ವಿಷಯಕ್ಕೆ ಹೋಗಿ

ಸೇವೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ : ಸಾಹಿತಿ ನಾಗರಾಜರಾವ್

ಪ್ರಪಂಚದಲ್ಲಿ ಅನೇಕ ವಸ್ತುಗಳಿಗೆ ಇಂತಿಷ್ಟೇ ಎಂಬ ಬೆಲೆಯಿದ್ದು ಅವುಗಳನ್ನು ಕೊಂಡುಕೊಳ್ಳಬಹುದಾಗಿದೆ. ಆದರೆ ನಾವು ಮಾಡುವಂತಹ ಸಾರ್ವಜನಿಕ ಸೇವೆಗೆ ಬೆಲೆಕಟ್ಟಲು ಸಾಧ್ಯವಿಲ್ಲ ಅಂತಹ ಸೇವೆಯನ್ನು ರೋಟರಿ ಮಾಡುತ್ತಿರುವುದು ಹೆಮ್ಮೆಯ ಸಂಗತಿ ಎಂದು ಸಾಹಿತಿ ನಾಗರಾಜರಾವ್ ಅಭಿಮತವ್ಯಕ್ತಪಡಿಸಿದರು.
ಹುಳಿಯಾರು ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ರೋಟರಿ ಸಂಸ್ಥೆಯ ಜಿಲ್ಲಾಕಾರ್ಯದರ್ಶಿ ಬಿಳಿಗೆರೆ ಶಿವಕುಮಾರ್ ಉದ್ಘಾಟಿಸಿದರು.
ಹುಳಿಯಾರಿನ ರೋಟರಿ ಬಾಲಭವನದಲ್ಲಿ ಭಾನುವಾರ ನಡೆದ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಅತಿಥಿಯಾಗಿ ಆಗಮಿಸಿ ಅವರು ಮಾತನಾಡಿದರು.
ಸ್ನೇಹ, ಅನ್ಯೂನ್ಯತೆ,ಪ್ರೀತಿ,ವಿಶ್ವಾದ ಜೊತೆಗೆ ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದ ಸೇವೆ ಮಾಡುವುದನ್ನೇ ತನ್ನ ಗುರಿಯನ್ನಾಗಿಟ್ಟುಕೊಂಡು ರೋಟರಿ ಸಂಸ್ಥೆ ಸಾಗುತ್ತಿದೆ ಎಂದರು. ಪ್ರಸ್ತುತದಲ್ಲಿ ರೋಟರಿಗೆ ಸದಸ್ಯರಾಗಿ ಎಂದರೆ ತಮಗೆ ಬಿಡುವಿಲ್ಲ ಎಂದು ಹೇಳುತ್ತಾರೆ ಆದರೆ ಈ ಹಿಂದೆ ಸಾಧನೆ ಮಾಡಿದ ಅನೇಕ ಮಹಾನ್ ವ್ಯಕ್ತಿಗಳು ತಮ್ಮ ಬಿಡುವಿಲ್ಲದ ಸಮಯದಲ್ಲೂ ಸಹ ದೇಶಕ್ಕಾಗಿ ದುಡಿದು ತಮ್ಮಸೇವೆ ನೀಡಿದ್ದಾರೆ ಎಂದರು. ಜೀವನದಲ್ಲಿ ಮೊದಲು ನಾನು ಜಗತ್ತಿಗೆ ಉಡುಗೊರೆಯಾಗಬೇಕು ಆಗ ಸಾಧನೆಯ ಮೆಟ್ಟಿಲೇರಲು ಸಾಧ್ಯವಾಗುತ್ತದೆ ಆ ನಿಟ್ಟಿನಲ್ಲಿ ಸಾಗೋಣ ಎಂದರು.
ಹುಳಿಯಾರು ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ನಿವೃತ್ತ ಶಿಕ್ಷಕ ಕೃಷ್ಣಪ್ಪಅವರನ್ನು ಸನ್ಮಾನಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಮಂಜುನಾಥಗುಪ್ತಾ,ಉಪಾಧ್ಯಕ್ಷ ದುರ್ಗರಾಜ್ ಇತರರಿದ್ದಾರೆ.
 ಇಂಟರ್ ನ್ಯಾಷನಲ್ ಡೈರಕ್ಟರ್ ಹೆಚ್.ಆರ್.ಶ್ರೀನಾಥ್ ಬಾಬು ಮಕ್ಕಳಿಗೆ ರೋಟರಿ ಬ್ಯಾಡ್ಜ್ ಹಾಕುವ ಮೂಲಕ ರೋಟರಿಕಿಡ್ಸ್ ಸಂಘಕ್ಕೆ ಚಾಲನೆ ನೀಡಿದರು.




ರೋಟರಿ ಹುಳಿಯಾರು ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಂಜುನಾಥ ಗುಪ್ತಾ ಮಾತನಾಡಿ, ರೋಟರಿ ಸಂಸ್ಥೆ ಸೇವೆಯನ್ನೇ ಮೂಲಮಂತ್ರವನ್ನಾಗಿಸಿಕೊಂಡು ಸಾಗುತ್ತಿದ್ದು ಹಿಡಿ ಪ್ರಪಂಚದಲ್ಲೇ ಪ್ರಖ್ಯಾತಿ ಪಡೆದಿದ್ದು, ಅಂತಹ ಸಂಸ್ಥೆಗೆ ಸಾರ್ವಜನಿಕರು ಸ್ವಯಂಪ್ರೇರಣೆಯಿಂದ ಸದಸ್ಯರಾಗಿ ಎಂದು ಮನವಿ ಮಾಡಿದರು. ತಮ್ಮ ಅಧ್ಯಕ್ಷ ಅವಧಿಯಲ್ಲಿ ವಿವಿಧ ಸಾರ್ವಜನಿಕ ಕಾರ್ಯಗಳನ್ನು ಮಾಡುವ ಯೋಜನೆಗಳಿದ್ದು ಸಂಸ್ಥೆಯ ಪದಾಧಿಕಾರಿಗಳು, ಸಾರ್ವಜನಿಕರು ತಮ್ಮೊಂದಿಗೆ ಕೈಜೋಡಿ ಸಹಕರಿಸಿ ಎಂದರು.

ಶಾಲಾಮಕ್ಕಳಿಗೆ ನೋಟ್ ಬುಕ್ ವಿತರಣೆ
ಇಂಟರ್ ನ್ಯಾಷನಲ್ ಡೈರಕ್ಟರ್ ಹೆಚ್.ಆರ್.ಶ್ರೀನಾಥ್ ಬಾಬು ಮಕ್ಕಳಿಗೆ ರೋಟರಿ ಬ್ಯಾಡ್ಜ್ ಹಾಕುವ ಮೂಲಕ ರೋಟರಿಕಿಡ್ಸ್ ಸಂಘಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ರೋಟರಿ ಸಂಸ್ಥೆಯ ಪಿಡಿಜಿಯಾದ ಹೆಚ್.ಕೆ.ವಿ.ರೆಡ್ಡಿ, ಜಿಲ್ಲಾಕಾರ್ಯದರ್ಶಿ ಬಿಳಿಗೆರೆ ಶಿವಕುಮಾರ್, ಅಸಿಸ್ಟೆಂಟ್ ಗವರ್ನರ್ ಸಿ.ಎಸ್.ಪ್ರದೀಪ್ ಕುಮಾರ್, ಉಪಾಧ್ಯಕ್ಷರಾಗಿ ಆಯ್ಕೆಯಾದ ಸ್ಟುಡಿಯೋ ದುರ್ಗರಾಜ್, ಪದಾಧಿಕಾರಿಗಳಾದ ರವೀಶ್,ಗಂಗಾಧರ್,ಗೋಪಿನಾಥ್, ಗಂಗಾಧರ್ ರಾವ್, ಲಕ್ಷ್ಮಿಕಾಂತ್,ಮೆಡಿಕಲ್ ಚಂಬಣ್ಣ,ಸುದರ್ಶನ್ ಉಪಸ್ಥಿತರಿದ್ದರು. ಇದೇ ವೇಳೆ ನಿವೃತ್ತ ಶಿಕ್ಷಕರಾದ ಕೃಷ್ಣಯ್ಯ,ಕರಿಯಪ್ಪಅವರಿಗೆ ಸನ್ಮಾನ ಹಾಗೂ ಶಾಲಾಮಕ್ಕಳಿಗೆ ನೋಟ್ ಬುಕ್ ವಿತರಿಸಲಾಯಿತು. ಟಿಸಿಬಿ ಬ್ಯಾಂಕ್ ಮ್ಯಾನೇಜರ್ ಕುಮಾರ್, ಎಲ್.ಐ.ಸಿ.ದೇವರಾಜು,ರಘುನಾಥ್,ವಿಠಲ್ ಸೇರಿದಂತೆ ಇತರರು ರೋಟರಿಯ ಸದಸ್ಯತ್ವ ಪಡೆದರು. 





ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...