ವಿಷಯಕ್ಕೆ ಹೋಗಿ

ಧಾರ್ಮಿಕ ಆಚರಣೆಗಳಿಂದ ಸುಖಶಾಂತಿ ಲಭ್ಯ : ನರೇಂದ್ರಬಾಬು ಶರ್ಮ

ಮಾನವ ಜೀವನದಲ್ಲಿ ಆರೋಗ್ಯ ಹಾಗೂ ಸುಖಶಾಂತಿ ಅಗತ್ಯವಾಗಿದ್ದು ಧಾರ್ಮಿಕ ಆಚರಣೆಗಳನ್ನು ನಡೆಸುವುದರಿಂದ ದೇವರ ಕೃಪೆಯುಂಟಾಗಿ ಜೀವನದಲ್ಲಿ ಸುಖಶಾಂತಿ ಲಭಿಸುವುದರ ಜೊತೆಗೆ ಪ್ರಕೃತಿಯೂ ಸಹ ಸುಭಿಕ್ಷವಾಗಿರುತ್ತದೆ ಎಂದು ಬೃಹತ್ ಬ್ರಹ್ಮಾಂಡ ಖ್ಯಾತಿಯ ಶ್ರೀನರೇಂದ್ರಬಾಬು ಶರ್ಮಾಜಿಯವರು ತಿಳಿಸಿದರು.
ಹುಳಿಯಾರು ಹೋಬಳಿ ಪುರದಮಠದ ಪುರಾತನ ಗವಿಯಲ್ಲಿ ಶಿವಪೂಜಾನುಷ್ಠಾನ ಮುಕ್ತಾಯ ಕಾರ್ಯದಲ್ಲಿ ಶ್ರೀನರೇಂದ್ರಬಾಬು ಶರ್ಮಾಜಿ ,ಯಡೆಯೂರು ಕ್ಷೇತ್ರದ ಶ್ರೀ ರೇಣುಕಶಿವಾಚಾರ್ಯ ಮಹಾಸ್ವಾಮೀಜಿ, ಶ್ರೀ ಡಾ.ಯತೀಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಅಶೀರ್ವಚನ ನೀಡಿದರು.
ಹುಳಿಯಾರು ಹೋಬಳಿ ಕೆಂಕೆರೆ ಗ್ರಾಮದ ಪುರದಮಠದ ಪುರಾತನ ಗವಿಯಲ್ಲಿ ಕಳೆದ ಸೋಮವಾರದಿಂದ ಪ್ರಾರಂಭವಾಗಿದ್ದ ಶಿವಪೂಜಾನುಷ್ಠಾನ ಹಾಗೂ ಮೌನಾನುಷ್ಠಾನದ ಮುಕ್ತಾಯ ಸಮಾರಂಭದಲ್ಲಿ ಅವರು ಅಶೀರ್ವಚನ ನೀಡಿದರು.
ಈ ಹಿಂದೆಯಿದ್ದ ಹಲವರು ದೈವಾಂಶ ಸಂಭೂತರಾಗಿದ್ದು ಗ್ರಾಮದ ಏಳ್ಗೆಗಾಗಿ ಧ್ಯಾನ,ತಪ್ಪಸ್ಸು ಮಾಡಿದ್ದಾರೆ. ಅಂತಹವರ ಸಾಲಿನಲ್ಲಿ ಕುಪ್ಪೂರು ಮರುಳಸಿದ್ದೇಶ್ವರರು ಸಹ ಒಬ್ಬರಾಗಿದ್ದು ಅವರು ಧ್ಯಾನ ಮಾಡಿ ಹೋದಂತಹ ಸ್ಥಳದಲ್ಲಿ ಶಿವಪೂಜಾನುಷ್ಠಾನ ಹಾಗೂ ಮೌನಾನುಷ್ಠಾನ ಕಾರ್ಯ ನಡೆದಿರುವುದು ಈ ಕ್ಷೇತ್ರಕ್ಕೆ ಒಳಿತನ್ನುಂಟುಮಾಡಲಿದೆ ಎಂದರು. ಕುಫ್ಫೂರಿನ ಶ್ರೀಗಳು ಲೋಕಕಲ್ಯಾಣಾರ್ಥವಾಗಿ ಕೈಗೊಂಡಿರುವ ಈ ಕಾರ್ಯದಲ್ಲಿ ಯಶಸ್ಸು ಸಿಗಲಿ ಎಂದರು.
ಸೋಮವಾರದಿಂದ ಮೌನವ್ರತಾಚರಣೆಯಲ್ಲಿದ್ದ ಕುಪ್ಪೂರು ಗದ್ದಿಗೆ ಮಠದ ಶ್ರೀ ಡಾ.ಯತೀಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಗವಿಯಲ್ಲೇ ತಂಗಿದ್ದು ಶುಕ್ರವಾರ ಬೆಳಿಗ್ಗೆ ಅಂತಿಮ ಪೂಜೆ ನಡೆಸಿ ಆಗಮಿಸಿದ ಭಕ್ತಾಧಿಗಳಿಗೆ ಆಶೀರ್ವಚನ ನೀಡಿದರು. ಚನ್ನಬಸವೇಶ್ವರರ ಈ ಕ್ಷೇತ್ರ ಹೆಚ್ಚು ಮಹತ್ವದಾಗಿದ್ದು ಇಲ್ಲಿ ಕಾರ್ಯ ಮಾಡುವಂತೆ ತಮಗೆ ಅನುಷ್ಠಾನವಾದ ಹಿನ್ನಲೆಯಲ್ಲಿ ಗ್ರಾಮದೇವತೆ ಕಾಳಿಕಾಂಬ ದೇವಿಯ ಅಪ್ಪಣೆಯಂತೆ ಕಾರ್ಯ ಮಾಡಿರುವುದಾಗಿ ತಿಳಿಸಿದರು. ಮುಂದಿನ ೫ ವರ್ಷಗಳ ಪ್ರತಿ ಅಷಾಢ ಮಾಸದಲ್ಲಿ ಇಲ್ಲಿಗೆ ಬಂದು ಈ ಕಾರ್ಯವನ್ನು ಮುಂದುವರಿಸಿಕೊಂಡು ಹೋಗುವುದಾಗಿ ತಿಳಿಸಿದರು.

ಈ ವೇಳೆ ಯಡೆಯೂರು ಕ್ಷೇತ್ರದ ಶ್ರೀ ರೇಣುಕಶಿವಾಚಾರ್ಯ ಮಹಾಸ್ವಾಮೀಜಿ ಉಪಸ್ಥಿತರಿದ್ದರು. ಪುರೋಹಿತರಾದ ಮಲ್ಲಿಕಾರ್ಜುನಯ್ಯ,ನಟರಾಜ್, ವೀರೇಶ್,ಶರಣ ಗಂಗಾಧರಯ್ಯ, ಕೆ.ಎಸ್.ಎಂ.ಸ್ವಾಮಿ, ಚನ್ನಬಸವಯ್ಯ, ದಿಲೀಪ್, ಮಧು, ಡಿ.ಜಿ.ಕುಮಾರ್,ಪ್ರದೀಪ್ ಉಸ್ತುವಾರಿ ನಿರ್ವಹಿಸಿದರು. ಕೆಂಕೆರೆ ಗ್ರಾ.ಪಂ.ಅಧ್ಯಕ್ಷೆ ಜಯಮ್ಮ, ಉಪಾಧ್ಯಕ್ಷ ಪಂಚಾಕ್ಷರಿ, ತಾ.ಪಂ.ಸದಸ್ಯ ನವೀನ್, ಗ್ರಾ.ಪಂ.ಸದಸ್ಯರಾದ ರಾಮಲಿಂಗಯ್ಯ, ಅಶಾ, ಜಯಣ್ಣ ಸೇರಿದಂತೆ ಕೆಂಕೆರೆ,ಹುಳಿಯಾರು ಸುತ್ತಮುತ್ತಲ ಹಳ್ಳಿಯ ಭಕ್ತಾಧಿಗಳು ಆಗಮಿಸಿ ಸ್ವಾಮಿಜೀಯವರ ಆಶೀರ್ವಾದ ಪಡೆದರು. ಆಗಮಿಸಿದ ಭಕ್ತಾಧಿಗಳಿಗೆ ಊಟದ ವ್ಯವಸ್ಥೆ ಮಾಡಿದ್ದರು. ಸಂಜೆ ಪುರದಮಠದ ಗವಿಯಿಂದ ಕೆಂಕೆರೆಗೆ ಶ್ರೀಗಳು ಪಾದಯಾತ್ರೆ ನಡೆಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...