ಕ್ಷೇತ್ರದ ಯಾವುದೇ ಗ್ರಾಮದಲ್ಲಿ ಫ್ಲೋರೈಡ್ ಅಂಶ ಹೆಚ್ಚಾಗಿದ್ದಲ್ಲಿ ಅಂತಹ ಕಡೆ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗುವುದೆಂದು ಶಾಸಕ ಸಿ.ಬಿ.ಸುರೇಶ್ ಬಾಬು ತಿಳಿಸಿದರು.
ಹುಳಿಯಾರಿನ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಭಾನುವಾರದಂದು ಶಾಸಕ ಸುರೇಶ್ ಬಾಬುರವರು ಶುದ್ಧ ಕುಡಿಯುವ ನೀರಿನ ಘಟಕದ ಶಂಕುಸ್ಥಾಪನೆ ನೆರವೇರಿಸಿದರು. |
ಅವರು ಭಾನುವಾರದಂದು ಪಟ್ಟಣದ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ಗ್ರಾಮೀಣ ಭಾಗದ ಜನತೆಯ ಆರೋಗ್ಯ ಕಾಪಾಡಲು ಫ್ಲೋರೈಡ್ ಅಂಶ ಹೆಚ್ಚಾಗಿರುವ ಗ್ರಾಮಗಳನ್ನು ಪಟ್ಟಿಮಾಡಿ ಅಂತಹ ಗ್ರಾಮಗಳಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದರು.
ಹುಳಿಯಾರಿನಲ್ಲಿ ಮೊದಲಿನಿಂದಲೂ ಶುದ್ದಕುಡಿಯುವ ನೀರಿಗೆ ಸಮಸ್ಯೆಯಿದ್ದು ಬಳಸಲಾಗುತ್ತಿರುವ ನೀರಿನಲ್ಲಿ ಹೆಚ್ಚಿನ ಫ್ಲೋರೈಡ್ ಅಂಶವಿದ್ದು, ಈ ನೀರು ಕುಡಿದ ಜನರು ಹಲವು ರೋಗಗಳಿಗೆ ತುತ್ತಾಗಿದ್ದಾರೆ. ಅದಕೋಸ್ಕರವೇ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ವಿಭಾಗದಿಂದ ಇಲ್ಲಿ ಶುದ್ಧ ನೀರಿನ ಘಟಕ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗಿದೆ ಎಂದರು. ಪ್ರತಿ ಘಟಕಕ್ಕೆ 11 ರಿಂದ 12 ಲಕ್ಷ ವೆಚ್ಚವಾಗಲಿದೆ. ಅಗತ್ಯಬಿದ್ದರೆ ಮತ್ತೊಂದು ಘಟಕ ಸ್ಥಾಪಿಸಲಾಗುವುದೆಂದ ಶಾಸಕರು ಗ್ರಾಮಗಳಲ್ಲಿ ನೀರಿನ ಸಮಸ್ಯೆಯಿದ್ದಲ್ಲಿ ಬೋರ್ ವೆಲ್ ಕೊರೆಸಿಕೊಡುವ ಭರವಸೆ ನೀಡಿದರು
ಈ ಸಂದರ್ಭದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ರುದ್ರಸ್ವಾಮಿ ಮಾತನಾಡಿ ಈ ಯೋಜನೆಗೆ ಶಾಸಕರ ಕ್ಷೇತ್ರಾಭಿವೃದ್ದಿ ನಿಧಿಯಿಂದ ಅನುದಾನ ಪಡೆದು ಕಟ್ಟಡಕ್ಕೆ ಬಳಸಿಕೊಳ್ಳಲಾಗುತ್ತಿದೆ.ಅಲ್ಲದೆ ಆರ್ ಡಿಪಿಆರ್ ನಿಂದ ಐದು ಲಕ್ಷ ಅನುದಾನ ಪಡೆಯಲಾಗಿದೆ.ಇನ್ನೊಂದು ತಿಂಗಳಲ್ಲಿ ಘಟಕ ಪ್ರಾರಂಭವಾಗಲಿದ್ದು ಪೆಂಟಾಪ್ಯೂರ್ ಕಂಪನಿ ಮುಂದಿನ ಏಳು ವರ್ಷಗಳ ಕಾಲ ನಿರ್ವಹಣೆ ಮಾಡಲಿದೆ ಎಂದರು.
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ