ವಿಷಯಕ್ಕೆ ಹೋಗಿ

ಹುಳಿಯಾರು ಗ್ರಾಪಂನಲ್ಲಿ ಇಂದಿನ ಕಡ್ಡಾಯ ಗ್ರಾಮಸಭೆಗೆ ಎಳ್ಳುನೀರು

          ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಆಗಸ್ಟ್ 20ರಂದು ಕಡ್ಡಾಯವಾಗಿ ವಿಶೇಷ ಗ್ರಾಮ ಸಭೆ ನಡೆಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯಿಂದ ಸೂಚನೆ ಕಳುಹಿಸಲಾಗಿದ್ದರೂ ಹುಳಿಯಾರು ಪಂಚಾಯ್ತಿಯಲ್ಲಿ ಮಾತ್ರ ಇದಕ್ಕೆ ವಿನಾಯತಿ ಎಂಬಂತೆ ಸದಸ್ಯರುಗಳನ್ನು ಮೂರುದಿನಗಳ ತರಬೇತಿಗಾಗಿ ಕಳುಹಿಸಿಕೊಡುತ್ತಿರುವುದು ವಿಪರ್ಯಾಸವಾಗಿದೆ.

       


       ಹೌದು ಇಂದು ರಾಜ್ಯದೆಲ್ಲಡೆ ವಿಶೇಷ ಗ್ರಾಮಸಭೆ ನಡೆಸಿ ವಿವಿಧ ವಸತಿ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ, ಮುಖ್ಯಮಂತ್ರಿ ಯವರ 21 ಅಂಶ ಕಾರ್ಯಕ್ರಮಗಳ ಬಗ್ಗೆ ಅವಶ್ಯಕತೆಗನು ಗುಣವಾಗಿ ಕ್ರಿಯಾಯೋಜನೆಯನ್ನು ಗ್ರಾಮಸಭೆಯಲ್ಲಿ ಮಂಡಿಸುವುದುದರ ಕುರಿತಂತೆ ಚರ್ಚಿಸಬೇಕಿತ್ತು.ಅಲ್ಲದೆ ಈ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಆ.10ರಂದೇ ಸುತ್ತೋಲೆ ಹೊರಡಿಸಿ ಆಗಸ್ಟ್ 20ರಂದು ಕಡ್ಡಾಯವಾಗಿ ವಿಶೇಷ ಗ್ರಾಮ ಸಭೆ ನಡೆಸುವಂತೆಯೂ ಆದೇಶಿಸಿತ್ತು.ಸಭೆಯಲ್ಲಿ ಬಸವ ವಸತಿ,ಇಂದಿರಾ ಆವಾಜ್ ಹಾಗೂ ವಿಶೇಷ ವಸತಿ ಯೋಜನೆಗಳ ಫಲಾನುಭವಿಗಳ ಆಯ್ಕೆ ಮಾಡುವಂತೆಯೂ ಹಾಗೂ ಆ ಸಭೆಯ ನಡವಳಿಯನ್ನು ಎರಡು ದಿನದೊಳಗೆ ಕಳುಹಿಸಿ ಅನುಮೋದನೆ ಪಡೆಯುವಂತೆಯೂ ತಪ್ಪಿದಲ್ಲಿ ಸಂಬಂಧಪಟ್ಟವರ ಮೇಳೆ ಅಗತ್ಯ ಕ್ರಮಕೈಗೊಳ್ಳುವುದಾಗಿ ಸೂಚಿಸಿತ್ತು.

ಗ್ರಾಮ ಪಂಚಾಯಿತಿ ಚುನಾವಣೆ ನಡೆದು ಹೊಸ ಆಡಳಿತ ವ್ಯವಸ್ಥೆ ಅಸ್ತಿತ್ವಕ್ಕೆ ಬಂದ ಬಳಿಕ ನಡೆಸಲಾಗುವ ಮೊದಲ ಗ್ರಾಮ ಸಭೆ ಇದಾಗಿದ್ದು ಈ ನಿಟ್ಟಿನಲ್ಲಿ ಜಿಲ್ಲಾ ಪಂಚಾಯಿತಿ ಸಿಇಒಗಳು ಹಾಗೂ ಗ್ರಾಮ ಪಂಚಾಯಿತಿ ಪಿಡಿಒಗಳು ಈ ನಿಟ್ಟಿನಲ್ಲಿ ಮುತುವರ್ಜಿ ವಹಿಸಬೇಕು ಎಂಬ ನಿರ್ದೇಶನ ಕೂಡ ಕೊಡಲಾಗಿತ್ತು.
                   ಆದರೆ ಆ.20ರಂದು ವಿಶೇಷ ಗ್ರಾಮ ಸಭೆ ಕಡ್ಡಾಯವಾಗಿ ನಡೆಸಬೇಕಿದ್ದರ ಬಗ್ಗೆ ಹುಳಿಯಾರು ಗ್ರಾಪನಲ್ಲಿ ಈ ಬಗ್ಗೆ ಸಾರ್ವಜನಿಕರಿಗಾಗಲಿ ಸದಸ್ಯಗಳಿಗಾಗಲಿ ಯಾವುದೇ ಮಾಹಿತಿಯಿಲ್ಲದಿರುವುದು ದುರಂತ.
          ತರಬೇತಿಯೂ ಕಡ್ಡಾಯ: ಈ ಬಗ್ಗೆ ಹುಳಿಯಾರು ಪ್ರಭಾರಿ ಪಿಡಿಓ ಅವನ್ನು ಪತ್ರಿಕೆ ಸಂಪರ್ಕಿಸಿದಾಗ ಹೊಸದಾಗಿ ಆಯ್ಕೆಯಾಗಿರುವ ಸದಸ್ಯರುಗಳಿಗೆ ತಾಲ್ಲೂಕ್ ಪಂಚಾಯ್ತಿ ಸಭಾಂಗಣದಲ್ಲಿ ಇದೇ ದಿನಾಂಕದಂದು "ಗ್ರಾಮ ಪಂಚಾಯ್ತಿ ಸದಸ್ಯರ ಸಾಮಾರ್ಥ್ಯಾಭಿವೃದ್ಧಿ ತರಬೇತಿ"ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಅದೂ ಕೂಡ ಕಡ್ಡಾಯವಾಗಿದೆ.ತಾಲ್ಲೂಕ್ ಕಾರ್ಯನಿರ್ವಾಹಾಹಕ ಅಧಿಕಾರಿಗಳ ಸೂಚನೆಯಂತೆ ಎಲ್ಲಾ ಚುನಾಯಿತ ಸದಸ್ಯರನ್ನು ಮೂರು ದಿನಗಳ ತರಬೇತಿ ಕಾರ್ಯಕ್ರಮಕ್ಕೆ ಕಡ್ಡಾಯಯವಾಗಿ ಪಾಲ್ಗೊಳ್ಳುವಂತೆ ಸೂಚಿಸಿರುವುದಾಗಿ ತಿಳಿಸಿದರು.


ಒಟ್ಟಾರೆ ಇಲ್ಲಿನ ಗ್ರಾಪಂಯಲ್ಲಿ ಯಾವುದೇ ಸೂಚನೆಗಳಿಗೂ ,ಸರ್ಕಾರಿ ಆದೇಶಗಳಿಗೂ ಬೆಲೆಯಿಲ್ಲವೆಂದು ಸಾರ್ವಜನಿಕರು ಆಕ್ಷೇಪಿಸುವಂತಾಗಿದೆ.
---------------------------
ನಾನು ಆ.೧೦ ರಂದು ಪ್ರಭಾರಿ ಪಿಡಿಓ ಆಗಿ ಅಧಿಕಾರ ವಹಿಸಿಕೊಂಡಿದ್ದು ಅಂದಿನಿಂದ ಮೂರು ದಿನಗಳ ಕಾಲ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಆಯೋಜಿಸಲು ಸಂಘ ಸಂಸ್ಥೆಗಳ ಸಭೆ ಕರೆಯುವುದರಲ್ಲೆ ಕಾಲ ತಗುಲಿದೆ.ಅಲ್ಲದೆ ಗ್ರಾಮ ಸಭೆ ನಡೆಸುವುದಕ್ಕೂ ಮುಂಚಿತವಾಗಿ ವಾರ್ಡ್ ಸಭೆ ನಡೆಸಬೇಕಿದ್ದು ಅದಕ್ಕೆ ಕಾಲಾವಕಾಶ ದೊರೆಯದಿದ್ದರಿಂದ ಹಾಗೂ ಇಓ ರವರನ್ನು ಸಂಪರ್ಕಿಸಿದಾಗ ಕಡ್ಡಾಯವಾಗಿ ತರಬೇತಿಗೆ ಸದಸ್ಯರನ್ನು ಕಳುಹಿಸಲೇಬೇಕೆಂದು ಸೂಚಿಸಿದ್ದರಿಂದ ಇಂದಿನ ಗ್ರಾಮ ಸಭೆ ನಡೆಸಲು ಸಾಧ್ಯವಾಗುತ್ತಿಲ್ಲ :ಪಿಡಿಓ ,ಅಡವೀಶ್ ಕುಮಾರ್

------------------------------------------------------------------------

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.