ವಿಷಯಕ್ಕೆ ಹೋಗಿ

ರೈತರ ಸಮಸ್ಯೆ ಬಗೆಹರಿಸಲು ರಾಷ್ಟ್ರೀಯ ಕೃಷಿ ನೀತಿ ಜಾರಿಯಾಗಬೇಕು

ರೈತರ ಬೆಳೆಗೆ ಬೆಳೆಗೆ ವೈಜ್ಞಾನಿಕ ಬೆಲೆ ನಿಗದಿಯಾಗಬೇಕು: ಚಂಪಾ
-------------------------------
                  ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು ಅನ್ನದಾತ ದೇಶದ ಬೆನ್ನೆಲುಬು ಎನ್ನಲಾಗುವ ಈ ನಾಡಿನಲ್ಲಿ ರೈತ ಇಂದು ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಕಂಡುಬರುತ್ತಿರುವುದು ದುರಾದೃಷ್ಟ .''ರೈತ ದೇಶದ ಬೆನ್ನೆಲುಬು ಎಂಬ ಮಾತು ಸತ್ಯವಾಗಬೇಕಾದಲ್ಲಿ ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಯಾಗಬೇಕು. ಆಗಷ್ಟೆ ರೈತರ ಬದುಕು ಹಸನಾಗಲು ಸಾಧ್ಯ'' ಎಂದು ಕವಿ,ನಾಟಕಕರಾದ ಪ್ರೋ.ಚಂದ್ರಶೇಖರ ಪಾಟೀಲ್ ಹೇಳಿದರು.

 ಹುಳಿಯಾರು ಕೆಂಕೆರೆಯ ಬಿಎಂಎಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರದಂದುನಡೆದ ಸಾಂಸ್ಕೃತಿಕ , ಕ್ರೀಡಾ,ಎನ್.ಎಸ್.ಎಸ್ ಹಾಗೂ  ಯುವ ರೆಡ್ ಕ್ರಾಸ್ ಚಟುವಟಿಕೆಗಳ ಸಮಾರಂಭವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಕೃಷಿ ಉತ್ಪನ್ನಗಳಿಗೆ ಲಾಭದಾಯಕ ಬೆಲೆಯಿಲ್ಲದೆ, ಮಾಡಿರುವ ಸಾಲಗಳನ್ನು ಸಂದಾಯ ಮಾಡಲಾರದೆ ರಾಜ್ಯದಲ್ಲಿ ರೈತರು ಆತ್ಮಹತ್ಯೆಗೆ ಶರಣಾಗುತ್ತಿರುವುದು ದುಃಖದ ವಿಷಯ. ಬಿತ್ತನೆ ನಂತರ ಬೆಳೆ ಬರಬೇಕು,ಬೆಳೆದಿದ್ದು ಮಾರಾಟವಾಗಬೇಕು,ದುಡಿತಕ್ಕೆ ತಕ್ಕ ಪ್ರತಿಫಲ ದೊರೆತಾಗ ಮಾತ್ರ ಕೃಷಿಯನ್ನು ನಂಬಿ ಬದುಕಬಹುದು.ಇಂದು ಬೆಂಕಿಪೊಟ್ಟಣಕ್ಕೂ ಬೆಲೆ ನಿಗದಿಯಾಗಿದ್ದರೆ ರೈತ ಬೆಳೆಯುವ ಸೊಪ್ಪು ತರಕಾರಿಯಿಂದ ಹಿಡಿದು ರಾಗಿ,ಜೋಳ,ಕಬ್ಬಿನವರೆಗೆ ರೈತರ ಯಾವುದೇ ಬೆಳೆಗೆ ಬೆಲೆ ನಿಗದಿಯಿಲ್ಲ.ಕೊತ್ತುಂಬರಿ ಸೊಪ್ಪು ಐದು ರೂಪಾಯಿ ಹೇಳಿದರೆ ಎರಡು ರೂಪಾಯಿಗೆ ಕೇಳುವ ಇಂದಿನ ದಿನದಲ್ಲಿ ಸರಿಯಾದ ಬೆಲೆ ರೈತನ ಉತ್ಪನ್ನಕ್ಕೆ ಸಿಗದೆ ಅನಿವಾರ್ಯವಾಗಿ ಕೇಳಿದ ಬೆಲೆಗೆ ಮಾರಿಬರುವ ಸ್ಥಿತಿ ನಿರ್ಮಾಣವಾಗಿದೆ ಎಂದರು.
ಹುಳಿಯಾರು ಕೆಂಕೆರೆಯ ಬಿಎಂಎಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರದಂದು ನಡೆದ ಸಾಂಸ್ಕೃತಿಕ , ಕ್ರೀಡಾ,ಎನ್.ಎಸ್.ಎಸ್ ಹಾಗೂ ಯುವ ರೆಡ್ ಕ್ರಾಸ್ ಚಟುವಟಿಕೆಗಳ ಸಮಾರಂಭದಲ್ಲಿ ಪ್ರೋ.ಚಂದ್ರಶೇಖರ ಪಾಟೀಲ್,ಚಿಂತಕ ಹಾಗೂ ವಿಮರ್ಶಕ ವಡ್ಡಗೆರೆ ನಾಗರಾಜಯ್ಯ,ಪ್ರಾಂಶುಪಾಲ ಪ್ರೋ .ಬಿಳಿಗೆರೆ ಕೃಷ್ಣಮೂರ್ತಿ ಹಾಗೂ ಶಂಕರಲಿಂಗಯ್ಯ ಭಾಗವಹಿಸಿದ್ದರು.

         ರೈತರ ಉತ್ಪನ್ನಗಳಿಗೆ ಸೂಕ್ತ ಬೆಲೆ ಸಿಗದಿರುವುದರಿಂದ ಬೇಸತ್ತ ರೈತರು ಅನಿವಾರ್ಯವಾಗಿ ಬೆಳೆದ ಬೆಳೆಯನ್ನೇ ರಸ್ತೆಗೆ ಸುರಿಯುವಂತಾಗಿದೆ.ರೈತ ತಾನೆ ಬೆಳದ ಬೆಳೆಗೆ ಬೆಲೆ ನಿಗದಿಪಡಿಸುವ ಅಧಿಕಾರವನ್ನು ಕಳೆದುಕೊಂಡಿದ್ದಾನೆ. ಕೃಷಿ ಇತ್ತೀಚೆಗೆ ನಷ್ಟದ ಬಾಬತ್ತಾಗಿದ್ದು ಆರ್ಥಿಕ ಭದ್ರತೆ ಇಲ್ಲದ ಕಾರಣ ರೈತರ ಮಕ್ಕಳು ಕೃಷಿ ಕಡೆಗೆ ಮುಖ ಹಾಕುತ್ತಿಲ್ಲವಾಗಿದ್ದು ರೈತರ ಪರಿಸ್ಥಿತಿ ಚಿಂತಜನಕವಾಗಿದೆ ಎಂದರು.
ಸರ್ಕಾರದ ಯೋಜನೆಗಳು ರೈತರ ಬದಕನ್ನು ಸುಧಾರಿಸುವ ಬದಲು ಅವರನ್ನು ಇನ್ನಷ್ಟು ಸಮಸ್ಯೆಗಳಿಗೆ ಬಲಿಯಾಗುಗುವಂತೆ ಮಾಡಿದ್ದು ಇದನ್ನು ಗಂಭೀರವಾಗಿ ಚಿಂತಿಸಬೇಕಿದೆ ಎಂದರು.ರೈತರು ಸಂಕಷ್ಟದಲ್ಲಿದ್ದು ಅವರು ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಮಾತ್ರವಲ್ಲ, ಲಾಭದಾಯಕ ಬೆಲೆಯನ್ನು ನಿಗದಿಯಾಗಬೇಕು .ಕೃಷಿ ನೀತಿ ಜಾರಿಗೆ ಬಂದು ಮಾರುಕಟ್ಟೆಯನ್ನು ರೈತ ನಿಯಂತ್ರಣ ಮಾಡುವ ಕಾಲ ಬಂದಾಗ ಮಾತ್ರ ಕೃಷಿಕರ ಬದುಕು ಹಸನಾಗುತ್ತದೆ ಎಂದರು.
                   ಅನ್ನ ಭಾಗ್ಯದ ಬಗ್ಗೆ ಟೀಕೆ ಸಲ್ಲ:ಬಡ ರೈತರ ಸಮಸ್ಯೆಗೆ ಸ್ಪಂದಿಸುವ ನಿಟ್ಟಿನಲ್ಲಿ ಸರ್ಕಾರ ಅನ್ನಭಾಗ್ಯ ಯೋಜನೆ ಜಾರಿಗೆ ತಂದರೆ ಎಸ್.ಎಲ್.ಭೈರಪ್ಪನಂತ ಕೆಲವು ಪುರೋಹಿತಶಾಯಿ ಸಾಹಿತಿಗಳು ಯೋಜನೆ ಬಡವರನ್ನು ಸೋಮಾರಿಗಳನ್ನಾಗಿ ಮಾಡುತ್ತದೆ ಎಂದಿರುವುದು ಅಮಾನವೀಯ ಹೇಳಿಕೆಯಾಗಿದ್ದು ಕೂತು ತಿನ್ನುವ ಹೊಟ್ಟೆತುಂಬಿದವರಿಗೆ ಬಡವರ ಬವಣೆ ಗೊತ್ತಾಗುವುದಾದರೂ ಹೇಗೆ ಎಂದು ಲೇವಡಿ ಮಾಡಿದರು.
             ಇದಕ್ಕೂ ಮುನ್ನ ಮಾತನಾಡಿದ ಚಿಂತಕ ಹಾಗೂ ವಿಮರ್ಶಕ ವಡ್ಡಗೆರೆ ನಾಗರಾಜಯ್ಯ ವಿದ್ಯೆ ಹಾಗೂ ಜ್ಞಾನ ಕಲಿಸುವ ಶಿಕ್ಷಣ ಇಂದು ವಿಕ್ರಯದ ವಸ್ತುವಾಗಿದ್ದು ಬಂಡವಾಳಗಾರರ ಪಾಲಾಗಿದೆ.ಧಾನ್ಯದ ಮೇಲಿನ ಹಕ್ಕು ಕೂಡ ನಿರ್ಬೀಜಕರಣಕೊಳಗಾಗಿದೆ.ಪ್ರಕೃತಿಯ ಎಲ್ಲಾ ವಸ್ತುಗಳು ಹಣದ ರೂಪದಲ್ಲಿ ಕಾಣಸಿಗುವಂತಾಗಿದ್ದು ಸರಕು ಸಂಸ್ಕೃತಿಯ ಮೋಹ ಕೊನೆಗೊಂಡಾಗ ಮಾತ್ರ ಶ್ರಮಿಕಜೀವಿಗಳ ಉದ್ದಾರ ಸಾಧ್ಯವೆಂದರು.
      ರೈತಗೀತೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಪ್ರೋ .ಬಿಳಿಗೆರೆ ಕೃಷ್ಣಮೂರ್ತಿ ಪ್ರಾಸ್ತಾವಿಕನುಡಿಗಳಾಡಿದರು.ಶಂಕರಲಿಗಪ್ಪ ಅತಿಥಿಗಳ ಪರಿಚಯ ಮಾಡಿದರು.ವಿದ್ಯಾರ್ಥಿಗಳೊಡವೆ ಸಂವಾದ ನಡೆಯಿತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...