ವಿಷಯಕ್ಕೆ ಹೋಗಿ

ಸ್ವಾತಂತ್ರ್ಯ ಹೋರಾಟಗಾರರ ಸಂಘದಿಂದ ಮಧ್ಯರಾತ್ರಿ ಧ್ವಜಾರೋಹಣ

ಜನಪದರ ನುಡಿಗಟ್ಟನ್ನು ಅರ್ಥೈಸಿ ಅಳವಡಿಸಿಕೊಳ್ಳಿ:ಪ್ರೋ.ಬಿಳಿಗೆರೆ
      ------------
ಜನಪದರ ಮೂರು ಮಹಾಕಾವ್ಯಗಳಾದ ಮಂಟೆಸ್ವಾಮಿ ಕಾವ್ಯ,ಜುಂಜಪ್ಪನ ಕಾವ್ಯ,ಮಲೆಮಹದೇಶ್ವರ ಸ್ವಾಮಿ ಕಾವ್ಯಗಳು ಲೋಕವಿರುವವರೆಗೂ ಚಿರಸ್ಥಾಯಿ ಕಾವ್ಯಗಳಾಗಿದ್ದು ಇದರಲ್ಲಿನ ಶ್ರೇಷ್ಟ ನುಡಿಗಟ್ಟುಗಳನ್ನು ಮನನ ಮಾಡಿಕೊಂಡು ಅಳವಡಿಸಿಕೊಳ್ಳಬೇಕೆಂದು ಪ್ರೋ,ಬಿಳಿಗೆರೆ ಕೃಷ್ಣಮೂರ್ತಿ ಕರೆನೀಡಿದರು.
ಪ್ರೋ,ಬಿಳಿಗೆರೆ ಕೃಷ್ಣಮೂರ್ತಿ ಮಾತನಾಡುತ್ತಿರುವುದು
ಅವರು ಹುಳಿಯಾರು ಹೋಬಳಿ ಸ್ವಾತಂತ್ರ್ಯ ಹೋರಾಟಗಾರರ ಸಂಘದಿಂದ ರೈತಸಂಘ ಹಾಗೂ ವಿವಿಧ ಸಂಘಸಂಸ್ಥಗಳ ಸಹಯೋಗದೊಂದಿಗೆ ಪಟ್ಟಣದ ಗಾಂಧಿಭವನದಲ್ಲಿ ಶುಕ್ರವಾರ ಮಧ್ಯರಾತ್ರಿ ೧೨ರ ಸಮಯದಲ್ಲಿ ಆಚರಿಸಿದ ೬೮ ನೇ ಸ್ವಾತಂತ್ಯ್ರ ದಿನಾಚರಣೆಯಲ್ಲಿ ಪಾಲ್ಗೊಂಡು ಜನಪದಸಾಹಿತ್ಯ ಹಾಗೂ ಸಂಸ್ಕೃತಿ ಬಗ್ಗೆ ಮಾತನಾಡಿದರು.
ಸಾಂಸ್ಕೃತಿಕವಾಗಿ ಹುಳಿಯಾರು ಮುಂದುವರಿದಿದ್ದು ಇಲ್ಲಿರುವ ಅನೇಕ ಕೊರತೆಗಳನ್ನು ನೀಗಿಸಲು ಇಂದಿನ ಯುವಪೀಳಿಗೆ ಮುಂದಾಗಬೇಕು ಎಂದ ಅವರು ಪ್ರಸ್ತುತದಲ್ಲಿ ದೇಶವ್ಯಾಪಿ ಅನೇಕ ಜ್ವಲಂತಸಮಸ್ಯೆಗಳಿದ್ದು ಅವುಗಳ ನಿರ್ಮೂಲನೆಯಾಗದೆ ದೇಶದ ಅಭಿವೃದ್ಧಿ ಸಾಧ್ಯವಿಲ್ಲವೆಂದರು. ಇಂತಹ ಸಮಸ್ಯೆಗಳ ನಿರ್ಮೂಲನೆಗಾಗಿ ದೇಶದ ಪ್ರತಿಯೊಬ್ಬ ಪ್ರಜೆಯೂ ಪಣತೊಡಬೇಕಿದೆ ಎಂದರು.
ಧ್ವಜಾಜರೋಹಣ ನೆರವೇರಿಸಿ ಮಾತನಾಡಿದ ಎಎಸೈ ಶಿವಯ್ಯ ದೇಶಕ್ಕೆ ಮಧ್ಯರಾತ್ರಿ ಸ್ವಾತಂತ್ರ್ಯ ಸಿಕ್ಕಿದ್ದರ ಸವಿನೆನಪಿಗಾಗಿ ಇಲ್ಲೂ ಕೂಡ ಮಧ್ಯರಾತ್ರಿಯೇ ಆಚರಣೆ ಮಾಡುತ್ತಿರುವುದು ಶ್ಲಾಘನೀಯ ಎಂದರು. ನನ್ನ ಸೇವಾವಧಿಯಲ್ಲಿ ಮಧ್ಯರಾತ್ರಿಯಲ್ಲಿ ನಾನು ಧ್ವಜಾರೋಹಣ ಮಾಡುತ್ತಿರುವುದು ಇದೇ ಮೊದಲಾಗಿದ್ದು ಇದು ನನ್ನ ವೃತ್ತಿ ಜೀವನದ ಮರೆಯಲಾಗದ ಘಟನೆ ಎಂದರು.

ಮಧ್ಯರಾತ್ರಿ ಸ್ವಾತಂತ್ರ್ಯ ಆಚರಣೆಯ ಹಿನ್ನಲೆ ಬಗ್ಗೆ ಲೇಖರಾದ ಗುರುಮೂರ್ತಿ ಕೊಟಿಗೆಮನೆ ತಿಳಿಸಿದರು.

                                                                        

ಎಲ್.ಆರ್.ಚಂದ್ರಶೇಖರ್ವರ್ತಮಾನದ ಸಮಸ್ಯೆ ಬಗ್ಗೆ ಚಿತ್ರಣ ನೀಡಿದರು.



ಸ್ವಾತಂತ್ರ್ಯ ಹೋರಾಟಗಾರರ ಸಂಘದ ಅಧ್ಯಕ್ಷ ವೆಂಕಟಾಛಲಪತಿ ಶೆಟ್ರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದು, ಗ್ರಾಪಂ ಅಧ್ಯಕ್ಷೆ ಗೀತಾ ಪ್ರದೀಪ,ಉಪಾಧ್ಯಕ್ಷ ಗಣೇಶ,ಗ್ರಾಪಂ ಸದಸ್ಯರಾದ ಜಬೀಉಲ್ಲಾ,ಅಶೋಕ್ ಬಾಬು,ಗೀತಾ ಬಾಬು, ರೈತ ಸಂಘದ ಕೆಂಕೆರೆ ಸತೀಶ, ಮಲ್ಲಿಕಣ್ಣ, ಬಸ್ ಏಜೆಂಟರ್ ಸಂಘದ ಲೋಕೇಶಣ್ಣ, ಮುಖಂಡರಾದ ನಂದಿಹಳ್ಳಿ ಶಿವಣ್ಣ, ಜಲಾಲ್ ಸಾಬ್, ನಜರು ಖಾನ್ ,ಬಡಗಿರಾಮಣ್ಣ, ಗೋಪಾಲ್ ರಾವ್, ಸೇರಿದಂತೆ ಇತರರು ಉಪಸ್ಥಿತರಿದ್ದರು

ಕಾಮೆಂಟ್‌ಗಳು

  1. 68ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಳ ವಿಜೃಂಬಣೆಯಿಂದ ನಮ್ಮ ಹುಳಿಯಾರಿನಲ್ಲಿ ಮಧ್ಯರಾತ್ರಿ 12ಗಂಟೆ ಸಮಯದಲ್ಲಿ ಸ್ವಾತಂತ್ರ ಹೋರಾಟಗಾರರ ಸಂಘದಿಂದ ಆಚರಿಸಿದ್ದು ನಿಜಕ್ಕೂ ಬಹಳ ಸಂತೋಷದ ವಿಷಯವಾಗಿದೆ, ಎಲ್ಲರಿಗೂ ಅಭಿನಂದನೆಗಳು, ಇದನ್ನು ಫೇಸ್ ಬುಕ್ ಮುಖಾಂತರ ತಿಳಿಸಿದ ಶ್ರೀ ನರೇಂದ್ರ ಬಾಬುರವರಿಗೆ ಅನಂತಾನಂತ ವಂದನೆಗಳು

    ಪ್ರತ್ಯುತ್ತರಅಳಿಸಿ

ಕಾಮೆಂಟ್‌‌ ಪೋಸ್ಟ್‌ ಮಾಡಿ

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...