ವಿಷಯಕ್ಕೆ ಹೋಗಿ

ಅಹಿತಕರ ಘಟನೆಗೆ ಅಸ್ಪದ ಕೊಡಬೇಡಿ : ಮಾರಪ್ಪ

ಹಬ್ಬದ ಆಚರಣೆಯ ಹಿನ್ನಲೆಯಲ್ಲಿ ಶಾಂತಿಗೆ ಧಕ್ಕೆಯುಂಟಾಗದಂತೆ ಅಥವಾ ಯಾವುದೇ ರೀತಿಯ ಅಹಿತಕರ ಘಟನೆಗೆ ಅವಕಾಶ ನೀಡದಂತೆ ಸಮುದಾಯದ ಮುಖಂಡರು ಗಮನಹರಿಸಿ ಹಬ್ಬದ ಆಚರಣೆಯನ್ನು ಶಾಂತಿಯುವಾಗಿ ಆಚರಿಸುವಂತೆ ಚಿ.ನಾ.ಹಳ್ಳಿ ವೃತ್ತನಿರೀಕ್ಷಕ ಮಾರಪ್ಪ ತಿಳಿಸಿದರು.
ರಂಜಾನ್ ಹಬ್ಬದ ಅಂಗವಾಗಿ ಹುಳಿಯಾರು ಪೋಲಿಸ್ ಠಾಣೆಯಲ್ಲಿ ಶುಕ್ರವಾರ ಅಯೋಜಿಸಿದ್ದ ಶಾಂತಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಹುಳಿಯಾರು ಪೋಲಿಸ್ ಠಾಣೆಯಲ್ಲಿ ರಂಜಾನ್ ಹಬ್ಬದ ಅಂಗವಾಗಿ ನಡೆದ ಶಾಂತಿಸಭೆಯಲ್ಲಿ ಸರ್ಕಲ್ ಇಸ್ಪೆಕ್ಟರ್ ಮಾರಪ್ಪ ಮಾತನಾಡಿದರು.
ಹುಳಿಯಾರು ಪಟ್ಟಣದಲ್ಲಿ ಹಿಂದೂ ಹಾಗೂ ಮುಸ್ಲಿಂ ಸಮುದಾಯದವರು ಒಬ್ಬರಿಗೊಬ್ಬರು ಅನ್ಯೂನತೆಯಿಂದ ಇದ್ದಾರೆ. ದುರಾದೃಷ್ಠವಶಾತ್ ಈ ಹಿಂದೆ ಇದೇ ಹಬ್ಬದ ಸಮಯದಲ್ಲಿ ಯಾವುದೋ ಒಂದು ಘಟನೆ ನಡೆದಿದ್ದು ಆ ಬಗ್ಗೆ ಯಾವುದೇ ಜಿದ್ದನ್ನು ಇಟ್ಟುಕೊಳ್ಳದೆ ಹಬ್ಬದ ಆಚರಣೆ ನಡೆಯಲಿ ಎಂದರು. ಹಬ್ಬದ ಮೆರವಣಿಗೆ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳ ಬಗ್ಗೆ ಠಾಣೆಗೆ ಮಾಹಿತಿ ನೀಡಿ ಎಂದರು. ಪಟ್ಟಣದಲ್ಲಿ ಯಾರಾದರೂ ಅಪರಿಚಿತ ವ್ಯಕ್ತಿಗಳು ಕಂಡುಬಂದಲ್ಲಿ ತಕ್ಷಣ ಠಾಣೆಗೆ ತಿಳಿಸುವುದು ಹಾಗೂ ಯಾವುದೇ ಸಮಸ್ಯೆಗಳಿದ್ದರೂ ತಮ್ಮತಮ್ಮಲ್ಲೇ ಬಗೆ ಹರಿಸಿಕೊಳ್ಳಲು ಮುಂದಾಗಿ ವಿಕೋಪಕ್ಕೆ ತಿರುಗುವ ಬದಲು ಠಾಣೆಯಲ್ಲಿಗೆ ಬಂದು ತಮ್ಮ ಸಮಸ್ಯೆಯನ್ನು ತಿಳಿಸಿ ಪರಿಹರಿಸಿಕೊಳ್ಳಿ ಎಂದರು.
ಗ್ರಾ.ಪಂ.ಸದಸ್ಯ ಎಲ್.ಆರ್.ಚಂದ್ರಶೇಖರ್ ಮಾತನಾಡಿ ಪಟ್ಟಣದಲ್ಲಿ ಕೆಲ ಕುಡುಕರು ರಸ್ತೆಯಲ್ಲಿಯೇ ನಿಂತು ಅವಾಚ್ಯ ಮಾತುಗಳಾನುಡಿತ್ತಿದ್ದಾರೆ ಹಾಗೂ ಪಟ್ಟಣದ ರಾಜ್ ಕುಮಾರ್ ರಸ್ತೆ, ಬಸ್ ಸ್ಟಾಂಡ್ ನಲ್ಲಿ ಎಲ್ಲೆಂಡರಲ್ಲಿ ಬೈಕ್. ವಾಹನಗಳನ್ನು ನಿಲ್ಲಿಸುತ್ತಿದ್ದು ಸಂಚಾರಕ್ಕೆ ತೊಡಕಾಗಿದೆ ಈ ಬಗ್ಗೆ ಗಮನಹರಿಸುವಂತೆ ಮನವಿ ಮಾಡಿದರು.

ಈ ವೇಳೆ ಪಿಎಸೈ ಬಿ.ಪ್ರವೀಣ್ ಕುಮಾರ್, ಗ್ರಾ.ಪಂ.ಅಧ್ಯಕ್ಷೆ ಗೀತಾ, ಉಪಾಧ್ಯಕ್ಷ ಗಣೇಶ್, ಎ.ಎಸ್.ಈ ಶಿವಪ್ಪ, ಸದಸ್ಯರಾದ ಜಬೀಉಲ್ಲಾ, ರಾಘವೇಂದ್ರ,ಡಾಬಾಸೂರಪ್ಪ,ಡಿಶ್ ಬಾಬು, ಶಂಕರ್, ತಿರುಮಲಾಪುರ ಗ್ರಾ.ಪಂ. ಅಧ್ಯಕ್ಷ ದೇವರಾಜು, ಉಪಾಧ್ಯಕ್ಷ ಮೋಹನ್, ಮುಖಂಡರಾದ ಜಲಾಲ್ ಸಾಬ್, ಬಡಗಿರಾಮಣ್ಣ,,ಅಮಾನ್ ಇಸ್ಮಾಯಿಲ್, ಪೋಲಿಸ್ ಪೇದೆ ಪುಟ್ಟೇಗೌಡ, ಅನಿಲ್, ಮಂಜುನಾಥ್ ಸೇರಿದಂತೆ ಇತರರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.