ತಾಲ್ಲೂಕ್ ಮಟ್ಟಕ್ಕೆ ಸರಿಸಮಾನಾಗಿರುವ ಹುಳಿಯಾರಿನ ಅಭಿವೃದ್ಧಿಗೆ ತಾವು ಹೆಚ್ಚು ಒತ್ತು ನೀಡಿದ್ದು ಅಗತ್ಯ ಸೌಲಭ್ಯ ಒದಗಿಸಲು ತಾವು ಬದ್ದವಿರುವುದಾಗಿ ಶಾಸಕ ಸಿ.ಬಿ.ಸುರೇಶ್ ಬಾಬು ನುಡಿದರು. ಪಟ್ಟಣದ ಶ್ರೀ ದುರ್ಗಾಪರಮೇಶ್ವರಿ ದೇವಾಲಯದ ಆವರಣದಲ್ಲಿ ಬೆಂಗಳೂರಿನ ಪೆಂಟಾಪ್ಯೂರ್ ಕಂಪನಿ ಹಾಗೂ ಗ್ರಾಪಂ ಸಂಯುಕ್ತಾಶ್ರಯಲ್ಲಿ ನಿರ್ಮಾಣಗೊಂಡ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಹುಳಿಯಾರಿನ ಶ್ರೀ ದುರ್ಗಾಪರಮೇಶ್ವರಿ ದೇವಾಲಯದ ಆವರಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಶಾಸಕ ಸಿ.ಬಿ.ಸುರೇಶ್ ಬಾಬು ಉದ್ಘಾಟಿಸಿದರು.ಜಿಪಂ ಸದಸ್ಯೆ ಮಂಜುಳಮ್ಮ,ತಾಲ್ಲೂಕ್ ಪಂಚಾಯ್ತಿ ಅಧ್ಯಕ್ಷೆ ಜಯಲಕ್ಷ್ಮಮ್ಮ,ಹುಳಿಯಾರು ಗ್ರಾಪಂ ಅಧ್ಯಕ್ಷೆ ಗೀತಾ ಪ್ರದೀಪ್,ಉಪಾಧ್ಯಕ್ಷ ಗಣೇಶ್,ವಾರ್ಡ್ ಸದಸ್ಯ ಧನುಷ್ ರಂಗನಾಥ್,ದಯಾನಂದ್ ಚಿತ್ರದಲ್ಲಿದ್ದಾರೆ. ಹುಳಿಯಾರು ಭಾಗದಲ್ಲಿ ನೀರಿನ ಸಮಸ್ಯೆ ತೀವ್ರತರವಾಗಿದ್ದು ಇಲ್ಲಿ ದೊರೆಕುವ ನೀರಿನ ಟಿಡಿಎಸ್ ಗರಿಷ್ಟ ಮಟ್ಟಮುಟ್ಟಿದ್ದು ಫ್ಲೋರೈಡ್ಯುಕ್ತ ನೀರು ಕುಡಿಯಲು ಯೋಗ್ಯವಾಗಿರಲಿಲ್ಲ. ಇಲ್ಲಿನ ಜನರಿಗೆ ಶುದ್ದ ಕುಡಿಯುವ ನೀರು ಕೊಡಲು ಸಂಕಲ್ಪಮಾಡಿದ ಫಲವಾಗಿ ಇಂದು ಎರಡು ರೂಪಾಯಿಗೆ ಹತ್ತು ಲೀಟರ್ ನೀರು ಕೊಡುವ ಈ ಘಟಕಕ್ಕೆ ಚಾಲನೆ ನೀಡಲಾಗಿದೆ.ಈ ಘಟಕದ ನೀರು ಸುರಕ್ಷಿತವಾಗಿದ್ದು ಅತಿ ಕಡಿಮೆ ದರಕ್ಕೆ ನೀರು ಸಿಗುವ ಜತೆಗೆ ಶುದ್ಧ ನೀರಿನಿಂದ ಜನರ ಆರೋಗ್ಯ ಸಮಸ್ಯೆಗ...
📰 ಹುಳಿಯಾರು ಸೇರಿದಂತೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸ್ಥಳಿಯ ಸುದ್ದಿ ಸಮಾಚಾರದ ಬ್ಲಾಗ್........ ✍️ನರೇಂದ್ರಬಾಬು ಹುಳಿಯಾರು-📞9448760070