ವಿಷಯಕ್ಕೆ ಹೋಗಿ

ಹುಳಿಯಾರು ಎಪಿಎಂಸಿಯಲ್ಲಿ ಹೆಸರುಕಾಳಿನ ಸುಗ್ಗಿ ಎತ್ತ ಕಣ್ಣಾಯಿಸಿದರೂ ಹೆಸರುಕಾಳಿನ ರಾಶಿ ರಾಶಿ

ವರದಿ:ಡಿ.ಆರ್.ನರೇಂದ್ರಬಾಬು
ಹುಳಿಯಾರು : ಹೋಬಳಿ ವ್ಯಾಪ್ತಿಯಲ್ಲಿ ಮುಂಗಾರಿನ ಪ್ರಮುಖ ಬೆಳೆಯಾಗಿ ಬಿಂಬಿತವಾಗಿರುವ ಹೆಸರು ಇದೀಗ ಫಸಲು ನೀಡಿದ್ದು ರೈತರು ಹೆಸರುಕಾಳನ್ನು ಮಾರಲು ಎಪಿಎಂಸಿಯತ್ತ ಮುಗಿಬಿದಿದ್ದು ಪಟ್ಟಣದ ಎಪಿಎಂಸಿಯಲ್ಲಿ ಹೆಸರುಕಾಳಿನ ವ್ಯಾಪಾರ ಭರಾಟೆಯಿಂದ ಕೂಡಿದ್ದು, ಎತ್ತ ಕಣ್ಣುಹಾಯಿಸಿದರೂ ಹೆಸರುಕಾಳಿನ ರಾಶಿ ಹಾಗೂ ಚೀಲಗಳೇ ಕಂಡುಬರುತ್ತಿವೆ.
ಹುಳಿಯಾರು ಎಪಿಎಂಸಿಯ ಅಂಗಡಿಗಳ ಮುಂದೆ ನಿಟ್ಟಾಕಿರುವ ಹೆಸರುಕಾಳಿನ ಚೀಲಗಳು.
ಈ ಬಾರಿ ಪೂರ್ವ ಮುಂಗಾರಿನಲ್ಲಿ ಉತ್ತಮ ಮಳೆಯಾದ ಹಿನ್ನಲೆಯಲ್ಲಿ ರೈತರು ಹೆಸರು ಬಿತ್ತನೆ ಮಾಡಿದ್ದು ನಂತರ ಕಾಲಕ್ಕೆ ತಕ್ಕಂತೆ ಹದಮಳೆಯಾಗಿದ್ದು ಹೆಸರು ಹುಲುಸಾಗಿ ಬೆಳೆಯಲು ಸಹಕಾರಿಯಾಗಿತ್ತು. ಅಂತೆಯೇ ಹೋಬಳಿಯ ದಸೂಡಿ,ದಬ್ಬಗುಂಟೆ,ಹೊಯ್ಸಳಕಟ್ಟೆ, ಗಾಣಧಾಳು,ಕೆಂಕೆರೆ, ಯಳನಡು, ಕೋರಗೆರೆ, ತಿರುಮಲಾಪುರ,ನಂದಿಹಳ್ಳಿ, ದೊಡ್ಡಬಿದರೆ, ಬರಕನಹಾಳ್ ಸೇರಿದಂತೆ ಇನ್ನಿತರ ಹಳ್ಳಿಗಳ ಬಹುತೇಕ ಮಂದಿ ರೈತರು ತಮ್ಮ ಜಮೀನಿನಲ್ಲಿ ಹೆಸರು ಬಿತ್ತನೆ ಮಾಡಿದ್ದರು.
ಪೂರ್ವ ಮುಂಗಾರಿನ ನಂತರ ಕೆಲ ದಿನ ಮಳೆ ಬಾರದೆ ಬಿಸಿಲಝಳದ ಹೆಚ್ಚಳದಿಂದಾಗಿ ಹೆಸರು ಗಿಡದ ಎಲೆಗಳು ಹಳದಿಯಾಗುವಂತಾಗಿದ್ದು ಬಿಟ್ಟರೆ ಹೆಸರಿನಲ್ಲಿ ಮತ್ಯಾವುದೇ ರೀತಿಯ ರೋಗಬಾಧೆ ಕಂಡುಬಂದಿಲ್ಲ. ಕೆಲ ರೈತರು ತಾವೇ ಈ ಹಿಂದೆ ದಾಸ್ತಾನು ಮಾಡಿಕೊಂಡಿದ್ದ ಹೆಸರುಕಾಳುಗಳನ್ನೇ ಬಿತ್ತನೆಗೆ ಬಳಸಿದ್ದರೆ, ಮತ್ತೆ ಕೆಲ ರೈತರು ರೈತಸಂಪರ್ಕ ಕೇಂದ್ರದಲ್ಲಿ ನೀಡಿದ ಹೆಸರುಕಾಳುಗಳನ್ನು ಬಿತ್ತನೆ ಮಾಡಿ ಉತ್ತಮ ಇಳುವರಿ ಪಡೆದಿದ್ದಾರೆ.
ಹುಳಿಯಾರು ಎಪಿಎಂಸಿಗೆ ಹೆಸರು ಮಾರಲು ಬಂದಿರುವ ಹೋಬಳಿಯ ವಿವಿಧ ಹಳ್ಳಿಗರ ರೈತರು.
ಹೋಬಳಿ ಸುತ್ತಮುತ್ತಲ ಹಳ್ಳಿಯ ರೈತರು ತಾವು ಬೆಳೆದ ಹೆಸರನ್ನು ಪಟ್ಟಣದ ಮಾರುಕಟ್ಟೆಗೆ ತಂದು ಮಾರುತ್ತಿದ್ದಾರೆ. ಮಾರುಕಟ್ಟೆಗೆ ಹೆಸರಿನ ಅವಕ ಹೆಚ್ಚುತ್ತಿದ್ದಂತೆಯೇ ಬೆಲೆಯಲ್ಲಿ ಅಲ್ಪ ಕುಸಿತಕಂಡಿದೆ. ಈ ಮೊದಲು ಹೆಸರು ಬಿತ್ತನೆ ಸಮಯದಲ್ಲಿ ಪ್ರತಿ ಕ್ವಿಂಟಾಲ್ ಹೆಸರು ೮೦೦೦ ತಲುಪಿದ್ದರೆ, ಈಗ ಪ್ರತಿ ಕ್ವಿಂಟಲ್ ಗೆ ೫ ರಿಂದ ೬ ಸಾವಿರ ಅಸುಪಾಸಿನಲ್ಲಿದೆ. ಹೆಸರು ಬಿತ್ತನೆ ಮಾಡುವಾಗ ಹೆಚ್ಚಾಗಿದ್ದ ಬೆಲೆ , ಹೆಸರು ಕುಯ್ಯುವ ಹಂತದಲ್ಲಿ ಇಳಿಯುತ್ತಿದ್ದು ರೈತರಿಗೆ ನಷ್ಟವಾಗುತ್ತಿದೆ. ಹೆಸರು ಮಾರುಕಟ್ಟೆಗೆ ಬಂದಾಗ ೬೫೦೦ರಿಂದ ಶುರುವಾಗಿದ್ದ ಬೆಲೆ ಈಗ ೫೮೦೦ರೂ ತಲುಪಿದೆ. ಈಗಿನ ಗೊಬ್ಬರ, ಬೇಸಾಯ, ಕೂಲಿ ಎಲ್ಲವನ್ನು ಲೆಕ್ಕಹಾಕಿದರೆ ಏನು ಉಳಿಯುವುದಿಲ್ಲ ಎನ್ನುತ್ತಾರೆ ರೈತರು.
ಪಟ್ಟಣದ ಮಾರುಕಟ್ಟೆಯಲ್ಲಿ ಖರೀದಿಯಾಗುವ ಹೆಸರುಕಾಳು ರಾಜ್ಯ ಸೇರಿದಂತೆ ನೆರೆ ರಾಜ್ಯಗಳಿಗೂ ರವಾನೆಯಾಗುತ್ತಿದ್ದು ಪ್ರತಿನಿತ್ಯ ಮೂರ್ನಾಲ್ಕು ಲಾರಿ ಲೋಡ್ ರವಾನೆಯಾಗುತ್ತಿದೆ. ಕಳೆದ ತಿಂಗಳು ವ್ಯಾಪಾರವಿಲ್ಲದೆ ಬಿಕೋ ಎನ್ನುತ್ತಿದ್ದ ಎಪಿಎಂಸಿಯ ಅಂಗಡಿಗಳು ಇದೀಗ ರೈತರಿಂದ ತುಂಬಿದ್ದು ಅಂಗಡಿಯ ತುಂಬೆಲ್ಲಾ ಹೆಸರುಕಾಳಿನದ್ದೇ ಸದ್ದಾಗಿದೆ.
ಹುಳಿಯಾರು, ಹೊಸದುರ್ಗ, ಅರಸಿಕೆರೆಯಲ್ಲಿರುವ ಎಪಿಎಂಸಿಗಳು ಹೆಸರಿಗೆ ಉತ್ತಮ ಮಾರುಕಟ್ಟೆಗಳಾಗಿದ್ದು ಬೆಲಗೂರು,ಹಂದನಕೆರೆಯ ಉಪ ಮಾರುಕಟ್ಟೆಗಳಿಗೂ ಸಹ ಹೆಸರಿನ ಅವಕ ಹೆಚ್ಚಾಗಿ ಕಂಡುಬರುತ್ತಿದೆ. ಈಬಾರಿ ಬೆಳೆ ಚೆನ್ನಾಗಿದ್ದು ನಾಟಿ ಕಾಳಿಗಿಂತ ಮಿಂಚುಕಾಳಿಗೆ ಬೇಡಿಕೆ ಹೆಚ್ಚಿದೆ. ಇನ್ನೂ ೨ ತಿಂಗಳು ಭರಪೂರ ವ್ಯಾಪಾರ ನಡೆಯಲಿದೆ.:
ಎಲ್.ಆರ್.ಬಾಲಾಜಿ.ರವಾನೆದಾರ ಹುಳಿಯಾರು ಎಪಿಎಂಸಿ.

ಬಿತ್ತನೆ : ಕೃಷಿ ಇಲಾಖೆಯ ಮಾಹಿತಿಯಂತೆ ಈ ಬಾರಿ ಹೋಬಳಿ ವ್ಯಾಪ್ತಿಯಲ್ಲಿ ೨,೦೫೦ ಹೆಕ್ಟೇರ್ ಪ್ರದೇಶಾದಲ್ಲಿ ಹೆಸರು ಬಿತ್ತನೆಯಾಗಿದ್ದು ಇಲಾಖೆಯಿಂದ ಬಿಜಿಎಸ್-೯ ತಳಿಯ ೩೪ ಕ್ವಿಂಟಾಲ್ ಹೆಸರನ್ನು ಸಬ್ಸಿಡಿದರದಲ್ಲಿ ಬಿತ್ತನೆಗೆ ನೀಡಿದ್ದಾರೆ. ೧೭೦ ಹೆಕ್ಟೇರ್ ನಷ್ಟು ಅಲಸಂದೆ, ೨೫ ಹೆಕ್ಟೇರ್ ನಷ್ಟು ಉದ್ದು, ೧೮೫ ಹೆಕ್ಟೇರ್ ನಷ್ಟು ತೊಗರಿ ಬಿತ್ತನೆಯಾಗಿರುವುದಾಗಿ ಎಡಿಎ ಹೊನ್ನದಾಸೇಗೌಡ ತಿಳಿಸಿದ್ದಾರೆ.
ಇಳುವರಿಯೇನೋ ಉತ್ತಮವಾಗಿದೆ ಕಟಾವಿನ ಸಮಯದಲ್ಲಿ ಬಿಟ್ಟುಬಿಡದೆ ಕಾಡುತ್ತಿರುವ ಮಳೆಯಿಂದಾಗಿ ಹೆಸರನ್ನು ಒಣಗಿಸಲಾಗದೆ ಬಣ್ಣ ಕಪ್ಪಾಗುತ್ತಿದ್ದು, ಉತ್ತಮ ಬೆಲೆ ಸಿಗದಂತಾಗಿದೆ : ಜಾತ್ರಾನಾಯ್ಕ,ರೈತ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...