ವಿಷಯಕ್ಕೆ ಹೋಗಿ

ಈ ಶಾಲೆಯಲ್ಲಿ ಏಳು ಅವಳಿ ಜವಳಿ ವಿದ್ಯಾರ್ಥಿಗಳು

ಅವಳಿ ಮಕ್ಕಳಿಗಾಗಿ ದಿನಾಚರಣೆ

                 ಅವಳಿ ಮಕ್ಕಳೂ ಅಪರೂಪವೂ ಅಲ್ಲ ಹಾಗಂತ ಸಾಮಾನ್ಯವು ಅಲ್ಲ.ಆದರೆ ಒಂದೇ ಶಾಲೆಯಲ್ಲಿ ಮಾತ್ರ ಒಟ್ಟು ಏಳು ಅವಳಿ ಮಕ್ಕಳು ವ್ಯಾಸಂಗ ಮಾಡುತ್ತಿರುವುದು ಅಪರೂಪ.ಪಟ್ಟಣದ ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ಶಾಲೆ ಇಂತಹದೊಂದು ಅಪರೂಪದ ವಿಚಾರಕ್ಕೆ ಭಾಜನವಾಗಿದೆ.
                      ಈ ಶಾಲೆಯಲ್ಲಿರುವ ಏಳು ಅವಳಿಗಳಲ್ಲಿ ಮೂರು ಜೋಡಿ ಗಂಡು ,ಎರಡು ಜೋಡಿ ಹೆಣ್ಣು ಹಾಗೂ ಇನ್ನೇರಡು ಜೋಡಿ ಹುಡುಗ ಹುಡುಗಿಯರಿದ್ದಾರೆ.ಈ ಮಕ್ಕಳೆಲ್ಲಾ ಒಂದೆರೀತಿ ಕಂಡುಬರುವುದರಿಂದ ಕೆಲವೊಮ್ಮೆ ಶಿಕ್ಷಕರು ಹಾಗೂ ಗೆಳಯರು ಕೂಡ ಬೆಸ್ತು ಬಿದ್ದ ಘಟನೆಗಳಿವೆ.

           
ಹುಳಿಯಾರಿನ ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಅವಳಿ ಮಕ್ಕಳ ದಿನಾಚರಣೆಯಲ್ಲಿ ಪೋಷಕರೊಂದಿಗೆ ಅವಳಿ ಮಕ್ಕಳೂ ಭಾಗವಹಿಸಿರುವುದು.ಕವಿತಾಕಿರಣ್ , ಪ್ರಾಂಶುಪಾಲ ಟಿ.ಎಸ್.ರವಿ ಇದ್ದಾರೆ.
 ನಮ್ಮ ಶಾಲಯಲ್ಲಿ ಬರೋಬರಿ ಎಳು ಅವಳಿ ಜವಳಿಗಳಿರುವುದು ಹೆಮ್ಮೆಯ ವಿಚಾರ ಎನ್ನುತ್ತಾರೆ ಸಂಸ್ಥೆಯ ಕಾರ್ಯದರ್ಶಿ ಕವಿತಾ ಕಿರಣ್.ಕೆಲವೊಮ್ಮೆ ಅವಳಿಜವಳಿ ಮಕ್ಕಳನ್ನು ಗುರುತುಹಿಡಿಯುವುದಿಕ್ಕಾಗದೆ ಯಾರೋ ಮಾಡಿದ ತಪ್ಪಿಗೆ ಯಾರೋ ಒದೆ ತಿಂದ ಪ್ರಸಂಗವೂ ನಡೆದಿದೆ ಎನ್ನುತ್ತಾರೆ.

                ವಿದೇಶದಲ್ಲಿ ಆಗಸ್ಟ್ ಎಂಟರಂದು ಅವಳಿ ಜವಳಿಗಳ ದಿನಾಚರಣೆ ಮಾಡುವ ರೀತಿ ಈ ಶಾಲೆಯಲ್ಲೂ ಅವಳಿ ಮಕ್ಕಳ ದಿನಾಚರಣೆಯನ್ನು ಆ ಮಕ್ಕಳೊಂದಿಗೆ ಹಾಗೂ ಮಕ್ಕಳ ಪೋಷಕರೊಂದಿಗೆ ಆಚರಿಸಲಾಯಿತು.ಒಂದೇ ರೀತಿಯ ಉಡುಗೆ ತೊಟ್ಟುಬಂದಿದ್ದ ಅವಳಿ ಮಕ್ಕಳಿಂದ ಕೇಕ್ ಕತ್ತರಿಸಿ ಹಂಚಿಸಲಾಯಿತು. 
ಕಾರ್ಯಕ್ರಮದಲ್ಲಿ ಪ್ರತಿಭಾ ಮತ್ತು ತಂಡ ಪ್ರಾರ್ಥನೆ ಮಾಡಿ ಕು.ಅನ್ನಪೂರ್ಣ ಸ್ವಾಗತಿಸಿದರೆ ಅರುಣ್ ತರುಣ್ ನಿರೂಪಿಸಿದರು.ಅರ್ಬಾಜ್ ಕಾರ್ತಿಕ್ ಪರಿಚಯಿಸಿದರೆ ಮಾ.ಸೈಯದ್ ಝೈನ್ ವಂದಿಸಿದರು.ಕಾರ್ಯದರ್ಶಿ ಕವಿತಾಕಿರಣ್ ಕುಮಾರ್,ಪ್ರಾಂಶುಪಾಲ ಟಿ.ಎಸ್.ರವಿ ಹಾಗೂ ಶಾಲಾ ಸಿಬ್ಬಂದಿ ಹಾಜರಿದ್ದರು.

------------------------------
ಈ ಮಕ್ಕಳನ್ನು ಗುರುತು ಹಿಡಿಯುವುದು ಕಷ್ಟ.ಅದರ ಅವರ ನಡುವಳಿಕೆಗಳನ್ನು ಹತ್ತಿರದಿದ ಕಂಡಿರುವ ನನಗೆ ಪತ್ತೆ ಮಾಡಲು ಕಷ್ಟವಾಗುವುದಿಲ್ಲ.ಮಕ್ಕಳು ಒಂದೇ ರೀತಿ ಕಂಡರು ಸಹ ಅವರ ಗುಣಸ್ವಾಭಾವ ಮಾತ್ರ ಭಿನ್ನವಾಗಿರುತ್ತೆ.ಒಂದು ಮಗು ಜೋರಾಗಿದ್ರೆ ಮತ್ತೊಂದು ಮಗು ಶಾಂತ ಸ್ವಾಭಾವದಿಂದ ಕೂಡಿರುತ್ತೆ.ಈ ರೀತಿಯ ಭಿನ್ನತೆಯಿಂದಷ್ಟೆ ಅವರುಗಳನ್ನು ಗುರುತು ಹಿಡಿಯಲು ಸಾಧ್ಯ: ಕವಿತಕಿರಣ್ ,ಸಂಸ್ಥೆಯ ಕಾರ್ಯದರ್ಶಿ

--------------------------

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...