ವಿಷಯಕ್ಕೆ ಹೋಗಿ

ರೈತರ ಬದುಕು ಡೋಲಾಯಮಾನ : ಟಿಬಿಜೆ

ಪ್ರಸ್ತುತ ದಿನದಲ್ಲಿ ಉತ್ತಮ ಮಳೆಯಿಲ್ಲದೆ, ಉತ್ತಮ ಬೆಳೆಯಿಲ್ಲದೆ, ಬೆಳೆದ ಬೆಳೆಗೆ ಉತ್ತಮ ಬೆಲೆ ದೊರೆಯದೆ ರೈತ ಅನೇಕ ಸಮಸ್ಯೆಗಳನ್ನು ಎದುರಿಸುತ್ತಾ ಕಂಗಾಲಾಗಿದ್ದು, ಅವರ ಜೀವನ ಡೋಲಾಯಮಾನವಾಗಿದೆ ಎಂದು ಕಾನೂನು ಸಂಸದೀಯ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ ವಿಷಾಧಿಸಿದರು.
ಹುಳಿಯಾರು ಎಪಿಎಂಸಿ ಪ್ರಾಂಗಣದಲ್ಲಿ ವಿವಿಧ ಯೋಜನಯಡಿ ನಿರ್ಮಿಸಿರುವ ಗೋದಾಮುಗಳ ಉದ್ಘಾಟನಾ ಸಮಾರಂಭವನ್ನು ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ ಉದ್ಘಾಟಿಸಿದರು. ಶಾಸಕ ಸಿ.ಬಿ.ಸುರೇಶ್ ಬಾಬು, ಸಂಸದ ಎಸ್.ಪಿ.ಮುದ್ದಹನುಮೇಗೌಡ ಇತರರಿದ್ದಾರೆ.


ಹುಳಿಯಾರಿನ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ಆರ್.ಐ.ಡಿ.ಎಫ್ ಯೋಜನೆಯಡಿಯಲ್ಲಿ ನಿರ್ಮಿಸಲಾಗಿದ್ದ ೨ ಗೋದಾಮುಗಳ ಉದ್ಘಾಟನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಹೊಸದುರ್ಗದಿಂದ ಹುಳಿಯಾರು ಮಾರ್ಗವಾಗಿ ಶಿರಾಕ್ಕೆ ನೀರೊದಗಿಸುವ ಸುಮಾರು ರೂ.12334 ಕೋಟಿ ವೆಚ್ಚದ ಭದ್ರಾ ಮೇಲ್ದಂಡೆ ಯೋಜನೆಗೆ ಸರ್ಕಾರದಿಂದ ಮಂಜೂರಾತಿ ದೊರೆತಿದೆ. ಈ ಹಿಂದೆ ರೂಪುಗೊಂಡಿದ್ದ ಭದ್ರಾ ಮೇಲ್ದಂಡೆ ಯೋಜನೆಯಿಂದ ಒಟ್ಟು 21 ಟಿಎಂಸಿ ನೀರಲ್ಲಿ ಕೇವಲ 6 ಟಿಎಂಸಿ ಮಾತ್ರ ಜಿಲ್ಲೆಗೆ ಲಭ್ಯವಾಗುವ ಸಾಧ್ಯತೆ ಇತ್ತು. ಆದರೆ ಈಗ ಒಟ್ಟು 30ಟಿಎಂಸಿ ನೀರು ಹರಿಸುವ ಯೋಜನೆ ರೂಪಿಸಿದ್ದು ಜಿಲ್ಲೆಗೆ 10 ಟಿಎಂಸಿ ನೀರು ಲಭ್ಯವಾಗಲಿದೆ. ಹೊಸದುರ್ಗದಿಂದ ನೈಸರ್ಗಿಕವಾಗಿ ಹುಳಿಯಾರು ಮಾರ್ಗವಾಗಿ ಶಿರಾಕ್ಕೆ ನೀರು ಹರಿಸುವ ಈ ಯೋಜನೆ ಮುಂದಿನ ಕೆಲ ತಿಂಗಳಲ್ಲಿ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಭರವಸೆ ನೀಡಿದರು. ತಾಂತ್ರಿಕ ಕಾರಣಗಳಿಂದ ತಾಲ್ಲೂಕಿನಲ್ಲಿ ನೆನೆಗುದಿಗೆ ಬಿದ್ದಿರುವ ಹೇಮಾವತಿ ನೀರಾವರಿ ಯೋಜನೆ ಸಹ ಚಾಲನೆಗೊಳ್ಳಲಿದ್ದು ಜಿಲ್ಲೆಗೆ ಭದ್ರಾ ಮತ್ತು ಹೇಮೆಯ ಎರಡು ಸಂಗಮವಾಗಲಿದೆ ಎಂದರು. ಜಿಲ್ಲೆಯಲ್ಲಿ 12 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು ಅವರಲ್ಲಿ 6 ಮಂದಿ ಮೃತ ಕುಟುಂಬಗಳಿಗೆ ಭೇಟಿ ನೀಡಿದ್ದೇನೆ. ಅವರೆಲ್ಲರ ಆತ್ಮಹತ್ಯೆಗೆ ಅಂತರ್ಜಲ ಬತ್ತಿರುವುದೇ ಕಾರಣವಾಗಿದ್ದು ಇದರಿಂದ ರೈತರು ಆತ್ಮಹತ್ಯೆಗೆ ಶರಣಾಗುವುದು ಪರಿಹಾರವಲ್ಲ ಎಂದರು. ರಾಜ್ಯ ಸರ್ಕಾರ ರೈತರು ಬೆಳೆದ ಬೆಲೆ ಕುಸಿತ ಕಂಡಾಗ ಅವರ ನೆರವಿಗಾಗಿ ಒಂದು ಸಾವಿರ ಕೋಟಿ ಹಣ ಮೀಸಲಿರಿಸಿಟ್ಟಿದ್ದು ಅದರಲ್ಲಿ ರೂ.900 ಕೋಟಿ ಹಣ ಖರ್ಚಾಗಿ ನಷ್ಟವನ್ನು ಲೆಕ್ಕಿಸದೇ ರೈತರ ಕೈ ಹಿಡಿಯಲು ಸರ್ಕಾರ ಮುಂದಾಗಿದ್ದು, ಇದೇ ರೀತಿ ಮುಂದೆಯೂ ರೈತಪರ ನಿಲ್ಲಲಿದೆ ಎಂದರು. ರೈತರಿಗೆ ದರಗಳ ವ್ಯತ್ಯಾಸ ಹಾಗೂ ವರ್ತಕರ ಹಾವಳಿಯನ್ನು ತಪ್ಪಿಸುವ ದೃಷ್ಠಿಯಿಂದ ರಾಜ್ಯದ ಎಲ್ಲಾ ಎಪಿಎಂಸಿ ಗಳಲ್ಲಿ ಇ ಟೆಂಡರ್ ವ್ಯವಸ್ಥೆ ಜಾರಿಗೆ ತಂದಿದೆ ಎಂದರು.
ಹುಳಿಯಾರು ಎಪಿಎಂಸಿ ಪ್ರಾಂಗಣದಲ್ಲಿ ವಿವಿಧ ಯೋಜನಯಡಿ ನಿರ್ಮಿಸಿರುವ ಗೋದಾಮುಗಳ ಉದ್ಘಾಟನೆಯನ್ನು ಸಂಸದ ಎಸ್.ಪಿ.ಮುದ್ದಹನುಮೇಗೌಡ ನೆರವೇರಿಸಿದರು.

ಸಂಸದ ಎಸ್.ಪಿ.ಮುದ್ದಹನುಮೇಗೌಡ ಮಾತನಾಡಿ ಕಳೆದ ವರ್ಷ ಆತ್ಮಹತ್ಯೆ ಮಾಡಿಕೊಂಡ ರೈತರ ಸಾವನ್ನು ಪ್ರೇಮ ಪ್ರಕರಣ ಅಥವಾ ಮತ್ತಾವುದೋ ವ್ಯಯಕ್ತಿಕ ಪ್ರಕರಣಗಳಿಂದ ಸಾವು ಸಂಭವಿಸಿದೆ ಎಂದು ರಾಜ್ಯಸಭೆಯಲ್ಲಿ ಕೇಂದ್ರದ ಕೃಷಿ ಸಚಿವ ರಾಧಾಮೋಹನ್ ಸಿಂಗ್ ಉತ್ತರಿಸಿದ್ದಾರೆ. ಅವರ ಹೇಳಿಕೆಯನ್ನು ಖಂಡಿಸಿದ್ದು ಕೇಂದ್ರ ಸರ್ಕಾರ ರೈತರನ್ನು ನಿಕೃಷ್ಟವಾಗಿ ಕಾಣುತ್ತಿದೆ ಎಂದು ದೂರಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬ್ಯಾಂಕುಗಳ ವ್ಯವಹಾರವನ್ನು ರೈತರಿಗಾಗಿ ಸರಳಿಕರಣಗೊಳಿಸಬೇಕು. ರೈತ ಮೀಟರ್ ಬಡ್ಡಿ ದಂಧೆಕೋರರ ಬಳಿ ಹೋಗದೆ ನೆರವಾಗಿ ಬ್ಯಾಂಕ್ ಗಳಿಗೆ ಹೋಗಿ ಸಾಲ ಪಡೆಯುವಂತ ಸ್ಥಿತಿ ನಿರ್ಮಾಣವಾದಾಗ ಮಾತ್ರ ರೈತರ ಆತ್ಮಹತ್ಯೆ ತಡೆಯಬಹುದು ಎಂದು ಅಭಿಪ್ರಾಯಪಟ್ಟರು. ಬ್ಯಾಂಕ್ ಗಳು ಸಹ ನೂರಾರು ಕೋಟಿ ಸಾಲ ಪಡೆದು ಕೈ ಎತ್ತುವ ವಿಜಯಮಲ್ಯರಂತಹ ಬಂಡವಾಳಶಾಹಿಗಳಿಗೆ ಸಾಲ ಕೊಡುವುದನ್ನು ಬಿಟ್ಟು ಅದೇ ಹಣವನ್ನು ರೈತರಿಗೆ ನೀಡಬೇಕು ಎಂದರು. ಶಾಸಕ ಸಿ.ಬಿ.ಸುರೇಶ್ ಬಾಬು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎಪಿಎಂಸಿ ಅಧ್ಯಕ್ಷ ಬಿ.ಸಣ್ಣಯ್ಯ, ಉಪಾಧ್ಯಕ್ಷೆ ದಾಕ್ಷಾಣಯಮ್ಮ, ಕಾರ್ಯದರ್ಶಿ ನಾಗರಾಜು, ಮಾಜಿ ಶಾಸಕ ಬಿ.ಲಕ್ಕಪ್ಪ, ಕೃಷಿ ಮಾರಾಟ ಇಲಾಖೆ ಉಪ ನಿರ್ದೇಶಕ ವಿ.ರಾಜಣ್ಣ, ಡಿಸಿಸಿ ಬ್ಯಾಂಕ್ ನಿರ್ದೇಶಕ ಸಿಂಗದಹಳ್ಳಿ ರಾಜ್ ಕುಮಾರ್, ಜಿ.ಪಂ ಸದಸ್ಯರಾದ ಮಂಜುಳಮ್ಮ, ನಿಂಗಮ್ಮ, ತಾ,ಪಂ ಅಧ್ಯಕ್ಷೆ ಜಯಲಕ್ಷ್ಮಮ್ಮ, ಉಪಾಧ್ಯಕ್ಷ ನಿರಂಜನಮೂರ್ತಿ, ಸದಸ್ಯೆ ಬೀಬಿಪಾತಿಮಾ, ಗ್ರಾ.ಪಂ ಅಧ್ಯಕ್ಷರಾದ ಗೀತಾ, ದೇವರಾಜು, ವಿಜಯಲಕ್ಷ್ಮೀ, ಮುಖಂಡರಾದ ದಸೂಡಿ ರಂಗಸ್ವಾಮಿ, ರಹಮತುಲ್ಲಾಸಾಬ್,ಸಿದ್ದರಾಮಯ್ಯ ಸೇರಿದಂತೆ ಇತರ ಎಪಿಎಂಸಿ ನಿರ್ದೇಶಕರು, ವಿವಿಧ ಜನಪ್ರತಿನಿಧಿಗಳು ಹಾಜರಿದ್ದರು. ಮಾರುಕಟ್ಟೆ ಆರಂಭಕ್ಕೆ ಶ್ರಮಿಸಿದ ಹಿರಿಯರಾದ ಶ್ರೀನಿವಾಸಶೆಟ್ಟರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...