ವಿಷಯಕ್ಕೆ ಹೋಗಿ

ಸೇವೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ : ಸಾಹಿತಿ ನಾಗರಾಜರಾವ್

ಪ್ರಪಂಚದಲ್ಲಿ ಅನೇಕ ವಸ್ತುಗಳಿಗೆ ಇಂತಿಷ್ಟೇ ಎಂಬ ಬೆಲೆಯಿದ್ದು ಅವುಗಳನ್ನು ಕೊಂಡುಕೊಳ್ಳಬಹುದಾಗಿದೆ. ಆದರೆ ನಾವು ಮಾಡುವಂತಹ ಸಾರ್ವಜನಿಕ ಸೇವೆಗೆ ಬೆಲೆಕಟ್ಟಲು ಸಾಧ್ಯವಿಲ್ಲ ಅಂತಹ ಸೇವೆಯನ್ನು ರೋಟರಿ ಮಾಡುತ್ತಿರುವುದು ಹೆಮ್ಮೆಯ ಸಂಗತಿ ಎಂದು ಸಾಹಿತಿ ನಾಗರಾಜರಾವ್ ಅಭಿಮತವ್ಯಕ್ತಪಡಿಸಿದರು.
ಹುಳಿಯಾರು ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ರೋಟರಿ ಸಂಸ್ಥೆಯ ಜಿಲ್ಲಾಕಾರ್ಯದರ್ಶಿ ಬಿಳಿಗೆರೆ ಶಿವಕುಮಾರ್ ಉದ್ಘಾಟಿಸಿದರು.
ಹುಳಿಯಾರಿನ ರೋಟರಿ ಬಾಲಭವನದಲ್ಲಿ ಭಾನುವಾರ ನಡೆದ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಅತಿಥಿಯಾಗಿ ಆಗಮಿಸಿ ಅವರು ಮಾತನಾಡಿದರು.
ಸ್ನೇಹ, ಅನ್ಯೂನ್ಯತೆ,ಪ್ರೀತಿ,ವಿಶ್ವಾದ ಜೊತೆಗೆ ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದ ಸೇವೆ ಮಾಡುವುದನ್ನೇ ತನ್ನ ಗುರಿಯನ್ನಾಗಿಟ್ಟುಕೊಂಡು ರೋಟರಿ ಸಂಸ್ಥೆ ಸಾಗುತ್ತಿದೆ ಎಂದರು. ಪ್ರಸ್ತುತದಲ್ಲಿ ರೋಟರಿಗೆ ಸದಸ್ಯರಾಗಿ ಎಂದರೆ ತಮಗೆ ಬಿಡುವಿಲ್ಲ ಎಂದು ಹೇಳುತ್ತಾರೆ ಆದರೆ ಈ ಹಿಂದೆ ಸಾಧನೆ ಮಾಡಿದ ಅನೇಕ ಮಹಾನ್ ವ್ಯಕ್ತಿಗಳು ತಮ್ಮ ಬಿಡುವಿಲ್ಲದ ಸಮಯದಲ್ಲೂ ಸಹ ದೇಶಕ್ಕಾಗಿ ದುಡಿದು ತಮ್ಮಸೇವೆ ನೀಡಿದ್ದಾರೆ ಎಂದರು. ಜೀವನದಲ್ಲಿ ಮೊದಲು ನಾನು ಜಗತ್ತಿಗೆ ಉಡುಗೊರೆಯಾಗಬೇಕು ಆಗ ಸಾಧನೆಯ ಮೆಟ್ಟಿಲೇರಲು ಸಾಧ್ಯವಾಗುತ್ತದೆ ಆ ನಿಟ್ಟಿನಲ್ಲಿ ಸಾಗೋಣ ಎಂದರು.
ಹುಳಿಯಾರು ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ನಿವೃತ್ತ ಶಿಕ್ಷಕ ಕೃಷ್ಣಪ್ಪಅವರನ್ನು ಸನ್ಮಾನಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಮಂಜುನಾಥಗುಪ್ತಾ,ಉಪಾಧ್ಯಕ್ಷ ದುರ್ಗರಾಜ್ ಇತರರಿದ್ದಾರೆ.
 ಇಂಟರ್ ನ್ಯಾಷನಲ್ ಡೈರಕ್ಟರ್ ಹೆಚ್.ಆರ್.ಶ್ರೀನಾಥ್ ಬಾಬು ಮಕ್ಕಳಿಗೆ ರೋಟರಿ ಬ್ಯಾಡ್ಜ್ ಹಾಕುವ ಮೂಲಕ ರೋಟರಿಕಿಡ್ಸ್ ಸಂಘಕ್ಕೆ ಚಾಲನೆ ನೀಡಿದರು.




ರೋಟರಿ ಹುಳಿಯಾರು ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಂಜುನಾಥ ಗುಪ್ತಾ ಮಾತನಾಡಿ, ರೋಟರಿ ಸಂಸ್ಥೆ ಸೇವೆಯನ್ನೇ ಮೂಲಮಂತ್ರವನ್ನಾಗಿಸಿಕೊಂಡು ಸಾಗುತ್ತಿದ್ದು ಹಿಡಿ ಪ್ರಪಂಚದಲ್ಲೇ ಪ್ರಖ್ಯಾತಿ ಪಡೆದಿದ್ದು, ಅಂತಹ ಸಂಸ್ಥೆಗೆ ಸಾರ್ವಜನಿಕರು ಸ್ವಯಂಪ್ರೇರಣೆಯಿಂದ ಸದಸ್ಯರಾಗಿ ಎಂದು ಮನವಿ ಮಾಡಿದರು. ತಮ್ಮ ಅಧ್ಯಕ್ಷ ಅವಧಿಯಲ್ಲಿ ವಿವಿಧ ಸಾರ್ವಜನಿಕ ಕಾರ್ಯಗಳನ್ನು ಮಾಡುವ ಯೋಜನೆಗಳಿದ್ದು ಸಂಸ್ಥೆಯ ಪದಾಧಿಕಾರಿಗಳು, ಸಾರ್ವಜನಿಕರು ತಮ್ಮೊಂದಿಗೆ ಕೈಜೋಡಿ ಸಹಕರಿಸಿ ಎಂದರು.

ಶಾಲಾಮಕ್ಕಳಿಗೆ ನೋಟ್ ಬುಕ್ ವಿತರಣೆ
ಇಂಟರ್ ನ್ಯಾಷನಲ್ ಡೈರಕ್ಟರ್ ಹೆಚ್.ಆರ್.ಶ್ರೀನಾಥ್ ಬಾಬು ಮಕ್ಕಳಿಗೆ ರೋಟರಿ ಬ್ಯಾಡ್ಜ್ ಹಾಕುವ ಮೂಲಕ ರೋಟರಿಕಿಡ್ಸ್ ಸಂಘಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ರೋಟರಿ ಸಂಸ್ಥೆಯ ಪಿಡಿಜಿಯಾದ ಹೆಚ್.ಕೆ.ವಿ.ರೆಡ್ಡಿ, ಜಿಲ್ಲಾಕಾರ್ಯದರ್ಶಿ ಬಿಳಿಗೆರೆ ಶಿವಕುಮಾರ್, ಅಸಿಸ್ಟೆಂಟ್ ಗವರ್ನರ್ ಸಿ.ಎಸ್.ಪ್ರದೀಪ್ ಕುಮಾರ್, ಉಪಾಧ್ಯಕ್ಷರಾಗಿ ಆಯ್ಕೆಯಾದ ಸ್ಟುಡಿಯೋ ದುರ್ಗರಾಜ್, ಪದಾಧಿಕಾರಿಗಳಾದ ರವೀಶ್,ಗಂಗಾಧರ್,ಗೋಪಿನಾಥ್, ಗಂಗಾಧರ್ ರಾವ್, ಲಕ್ಷ್ಮಿಕಾಂತ್,ಮೆಡಿಕಲ್ ಚಂಬಣ್ಣ,ಸುದರ್ಶನ್ ಉಪಸ್ಥಿತರಿದ್ದರು. ಇದೇ ವೇಳೆ ನಿವೃತ್ತ ಶಿಕ್ಷಕರಾದ ಕೃಷ್ಣಯ್ಯ,ಕರಿಯಪ್ಪಅವರಿಗೆ ಸನ್ಮಾನ ಹಾಗೂ ಶಾಲಾಮಕ್ಕಳಿಗೆ ನೋಟ್ ಬುಕ್ ವಿತರಿಸಲಾಯಿತು. ಟಿಸಿಬಿ ಬ್ಯಾಂಕ್ ಮ್ಯಾನೇಜರ್ ಕುಮಾರ್, ಎಲ್.ಐ.ಸಿ.ದೇವರಾಜು,ರಘುನಾಥ್,ವಿಠಲ್ ಸೇರಿದಂತೆ ಇತರರು ರೋಟರಿಯ ಸದಸ್ಯತ್ವ ಪಡೆದರು. 





ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.