ವಿಷಯಕ್ಕೆ ಹೋಗಿ

ಸಾಂತ್ವಾನದ ಬದಲು ಬೆಳೆಗಳಿಗೆ ವೈಜ್ಞಾನಿಕ ಬೆಲೆ ನೀಡಿ:ಸತೀಶ್ ಕೆಂಕೆರೆ

         ಮುಖ್ಯಮಂತ್ರಿಗಳೆ ,ರೈತರ ಬಗ್ಗೆ ಸಾಂತ್ವಾನ ಮತ್ತು ಸತ್ತ ರೈತರ ಸಾವಿಗೆ ಪರಿಹಾರ ಘೋಶಿಸುವ ಬದಲು ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನೀಡುವ ಮೂಲಕ ಹಾಗೂ ಸಾಲ ಮನ್ನಾ ಮಾಡುವ ಮೂಲಕ ಸರ್ಕಾರ ಕೂಡಲೇ ಅನ್ನದಾತನ ನೆರವಿಗೆ ಮುಂದಾಗಿ ರೈತರ ಆತ್ಮಹತ್ಯೆ ತಡೆಗಟ್ಟಬೇಕು,ಇಲ್ಲದಿದ್ದಲ್ಲಿ ರೈತರ ಆತ್ಮಹತ್ಯೆಗೆ ಸರ್ಕಾರವೇ ನೇರ ಹೊಣೆಯಾಗುತ್ತದೆಂದು ಹಸಿರುಸೇನೆಯ ಕೆಂಕೆರೆ ಸತೀಶ್ ಎಚ್ಚರಿಸಿದರು.

ಹೋಬಳಿಯ ಗಡಿಗ್ರಾಮವಾದ ದಸೂಡಿಯಲ್ಲಿ ರೈತ ಸಂಘದ ಬಲವರ್ಧನೆ ಹಾಗೂ ರೈಅತರ ಆತ್ಮಹತ್ಯೆ ತಡೆ ಜಾಗೃತಿ ಜಾಥದಲ್ಲಿ ರೈತರನ್ನುದ್ದೇಶಿಸಿ ಮಾತನಾಡಿದ ಅವರು ರೈತರ ಸಾವು ಸಾಲದಿಂದಾದರೂ ಸಹ ಸಾಲಮಾಡಿ ಸಾಯುವ ಸ್ಥಿತಿಯುಂಟಾಗಲು ಆಳುವ ಸರ್ಕಾರಗಳ ರೈತವಿರೋಧಿ ನೀತಿಯೇ ಕಾರಣ ಎಂದರು.
ಹೋಬಳಿಯ ಗಡಿಗ್ರಾಮವಾದ ದಸೂಡಿಯಲ್ಲಿ ರೈತ ಸಂಘದ ಬಲವರ್ಧನೆ ಹಾಗೂ ರೈಅತರ ಆತ್ಮಹತ್ಯೆ ತಡೆ ಜಾಗೃತಿ ಜಾಥದಲ್ಲಿ ಪಾಲ್ಗೊಂಡಿದ್ದ ರೈತರು.
ಮಂತ್ರಿ ಮಹೋದಯರೇ ಸತ್ತ ರೈತರ ಮನೆ ಬಾಗಿಲಿಗೆ ಬಂದು ಸಾಂತ್ವಾನ ಹೇಳಿ ಪ್ರಚಾರಗಿಟ್ಟಿಸುವ ಬದಲು ರೈತರ ಸಮಸ್ಯೆಗೆ ಸರಿಯಾದ ಪರಿಹಾರ ಹುಡುಕಿ ಎಂದರು.ಸಾಂತ್ವಾನದ ಬದಲು ಬೆಳೆಗಳಿಗೆ ವೈಜ್ಞಾನಿಕ ಬೆಲೆ ನೀಡಿ ಎಂದರು.ರಾಜ್ಯದಲ್ಲಿ ಸಂಕಷ್ಟದಲ್ಲಿ ಸಿಲುಕಿರುವ ಹಲವಾರು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು ಆತ್ಮಹತ್ಯೆ ತಡೆಯಲು ಸರ್ಕಾರ ಸಂಕಷ್ಟದಲ್ಲಿರುವ ರೈತರಿಗೆ ಪ್ರೋತ್ಸಾಹ ಧನ ಹಾಗೂ ಸುಲಭ ದರದ ಸಾಲ ಸೌಲಭ್ಯಗಳನ್ನು ನೀಡುವುದಲ್ಲದೆ ಬ್ಯಾಂಕುಗಳಲ್ಲಿ ರೈತರು ಮಾಡಿರುವ ಸಾಲವನ್ನು ಮನ್ನಾ ಮಾಡಬೇಕೆಂದು ಆಗ್ರಹಿಸಿದರು.

        ತಾಲ್ಲೂಕು ರೈತಸಂಘದ ಗೌರವಾಧ್ಯಕ್ಷ ತಿಮ್ಮನಹಳ್ಳಿ ಲೋಕಣ್ಣ ಮಾತನಾಡಿ ರೈತರು ಬೆಳೆ ಬೆಳೆಯಲು ಲೇವಾದೇವಿಗಾರರಿಂದ ತಂದ ಹಣಕ್ಕೆ ಮೀಟರ್ ಬಡ್ಡಿ ಲೆಖ್ಖದಲ್ಲಿ ವಸೂಲು ಮಾಡುತ್ತಿದ್ದು, ಬಡ್ಡಿ ಕಟ್ಟಲು ಹೆದರಿದ ರೈತ ಆತ್ಮಹತ್ಯೆಗೆ ಮುಂದಾಗುತಿದ್ದು ರೈತರ ಬಲಿ ಪಡೆಯುತ್ತಿರುವ ಈ ಬಡ್ಡಿ ದಂಧೆಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿದರು.

        ದಸೂಡಿ ಗ್ರಾಪಂ ಮಾಜಿ ಅಧ್ಯಕ್ಷ ದಬ್ಬಗುಂಟೆ ರವಿಕುಮಾರ್ ಮಾತನಾಡಿ ರಾಜ್ಯ ಹಾಗೂ ಕೆಂದ್ರ ಸರ್ಕಾರ ಯೋಜನೆಗಳು ರೈತರಿಗೆ ಸರಿಯಾಗಿ ತಲುಪುತಿಲ್ಲ.ನಮ್ಮದೇಶದಲ್ಲಿ ಅಧಿಕಾರಿಗಳು ಹಾಗೂ ರಾಜಕಾರಣಿಗಳಲ್ಲಿ ಯಾರೊಬ್ಬರು ಸಾಲದಿಂದ ಸಾಯದೆ ಕೇವಲ ರೈತ ಮಾತ್ರ ಸಾವಿಗೀಡಾಗುತ್ತಿರುವುದರ ಹಿಂದಿನ ಮರ್ಮವೇನೆಂದು ಪ್ರಶ್ನಿಸಿದರು. ಕೇಂದ್ರ ಸರ್ಕಾರ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ರೈತರ ಸಾಲವನ್ನು ಹಾಗೂ ಸಾಲದ ಮೇಲಿನ ಬಡ್ಡಿಯನ್ನು ಪೂರ್ಣವಾಗಿ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.

     ತಮ್ಮಡಿಹಳ್ಳಿ ಮಲ್ಲೀಕಣ್ಣ ಮಾತನಾಡಿ ಬ್ಯಾಂಕಿನವರು ಸಾಲದ ನೋಟೀಸನ್ನು ನೀಡಿದರೆ ಇಲ್ಲವೇ ರೈತರಿಗೆ ಮತ್ಯಾವುದೆ ರೀತಿಯ ಸಮಸ್ಯೆ ಎದುರಾದರೆ ಕಂಗೆಟ್ಟು ಆತ್ಮಹತ್ಯೆಗೆ ಮುಂದಾಗದೆ ನಮ್ಮ ಗಮನಕ್ಕೆ ತನ್ನಿ.ನಿಮ್ಮ ಜೊತೆಯಲ್ಲಿ ರೈತ ಸಂಘವಿದ್ದು ಹೋರಾಟ ಮಾಡುತ್ತೇವೆ ಎಂದು ಧೈರ್ಯ ತುಂಬಿದರು.

        ರೈತರ ಮೇಲೆನ ನಿರಂತರ ದೌರ್ಜನ್ಯ ತಡೆಗಟ್ಟಲು ಸಂಘಟನೆ ಅವಶ್ಯ ಎಂದು ಅಭಿಪ್ರಾಯಪಟ್ಟ ಗ್ರಾಮದ ಇಪ್ಪತ್ತಕ್ಕೂ ಹೆಚ್ಚು ರೈತರು ಸಂಘಕ್ಕೆ ಸೇರ್ಪಡೆಗೊಂಡರು.
       
       ತಾಲ್ಲೂಕು ರೈತ ಸಂಘದ ಅಧ್ಯಕ್ಷ ಕೆಂಕೆರೆ ಮಲ್ಲೇಶ್,ಕಾಡಿನ ರಾಜ ನಾಗಣ್ಣ,ಬರದಲೇಪಾಳ್ಯದ ಚನ್ನಬಸವಯ್ಯ ಸೇರಿದಂತೆ ಅನೇಕ ರೈತ ಮುಖಂಡರು ಪಾಲ್ಗೊಂಡಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.