ವಿಷಯಕ್ಕೆ ಹೋಗಿ

ದಬ್ಬಗುಂಟೆ ಶಾಲೆಯಲ್ಲಿ ಶಿಕ್ಷಕರ ಕೊರತೆ :ಪೋಷಕರ ಪ್ರತಿಭಟನೆ

ಶಿಕ್ಷಕರನ್ನು ಕೊಠಡಿಗೆ ಕೂಡಿ ಬೀಗ ಜಡಿದ ಗ್ರಾಮಸ್ಥರು
                                               -------------------------------
           ಶಾಲೆಯಲ್ಲಿ ಮಕ್ಕಳ ಸಂಖ್ಯೆಗೆ ಅನುಗು ಣವಾಗಿ ಶಿಕ್ಷಕರಿಲ್ಲದ ಕಾರಣ ಮಕ್ಕಳಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಎಸ್ಡಿಎಂಸಿ ಸದಸ್ಯರ ನೇತೃತ್ವದಲ್ಲಿ ಹೋಬಳಿಯ ದಬ್ಬಗುಂಟೆಯಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕೊಠಡಿಗೆ ಬೀಗ ಜಡಿದು ಶಾಲೆಯನ್ನು ಬಂದ್ ಮಾಡಿ ಮಕ್ಕಳೊಂದಿಗೆ ಪೋಷಕರು ಪ್ರತಿಭಟನೆ ಮಾಡಿದ ಘಟನೆ ಮಂಗಳವಾರ ನಡೆಯಿತು.
ಹುಳಿಯಾರು ಹೋಬಳಿ ದಬ್ಬಗುಂಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ ಕೊರತೆ ನೀಗಿಸುವಂತೆ ಒತ್ತಾಯಿಸಿ ಶಾಲಾಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಪೋಷಕರು ಮಕ್ಕಳೊಂದಿಗೆ ಶಾಲೆಗೆ ಬೀಗ ಹಾಕಿ ಮಂಗಳವಾರ ಪ್ರತಿಭಟನೆ ನಡೆಸಿದರು.



            ಸಮಸ್ಯೆ ಏನು: ದಬ್ಬಗುಂಟೆ ಶಾಲೆಯಲ್ಲಿ 1ನೇ ತರಗತಿಯಿಂದ 7 ನೇ ತರಗತಿವರೆಗೆ ಇದ್ದು 238 ಮಕ್ಕಳು ಕಲಿಯುತ್ತಿದ್ದಾರೆ. ಈ ಶಾಲೆಗೆ ಬೇಕಾಗಿರುವ ಶಿಕ್ಷಕರ ಹುದ್ದೆ ೮ . ಆದರೆ ಸದ್ಯಕ್ಕಿರುವವರು ನಾಲ್ವರು ಮಾತ್ರ. ಅದರಲ್ಲಿ ಒಬ್ಬರು ಮುಖ್ಯಶಿಕ್ಷಕ, ಮತ್ತೊಬ್ಬರು ದೈಹಿಕ ಶಿಕ್ಷಕ.ಉಳಿದಿಬ್ಬರು ಸಹಶಿಕ್ಷಕರು.ಶಾಲೆಯಲ್ಲಿ ಮುಖ್ಯ ಶಿಕ್ಷಕ, ಗಣಿತ, ವಿಜ್ಞಾನ, ಕನ್ನಡ, ನಲಿ–ಕಲಿ ಶಿಕ್ಷಕರ ನೇಮಕವಾಗಬೇಕಿದೆ.ದೈಹಿಕ ಶಿಕ್ಷಕರು ಕ್ರೀಡಾಕೂಟಕ್ಕೆ ಮಕ್ಕಳನ್ನು ತಯಾರಿ ಮಾಡುವುದರಲ್ಲೆ ಹೈರಾಣಾಗಿರುತ್ತಾರೆ. ಇನ್ನು ಮುಖ್ಯ ಶಿಕ್ಷಕರು ಕಚೇರಿಯ ಕಡತ ನಿರ್ವಹಣೆ ಕೆಲಸದ ಜೊತೆಗೆ ಬಿಸಿಯೂಟ, ಕ್ಷೀರಭಾಗ್ಯ, ಸಮವಸ್ತ್ರ ವಿತರಣೆ ,ನಲಿಕಲಿಯಂತಹ ಹತ್ತಾರು ಜವಬ್ದಾರಿ ನೋಡುವುದರಲ್ಲೆ ಕಾಲ ಮುಗಿಯುವುದರಿಂದ ಶಾಲೆಯತ್ತ ಹೆಚ್ಚಿನ ಗಮನ ನೀಡಲು ಸಾಧ್ಯವಾಗುವುದಿಲ್ಲ.ಇನ್ನುಳಿದ ಸಹಶಿಕ್ಷಕರಿಬ್ಬರೆ 1ರಿಂದ 7ನೇ ತರಗತಿಗಳನ್ನು ನಿಭಾಯಿಸಬೇಕಲ್ಲದೆ ಅನಿವಾರ್ಯವಾಗಿ ಎರೆಡೆರಡು ತರಗತಿಗಳನ್ನು ಕಂಬೈಂಡ್ ಮಾಡಿ ಪಾಠ ಮಾಡಬೇಕಾದ ಸ್ಥಿತಿಯಿದೆ.

ಆರೋಪ: ಗ್ರಾಮದ ಮುಖ್ಯಸ್ಥ ಡಿ.ಬಿ.ರವಿಕುಮಾರ್ ಮಾತನಾಡಿ ಸರ್ಕಾರ ಖಾಸಗಿ ಶಾಲೆಗಳ ವ್ಯಾಮೋಹ ಬಿಡಿ ಎನ್ನುವ ಸರ್ಕಾರ ಶಾಲೆಗಳಿಗೆ ಮೂಲ ಸೌಲಭ್ಯಗಳನ್ನು ಮಾತ್ರ ಕಲ್ಪಿಸದಿರುವುದರಿಂದ ನಮ್ಮ ಮಕ್ಕಳಿಗೆ ಸಮರ್ಪಕವಾದ ಶಿಕ್ಷಣ ದೊರೆಯುತ್ತಿಲ್ಲ .ದೈನಂದಿನ ಪಾಠ ಪ್ರವಚನಕ್ಕೆ ಅಡಚಣೆಯಾಗಿದೆ. ಕಳೆದ 2 ವರ್ಷಗಳಿಂದ ಇದೇ ಪರಿಸ್ಥಿತಿ ಮುಂದುವರೆದಿದೆ ಎಂದು ದೂರಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೋದಂಡರಾಜು ಮಾತನಾಡಿ ಶಾಲೆಯಲ್ಲಿರುವ 4 ಮಂದಿ ಶಿಕ್ಷಕರಲ್ಲಿ ಇಬ್ಬರೆ ಇಡೀ 7 ತರಗತಿಗಳನ್ನು ನಿಭಾಯಿಸುವ ಸ್ಥಿತಿ ನಿರ್ಮಾಣವಾಗಿದೆ, ಈಚೆಗೆ ಮಕ್ಕಳಿಬ್ಬರು ಕಿತ್ತಾಡಿಕೊಂಡು ಗಾಯ ಮಾಡಿಕೊಂಡ ಘಟನೆ ಜರುಗಿದೆ ಎಂದು ಶಾಲೆಯ ಸಮಸ್ಯೆ ವಿವರಿಸಿದರು.

ಶಾಲೆಗೆ ಬೀಗ:ಬೆಳಿಗ್ಗೆಯಿಂದಲೆ ಪ್ರತಿಭಟನೆ ಶುರುವಾದರೂ ಮೇಲಾಧಿಕಾರಿಗಳು ಸ್ಥಳಕ್ಕೆ ಆಗಮಿಸದ ಕಾರಣ ರೊಚಿಗೆದ್ದ ಪೋಷಕರು ಅಲ್ಲೇಯಿದ್ದ 3 ಮಂದಿ ಶಿಕ್ಷಕರನ್ನು ಮುಖ್ಯ ಶಿಕ್ಷಕರ ಕಚೇರಿಯಲ್ಲಿ ಕೂಡಿ ಹಾಕಿ, ಕೊಠಡಿಗಳಿಗೆ ಬೀಗ ಜಡಿದರು. ಪರಿಸ್ಥಿತಿ ಬಿಗಡಾಯಿಸಿದನ್ನು ಅರಿತ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ ಹೊಸದಾಗಿ ನಿಯೋಜನೆಗೊಂಡಿರುವ ಭಡ್ತಿ ಮುಖ್ಯ ಶಿಕ್ಷಕರೊಂದಿಗೆ ಸ್ಥಳಕ್ಕೆ ದೌಡಾಯಿಸಿ ಬಂದರು.ಎಸ್.ಡಿಎಂ.ಸಿ ಪದಾಧಿಕಾರಿಗಳು ಮತ್ತು ಪ್ರತಿಭಟನನಿರತರ ಜತೆ ಸಮಸ್ಯೆಯ ಕುರಿತು ಸಮಾಲೋಚನೆ ನಡೆಸಿದರು. ಸೋಮವಾರದೊಳಗೆ ಶಾಲೆಗೆ ಶಿಕ್ಷಕರೊಬ್ಬರನ್ನು ನಿಯೋ ಜಿಸುವ ಪ್ರಯತ್ನ ನಡೆಸುವುದಾಗಿ ಭರವಸೆ ನೀಡಿದ ಮೇರೆಗೆ ಪ್ರತಿಭಟನೆ ಹಿಂಪಡೆಯಲಾಯಿತು.

           ಪ್ರತಿಭಟನೆಯಲ್ಲಿ ಎಪಿಎಂಸಿ ನಿರ್ದೇಶಕ ಡಿ.ಆರ್.ರುದ್ರೇಶ್, ಗ್ರಾಮ ಪಂಚಾಯಿತಿ ಸದಸ್ಯರಾದ ಜಯಣ್ಣ, ಲೇಪಾಕ್ಷಿ, ತಿಪ್ಪಮ್ಮ, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಕುಮುದಾ, ಸದಸ್ಯರಾದ ರೇವಣ್ಣ, ಗಂಗಣ್ಣ, ದೊಡ್ಡೀರಪ್ಪ, ನಾಗರಾಜು, ಗೋವಿಂದರಾಜು, ಮಜಹರಿ, ನೇತ್ರಾವತಿ, ಪೋಷಕರಾದ ಕುಮಾರ್, ಲೋಕೇಶ್, ಲೋಹಿತ್, ತಿಮ್ಮರಾಜು, ಬಾಲಯ್ಯ, ಮಲ್ಲೇಶ್, ಸಣ್ಣಯ್ಯ, ಈರಣ್ಣ, ಕುಮಾರಣ್ಣ, ರೇವಯ್ಯ ಇತರರು ಇದ್ದರು.
---------------------

ಶಿಕ್ಷಕರ ಕೊರತೆಯಿಂದಾಗಿ ಇಲ್ಲಿ ಮಕ್ಕಳ ಪಾಠ ಪ್ರವಚನಕ್ಕೆ ತೊಂದರೆ ಯಾಗುತ್ತಿದೆ. ಮಕ್ಕಳ ಭವಿಷ್ಯ ಹಾಳಾಗುತ್ತಿದೆ.ಶಿಕ್ಷಕರ ಸಮಸ್ಯೆ ಕುರಿತು ಸಂಬಂಧಪಟ್ಟವರ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗದಿದ್ದರಿಂದ ಶಾಲೆಯನ್ನು ಬಂದ್ ಮಾಡಲಾಯಿತು.ಮುಂದಿನ ಸೋಮವಾರದೊಳಗೆ ಶಿಕ್ಷಕರ ನೇಮಕವಾಗದಿದ್ದರೆ ಮತ್ತೆ ಪ್ರತಿಭಟನೆ ನಡೆಸುತ್ತೇವೆ :ಡಿ.ಬಿ.ರವಿಕುಮಾರ್ :ಮಾಜಿ ಗ್ರಾಪಂ ಅಧ್ಯಕ್ಷ .


----------------------

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...