ವಿಷಯಕ್ಕೆ ಹೋಗಿ

ಈ ಶಾಲೆಯಲ್ಲಿ ಏಳು ಅವಳಿ ಜವಳಿ ವಿದ್ಯಾರ್ಥಿಗಳು

ಅವಳಿ ಮಕ್ಕಳಿಗಾಗಿ ದಿನಾಚರಣೆ

                 ಅವಳಿ ಮಕ್ಕಳೂ ಅಪರೂಪವೂ ಅಲ್ಲ ಹಾಗಂತ ಸಾಮಾನ್ಯವು ಅಲ್ಲ.ಆದರೆ ಒಂದೇ ಶಾಲೆಯಲ್ಲಿ ಮಾತ್ರ ಒಟ್ಟು ಏಳು ಅವಳಿ ಮಕ್ಕಳು ವ್ಯಾಸಂಗ ಮಾಡುತ್ತಿರುವುದು ಅಪರೂಪ.ಪಟ್ಟಣದ ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ಶಾಲೆ ಇಂತಹದೊಂದು ಅಪರೂಪದ ವಿಚಾರಕ್ಕೆ ಭಾಜನವಾಗಿದೆ.
                      ಈ ಶಾಲೆಯಲ್ಲಿರುವ ಏಳು ಅವಳಿಗಳಲ್ಲಿ ಮೂರು ಜೋಡಿ ಗಂಡು ,ಎರಡು ಜೋಡಿ ಹೆಣ್ಣು ಹಾಗೂ ಇನ್ನೇರಡು ಜೋಡಿ ಹುಡುಗ ಹುಡುಗಿಯರಿದ್ದಾರೆ.ಈ ಮಕ್ಕಳೆಲ್ಲಾ ಒಂದೆರೀತಿ ಕಂಡುಬರುವುದರಿಂದ ಕೆಲವೊಮ್ಮೆ ಶಿಕ್ಷಕರು ಹಾಗೂ ಗೆಳಯರು ಕೂಡ ಬೆಸ್ತು ಬಿದ್ದ ಘಟನೆಗಳಿವೆ.

           
ಹುಳಿಯಾರಿನ ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಅವಳಿ ಮಕ್ಕಳ ದಿನಾಚರಣೆಯಲ್ಲಿ ಪೋಷಕರೊಂದಿಗೆ ಅವಳಿ ಮಕ್ಕಳೂ ಭಾಗವಹಿಸಿರುವುದು.ಕವಿತಾಕಿರಣ್ , ಪ್ರಾಂಶುಪಾಲ ಟಿ.ಎಸ್.ರವಿ ಇದ್ದಾರೆ.
 ನಮ್ಮ ಶಾಲಯಲ್ಲಿ ಬರೋಬರಿ ಎಳು ಅವಳಿ ಜವಳಿಗಳಿರುವುದು ಹೆಮ್ಮೆಯ ವಿಚಾರ ಎನ್ನುತ್ತಾರೆ ಸಂಸ್ಥೆಯ ಕಾರ್ಯದರ್ಶಿ ಕವಿತಾ ಕಿರಣ್.ಕೆಲವೊಮ್ಮೆ ಅವಳಿಜವಳಿ ಮಕ್ಕಳನ್ನು ಗುರುತುಹಿಡಿಯುವುದಿಕ್ಕಾಗದೆ ಯಾರೋ ಮಾಡಿದ ತಪ್ಪಿಗೆ ಯಾರೋ ಒದೆ ತಿಂದ ಪ್ರಸಂಗವೂ ನಡೆದಿದೆ ಎನ್ನುತ್ತಾರೆ.

                ವಿದೇಶದಲ್ಲಿ ಆಗಸ್ಟ್ ಎಂಟರಂದು ಅವಳಿ ಜವಳಿಗಳ ದಿನಾಚರಣೆ ಮಾಡುವ ರೀತಿ ಈ ಶಾಲೆಯಲ್ಲೂ ಅವಳಿ ಮಕ್ಕಳ ದಿನಾಚರಣೆಯನ್ನು ಆ ಮಕ್ಕಳೊಂದಿಗೆ ಹಾಗೂ ಮಕ್ಕಳ ಪೋಷಕರೊಂದಿಗೆ ಆಚರಿಸಲಾಯಿತು.ಒಂದೇ ರೀತಿಯ ಉಡುಗೆ ತೊಟ್ಟುಬಂದಿದ್ದ ಅವಳಿ ಮಕ್ಕಳಿಂದ ಕೇಕ್ ಕತ್ತರಿಸಿ ಹಂಚಿಸಲಾಯಿತು. 
ಕಾರ್ಯಕ್ರಮದಲ್ಲಿ ಪ್ರತಿಭಾ ಮತ್ತು ತಂಡ ಪ್ರಾರ್ಥನೆ ಮಾಡಿ ಕು.ಅನ್ನಪೂರ್ಣ ಸ್ವಾಗತಿಸಿದರೆ ಅರುಣ್ ತರುಣ್ ನಿರೂಪಿಸಿದರು.ಅರ್ಬಾಜ್ ಕಾರ್ತಿಕ್ ಪರಿಚಯಿಸಿದರೆ ಮಾ.ಸೈಯದ್ ಝೈನ್ ವಂದಿಸಿದರು.ಕಾರ್ಯದರ್ಶಿ ಕವಿತಾಕಿರಣ್ ಕುಮಾರ್,ಪ್ರಾಂಶುಪಾಲ ಟಿ.ಎಸ್.ರವಿ ಹಾಗೂ ಶಾಲಾ ಸಿಬ್ಬಂದಿ ಹಾಜರಿದ್ದರು.

------------------------------
ಈ ಮಕ್ಕಳನ್ನು ಗುರುತು ಹಿಡಿಯುವುದು ಕಷ್ಟ.ಅದರ ಅವರ ನಡುವಳಿಕೆಗಳನ್ನು ಹತ್ತಿರದಿದ ಕಂಡಿರುವ ನನಗೆ ಪತ್ತೆ ಮಾಡಲು ಕಷ್ಟವಾಗುವುದಿಲ್ಲ.ಮಕ್ಕಳು ಒಂದೇ ರೀತಿ ಕಂಡರು ಸಹ ಅವರ ಗುಣಸ್ವಾಭಾವ ಮಾತ್ರ ಭಿನ್ನವಾಗಿರುತ್ತೆ.ಒಂದು ಮಗು ಜೋರಾಗಿದ್ರೆ ಮತ್ತೊಂದು ಮಗು ಶಾಂತ ಸ್ವಾಭಾವದಿಂದ ಕೂಡಿರುತ್ತೆ.ಈ ರೀತಿಯ ಭಿನ್ನತೆಯಿಂದಷ್ಟೆ ಅವರುಗಳನ್ನು ಗುರುತು ಹಿಡಿಯಲು ಸಾಧ್ಯ: ಕವಿತಕಿರಣ್ ,ಸಂಸ್ಥೆಯ ಕಾರ್ಯದರ್ಶಿ

--------------------------

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...