ವಿಷಯಕ್ಕೆ ಹೋಗಿ

"ತಲೆಮಾರು" ಪತ್ರಿಕೆ ಕೃಷಿ, ಸಾಮಾಜಿಕ ಕ್ಷೇತ್ರಕ್ಕೆ ದಾರಿದೀಪವಾಗಲಿದೆ : ಸಾಹಿತಿ ಸಿದ್ದರಾಮಯ್ಯ

ಪದವಿ ಹಂತದ ವಿದ್ಯಾರ್ಥಿಗಳು ಅಧ್ಯಾಪಕರ ಸಹಕಾರದೊಂದಿಗೆ ತಮ್ಮ ಸೃಜನಶೀಲ ಬರಹಗಳನ್ನು ಕೇಂದ್ರಿಕರಿಸಿ ಪ್ರಕಟಮಾಡಿರುವ "ತಲೆಮಾರು" ಎಂಬ ಕಾಲೇಜು ಪತ್ರಿಕೆಯು ಕೃಷಿ ಹಾಗೂ ಸಾಮಾಜಿಕ ಕಳಕಳಿಯ ವಿಚಾರಗಳನ್ನೊಳಗೊಂಡಿದ್ದು ಸಮಾಜಕ್ಕೆ ಉತ್ತಮ ಕೊಡುಗೆಯಾಗಲಿದೆ ಎಂದು ಸಾಹಿತಿ ಸಿಂಗಾಪುರದ ಸಿದ್ದರಾಮಯ್ಯ ಅಭಿಮತವ್ಯಕ್ತಪಡಿಸಿದರು.
ಹುಳಿಯಾರು-ಕೆಂಕೆರೆ ಬಿಎಂಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ಬರಹಗಳನ್ನು ಸಂಗ್ರಹಿಸಿ ಹೊರತಂದಿರುವ "ತಲೆಮಾರು" ಕಾಲೇಜು ಪತ್ರಿಕೆಯನ್ನು ಸಾಹಿತಿ ಸಿಂಗಾಪುರದ ಸಿದ್ದರಾಮಯ್ಯ ಬಿಡುಗಡೆ ಮಾಡಿದರು.
ಹುಳಿಯಾರು-ಕೆಂಕೆರೆ ಬಿಎಂಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇದೇ ಪ್ರಪ್ರಥಮಬಾರಿಗೆ ವಿದ್ಯಾರ್ಥಿಗಳ ಬರಹಗಳನ್ನು ಸಂಗ್ರಹಿಸಿ ಹೊರತಂದಿರುವ "ತಲೆಮಾರು" ಎಂಬ ಕಾಲೇಜು ಪತ್ರಿಕೆಯ ಸಂಚಿಕೆಯನ್ನು ಶುಕ್ರವಾರ ಬಿಡುಗಡೆ ಮಾಡಿ ಅವರು ಮಾತನಾಡಿದರು.
ತಲೆಮಾರು ಪತ್ರಿಕೆಯಲ್ಲಿ ನಮ್ಮಸುತ್ತಮುತ್ತಲಿನ ಹಳ್ಳಿಗಳ ಐತಿಹ್ಯ,ನೀರಿನ ಬಳಕೆ, ರೈತ ಸಮುದಾಯ ಎದುರಿಸುತ್ತಿರುವ ಸಮಸ್ಯೆ,ಆಹಾರ ಧಾನ್ಯಗಳು ಸೇರಿದಂತೆ ಹತ್ತಾರೂ ವಿಚಾರಗಳು ಅಂಕಿಅಂಶ ಸಮೇತ ಒಳಗೊಂಡಿದೆ. ಈ ವಿಚಾರಗಳನ್ನು ವಿದ್ಯಾರ್ಥಿಗಳೇ ಸಂಗ್ರಹಿಸಿ ಪ್ರಕಟಿಸಿರುವುದು ಹೆಮ್ಮೆಯ ವಿಚಾರ ಎಂದರು. ಪತ್ರಿಕೆಯಲ್ಲಿನ ಸಾಮಾಜಿಕ ವಿಚಾರಗಳನ್ನು ಅಧಿಕಾರಿವರ್ಗದವರು ಓದುವುದರಿಂದ ಅವರ ಆಡಳಿತದ ಸುಗಮಕ್ಕೆ ಕೈಗನ್ನಡಿಯಾಗಲಿದೆ ಹಾಗೂ ಜ್ವಲಂತ ಸಮಸ್ಯೆಗಳ ವಾಸ್ತವ ಚಿತ್ರಣ ಅವರಿಗೆ ಸಿಗಲಿದೆ ಎಂದರು.
ನಗರ ಪ್ರದೇಶಗಳಿಗೆ ಹೋಲಿಸಿದರೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಸೃಜನಾತ್ಮಕತೆ ಹೆಚ್ಚಿದ್ದು ಅದನ್ನು ಓರೆ ಹಚ್ಚುವ ಕಾರ್ಯವನ್ನು ಪ್ರಾಚಾರ್ಯ ಬಿಳಿಗಿರಿ ಕೃಷ್ಣಮೂರ್ತಿ ಮಾಡಿರುವುದು ಶ್ಲಾಘನೀಯ. ಅವಕಾಶವಂಚಿತರಿಗೆ ಒಂದು ಚಿಕ್ಕ ಅವಕಾಶಸಿಕ್ಕರೆ ಅವರು ಯಾವರೀತಿ ಸಾಧನೆ ಮಾಡಬಹುದು ಎಂಬುದಕ್ಕೆ ಈ ಪತ್ರಿಕೆ ನೆರವಾಗಲಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಪುಟಗಳು ಹೊರಬರಲಿ ಎಂದರು. ಪ್ರತಿಷ್ಠಿತ ಕಾಲೇಜುಗಳಲ್ಲಿ ಬಿಡುಗಡೆಮಾಡುವ ಮ್ಯಾಗ್ಸಿನ್,ಪುಸ್ತಕಗಳಿಗಿಂತ ತಲೆಮಾರು ಪತ್ರಿಕೆ ಬಹುಪಾಲು ವಿಶಿಷ್ಟವಾಗಿದೆ ಎಂದರು.
ಪ್ರಾಚಾರ್ಯ ಬಿಳಿಗಿರಿ ಕೃಷ್ಣಮೂರ್ತಿ ಮಾತನಾಡಿ, ಕಾಲೇಜು ವಿದ್ಯಾರ್ಥಿಗಳ ಅಭಿವ್ಯಕ್ತಿಯನ್ನು ಪ್ರಚುರಗೊಳಿಸುವ ನಿಟ್ಟಿನಲ್ಲಿ ಈ ಪತ್ರಿಕೆ ಜನ್ಮತಾಳಿದ್ದು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದ ಸಹಕಾರ ನೀಡಿದ್ದಾರೆಂದರು. ಪ್ರತಿ ಸೆಮಿಸ್ಟರ್ ಗೆ ಒಂದರಂತೆ ಪತ್ರಿಕೆಯನ್ನು ಬಿಡುಗಡೆ ಮಾಡಲಿದ್ದು ವಿದ್ಯಾರ್ಥಿಗಳು ತಮ್ಮ ಬರಹಗಳನ್ನು ನೀಡುವಂತೆ ತಿಳಿಸಿದ್ದಾರೆ.

ಕನ್ನಡ ಉಪನ್ಯಾಸಕ ಶಂಕರಲಿಂಗಯ್ಯ ಪತ್ರಿಕೆಯ ಪರಿಚಯ ಮಾಡಿಕೊಟ್ಟರು. ಉಪನ್ಯಾಸಕರಾದ ಶ್ರೀನಿವಾಸಪ್ಪ,ಇಬ್ರಾಹಿಂ,ಅಶೋಕ್, ಶಿವಯ್ಯ, ಗ್ರಂಥಪಾಲಕ ಲೋಕೇಶ್ ನಾಯಕ್ ಸೇರಿದಂತೆ ಸಿಬ್ಬಂದಿಯವರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.