ವಿಷಯಕ್ಕೆ ಹೋಗಿ

ಹುಳಿಯಾರು ಎಪಿಎಂಸಿಯಲ್ಲಿ ಹೆಸರುಕಾಳಿನ ಸುಗ್ಗಿ ಎತ್ತ ಕಣ್ಣಾಯಿಸಿದರೂ ಹೆಸರುಕಾಳಿನ ರಾಶಿ ರಾಶಿ

ವರದಿ:ಡಿ.ಆರ್.ನರೇಂದ್ರಬಾಬು
ಹುಳಿಯಾರು : ಹೋಬಳಿ ವ್ಯಾಪ್ತಿಯಲ್ಲಿ ಮುಂಗಾರಿನ ಪ್ರಮುಖ ಬೆಳೆಯಾಗಿ ಬಿಂಬಿತವಾಗಿರುವ ಹೆಸರು ಇದೀಗ ಫಸಲು ನೀಡಿದ್ದು ರೈತರು ಹೆಸರುಕಾಳನ್ನು ಮಾರಲು ಎಪಿಎಂಸಿಯತ್ತ ಮುಗಿಬಿದಿದ್ದು ಪಟ್ಟಣದ ಎಪಿಎಂಸಿಯಲ್ಲಿ ಹೆಸರುಕಾಳಿನ ವ್ಯಾಪಾರ ಭರಾಟೆಯಿಂದ ಕೂಡಿದ್ದು, ಎತ್ತ ಕಣ್ಣುಹಾಯಿಸಿದರೂ ಹೆಸರುಕಾಳಿನ ರಾಶಿ ಹಾಗೂ ಚೀಲಗಳೇ ಕಂಡುಬರುತ್ತಿವೆ.
ಹುಳಿಯಾರು ಎಪಿಎಂಸಿಯ ಅಂಗಡಿಗಳ ಮುಂದೆ ನಿಟ್ಟಾಕಿರುವ ಹೆಸರುಕಾಳಿನ ಚೀಲಗಳು.
ಈ ಬಾರಿ ಪೂರ್ವ ಮುಂಗಾರಿನಲ್ಲಿ ಉತ್ತಮ ಮಳೆಯಾದ ಹಿನ್ನಲೆಯಲ್ಲಿ ರೈತರು ಹೆಸರು ಬಿತ್ತನೆ ಮಾಡಿದ್ದು ನಂತರ ಕಾಲಕ್ಕೆ ತಕ್ಕಂತೆ ಹದಮಳೆಯಾಗಿದ್ದು ಹೆಸರು ಹುಲುಸಾಗಿ ಬೆಳೆಯಲು ಸಹಕಾರಿಯಾಗಿತ್ತು. ಅಂತೆಯೇ ಹೋಬಳಿಯ ದಸೂಡಿ,ದಬ್ಬಗುಂಟೆ,ಹೊಯ್ಸಳಕಟ್ಟೆ, ಗಾಣಧಾಳು,ಕೆಂಕೆರೆ, ಯಳನಡು, ಕೋರಗೆರೆ, ತಿರುಮಲಾಪುರ,ನಂದಿಹಳ್ಳಿ, ದೊಡ್ಡಬಿದರೆ, ಬರಕನಹಾಳ್ ಸೇರಿದಂತೆ ಇನ್ನಿತರ ಹಳ್ಳಿಗಳ ಬಹುತೇಕ ಮಂದಿ ರೈತರು ತಮ್ಮ ಜಮೀನಿನಲ್ಲಿ ಹೆಸರು ಬಿತ್ತನೆ ಮಾಡಿದ್ದರು.
ಪೂರ್ವ ಮುಂಗಾರಿನ ನಂತರ ಕೆಲ ದಿನ ಮಳೆ ಬಾರದೆ ಬಿಸಿಲಝಳದ ಹೆಚ್ಚಳದಿಂದಾಗಿ ಹೆಸರು ಗಿಡದ ಎಲೆಗಳು ಹಳದಿಯಾಗುವಂತಾಗಿದ್ದು ಬಿಟ್ಟರೆ ಹೆಸರಿನಲ್ಲಿ ಮತ್ಯಾವುದೇ ರೀತಿಯ ರೋಗಬಾಧೆ ಕಂಡುಬಂದಿಲ್ಲ. ಕೆಲ ರೈತರು ತಾವೇ ಈ ಹಿಂದೆ ದಾಸ್ತಾನು ಮಾಡಿಕೊಂಡಿದ್ದ ಹೆಸರುಕಾಳುಗಳನ್ನೇ ಬಿತ್ತನೆಗೆ ಬಳಸಿದ್ದರೆ, ಮತ್ತೆ ಕೆಲ ರೈತರು ರೈತಸಂಪರ್ಕ ಕೇಂದ್ರದಲ್ಲಿ ನೀಡಿದ ಹೆಸರುಕಾಳುಗಳನ್ನು ಬಿತ್ತನೆ ಮಾಡಿ ಉತ್ತಮ ಇಳುವರಿ ಪಡೆದಿದ್ದಾರೆ.
ಹುಳಿಯಾರು ಎಪಿಎಂಸಿಗೆ ಹೆಸರು ಮಾರಲು ಬಂದಿರುವ ಹೋಬಳಿಯ ವಿವಿಧ ಹಳ್ಳಿಗರ ರೈತರು.
ಹೋಬಳಿ ಸುತ್ತಮುತ್ತಲ ಹಳ್ಳಿಯ ರೈತರು ತಾವು ಬೆಳೆದ ಹೆಸರನ್ನು ಪಟ್ಟಣದ ಮಾರುಕಟ್ಟೆಗೆ ತಂದು ಮಾರುತ್ತಿದ್ದಾರೆ. ಮಾರುಕಟ್ಟೆಗೆ ಹೆಸರಿನ ಅವಕ ಹೆಚ್ಚುತ್ತಿದ್ದಂತೆಯೇ ಬೆಲೆಯಲ್ಲಿ ಅಲ್ಪ ಕುಸಿತಕಂಡಿದೆ. ಈ ಮೊದಲು ಹೆಸರು ಬಿತ್ತನೆ ಸಮಯದಲ್ಲಿ ಪ್ರತಿ ಕ್ವಿಂಟಾಲ್ ಹೆಸರು ೮೦೦೦ ತಲುಪಿದ್ದರೆ, ಈಗ ಪ್ರತಿ ಕ್ವಿಂಟಲ್ ಗೆ ೫ ರಿಂದ ೬ ಸಾವಿರ ಅಸುಪಾಸಿನಲ್ಲಿದೆ. ಹೆಸರು ಬಿತ್ತನೆ ಮಾಡುವಾಗ ಹೆಚ್ಚಾಗಿದ್ದ ಬೆಲೆ , ಹೆಸರು ಕುಯ್ಯುವ ಹಂತದಲ್ಲಿ ಇಳಿಯುತ್ತಿದ್ದು ರೈತರಿಗೆ ನಷ್ಟವಾಗುತ್ತಿದೆ. ಹೆಸರು ಮಾರುಕಟ್ಟೆಗೆ ಬಂದಾಗ ೬೫೦೦ರಿಂದ ಶುರುವಾಗಿದ್ದ ಬೆಲೆ ಈಗ ೫೮೦೦ರೂ ತಲುಪಿದೆ. ಈಗಿನ ಗೊಬ್ಬರ, ಬೇಸಾಯ, ಕೂಲಿ ಎಲ್ಲವನ್ನು ಲೆಕ್ಕಹಾಕಿದರೆ ಏನು ಉಳಿಯುವುದಿಲ್ಲ ಎನ್ನುತ್ತಾರೆ ರೈತರು.
ಪಟ್ಟಣದ ಮಾರುಕಟ್ಟೆಯಲ್ಲಿ ಖರೀದಿಯಾಗುವ ಹೆಸರುಕಾಳು ರಾಜ್ಯ ಸೇರಿದಂತೆ ನೆರೆ ರಾಜ್ಯಗಳಿಗೂ ರವಾನೆಯಾಗುತ್ತಿದ್ದು ಪ್ರತಿನಿತ್ಯ ಮೂರ್ನಾಲ್ಕು ಲಾರಿ ಲೋಡ್ ರವಾನೆಯಾಗುತ್ತಿದೆ. ಕಳೆದ ತಿಂಗಳು ವ್ಯಾಪಾರವಿಲ್ಲದೆ ಬಿಕೋ ಎನ್ನುತ್ತಿದ್ದ ಎಪಿಎಂಸಿಯ ಅಂಗಡಿಗಳು ಇದೀಗ ರೈತರಿಂದ ತುಂಬಿದ್ದು ಅಂಗಡಿಯ ತುಂಬೆಲ್ಲಾ ಹೆಸರುಕಾಳಿನದ್ದೇ ಸದ್ದಾಗಿದೆ.
ಹುಳಿಯಾರು, ಹೊಸದುರ್ಗ, ಅರಸಿಕೆರೆಯಲ್ಲಿರುವ ಎಪಿಎಂಸಿಗಳು ಹೆಸರಿಗೆ ಉತ್ತಮ ಮಾರುಕಟ್ಟೆಗಳಾಗಿದ್ದು ಬೆಲಗೂರು,ಹಂದನಕೆರೆಯ ಉಪ ಮಾರುಕಟ್ಟೆಗಳಿಗೂ ಸಹ ಹೆಸರಿನ ಅವಕ ಹೆಚ್ಚಾಗಿ ಕಂಡುಬರುತ್ತಿದೆ. ಈಬಾರಿ ಬೆಳೆ ಚೆನ್ನಾಗಿದ್ದು ನಾಟಿ ಕಾಳಿಗಿಂತ ಮಿಂಚುಕಾಳಿಗೆ ಬೇಡಿಕೆ ಹೆಚ್ಚಿದೆ. ಇನ್ನೂ ೨ ತಿಂಗಳು ಭರಪೂರ ವ್ಯಾಪಾರ ನಡೆಯಲಿದೆ.:
ಎಲ್.ಆರ್.ಬಾಲಾಜಿ.ರವಾನೆದಾರ ಹುಳಿಯಾರು ಎಪಿಎಂಸಿ.

ಬಿತ್ತನೆ : ಕೃಷಿ ಇಲಾಖೆಯ ಮಾಹಿತಿಯಂತೆ ಈ ಬಾರಿ ಹೋಬಳಿ ವ್ಯಾಪ್ತಿಯಲ್ಲಿ ೨,೦೫೦ ಹೆಕ್ಟೇರ್ ಪ್ರದೇಶಾದಲ್ಲಿ ಹೆಸರು ಬಿತ್ತನೆಯಾಗಿದ್ದು ಇಲಾಖೆಯಿಂದ ಬಿಜಿಎಸ್-೯ ತಳಿಯ ೩೪ ಕ್ವಿಂಟಾಲ್ ಹೆಸರನ್ನು ಸಬ್ಸಿಡಿದರದಲ್ಲಿ ಬಿತ್ತನೆಗೆ ನೀಡಿದ್ದಾರೆ. ೧೭೦ ಹೆಕ್ಟೇರ್ ನಷ್ಟು ಅಲಸಂದೆ, ೨೫ ಹೆಕ್ಟೇರ್ ನಷ್ಟು ಉದ್ದು, ೧೮೫ ಹೆಕ್ಟೇರ್ ನಷ್ಟು ತೊಗರಿ ಬಿತ್ತನೆಯಾಗಿರುವುದಾಗಿ ಎಡಿಎ ಹೊನ್ನದಾಸೇಗೌಡ ತಿಳಿಸಿದ್ದಾರೆ.
ಇಳುವರಿಯೇನೋ ಉತ್ತಮವಾಗಿದೆ ಕಟಾವಿನ ಸಮಯದಲ್ಲಿ ಬಿಟ್ಟುಬಿಡದೆ ಕಾಡುತ್ತಿರುವ ಮಳೆಯಿಂದಾಗಿ ಹೆಸರನ್ನು ಒಣಗಿಸಲಾಗದೆ ಬಣ್ಣ ಕಪ್ಪಾಗುತ್ತಿದ್ದು, ಉತ್ತಮ ಬೆಲೆ ಸಿಗದಂತಾಗಿದೆ : ಜಾತ್ರಾನಾಯ್ಕ,ರೈತ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...