ವಿಷಯಕ್ಕೆ ಹೋಗಿ

ಹುಳಿಯಾರು ಗ್ರಾಪಂನಲ್ಲಿ ಇಂದಿನ ಕಡ್ಡಾಯ ಗ್ರಾಮಸಭೆಗೆ ಎಳ್ಳುನೀರು

          ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಆಗಸ್ಟ್ 20ರಂದು ಕಡ್ಡಾಯವಾಗಿ ವಿಶೇಷ ಗ್ರಾಮ ಸಭೆ ನಡೆಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯಿಂದ ಸೂಚನೆ ಕಳುಹಿಸಲಾಗಿದ್ದರೂ ಹುಳಿಯಾರು ಪಂಚಾಯ್ತಿಯಲ್ಲಿ ಮಾತ್ರ ಇದಕ್ಕೆ ವಿನಾಯತಿ ಎಂಬಂತೆ ಸದಸ್ಯರುಗಳನ್ನು ಮೂರುದಿನಗಳ ತರಬೇತಿಗಾಗಿ ಕಳುಹಿಸಿಕೊಡುತ್ತಿರುವುದು ವಿಪರ್ಯಾಸವಾಗಿದೆ.

       


       ಹೌದು ಇಂದು ರಾಜ್ಯದೆಲ್ಲಡೆ ವಿಶೇಷ ಗ್ರಾಮಸಭೆ ನಡೆಸಿ ವಿವಿಧ ವಸತಿ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ, ಮುಖ್ಯಮಂತ್ರಿ ಯವರ 21 ಅಂಶ ಕಾರ್ಯಕ್ರಮಗಳ ಬಗ್ಗೆ ಅವಶ್ಯಕತೆಗನು ಗುಣವಾಗಿ ಕ್ರಿಯಾಯೋಜನೆಯನ್ನು ಗ್ರಾಮಸಭೆಯಲ್ಲಿ ಮಂಡಿಸುವುದುದರ ಕುರಿತಂತೆ ಚರ್ಚಿಸಬೇಕಿತ್ತು.ಅಲ್ಲದೆ ಈ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಆ.10ರಂದೇ ಸುತ್ತೋಲೆ ಹೊರಡಿಸಿ ಆಗಸ್ಟ್ 20ರಂದು ಕಡ್ಡಾಯವಾಗಿ ವಿಶೇಷ ಗ್ರಾಮ ಸಭೆ ನಡೆಸುವಂತೆಯೂ ಆದೇಶಿಸಿತ್ತು.ಸಭೆಯಲ್ಲಿ ಬಸವ ವಸತಿ,ಇಂದಿರಾ ಆವಾಜ್ ಹಾಗೂ ವಿಶೇಷ ವಸತಿ ಯೋಜನೆಗಳ ಫಲಾನುಭವಿಗಳ ಆಯ್ಕೆ ಮಾಡುವಂತೆಯೂ ಹಾಗೂ ಆ ಸಭೆಯ ನಡವಳಿಯನ್ನು ಎರಡು ದಿನದೊಳಗೆ ಕಳುಹಿಸಿ ಅನುಮೋದನೆ ಪಡೆಯುವಂತೆಯೂ ತಪ್ಪಿದಲ್ಲಿ ಸಂಬಂಧಪಟ್ಟವರ ಮೇಳೆ ಅಗತ್ಯ ಕ್ರಮಕೈಗೊಳ್ಳುವುದಾಗಿ ಸೂಚಿಸಿತ್ತು.

ಗ್ರಾಮ ಪಂಚಾಯಿತಿ ಚುನಾವಣೆ ನಡೆದು ಹೊಸ ಆಡಳಿತ ವ್ಯವಸ್ಥೆ ಅಸ್ತಿತ್ವಕ್ಕೆ ಬಂದ ಬಳಿಕ ನಡೆಸಲಾಗುವ ಮೊದಲ ಗ್ರಾಮ ಸಭೆ ಇದಾಗಿದ್ದು ಈ ನಿಟ್ಟಿನಲ್ಲಿ ಜಿಲ್ಲಾ ಪಂಚಾಯಿತಿ ಸಿಇಒಗಳು ಹಾಗೂ ಗ್ರಾಮ ಪಂಚಾಯಿತಿ ಪಿಡಿಒಗಳು ಈ ನಿಟ್ಟಿನಲ್ಲಿ ಮುತುವರ್ಜಿ ವಹಿಸಬೇಕು ಎಂಬ ನಿರ್ದೇಶನ ಕೂಡ ಕೊಡಲಾಗಿತ್ತು.
                   ಆದರೆ ಆ.20ರಂದು ವಿಶೇಷ ಗ್ರಾಮ ಸಭೆ ಕಡ್ಡಾಯವಾಗಿ ನಡೆಸಬೇಕಿದ್ದರ ಬಗ್ಗೆ ಹುಳಿಯಾರು ಗ್ರಾಪನಲ್ಲಿ ಈ ಬಗ್ಗೆ ಸಾರ್ವಜನಿಕರಿಗಾಗಲಿ ಸದಸ್ಯಗಳಿಗಾಗಲಿ ಯಾವುದೇ ಮಾಹಿತಿಯಿಲ್ಲದಿರುವುದು ದುರಂತ.
          ತರಬೇತಿಯೂ ಕಡ್ಡಾಯ: ಈ ಬಗ್ಗೆ ಹುಳಿಯಾರು ಪ್ರಭಾರಿ ಪಿಡಿಓ ಅವನ್ನು ಪತ್ರಿಕೆ ಸಂಪರ್ಕಿಸಿದಾಗ ಹೊಸದಾಗಿ ಆಯ್ಕೆಯಾಗಿರುವ ಸದಸ್ಯರುಗಳಿಗೆ ತಾಲ್ಲೂಕ್ ಪಂಚಾಯ್ತಿ ಸಭಾಂಗಣದಲ್ಲಿ ಇದೇ ದಿನಾಂಕದಂದು "ಗ್ರಾಮ ಪಂಚಾಯ್ತಿ ಸದಸ್ಯರ ಸಾಮಾರ್ಥ್ಯಾಭಿವೃದ್ಧಿ ತರಬೇತಿ"ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಅದೂ ಕೂಡ ಕಡ್ಡಾಯವಾಗಿದೆ.ತಾಲ್ಲೂಕ್ ಕಾರ್ಯನಿರ್ವಾಹಾಹಕ ಅಧಿಕಾರಿಗಳ ಸೂಚನೆಯಂತೆ ಎಲ್ಲಾ ಚುನಾಯಿತ ಸದಸ್ಯರನ್ನು ಮೂರು ದಿನಗಳ ತರಬೇತಿ ಕಾರ್ಯಕ್ರಮಕ್ಕೆ ಕಡ್ಡಾಯಯವಾಗಿ ಪಾಲ್ಗೊಳ್ಳುವಂತೆ ಸೂಚಿಸಿರುವುದಾಗಿ ತಿಳಿಸಿದರು.


ಒಟ್ಟಾರೆ ಇಲ್ಲಿನ ಗ್ರಾಪಂಯಲ್ಲಿ ಯಾವುದೇ ಸೂಚನೆಗಳಿಗೂ ,ಸರ್ಕಾರಿ ಆದೇಶಗಳಿಗೂ ಬೆಲೆಯಿಲ್ಲವೆಂದು ಸಾರ್ವಜನಿಕರು ಆಕ್ಷೇಪಿಸುವಂತಾಗಿದೆ.
---------------------------
ನಾನು ಆ.೧೦ ರಂದು ಪ್ರಭಾರಿ ಪಿಡಿಓ ಆಗಿ ಅಧಿಕಾರ ವಹಿಸಿಕೊಂಡಿದ್ದು ಅಂದಿನಿಂದ ಮೂರು ದಿನಗಳ ಕಾಲ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಆಯೋಜಿಸಲು ಸಂಘ ಸಂಸ್ಥೆಗಳ ಸಭೆ ಕರೆಯುವುದರಲ್ಲೆ ಕಾಲ ತಗುಲಿದೆ.ಅಲ್ಲದೆ ಗ್ರಾಮ ಸಭೆ ನಡೆಸುವುದಕ್ಕೂ ಮುಂಚಿತವಾಗಿ ವಾರ್ಡ್ ಸಭೆ ನಡೆಸಬೇಕಿದ್ದು ಅದಕ್ಕೆ ಕಾಲಾವಕಾಶ ದೊರೆಯದಿದ್ದರಿಂದ ಹಾಗೂ ಇಓ ರವರನ್ನು ಸಂಪರ್ಕಿಸಿದಾಗ ಕಡ್ಡಾಯವಾಗಿ ತರಬೇತಿಗೆ ಸದಸ್ಯರನ್ನು ಕಳುಹಿಸಲೇಬೇಕೆಂದು ಸೂಚಿಸಿದ್ದರಿಂದ ಇಂದಿನ ಗ್ರಾಮ ಸಭೆ ನಡೆಸಲು ಸಾಧ್ಯವಾಗುತ್ತಿಲ್ಲ :ಪಿಡಿಓ ,ಅಡವೀಶ್ ಕುಮಾರ್

------------------------------------------------------------------------

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...