ವಿಷಯಕ್ಕೆ ಹೋಗಿ

ಆಸ್ಪತ್ರೆ ಆವರಣ ಸ್ವಚ್ಚಗೊಳಿಸುವಂತೆ ಒತ್ತಾಯ

ಹುಳಿಯಾರು  ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸುತ್ತಮುತ್ತ ಗಿಡಗಂಟೆಗಳು ಬೆಳೆದಿರುವುದಲ್ಲದೆ ಅನಗತ್ಯ ವಸ್ತುಗಳು ತುಂಬಿದ್ದು ಅನೈರ್ಮನ್ಯ ಹೆಚ್ಚಾಗಿದೆ. ಈ ಬಗ್ಗೆ ವೈದ್ಯರು ಗಮನಹರಿಸಿ ಆಸ್ಪತ್ರೆ ಆವರಣದಲ್ಲಿರುವ ಕಸಕಡ್ಡಿಯನ್ನು ತೆರವುಗೊಳಿಸಿ ಸ್ವಚ್ಚತೆ ಕಾಪಾಡುವಂತೆ ಪಂಚಾಯ್ತಿಯ ಕೆಲ ಸದಸ್ಯರು ಹಾಗೂ ತಾಲ್ಲೂಕು ಯುವ ಜೆಡಿಎಸ್ ಅಧ್ಯಕ್ಷ ಗವಿರಂಗನಾಥ್(ಗೌಡಿ) ಆಸ್ಪತ್ರೆ ವೈದ್ಯರನ್ನು ಒತ್ತಾಯಿಸಿದ್ದಾರೆ.
ಹುಳಿಯಾರಿನ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಬಿದ್ದಿರುವ ತ್ಯಾಜ್ಯವನ್ನು ಸ್ವಚ್ಚಗೊಳಿಸುವಂತೆ ಅಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿಯನ್ನು ಗ್ರಾ.ಪಂ.ಸದಸ್ಯರು ಒತ್ತಾಯಿಸಿದರು.
ಪಟ್ಟಣದ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವಂತೆ ಇಲ್ಲಿನ ಸಂಘ ಸಂಸ್ಥೆಯವರು , ಸಾರ್ವಜನಿಕರು ಒತ್ತಾಯಿಸುತ್ತಿದ್ದರೂ ಸಹ ಈ ಬಗ್ಗೆ ಮೇಲಾಧಿಕಾರಿಗಳು ಗಮನಹರಿಸಿಲ್ಲ , ಸದ್ಯ ಮಾದರಿ ಆಸ್ಪತ್ರೆಯನ್ನಾಗಿಸಿದ್ದು ಹೊಸ ಕಟ್ಟಡ ಕಾಮಗಾರಿ ನಡೆಯುತ್ತಿದ್ದು ಆಸ್ಪತ್ರೆಯ ಸುತ್ತಮುತ್ತ ತ್ಯಾಜ್ಯ ಹೆಚ್ಚಾಗಿದೆ. ಹಂದಿಗಳು ಸಹ ಆಸ್ಪತ್ರೆ ಕಾಂಪೌಂಡ್ ಪಕ್ಕದಲ್ಲಿ ಬಿಡಾಕಹಾಕಿದ್ದು ಮತ್ತಷ್ಟು ಅನೈರ್ಮಲ್ಯ ಉಂಟುಮಾಡಿದೆ. ಆಸ್ಪತ್ರೆ ಆವರಣದಲ್ಲಿನ ಪೈಪ್ ಲೈನ್ ಹೊಡೆದು ಹತ್ತದಿನೈದು ದಿನಗಳಿಂದ ನೀರು ವ್ಯರ್ಥವಾಗಿ ಹರಿಯುತ್ತಿದ್ದರೂ ಇದನ್ನು ಸರಿಪಡಿಸಿಲ್ಲ. ಇದರಿಂದ ನೀರು ನಿಂತು ಸೊಳ್ಳೆ ಹೆಚ್ಚಳಕ್ಕೆ ಕಾರಣವಾಗುತ್ತಿರುವುದಲ್ಲದೆ, ಡೆಂಗ್ಯೂ,ಚಿಕನ್ ಗುನ್ಯಾದಂತಹ ರೋಗಗಳು ಉಂಟಾಗುವಂತಾಗಿದೆ ಎಂದು ತಾಲ್ಲೂಕು ಯುವ ಜೆಡಿಎಸ್ ಅಧ್ಯಕ್ಷ ಗವಿರಂಗನಾಥ್(ಗೌಡಿ) ದೂರಿದ್ದಾರೆ.
ಆಸ್ಪತ್ರೆಯ ಸ್ವಚ್ಚತೆಯ ಬಗ್ಗೆ ವೈದ್ಯರು ಪ್ರತಿನಿತ್ಯ ಗಮನಕೊಡಬೇಕು ಆದರೆ ಇಲ್ಲಿ ಖಾಯಂ ವೈದ್ಯರಿಲ್ಲದೆ ಹಾಲಿ ಇರುವ ಗುತ್ತಿಗೆ ವೈದ್ಯರು ತಮಗೂ ಇದಕ್ಕೂ ಸಂಬಂಧವಿಲ್ಲದಂತಿದ್ದಾರೆ. ಆಸ್ಪತ್ರೆಯವರು ಸ್ವಚ್ಚತಾ ಕಾರ್ಯ ಮಾಡಲು ಸಾಧ್ಯವಾಗದಿದ್ದರೆ ಪಂಚಾಯ್ತಿಯವರಿಗೆ ತಿಳಿಸಿದರೆ ಪಂಚಾಯ್ತಿಂದಲೇ ಆಸ್ಪತ್ರೆ ಆವರಣದ ಸ್ವಚ್ಚತೆ ಮಾಡಿಸುವುದಾಗಿ ಗ್ರಾ.ಪಂ.ಸದಸ್ಯ ಶಂಕರ್ ವೈದ್ಯರಿಗೆ ತಿಳಿಸಿದರು. ಆಸ್ಪತ್ರೆ ಆವರಣದಲ್ಲಿ ಖಾಸಗಿ ವಾಹನಗಳನ್ನು ನಿಲ್ಲಿಸಬಾರದೆಂದು ಬೋರ್ಡ್ ಹಾಕಿದ್ದರೂ ಸಹ ವಾಹನದಾರರು ಈ ಬಗ್ಗೆ ಕಂಡರು ಕಾಣದಂತೆ ನಿರ್ಲಕ್ಷ ಹೊಂದಿ ವಾಹನಗಳನ್ನು ನಿಲ್ಲಿಸುತ್ತಿದ್ದಾರೆ ಈ ಬಗ್ಗೆ ವೈದ್ಯರು ವಾಹನದಾರರಿಗೆ ಎಚ್ಚರಿಕೆ ನೀಡುವಂತೆ ತಿಳಿಸಿದರು. ಈ ವೇಳೆ ಗ್ರಾ.ಪಂ.ಸದಸ್ಯ ಡಾಬಾಸೂರಪ್ಪ, ನಾಗಣ್ಣ ಸೇರಿದಂತೆ ಇತರರಿದ್ದರು.

ವೈದ್ಯೆ ಚಂದನ ಮಾತನಾಡಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆಯಿದ್ದು ಆಸ್ಪತ್ರೆಯ ಹೊರಭಾಗದಲ್ಲಿ ಕಸಕಡ್ಡಿ ಹೆಚ್ಚಾಗಿದೆ. ಪಂಚಾಯ್ತಿಯ ಪೌರಕಾರ್ಮಿಕರನ್ನು ಕಳುಹಿಕೊಟ್ಟರೆ ಆಸ್ಪತ್ರೆಯ ಆವರಣ ಸ್ವಚ್ಚತೆ ಮಾಡಿಸುತ್ತೇವೆ ಇದಕ್ಕೆ ಪಂಚಾಯ್ತಿಯವರು ಸಹಕರಿಸಿ ಎಂದರು. 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...