ವಿಷಯಕ್ಕೆ ಹೋಗಿ

ರಾ.ಹೆದ್ದಾರಿ ಮಾರ್ಜಿನ್ ಬಗ್ಗೆ ಆತಂಕಬೇಡ :ಶಾಸಕ ಸಿ.ಬಿ.ಎಸ್

ಪಟ್ಟಣದಲ್ಲಿ ಮಂಗಳೂರು– ವಿಶಾಖಪಟ್ಟಣ ಹಾಗೂ ಬೀದರ್– ಶ್ರೀರಂಪಟ್ಟಣ ಎರಡು ರಾ.ಹೆದ್ದಾರಿ ಹಾದುಹೋಗಲಿದ್ದು ರಸ್ತೆ ವಿಸ್ತರಣೆಯಿಂದ ಮನೆ ಅಂಗಡಿಮುಂಗಟ್ಟುಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದ್ದು ಅನಗತ್ಯ ಭಯ ಆತಂಕ ಬೇಡ ಎಂದು ಶಾಸಕ ಸಿ.ಬಿ..ಸುರೇಶ್ ಬಾಬು ಮನವಿ ಮಾಡಿದರು.

       ಹುಳಿಯಾರಿನ ಶ್ರೀ ದುರ್ಗಾ ಪರಮೇಶ್ವರಿ ದೇವಾಲಯದಲ್ಲಿ ಹೆದ್ದಾರಿ ಬಗ್ಗೆ ಕರೆಯಲಾಗಿದ್ದ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು.
ಹುಳಿಯಾರಿನಲ್ಲಿ ಹಾದುಹೋಗುವ ರಾ.ಹೆದ್ದಾರಿ ಸಾಧಕ ಭಾದಕ ಕುರಿತಂತೆ ನಡೆದ ಸಾರ್ವಜನಿಕ ಸಭೆಯಲ್ಲಿ ಶಾಸಕ ಸಿ.ಬಿ.ಸುರೇಶ್ ಬಾಬು ಮಾತನಾಡಿದರು.

     ಈಗಾಗಲೆ ಪಟ್ಟಣದಲ್ಲಿ ಕಳೆದ ಹಲವಾರು ದಿನಗಳಿಂದ ಹೆದ್ದಾರಿ ವಿಸ್ತರಣೆ ಬಗ್ಗೆ ಎದ್ದಿರುವ ಉಹಾಪೋಹಗಳು ನನ್ನ ಗಮನಕ್ಕೆ ಬಂದಿದ್ದು ಇದನ್ನು ಪರಿಹರಿಸುವ ನಿಟ್ಟಿನಲ್ಲಿ ಹೆದ್ದಾರಿ ಅಧಿಕಾರಿಗಳನ್ನು ನಿಮ್ಮ ಸ್ಥಳಕ್ಕೆ ಕರೆದುಕೊಂಡು ಬಂದಿದ್ದು ರಸ್ತೆ ಅಗಲೀಕರಣದ ಸಂಪೂರ್ಣ ಮಾಹಿತಿ ನೀಡಲಿದ್ದಾರೆ ಎಂದರು.

         

       ರಾಷ್ಟೀಯ ಹೆದ್ದಾರಿ ಅಗಲೀಕರಣ ಕುರಿತು ರಾ.ಹೆ.ಪ್ರಾಧಿಕಾರದ ತುಮಕೂರು ವಿಭಾಗದ ಎಇಇ ಶಿವಕುಮಾರ್ ಮಾಹಿತಿ ನೀಡಿ ಹುಳಿಯಾರು ಪಟ್ಟಣ ಬಳಸಿಕೊಂಡು ಎರಡು ರಾಷ್ಟ್ರೀಯ ಹೆದ್ದಾರಿ ಹಾದುಹೋಗಲಿದ್ದು ಹೆದ್ದಾರಿ ಸಂಖ್ಯೆ ೧೫೦ ಎ ಜೇವರ್ಗಿ ಯಿಂದ ಶ್ರೀರಂಗಪಟ್ಟಣಕ್ಕೆ ಹೋಗುವ ರಾಷ್ಟೀಯ ಹೆದ್ದಾರಿಯಾಗಿದ್ದು ಸದ್ಯ ಇದು ರಾಜ್ಯದ ಅತಿ ಉದ್ದದ ರಸ್ತೆಯಾಗಿದೆ. ಅಷ್ಠಪಥದ ರಸ್ತೆ ನಿರ್ಮಿಸಲು ಸರ್ವೆ ಕಾರ್ಯ ಆರಂಭವಾಗಿದ್ದು ಗ್ರಾಮಗಳಲ್ಲಿ ಹಾದುಹೋಗುವ ರಸ್ತೆ ನಿರ್ಮಾಣಮಾಡುವಾಗ ಸಾರ್ವಜನಿಕರಿಗೆ ಹೆಚ್ಚಿನ ಹಾನಿಯಾಗದಂತೆ ರೂಪುರೇಷೆ ಸಿದ್ದಪಡಿಸಲಾಗಿದೆ ಎಂದರು.ಪಟ್ಟಣ ಪ್ರದೇಶದಲ್ಲಿ ರಸ್ತೆ ಮದ್ಯದಿಂದ ೨೨.೫೦ ಮೀಟರ್ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ರಸ್ತೆ ಮಧ್ಯದಿಂದ ೪೦ಮೀ ರೋಡ್ ಮಾರ್ಜಿನ್ ಕಾಪಾಡಿಕೊಳ್ಳಿ ಎಂದರು.

            
          ಅದೇರೀತಿ ಮತ್ತೊಂದು ಹೆದ್ದಾರಿ ೨೩೪ ಕೂಡ ಪಟ್ಟಣದಲ್ಲಿ ಹಾದುಹೋಗಲಿದ್ದು ಅನಿವಾರ್ಯ ಕಾರಣಗಳಿಂದ ಕಾಮಗಾರಿ ಸ್ಥಗಿತವಾಗಿದೆ.ಬಾಣಾವಾರದಿಂದ ಶಿರಾವರೆಗೆ ಕಾಮಗಾರಿ ಬಾಕಿಯಿದ್ದು ಹುಳಿಯಾರಿನಿಂದ ಶಿರಾವರೆಗೆ ನಾಲ್ಕುಪಥದ ರಸ್ತೆಗೆ ೧೬೦ ಕೋಟಿಗೆ ಟೆಂಡರ್ ಪ್ರಕ್ರಿಯೆ ಬಾಕಿಯಿದೆ ಎಂದರು. ಸದ್ಯ ಗುಂಡಿಮುಚ್ಚುವ ಕಾರ್ಯಕ್ಕೆ ೧.೯೦ಕೋಟಿ ಹಣ ಬಿಡುಗಡೆಯಾಗಿದ್ದು ತ್ವರಿತವಾಗಿ ಗುಂಡಿಮುಚ್ಚುವ ಕಾರ್ಯ ಕೈಗೊಳ್ಳಲಾಗುವುದೆಂದರು.

             
    ಸಭೆಯಲ್ಲಿ ಮಾತನಾಡಿದ ನಟರಾಜುಗುಪ್ತ,ಎಂಪಿಎಸ್ ರಾಜು,ರಂಗನಾಥ್ ಮತ್ತಿತರರು ಬೀದರ್ ಶ್ರೀರಂಗಪಟ್ಟಣ ರಸ್ತೆ ರಾಷ್ಟ್ರೀಯ ಹೆದ್ದಾರಿಯನ್ನಾಗಿ ಪರಿವರ್ತನೆ ಮಾಡಲು ಸರಕಾರ ಮುಂದಾಗಿ, ಈಗಾಗಲೇ ಸರ್ವೆ ಕಾರ್ಯಕ್ಕೆ ಚಾಲನೆ ನೀಡಿದೆ.ಈ ರಸ್ತೆ ಹುಳಿಯಾರು ಪಟ್ಟಣದ ಒಳಭಾಗದಲ್ಲಿ ಹಾದು ಹೋಗುವುದಾಗಿ ಪ್ರಾಚಾರ ಪಡೆದಿದ್ದು ಹೀಗೇನಾದರೂ ಆದಲ್ಲಿ ಬಸ್‌ ನಿಲ್ದಾಣ, ದೇವಾಲಯ, ಕೆರೆ, ಮಳಿಗೆ,ನೂರಾರು ಮನೆಗಳು ನಾಶವಾಗಿ ಎಲ್ಲರೂ ಬೀದಿಪಾಲಾಗಬೇಕಾಗುತ್ತದೆ. ಇದರಿಂದ ಗ್ರಾಮಸ್ಥರಲ್ಲಿ ಆತಂಕ ಉಂಟಾಗಿದೆ..ಹೆದ್ದಾರಿ ರಸ್ತೆ ವಿಸ್ತರಿಸುವ ಬದಲು ಬೈಪಾಸ್‌ ರಸ್ತೆ ನಿರ್ಮಿಸಲು ಮುಂದಾಗಬೇಕು ಎಂದು ಒತ್ತಾಯಿಸಿದರು.

             ಸಭೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ, ಉಪಾಧ್ಯಕ್ಷ ಗಣೇಶ್, ಜಬೀಸಾಬ್, ಅಶೋಕ್ ಬಾಬು,ದಯಾನಂದ್,ತಾಪಂ ಸದಸ್ಯೆ ಬೀಬಿ ಫಾತೀಮಾ,ಜಹೀರ್ ಸಾಬ್,ರಾಘವೇಂದ್ರ,ಪುಟ್ಟಿಬಾಯಿ, ಹೇಮಂತ,ಬಡಗಿರಾಮಣ್ಣ ,ಜೆಡಿಎಸ್ ಯುವ ಘಟಕದ ಗೌಡಿ,ಸಮಗ್ರ ಅಭಿವೃದ್ದಿ ಫೋರಂ ಸದಸ್ಯರುಗಳು, ಗ್ರಾಮ ಪಂಚಾಯಿತಿ ಸದಸ್ಯರು,ಸಾರ್ವಜನಿಕರು ಪಾಲ್ಗೊಂಡಿದ್ದರು.
------------------------
ಪಟ್ಟಣದಲ್ಲಿ ಎರಡು ಹೆದ್ದಾರಿ ಹಾದು ಹೋಗುವುದರ ಪರಿಣಾಮ ರಸ್ತೆಯ ಒತ್ತಡ ತಪ್ಪಿಸಲು ೧೫೦ ಎ ಹೆದ್ದಾರಿಗೆ ಬೈಪಾಸ್ ರಸ್ತೆ ನಿರ್ಮಿಸುವಂತೆ ಅಧಿಕಾರಿಗಳೊಂದಿಗೆ ಸಮಾಲೋಚಿಸಲಾಗಿದ್ದು ಬೈಪಾಸ್ ರಸ್ತೆ ಬಳ್ಳೆಕಟ್ಟೆಯಿಂದ ಕೆಂಕೆರೆವರೆಗೆ ನಿರ್ಮಿಸಲು ಉದ್ದೇಶಿಸಲಾಗಿದೆ .ಅಲ್ಲದೆ ಬೈಪಾಸ್ ರಸ್ತೆ ನಿರ್ಮಿಸುವಾಗ ಕೂಡ ರೈತರ ಜಮೀನು ಮನೆಗಳಿಗೆ ಹಾನಿಯಾಗದಂತೆ ಸರ್ಕಾರಿ ಜಾಗದಲ್ಲೆ ನಿರ್ಮಿಸುವಂತೆ ಕ್ರಮಕೈಗೊಳ್ಳಲಾಗುವುದು.ಹಾಗಾಗಿ ರೈತಾಪಿ ಜನರು ಕೂಡ ಅನಗತ್ಯ ಭೀತಿ ಹೊಂದುವುದು ಬೇಡ :ಶಾಸಕ ಸಿ.ಬಿ.ಸುರೇಶ್ ಬಾಬು
---------------------------

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...