ವಿಷಯಕ್ಕೆ ಹೋಗಿ

ಮನೆ ಮೀಸಲಿರಿಸದಕ್ಕೆ ಆಕ್ರೋಶ :ಗದ್ದಲದಿಂದ ಮುಂದೂಡಿದ ವಾರ್ಡ್ ಸಭೆ

            ಈ ಸಭೆಯಲ್ಲಿ ಶಾಸಕರ ಮಾತಿಗೆ, ಸರ್ಕಾರದ ಆದೇಶಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲದಿದ್ದ ಮೇಲೆ ಈ ಸಭೆಯ ಔಚಿತ್ಯವಾದರೂ ಏನೆಂದು ಪ್ರಶ್ನಿಸಿ ನಮ್ಮ ವಾರ್ಡಿನಲ್ಲಿ ಸಭೆಯೆ ಬೇಡವೆಂದು ಸದಸ್ಯರೆ ಅಡ್ಡಿಪಡಿಸಿ ಮುಂದೂಡಿದ ಘಟನೆ ಪಟ್ಟಣದ ಎಂಟನೆ ವಾರ್ಡಿನಲ್ಲಿ ಜರುಗಿತು.
                 ಹುಳಿಯಾರು ಗ್ರಾಮಪಂಚಾಯ್ತಿವತಿಯಿಂದ 2015-16 ನೇ ಸಾಲಿನ ವಿವಿಧ ವಸತಿ ಯೋಜನೆಗಳ ಫಲಾನುಭವಿಗಳನ್ನು ಆಯ್ಕೆ ಮಾಡುವ ಸಲುವಾಗಿ ಪಟ್ಟಣದ ಎಲ್ಲಾ ಹದಿಮೂರು ವಾರ್ಡ್ಗಳಲ್ಲೂ ಸಭೆ ನಡೆಸಲಾಗಿತ್ತಿದ್ದು ಅದರಂತೆ ಎಂಟನೆ ವಾರ್ಡಿನ ಸಭೆಯನ್ನು ಶನಿವಾರದಂದು ಗಜಾನನ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿತ್ತು.
ವಸತಿ ಯೋಜನೆಗೆ ಸಂಬಂಧಿಸಿದಂತೆ ಅಧ್ಯಕ್ಷರೊಂದಿಗೆ ವಾಗ್ವಾದಕ್ಕಿಳಿದಿರುವ ಸದಸ್ಯರು ಹಾಗೂ ವಾರ್ಡಿನ ನಿವಾಸಿಗಳು.
              ಸದಸ್ಯರುಗಳಾದ ಪುಟ್ಟರಾಜು,ಶ್ರೀಮತಿ ಕೆಂಪಮ್ಮ,ಮಾಮಾಜಿಗ್ಮಿ ಹಾಗೂ ಜಯಮ್ಮನವರ ಉಪಸ್ಥಿತಿಯಲ್ಲಿ ಪ್ರಾರಂಭವಾದ ಸಭೆಯಲ್ಲಿ ಅರ್ಜಿ ಸ್ವೀಕರಿಸುವ ಹಂತದಲ್ಲೆ ಸದಸ್ಯ ಪುಟ್ಟರಾಜು ತಮ್ಮ ಬ್ಲಾಕಿನಲ್ಲಿ ಈ ಹಿಂದೆ ಗ್ಯಾಸ್ ಸಿಲಂಡರ್ ಸ್ಪೋಟ ಪ್ರಕರಣದಲ್ಲಿ ದುರ್ಮರಣ ಹೊಂದಿದ್ದ ಪುಟ್ಟಶಾಮಾಚಾರ್ ಕುಟುಂಬಕ್ಕೆ ಮೊದಲು ಆದ್ಯತೆ ನೀಡಿ ಮನೆ ಹಂಚಿಕೆಯಾಗಬೇಕಿದೆ ಎಂದರು.
                  ಮಂಜೂರಾಗಿರುವ ಮನೆಗಳ ಪೈಕಿ ಈ ವಾರ್ಡಿಗೆ ನಾಲ್ಕು ಮನೆ ಹಾಗೂ ನೊಂದವರ ಕುಟುಂಬಕ್ಕೆ ನೀಡಬೇಕಾಗಿರುವ ಒಂದು ಮನೆ ಸೇರಿ ಒಟ್ಟು ಐದು ಮನೆಗೆ ಫಲಾನುಭವಿಗಳ ಆಯ್ಕೆ ನಡೆಯಬೇಕಿದೆ .ಆದರೆ ಇಲ್ಲಿ ಮಂಜೂರಾಗಿರುವ ಮನೆಗಳ ಸಂಖ್ಯೆ ಕೇವಲ ನಾಲ್ಕಾಗಿದ್ದು ಪುಟ್ಟಾಶಾಮಾಚಾರ್ ಕುಟುಂಬಕ್ಕೆ ಮನೆ ಎಲ್ಲಿ ಎಂದು ಏರು ಧ್ವನಿಯಲ್ಲಿ ತಗಾದೆ ತೆಗೆದರು.
ಸ್ಥಳಕ್ಕೆ ಆಗಮಿಸಿದ್ದ ಆ ವಾರ್ಡ್ ನಿವಾಸಿಗಳು ಸಹ ಪುಟ್ಟಶಾಮಾಚಾರ್ ಕುಟುಂಬದವರಿಗೆ ಶಾಸಕರ ಆದೇಶದಂತೆ ಮನೆ ಮಂಜೂರು ಮಾಡಿಲ್ಲವೆಂಬುದನ್ನು ಅರಿತು ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ವಿರುದ್ದ ಹರಿಹಾಯ್ದರು.
                       ಮನೆಗಳ ಹಂಚಿಕೆ ಕುರಿತಂತೆ ಪಂಚಾಯ್ತಿಯಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ತೀರ್ಮಾನವಾಗಿದ್ದು ಅದರಂತೆ ಈ ವಾರ್ಡಿನಲ್ಲಿ ನಾಲ್ಕು ಸದಸ್ಯರಿದ್ದು ನಾಲ್ಕು ಮನೆಗಳನ್ನು ನಿಗದಿಮಾಡಲಾಗಿದ್ದು ಇದರಲ್ಲೇ ಪುಟ್ಟಶಾಮಾಚಾರ್ ಕುಟುಂಬದವರಿಗೂ ಆದ್ಯತೆ ನೀಡಿ ಮಂಜೂರು ಮಾಡೋಣ ಎಂದ ಪಿಡಿಓ ಮಾತು ದೊಡ್ಡ ಗದ್ದಲಕ್ಕೆ ಕಾರಣವಾಯಿತು.ಸಮಸ್ಯೆ ಆಲಿಸಿದ ಗ್ರಾಪಂ ಅಧ್ಯಕ್ಷೆ ಶ್ರೀಮತಿ ಗೀತಾರವರು ಸೋಮಜ್ಜನಪಾಳ್ಯಕ್ಕೆ ಅಲ್ಪಸಂಖ್ಯಾತರಿಗೆ ಮನೆ ಮಂಜೂರಾಗಿದ್ದು ಅಲ್ಲಿ ಅಲ್ಪಸಂಖ್ಯಾತರು ಇರದಿರುವ ಕಾರಣ ಆ ಮನೆಯನ್ನು ನೊಂದ ಕುಟುಂಬದವರಿಗೆ ಮಂಜೂರು ಮಾಡೋಣ ಎಂದರು ಸಹ ಯಾರೊಬ್ಬರು ಒಪ್ಪದೆ ಪದೆಪದೆ ಇದೇ ರೀತಿ ಮುಂಡೂಡುತ್ತಿರುವುದು ಸರಿಯಲ್ಲವೆಂದು ಅಲ್ಲಿಯವರೆಗೂ ಸಭೆ ನಡೆಸುವುದೆ ಬೇಡವೆಂದು ಪಟ್ಟುಹಿಡಿದರು.ಸಮಸ್ಯೆ ಬಗೆಹರಿಯದ ಲಕ್ಷಣ ಕಾಣದೆ ಪಿಡಿಓ ಸಭೆಯನ್ನು ಅರ್ಧಕ್ಕೆ ಅಂತ್ಯಗೊಳಿಸಿದರು.
--------------------
ಸರ್ಕಾರದ ಆದೇಶದಂತೆ ಮನೆ ಮಂಜೂರು ಮಾಡಿಕೊಡುವಂತೆ ಪಟ್ಟುಹಿಡಿದಿರುವ ದಿ.ಪುಟ್ಟಶಾಮಾಚಾರ್ ಕುಟುಂಬ 
 ಸಿಲಿಂಡರ್ ಸ್ಪೋಟವಾಗಿ ನಮ್ಮ ಪತಿ ದಾರುಣವಾಗಿ ಮರಣಹೊಂದಿದ ಹಿನ್ನಲೆಯಲ್ಲಿ ಶಾಸಕರು ಸರ್ಕಾರದಿಂದ ಮನೆ ಮಂಜೂರು ಮಾಡಿಸಿಕೊಡುವುದಾಗಿ ಹಾಗೂ ಮನೆ ಬೆಂಕಿಗೆ ಆಹುತಿಯಾಗಿದ್ದರಿಂದ ಎರಡು ಲಕ್ಷ ಪರಿಹಾರ ಕೊಡಿಸುವುದಾಗಿ ಹೇಳಿ ಎಂಟು ತಿಂಗಳುರುಳಿದ್ದು ಚಿಕ್ಕಾಸು ಸರ್ಕಾರದಿಂದ ಬಂದಿಲ್ಲ.ಅದೇ ಪ್ರಕರಣದಲ್ಲಿ ತೀವ್ರ ಗಾಯವಾಗಿದ್ದ ಮಗಳಿಗೆ ಅಂಗನವಾಡಿ ಸಹಾಯಕಿ ಹುದ್ದೆ ಖಾಯಂ ಮಾಡಿಸುವುದಾಗಿ ಸಹ ಆಶ್ವಾಸನೆ ನೀಡಿದ್ದೂ ಕೂಡ ಭರವಸೆಯಾಗಿಯೇ ಉಳಿದಿದೆ.ಸರ್ಕಾರದ ಆದೇಶ ಪತ್ರಕ್ಕೆ ಈ ಪಂಚಾಯಿತಿಯಲ್ಲಿ ಬೆಲೆಯಿಲ್ಲವಾಗಿದೆ.ನಮಗೆ ಮನೆ ನೀಡುವವರೆಗೂ ಈ ಸಭೆ ನಡೆಯಲು ಬಿಡುವುದಿಲ್ಲ : ಶ್ರೀಮತಿ ಸುಲೋಚನ, ದಿ.ಪುಟ್ಟಶಾಮಾಚಾರ್ ಪತ್ನಿ
-------------------------------------
ಪಂಚಾಯ್ತಿಗೆ ಮಂಜೂರಾಗಿರುವ ಮನೆಗಳನ್ನು ಸಭೆ ಕರೆದು ಎಲ್ಲಾ ಸದಸ್ಯರ ಸಮ್ಮುಖದಲ್ಲೆ ವಾರ್ಡುವಾರು ಹಂಚಿಕೆ ಮಾಡಿದ್ದು ಅದರಂತೆ ಸಭೆ ನಡೆಸಿ ಫಲಾನುಭವಿಗಳ ಆಯ್ಕೆಗೆ ವಾರ್ಡು ಸಭೆ ಮಾಡಲಾಗುತ್ತಿದೆ.ಈ ನಿರ್ದಿಷ್ಟ ಪ್ರಕರಣದಲ್ಲೂ ಸಹ ನಮ್ಮ ಮೊದಲನೆ ಆದ್ಯತೆ ಪುಟ್ಟಶಾಮಾಚಾರ್ ಕುಟುಂಬಕ್ಕೆ ಮನೆ ನೀಡುವುದಾಗಿದ್ದು ಅದರ ಆಯ್ಕೆ ಗ್ರಾಮ ಸಭೆಯಲ್ಲಿ ನಡೆಯಲಿದೆ: ಅಡವೀಶ್ ಕುಮಾರ್ ,ಪಂ.ಅ.ಅಧಿಕಾರಿ.

--------------------------------

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.