ವಿಷಯಕ್ಕೆ ಹೋಗಿ

ರೈತರ ಸಮಸ್ಯೆ ಬಗೆಹರಿಸಲು ರಾಷ್ಟ್ರೀಯ ಕೃಷಿ ನೀತಿ ಜಾರಿಯಾಗಬೇಕು

ರೈತರ ಬೆಳೆಗೆ ಬೆಳೆಗೆ ವೈಜ್ಞಾನಿಕ ಬೆಲೆ ನಿಗದಿಯಾಗಬೇಕು: ಚಂಪಾ
-------------------------------
                  ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು ಅನ್ನದಾತ ದೇಶದ ಬೆನ್ನೆಲುಬು ಎನ್ನಲಾಗುವ ಈ ನಾಡಿನಲ್ಲಿ ರೈತ ಇಂದು ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಕಂಡುಬರುತ್ತಿರುವುದು ದುರಾದೃಷ್ಟ .''ರೈತ ದೇಶದ ಬೆನ್ನೆಲುಬು ಎಂಬ ಮಾತು ಸತ್ಯವಾಗಬೇಕಾದಲ್ಲಿ ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಯಾಗಬೇಕು. ಆಗಷ್ಟೆ ರೈತರ ಬದುಕು ಹಸನಾಗಲು ಸಾಧ್ಯ'' ಎಂದು ಕವಿ,ನಾಟಕಕರಾದ ಪ್ರೋ.ಚಂದ್ರಶೇಖರ ಪಾಟೀಲ್ ಹೇಳಿದರು.

 ಹುಳಿಯಾರು ಕೆಂಕೆರೆಯ ಬಿಎಂಎಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರದಂದುನಡೆದ ಸಾಂಸ್ಕೃತಿಕ , ಕ್ರೀಡಾ,ಎನ್.ಎಸ್.ಎಸ್ ಹಾಗೂ  ಯುವ ರೆಡ್ ಕ್ರಾಸ್ ಚಟುವಟಿಕೆಗಳ ಸಮಾರಂಭವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಕೃಷಿ ಉತ್ಪನ್ನಗಳಿಗೆ ಲಾಭದಾಯಕ ಬೆಲೆಯಿಲ್ಲದೆ, ಮಾಡಿರುವ ಸಾಲಗಳನ್ನು ಸಂದಾಯ ಮಾಡಲಾರದೆ ರಾಜ್ಯದಲ್ಲಿ ರೈತರು ಆತ್ಮಹತ್ಯೆಗೆ ಶರಣಾಗುತ್ತಿರುವುದು ದುಃಖದ ವಿಷಯ. ಬಿತ್ತನೆ ನಂತರ ಬೆಳೆ ಬರಬೇಕು,ಬೆಳೆದಿದ್ದು ಮಾರಾಟವಾಗಬೇಕು,ದುಡಿತಕ್ಕೆ ತಕ್ಕ ಪ್ರತಿಫಲ ದೊರೆತಾಗ ಮಾತ್ರ ಕೃಷಿಯನ್ನು ನಂಬಿ ಬದುಕಬಹುದು.ಇಂದು ಬೆಂಕಿಪೊಟ್ಟಣಕ್ಕೂ ಬೆಲೆ ನಿಗದಿಯಾಗಿದ್ದರೆ ರೈತ ಬೆಳೆಯುವ ಸೊಪ್ಪು ತರಕಾರಿಯಿಂದ ಹಿಡಿದು ರಾಗಿ,ಜೋಳ,ಕಬ್ಬಿನವರೆಗೆ ರೈತರ ಯಾವುದೇ ಬೆಳೆಗೆ ಬೆಲೆ ನಿಗದಿಯಿಲ್ಲ.ಕೊತ್ತುಂಬರಿ ಸೊಪ್ಪು ಐದು ರೂಪಾಯಿ ಹೇಳಿದರೆ ಎರಡು ರೂಪಾಯಿಗೆ ಕೇಳುವ ಇಂದಿನ ದಿನದಲ್ಲಿ ಸರಿಯಾದ ಬೆಲೆ ರೈತನ ಉತ್ಪನ್ನಕ್ಕೆ ಸಿಗದೆ ಅನಿವಾರ್ಯವಾಗಿ ಕೇಳಿದ ಬೆಲೆಗೆ ಮಾರಿಬರುವ ಸ್ಥಿತಿ ನಿರ್ಮಾಣವಾಗಿದೆ ಎಂದರು.
ಹುಳಿಯಾರು ಕೆಂಕೆರೆಯ ಬಿಎಂಎಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರದಂದು ನಡೆದ ಸಾಂಸ್ಕೃತಿಕ , ಕ್ರೀಡಾ,ಎನ್.ಎಸ್.ಎಸ್ ಹಾಗೂ ಯುವ ರೆಡ್ ಕ್ರಾಸ್ ಚಟುವಟಿಕೆಗಳ ಸಮಾರಂಭದಲ್ಲಿ ಪ್ರೋ.ಚಂದ್ರಶೇಖರ ಪಾಟೀಲ್,ಚಿಂತಕ ಹಾಗೂ ವಿಮರ್ಶಕ ವಡ್ಡಗೆರೆ ನಾಗರಾಜಯ್ಯ,ಪ್ರಾಂಶುಪಾಲ ಪ್ರೋ .ಬಿಳಿಗೆರೆ ಕೃಷ್ಣಮೂರ್ತಿ ಹಾಗೂ ಶಂಕರಲಿಂಗಯ್ಯ ಭಾಗವಹಿಸಿದ್ದರು.

         ರೈತರ ಉತ್ಪನ್ನಗಳಿಗೆ ಸೂಕ್ತ ಬೆಲೆ ಸಿಗದಿರುವುದರಿಂದ ಬೇಸತ್ತ ರೈತರು ಅನಿವಾರ್ಯವಾಗಿ ಬೆಳೆದ ಬೆಳೆಯನ್ನೇ ರಸ್ತೆಗೆ ಸುರಿಯುವಂತಾಗಿದೆ.ರೈತ ತಾನೆ ಬೆಳದ ಬೆಳೆಗೆ ಬೆಲೆ ನಿಗದಿಪಡಿಸುವ ಅಧಿಕಾರವನ್ನು ಕಳೆದುಕೊಂಡಿದ್ದಾನೆ. ಕೃಷಿ ಇತ್ತೀಚೆಗೆ ನಷ್ಟದ ಬಾಬತ್ತಾಗಿದ್ದು ಆರ್ಥಿಕ ಭದ್ರತೆ ಇಲ್ಲದ ಕಾರಣ ರೈತರ ಮಕ್ಕಳು ಕೃಷಿ ಕಡೆಗೆ ಮುಖ ಹಾಕುತ್ತಿಲ್ಲವಾಗಿದ್ದು ರೈತರ ಪರಿಸ್ಥಿತಿ ಚಿಂತಜನಕವಾಗಿದೆ ಎಂದರು.
ಸರ್ಕಾರದ ಯೋಜನೆಗಳು ರೈತರ ಬದಕನ್ನು ಸುಧಾರಿಸುವ ಬದಲು ಅವರನ್ನು ಇನ್ನಷ್ಟು ಸಮಸ್ಯೆಗಳಿಗೆ ಬಲಿಯಾಗುಗುವಂತೆ ಮಾಡಿದ್ದು ಇದನ್ನು ಗಂಭೀರವಾಗಿ ಚಿಂತಿಸಬೇಕಿದೆ ಎಂದರು.ರೈತರು ಸಂಕಷ್ಟದಲ್ಲಿದ್ದು ಅವರು ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಮಾತ್ರವಲ್ಲ, ಲಾಭದಾಯಕ ಬೆಲೆಯನ್ನು ನಿಗದಿಯಾಗಬೇಕು .ಕೃಷಿ ನೀತಿ ಜಾರಿಗೆ ಬಂದು ಮಾರುಕಟ್ಟೆಯನ್ನು ರೈತ ನಿಯಂತ್ರಣ ಮಾಡುವ ಕಾಲ ಬಂದಾಗ ಮಾತ್ರ ಕೃಷಿಕರ ಬದುಕು ಹಸನಾಗುತ್ತದೆ ಎಂದರು.
                   ಅನ್ನ ಭಾಗ್ಯದ ಬಗ್ಗೆ ಟೀಕೆ ಸಲ್ಲ:ಬಡ ರೈತರ ಸಮಸ್ಯೆಗೆ ಸ್ಪಂದಿಸುವ ನಿಟ್ಟಿನಲ್ಲಿ ಸರ್ಕಾರ ಅನ್ನಭಾಗ್ಯ ಯೋಜನೆ ಜಾರಿಗೆ ತಂದರೆ ಎಸ್.ಎಲ್.ಭೈರಪ್ಪನಂತ ಕೆಲವು ಪುರೋಹಿತಶಾಯಿ ಸಾಹಿತಿಗಳು ಯೋಜನೆ ಬಡವರನ್ನು ಸೋಮಾರಿಗಳನ್ನಾಗಿ ಮಾಡುತ್ತದೆ ಎಂದಿರುವುದು ಅಮಾನವೀಯ ಹೇಳಿಕೆಯಾಗಿದ್ದು ಕೂತು ತಿನ್ನುವ ಹೊಟ್ಟೆತುಂಬಿದವರಿಗೆ ಬಡವರ ಬವಣೆ ಗೊತ್ತಾಗುವುದಾದರೂ ಹೇಗೆ ಎಂದು ಲೇವಡಿ ಮಾಡಿದರು.
             ಇದಕ್ಕೂ ಮುನ್ನ ಮಾತನಾಡಿದ ಚಿಂತಕ ಹಾಗೂ ವಿಮರ್ಶಕ ವಡ್ಡಗೆರೆ ನಾಗರಾಜಯ್ಯ ವಿದ್ಯೆ ಹಾಗೂ ಜ್ಞಾನ ಕಲಿಸುವ ಶಿಕ್ಷಣ ಇಂದು ವಿಕ್ರಯದ ವಸ್ತುವಾಗಿದ್ದು ಬಂಡವಾಳಗಾರರ ಪಾಲಾಗಿದೆ.ಧಾನ್ಯದ ಮೇಲಿನ ಹಕ್ಕು ಕೂಡ ನಿರ್ಬೀಜಕರಣಕೊಳಗಾಗಿದೆ.ಪ್ರಕೃತಿಯ ಎಲ್ಲಾ ವಸ್ತುಗಳು ಹಣದ ರೂಪದಲ್ಲಿ ಕಾಣಸಿಗುವಂತಾಗಿದ್ದು ಸರಕು ಸಂಸ್ಕೃತಿಯ ಮೋಹ ಕೊನೆಗೊಂಡಾಗ ಮಾತ್ರ ಶ್ರಮಿಕಜೀವಿಗಳ ಉದ್ದಾರ ಸಾಧ್ಯವೆಂದರು.
      ರೈತಗೀತೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಪ್ರೋ .ಬಿಳಿಗೆರೆ ಕೃಷ್ಣಮೂರ್ತಿ ಪ್ರಾಸ್ತಾವಿಕನುಡಿಗಳಾಡಿದರು.ಶಂಕರಲಿಗಪ್ಪ ಅತಿಥಿಗಳ ಪರಿಚಯ ಮಾಡಿದರು.ವಿದ್ಯಾರ್ಥಿಗಳೊಡವೆ ಸಂವಾದ ನಡೆಯಿತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.