ವಿಷಯಕ್ಕೆ ಹೋಗಿ

ಖಾಯಂ ವೈದ್ಯರನ್ನು ನೇಮಿಸುವಂತೆ ಪ್ರತಿಭಟನೆ

ಕಡೆಗೂ ವೈದ್ಯರ ನಿಯೋಜನೆಗೆ ಒಪ್ಪಿದ ಡಿಹೆಚ್ ಓ: ಸಂಜೆ ಪ್ರತಿಭಟನೆ ಹಿಂದಕ್ಕೆ
---------------
ಹುಳಿಯಾರು ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಯಂ ವೈದ್ಯರಿಲ್ಲದೆ ರೋಗಿಗಳು ಪರದಾಡುವಂತಾಗಿದ್ದು, ಖಾಯಂ ವೈದ್ಯರನ್ನು ನೇಮಿಸುವಂತೆ ಒತ್ತಾಯಿಸಿ ಗ್ರಾ.ಪಂ.ಸದಸ್ಯರು, ಸಾರ್ವಜನಿಕರು ಸೇರಿದಂತೆ ವಿವಿಧ ಸಂಘಟನೆಯವರು ಆಸ್ಪತ್ರೆ ಸಿಬ್ಬಂದಿಯನ್ನು ಆಸ್ಪತ್ರೆಯಿಂದ ಹೊರಗಟ್ಟಿ ಆಸ್ಪತ್ರೆ ಮುಂದೆ ಬುಧವಾರ ಪ್ರತಿಭಟಿಸಿದರಲ್ಲದೆ , ಈ ಹಿಂದೆ ಪ್ರತಿಭಟನೆ ಮಾಡಿದಾಗ ಬಂದು ನಯವಾಗಿ ಭರವಸೆ ನೀಡಿದ್ದ ಡಿಹೆಚ್ ಓ ಅವರೇ ಸ್ಥಳಕ್ಕೆ ಬಂದು ಸಮಸ್ಯೆ ಬಗೆಹರಿಸಲಿ ಎಂದು ಪಟ್ಟು ಹಿಡಿದಿದ್ದರಿಂದ ಪ್ರತಿಭಟನೆ ಸಂಜೆಯವರೆಗೂ ಮುಂದುವರೆಯಿತು.
ಹುಳಿಯಾರು ಆಸ್ಪತ್ರೆಗೆ ಖಾಯಂ ವೈದ್ಯರನ್ನು ನೇಮಿಸುವಂತೆ ಗ್ರಾ.ಪಂ.ಸದಸ್ಯರು, ವಿವಿಧ ಸಂಘ ಸಂಸ್ಥೆಯವರು ಹಾಗೂ ಸಾರ್ವಜನಿಕರು ರಸ್ತೆ ತಡೆ ನಡೆಸುವ ಮೂಲಕ ಪ್ರತಿಭಟಿಸಿದರು.
ಹೋಬಳಿಯ ಸೀಗೆಬಾಗಿಯ ಶಾಲೆಯಿಂದ ಶಾಲಾಮಕ್ಕಳನ್ನು ಕ್ರೀಡಾಕೂಟಕ್ಕೆಂದು ಹೊಸಹಳ್ಳಿ ಪಾಳ್ಯದ ಮಾರ್ಗವಾಗಿ ಕರೆದೊಯ್ಯುತ್ತಿದ್ದ ಟಾಟಾ ಏಸ್ ವಾಹನ ಪಲ್ಟಿಯಾಗಿ ೧೬ಕ್ಕೂ ಅಧಿಕ ಮಕ್ಕಳಿಗೆ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗೆಂದು ಹುಳಿಯಾರಿನ ಸರ್ಕಾರಿ ಆಸ್ಪತ್ರೆಗೆ ಕರೆತಂದಾಗ ವೈದ್ಯರಿಲ್ಲದೆ ಪರದಾಡುವಂತಾಗಿದ್ದರಿಂದ ರೊಚ್ಚಿಗೆದ್ದ ಸಾರ್ವಜನಿಕರು ಈ ರೀತಿ ನಡೆಯುತ್ತಿರುವುದು ಇಂದು ನಿನ್ನೆಯದಲ್ಲಾ ಪ್ರತಿಬಾರಿ ಅಪಘಾತಗಳು ಸಂಭವಿಸಿದಾಗಲೂ ಸಹ ಜನ ಪರದಾಡುವಂತಾಗಿದೆ ಎಂದು ಪ್ರತಿಭಟನೆಗೆ ಮುಂದಾದರು.

                  ಪಟ್ಟಣದ ಆಸ್ಪತ್ರೆಗೆ ಖಾಯಂ ವೈದ್ಯರನ್ನು ನೇಮಿಸಿ ಈ ಭಾಗದ ಜನಕ್ಕೆ ಅನುಕೂಲ ಮಾಡಿಕೊಡಿ ಎಂದು ಡಿಹೆಚ್ ಓ ಹಾಗೂ ಟಿಹೆಚ್ ಓ ಅವರಲ್ಲಿ ಎಷ್ಟೇ ಬಾರಿ ಮನವಿಮಾಡಿದರೂ ಸಹ ಇದುವರೆಗೂ ಖಾಯಂ ವೈದ್ಯರನ್ನು ನೇಮಿಸಿಲ್ಲ. ಈ ಹಿಂದೆ ಪ್ರತಿಭಟನೆ ಮಾಡಿದಾಗ ಸ್ಥಳಕ್ಕಾಗಮಿಸಿದ ಡಿಹೆಚ್ ಓ ಶಶಿಕಲಾ ಅವರು ಬಣ್ಣದ ಮಾತುಗಳನ್ನಾಡಿ ವೈದ್ಯರನ್ನು ನೇಮಿಸುತ್ತೇವೆ ಎಂದು ಹೇಳಿ ಹೋಗಿದ್ದು ಬಿಟ್ಟರೆ ಮತ್ತೆ ಇತ್ತ ಸುಳಿದಿಲ್ಲ. ಹಾಲಿ ಇರುವ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವಂತೆ ಹಲವಾರು ಬಾರಿ ಮನವಿಸಲ್ಲಿಸಿದ್ದರೂ ಸಹ ಕಿಂಚಿತ್ತು ಗಮನಗೊಡದ ಅಧಿಕಾರಿಗಳು ಏಕಾಏಕಿಯಾಗಿ ಕಮಿಷನ್ ಆಸೆಗೆ ಹುಳಿಯಾರಿನ ಪ್ರಾಥಮಿಕ ಆರೋಗ್ಯಕೇಂದ್ರವನ್ನು ಎರಡು ಕೋಟಿ ವೆಚ್ಚದಲ್ಲಿ ಮಾದರಿ ಆರೋಗ್ಯಕೇಂದ್ರವನ್ನಾಗಿ ಮಾಡಿ, ತರಾತುರಿಯಲ್ಲಿ ಅದರ ಶಂಕುಸ್ಥಾಪನೆಯನ್ನು ಮಾಡಿಸಿದ್ದಾರೆ. ಖಾಯಂ ವೈದ್ಯರಿಲ್ಲದ ಮೇಲೆ ಹೊಸ ಆಸ್ಪತ್ರೆಯ ಕಟ್ಟಡದ ಅವಶ್ಯಕತೆ ಏನಿತ್ತು ಎಂದು ಗ್ರಾ.ಪಂ.ಮಾಜಿ ಸದಸ್ಯ ಅಶೋಕ್ ಬಾಬು ದೂರಿದರು.

                     ಹುಳಿಯಾರು ಹೋಬಳಿ ಕೇಂದ್ರವಾಗಿದ್ದು ನಾಲ್ಕು ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸಲಿದ್ದು, ಎನ್.ಹೆಚ್. ೨೩೪ ಹಾಗೂ ಎನ್.ಹೆಚ್.೧೫೦ಎ ಹೆದ್ದಾರಿಗಳು ಪಟ್ಟಣದಲ್ಲಿ ಹಾದುಹೋಗಿದ್ದು ಪ್ರತಿ ನಿತ್ಯ ನೂರಾರು ವಾಹನಗಳು ಸಂಚರಿಸುತ್ತಿವೆ. ಅಲ್ಲದೆ ನಿತ್ಯ ಅಪಘಾತಗಳು ಸಹ ಸಂಭವಿಸುತ್ತಿದ್ದು ಅಪಘಾತಕ್ಕಿಡಾದವರು ಚಿಕಿತ್ಸೆಗೆಂದು ಆಸ್ಪತ್ರೆ ಬಂದರೆ ಪ್ರಥಮ ಚಿಕಿತ್ಸೆ ನೀಡಲು ವೈದ್ಯರಿಲ್ಲದೆ ಪರಿತಪಿಸುವಂತಾಗಿದೆ. ರಾತ್ರಿ ಸಮಯದಲ್ಲಿ ಅಪಘಾತವಾದರೆ ಚಿಕಿತ್ಸೆ ನೀಡಲು ಇಲ್ಲಿ ವೈದ್ಯರಿಲ್ಲದೆ ಕೆಲವರು ಅಸುನೀಗಿರುವ ನಿದರ್ಶನಗಳಿವೆ. ಈ ಬಗ್ಗೆ ಡಿಹೆಚ್ ಓ ಅವರಿಗೆ ಹಲವು ಬಾರಿ ತಿಳಿಸಿದ್ದರೂ ಯಾವುದೇ ಪ್ರಯೋಜವಾಗಿಲ್ಲ, ಶೀಘ್ರವೇ ಖಾಯಂ ವೈದ್ಯರನ್ನು ನೇಮಿಸುವುದರಿಂದ ಮುಂದಾಗುವ ಅನಾಹುತಗಳನ್ನು ತಪ್ಪಿಸಬಹುದಾಗಿ ಎಂದರು ಗ್ರಾ.ಪಂ.ಸದಸ್ಯ ಎಲ್.ಆರ್.ಚಂದ್ರಶೇಖರ್ ತಿಳಿಸಿದರು.

ರಸ್ತೆ ತಡೆ: ಆಸ್ಪತ್ರೆಗೆ ಖಾಯಂ ವೈದ್ಯರನ್ನು ನೇಮಿಸುವಂತೆ ಒತ್ತಾಯಿಸಿ ಕೆಲಕಾಲ ರಸ್ತೆ ತಡೆ ಸಹ ನಡೆದು ನಂತರ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳೊಂದಿಗೆ ಜಿಲ್ಲಾ ವೈದ್ಯಾಧಿಕಾರಿಗಳ ವಿರುದ್ದ ಘೋಷಣೆಗಳನ್ನು ಕೂಗುತ್ತಾ ಪೋಲೀಸ್ ಠಾಣೆಯವರೆಗೆ ಜಾಥಾ ನಡೆಸಿದರು.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಡಿಎಸ್.ಒ ಪುರುಷೋತ್ತಮ್ ಹಾಗೂ ಚಿ.ನಾ.ಹಳ್ಳಿ ಆಸ್ಪತ್ರೆ ವೈದ್ಯ ಶಿವಕುಮಾರ್ ಅವರು ಪ್ರತಿಭಟನಾ ನಿರತರ ಮನವೊಲಿಸಲು ಮುಂದಾದರಾದರೂ ಸಹ ಯಾವುದೇ ಪ್ರಯೋಜವಾಗಲಿಲ್ಲ. ಡಿಎಸ್.ಓ ಅವರಿಗೆ ಆಸ್ಪತ್ರೆಯಲ್ಲಿನ ಸಮಸ್ಯೆಗಳ ಬಗ್ಗೆ ತಿಳಿಸಿದ ಪ್ರತಿಭಟನಾ ನಿರತರು ಖಾಯಂ ವೈದ್ಯರನ್ನು ಶೀಘ್ರವೇ ನೇಮಿಸುವಂತೆ ಒತ್ತಾಯಿಸಿದರು.

                       ಈ ಬಗ್ಗೆ ಪ್ರತಿಕ್ರಿಯಿಸಿದ ಡಿಎಸ್ ಓ ಚಿ.ನಾ.ಹಳ್ಳಿ ತಾಲ್ಲೂಕಿನಲ್ಲಿರುವ ಸರ್ಕಾರಿ ಆಸ್ಪತ್ರೆಗಳಿಗೆ ವೈದ್ಯರ ಅವಶ್ಯಕತೆಯಿರುವುದು ತಮಗೆ ತಿಳಿದಿದ್ದು,ಕೆಲ ಆಸ್ಪತ್ರೆಗಳಿಗೆ ಗುತ್ತಿಗೆಮೇಲೆ ವೈದ್ಯರನ್ನು ನೇಮಿಸಿದ್ದು, ಈಗಾಗಲೇ ಸರ್ಕಾರ ವೈದ್ಯರ ನೇಮಕಕ್ಕೆ ಮುಂದಾಗಿದ್ದು ಹೊಸವೈದ್ಯರುಗಳ ನೇಮಕವಾಗಲಿದೆ ಎಂದರು. ಇದಕ್ಕೊಪ್ಪದ ಪ್ರತಿಭಟನಾ ನಿರತರು ಸದ್ಯ ಒಬ್ಬ ವೈದ್ಯರನ್ನಾದರೂ ಖಾಯಂ ಆಗಿ ಹಾಕಿ ಎಂದು ಪ್ರತಿಭಟನೆ ಮುಂದುವರೆಸಿದ್ದರು.
ಡಿಹೆಚ್ ಓ ಸ್ಥಳಕ್ಕೆ ಬರಲೇಬೇಕೆಂದು ಗ್ರಾಮಪಂಚಾಯ್ತಿ ಸದಸ್ಯರು
ಎಸ್.ಬಿ.ಐ ಮುಂಭಾಗ ರಸ್ತೆ ಮಧ್ಯೆ ಕೂತು ಪ್ರತಿಭಟಿಸಿದರು.
       ಸಂಜೆಯವರೆಗೂ ನಡೆದ ಮಾತುಕತೆ ವೇಳೆಯಲ್ಲಿ ಗುರುವಾರದಿಂದ ಇಬ್ಬರೂ ವೈದ್ಯರನ್ನೂ ನಿಯೋಜಿಸುವುದಾಗಿ ಡಿಹೆಚ್ ಓ ನೀಡಿದ ಭರವಸೆ ಮೇರೆಗೆ ತಾತ್ಕಾಲಿಕವಾಗಿ ಪ್ರತಿಭಟನೆ ಹಿಂಪಡೆಯಲಾಯಿತು.





ಈ ವೇಳೆ ಗ್ರಾ.ಪಂ.ಅಧ್ಯಕ್ಷೆ ಗೀತಾ,ಸದಸ್ಯರಾದ ಶಂಕರ್,ರಾಘವೇಂದ್ರ,ಹೇಮಂತ್,ಗೀತಾಬಾಬು,ಸಿದ್ದಗಂಗಮ್ಮ,ಪ್ರಸನ್ನ, ನಗೀನಾ ಬಾಬು, ತಾಲ್ಲೂಕು ಯುವ ಜೆಡಿಎಸ್ ಅಧ್ಯಕ್ಷ ಗವಿರಂಗನಾಥ್, ರಹಮತ್ ಉಲ್ಲಾ,ಇಮ್ರಾಜ್ ಸೇರಿದಂತೆ ಕರ್ನಾಟಕ ರಕ್ಷಣಾ ವೇದಿಕೆ ,ಜಯಕರ್ನಾಟಕ ಸಂಘದ ಪದಾಧಿಕಾರಿಗಳು ಸೇರಿದಂತೆ ಹೋಬಳಿಯ ವಿವಿಧ ಹಳ್ಳಿಗಳ ಸಾರ್ವಜನಿಕರು ಪಾಲ್ಗೊಂಡಿದ್ದರು.
--------------------------------
ಡಿಹೆಚ್ ಓ ಶಶಿಕಲಾ ಅವರನ್ನು ತಾ.ಪಂ.ಸದಸ್ಯ ನವೀನ್ ಪೋನ್ ಮೂಲಕ ಸಂಪರ್ಕಿಸಿದಾಗ ಸಮಸ್ಯೆ ಬಗೆ ಹರಿಯದಿದ್ದರೆ ಸಿಪಿಐ ಸಮೇತ ಹೆಚ್ಚಿನ ಪೋಲಿಸ್ ಸಿಬ್ಬಂದಿ ಬಂದು ಸಮಸ್ಯೆ ಬಗೆಹರಿಸುತ್ತಾರೆ ಎಂದು ಉಡಾಫೆ ಉತ್ತರ ನೀಡಿದ್ದರಿಂದ ಪ್ರತಿಭಟನಿರತರು ರೊಚ್ಚಿಗೆದ್ದು, ಎಲ್ಲೋ ಕುಳಿತು ಈರೀತಿ ಹೇಳುತ್ತಿರುವ ಡಿಹೆಚ್ ಓ ಸ್ಥಳಕ್ಕೆ ಬರಲೇಬೆಕೆಂದು ಪಟ್ಟುಹಿಡಿದಿದ್ದರಿಂದ ಪ್ರತಿಭಟನೆ ಕಾವೇರಲು ಕಾರಣವಾಯಿತು

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.