ವಿಷಯಕ್ಕೆ ಹೋಗಿ

ಹುಳಿಯಾರಿನಲ್ಲಿ ಸಂಭ್ರಮದ ಸ್ವಾತಂತ್ಯ್ರೋತ್ಸವ

ಪಟ್ಟಣ ಸೇರಿದಂತೆ ಹೋಬಳಿಯ ಎಲ್ಲೆಡೆ ೬೯ ನೇ ಸ್ವಾತಂತ್ರ್ಯೋತ್ಸವದ ಆಚರಣೆ ಶನಿವಾರದಂದು ಅದ್ದೂರಿಯಾಗಿ ಆಚರಿಸಲಾಯಿತು. ಗ್ರಾ.ಪಂ.ವತಿಯಿಂದ ಎಂಪಿಎಸ್ ಶಾಲಾ ಮೈದಾನದಲ್ಲಿ ಸಾರ್ವತ್ರಿಕವಾಗಿ ಆಯೋಜಿಸಿದ್ದ ಸ್ವಾತಂತ್ಯ್ರೋತ್ಸವದಲ್ಲಿ ಉಪತಹಶೀಲ್ದಾರ್ ಸತ್ಯನಾರಾಯಣ್ ಧ್ವಜಾರೋಹಣ ನೆರವೇರಿಸಿದರು.

ನಂತರ ಮಾತನಾಡಿದ ಅವರು ಸ್ವಾತಂತ್ರ್ಯಕ್ಕಾಗಿ ಹೋರಾಡಿ ಹುತಾತ್ಮರಾದ ದೇಶಭಕ್ತರ ಹೋರಾಟ ಹಾಗೂ ತ್ಯಾಗ ಬಲಿದಾನಗಳನ್ನು ಸ್ಮರಿಸಬೇಕಿದೆ.ಸ್ವಾತಂತ್ರ್ಯ ಎಂದರೆ ಸ್ವೇಚ್ಛಾಚಾರವಲ್ಲ.ಎಲ್ಲರು ನಮ್ಮ ಹಕ್ಕು ಭಾಧ್ಯತೆ ಅರಿತು ಇನ್ನೊಬ್ಬರ ಲೇಸು ಬಯಸಬೇಕು. ನಮಗೆ ಸ್ವಾತಂತ್ರ್ಯ ಸಿಕ್ಕಿದ್ದರೂ ಸಾಮಾಜಿಕ ಪಿಡುಗುಗಳು ಇನ್ನೂ ಎಲ್ಲಡೆ ಮನೆ ಮಾಡಿದ್ದು ಇದನ್ನು ತೊಡೆದು ಹಾಕಲು ಯುವಜನತೆ ಸಂಕಲ್ಪ ತೊಡಬೇಕು, ತ್ಯಾಗ ಬಲಿದಾನಗಳಿಂದ ಪಡೆದ ಸ್ವಾತಂತ್ರ್ಯವನ್ನು ಕಾಪಾಡಿಕೊಳ್ಳೂವ ಅಗತ್ಯವಿದ್ದು ಇದಕ್ಕಾಗಿ ಯುವಶಕ್ತಿಯ ಭಾಗವಹಿಸುವಿಕೆ ಅಗತ್ಯ ಬೇಕಾಗಿದೆ ಎಂದರು.

ಗ್ರಾಪಂ ಸದಸ್ಯ ಎಲ್.ಆರ್.ಚಂದ್ರಶೇಖರ್ ಮಾತನಾಡಿ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಬದುಕುವ ಹಕ್ಕು ಸಿಗುವವರೆಗೂ ಸ್ವಾತಂತ್ರ್ಯಕ್ಕೆ ಪೂರ್ಣ ಅರ್ಥ ಬರುವುದಿಲ್ಲ.ದೇಶಕ್ಕೆ ಸ್ವಾತಂತ್ರ್ಯ ಬಂದು ೬೯ ವರ್ಷ ಕಳೆದರೂ ಅನೇಕರು ಇನ್ನೂ ಎಲ್ಲಾ ರೀತಿಯಲ್ಲೂ ಹಿಂದುಳಿದಿದ್ದಾರೆ. ಅಸಮಾನತೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಸರ್ಕಾರಗಳು ಬದ್ಧತೆ ಪ್ರದರ್ಶಿಸಬೇಕು ಎಂದರು.

ರೈತಗೀತೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು .ಪೋಲಿಸ್ ಸೇರಿದಂತೆ ಎಲ್ಲಾ ಶಾಲೆಯ ಮಕ್ಕಳ ವಿವಿಧ ತಂಡಗಳಿಂದ ಸಮವಸ್ತ್ರದಲ್ಲಿ ಪಥಸಂಚಲ ನಡೆಸಿ ಧ್ವಜವಂದನೆ ಸಲ್ಲಿಸಿದನಂತರ ಧ್ವಜಾರೋಹಣ ನೆರವೇರಿಸಲಾಯಿತು.
                     ವಿವಿಧ ಶಾಲೆಗಳಿಂದ ಆಗಮಿಸಿದ್ದ ಮಕ್ಕಳು ದೇಶಭಕ್ತಿಗೀತೆಗಳಿಗೆ ಹೆಜ್ಜೆ ಹಾಕುವ ಮೂಲಕ ವಿವಿಧ ಸಾಂಸ್ಕೃತಿಕಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಅತ್ಯುತ್ತಮ ಪ್ರದರ್ಶನ ನೀಡಿದ ಶಾಲಾಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ೧೯ ಮಂದಿ ಹಿರಿಯ ಸ್ವಾತಂತ್ಯ್ರ ಹೋರಾಟಗಾರರು ಹಾಗೂ ಅವರ ಕುಟುಂಬದವರಿಗೆ ಸನ್ಮಾನ ಮಾಡಲಾಯಿತು.




             ಗ್ರಾ.ಪಂ.ಅಧ್ಯಕ್ಷೆ ಗೀತಾಪ್ರದೀಪ್ ಅಧ್ಯಕ್ಷತೆವಹಿಸಿದ್ದು, ಉಪಾಧ್ಯಕ್ಷ ಎಂ.ಗಣೇಶ್, ಜಿ.ಪಂ. ಸದಸ್ಯೆ ಮಂಜುಳಾ,ತಾ.ಪಂ.ಸದಸ್ಯೆ ಬೀಬೀಫಾತೀಮ, ಪಿಡಿಓ ಅಡವೀಶ್ ಕುಮಾರ್, ಗ್ರಾ.ಪಂ.ಸದಸ್ಯರಾದ ಅಶೋಕ್ ಬಾಬು,ಹೇಮಂತ್ ಕುಮಾರ್,ದಯಾನಂದ್, ರಂಗನಾಥ್, ಭೈರೇಶ್, ಜಬೀಉಲ್ಲಾ,ಪುಟ್ಟರಾಜು, ಕೋಳಿ ಶ್ರೀನಿವಾಸ್, ಪುಟ್ಟಿಬಾಯಿ,ಗೀತಾ, ಸೇರಿದಂತೆ ಗ್ರಾ.ಪಂ.ಎಲ್ಲಾ ಸದಸ್ಯರು, ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದವರು, ಹಾಗೂ ವಿವಿಧ ಸಂಘ ಸಂಸ್ಥೆಯವರು ,ಶಾಲೆಗಳ ದೈಹಿಕ ಶಿಕ್ಷಕರು, ಸಾರ್ವಜನಿಕರು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...