಈ ಕ್ಷೇತ್ರ ಹೆಚ್ಚು ಮಹತ್ವದಾಗಿದ್ದು ಇಲ್ಲಿ ಕಾರ್ಯ ಮಾಡುವಂತೆ ತಮಗೆ ಅನುಷ್ಠಾನವಾದ ಹಿನ್ನಲೆಯಲ್ಲಿ ಗ್ರಾಮದೇವತೆ ಕಾಳಿಕಾಂಬ ದೇವಿಯ ಅಪ್ಪಣೆಯಂತೆ ಕಾರ್ಯ ಮಾಡಿರುವುದಾಗಿ ತಿಳಿಸಿದರು. ಮುಂದಿನ ೫ ವರ್ಷಗಳ ಪ್ರತಿ ಅಷಾಢ ಮಾಸದಲ್ಲಿ ಇಲ್ಲಿಗೆ ಬಂದು ಈ ಕಾರ್ಯವನ್ನು ಮುಂದುವರಿಸಿಕೊಂಡು ಹೋಗುವುದಾಗಿ ತಿಳಿಸಿದರು.

ಈ ವೇಳೆ ಯಡೆಯೂರು ಕ್ಷೇತ್ರದ ಶ್ರೀ ರೇಣುಕಶಿವಾಚಾರ್ಯ ಮಹಾಸ್ವಾಮೀಜಿ ಉಪಸ್ಥಿತರಿದ್ದರು. ಪುರೋಹಿತರಾದ ಮಲ್ಲಿಕಾರ್ಜುನಯ್ಯ,ನಟರಾಜ್, ವೀರೇಶ್,ಶರಣ ಗಂಗಾಧರಯ್ಯ, ಕೆ.ಎಸ್.ಎಂ.ಸ್ವಾಮಿ, ಚನ್ನಬಸವಯ್ಯ, ದಿಲೀಪ್, ಮಧು, ಡಿ.ಜಿ.ಕುಮಾರ್,ಪ್ರದೀಪ್ ಉಸ್ತುವಾರಿ ನಿರ್ವಹಿಸಿದರು. ಕೆಂಕೆರೆ ಗ್ರಾ.ಪಂ.ಅಧ್ಯಕ್ಷೆ ಜಯಮ್ಮ, ಉಪಾಧ್ಯಕ್ಷ ಪಂಚಾಕ್ಷರಿ, ತಾ.ಪಂ.ಸದಸ್ಯ ನವೀನ್, ಗ್ರಾ.ಪಂ.ಸದಸ್ಯರಾದ ರಾಮಲಿಂಗಯ್ಯ, ಅಶಾ, ಜಯಣ್ಣ ಸೇರಿದಂತೆ ಕೆಂಕೆರೆ,ಹುಳಿಯಾರು ಸುತ್ತಮುತ್ತಲ ಹಳ್ಳಿಯ ಭಕ್ತಾಧಿಗಳು ಆಗಮಿಸಿ ಸ್ವಾಮಿಜೀಯವರ ಆಶೀರ್ವಾದ ಪಡೆದರು. ಆಗಮಿಸಿದ ಭಕ್ತಾಧಿಗಳಿಗೆ ಊಟದ ವ್ಯವಸ್ಥೆ ಮಾಡಿದ್ದರು. ಸಂಜೆ ಪುರದಮಠದ ಗವಿಯಿಂದ ಕೆಂಕೆರೆಗೆ ಶ್ರೀಗಳು ಪಾದಯಾತ್ರೆ ನಡೆಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...