ವಿಷಯಕ್ಕೆ ಹೋಗಿ

ರಾ.ಹೆದ್ದಾರಿ ಮಾರ್ಜಿನ್ ಬಗ್ಗೆ ಆತಂಕಬೇಡ :ಶಾಸಕ ಸಿ.ಬಿ.ಎಸ್

ಪಟ್ಟಣದಲ್ಲಿ ಮಂಗಳೂರು– ವಿಶಾಖಪಟ್ಟಣ ಹಾಗೂ ಬೀದರ್– ಶ್ರೀರಂಪಟ್ಟಣ ಎರಡು ರಾ.ಹೆದ್ದಾರಿ ಹಾದುಹೋಗಲಿದ್ದು ರಸ್ತೆ ವಿಸ್ತರಣೆಯಿಂದ ಮನೆ ಅಂಗಡಿಮುಂಗಟ್ಟುಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದ್ದು ಅನಗತ್ಯ ಭಯ ಆತಂಕ ಬೇಡ ಎಂದು ಶಾಸಕ ಸಿ.ಬಿ..ಸುರೇಶ್ ಬಾಬು ಮನವಿ ಮಾಡಿದರು.

       ಹುಳಿಯಾರಿನ ಶ್ರೀ ದುರ್ಗಾ ಪರಮೇಶ್ವರಿ ದೇವಾಲಯದಲ್ಲಿ ಹೆದ್ದಾರಿ ಬಗ್ಗೆ ಕರೆಯಲಾಗಿದ್ದ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು.
ಹುಳಿಯಾರಿನಲ್ಲಿ ಹಾದುಹೋಗುವ ರಾ.ಹೆದ್ದಾರಿ ಸಾಧಕ ಭಾದಕ ಕುರಿತಂತೆ ನಡೆದ ಸಾರ್ವಜನಿಕ ಸಭೆಯಲ್ಲಿ ಶಾಸಕ ಸಿ.ಬಿ.ಸುರೇಶ್ ಬಾಬು ಮಾತನಾಡಿದರು.

     ಈಗಾಗಲೆ ಪಟ್ಟಣದಲ್ಲಿ ಕಳೆದ ಹಲವಾರು ದಿನಗಳಿಂದ ಹೆದ್ದಾರಿ ವಿಸ್ತರಣೆ ಬಗ್ಗೆ ಎದ್ದಿರುವ ಉಹಾಪೋಹಗಳು ನನ್ನ ಗಮನಕ್ಕೆ ಬಂದಿದ್ದು ಇದನ್ನು ಪರಿಹರಿಸುವ ನಿಟ್ಟಿನಲ್ಲಿ ಹೆದ್ದಾರಿ ಅಧಿಕಾರಿಗಳನ್ನು ನಿಮ್ಮ ಸ್ಥಳಕ್ಕೆ ಕರೆದುಕೊಂಡು ಬಂದಿದ್ದು ರಸ್ತೆ ಅಗಲೀಕರಣದ ಸಂಪೂರ್ಣ ಮಾಹಿತಿ ನೀಡಲಿದ್ದಾರೆ ಎಂದರು.

         

       ರಾಷ್ಟೀಯ ಹೆದ್ದಾರಿ ಅಗಲೀಕರಣ ಕುರಿತು ರಾ.ಹೆ.ಪ್ರಾಧಿಕಾರದ ತುಮಕೂರು ವಿಭಾಗದ ಎಇಇ ಶಿವಕುಮಾರ್ ಮಾಹಿತಿ ನೀಡಿ ಹುಳಿಯಾರು ಪಟ್ಟಣ ಬಳಸಿಕೊಂಡು ಎರಡು ರಾಷ್ಟ್ರೀಯ ಹೆದ್ದಾರಿ ಹಾದುಹೋಗಲಿದ್ದು ಹೆದ್ದಾರಿ ಸಂಖ್ಯೆ ೧೫೦ ಎ ಜೇವರ್ಗಿ ಯಿಂದ ಶ್ರೀರಂಗಪಟ್ಟಣಕ್ಕೆ ಹೋಗುವ ರಾಷ್ಟೀಯ ಹೆದ್ದಾರಿಯಾಗಿದ್ದು ಸದ್ಯ ಇದು ರಾಜ್ಯದ ಅತಿ ಉದ್ದದ ರಸ್ತೆಯಾಗಿದೆ. ಅಷ್ಠಪಥದ ರಸ್ತೆ ನಿರ್ಮಿಸಲು ಸರ್ವೆ ಕಾರ್ಯ ಆರಂಭವಾಗಿದ್ದು ಗ್ರಾಮಗಳಲ್ಲಿ ಹಾದುಹೋಗುವ ರಸ್ತೆ ನಿರ್ಮಾಣಮಾಡುವಾಗ ಸಾರ್ವಜನಿಕರಿಗೆ ಹೆಚ್ಚಿನ ಹಾನಿಯಾಗದಂತೆ ರೂಪುರೇಷೆ ಸಿದ್ದಪಡಿಸಲಾಗಿದೆ ಎಂದರು.ಪಟ್ಟಣ ಪ್ರದೇಶದಲ್ಲಿ ರಸ್ತೆ ಮದ್ಯದಿಂದ ೨೨.೫೦ ಮೀಟರ್ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ರಸ್ತೆ ಮಧ್ಯದಿಂದ ೪೦ಮೀ ರೋಡ್ ಮಾರ್ಜಿನ್ ಕಾಪಾಡಿಕೊಳ್ಳಿ ಎಂದರು.

            
          ಅದೇರೀತಿ ಮತ್ತೊಂದು ಹೆದ್ದಾರಿ ೨೩೪ ಕೂಡ ಪಟ್ಟಣದಲ್ಲಿ ಹಾದುಹೋಗಲಿದ್ದು ಅನಿವಾರ್ಯ ಕಾರಣಗಳಿಂದ ಕಾಮಗಾರಿ ಸ್ಥಗಿತವಾಗಿದೆ.ಬಾಣಾವಾರದಿಂದ ಶಿರಾವರೆಗೆ ಕಾಮಗಾರಿ ಬಾಕಿಯಿದ್ದು ಹುಳಿಯಾರಿನಿಂದ ಶಿರಾವರೆಗೆ ನಾಲ್ಕುಪಥದ ರಸ್ತೆಗೆ ೧೬೦ ಕೋಟಿಗೆ ಟೆಂಡರ್ ಪ್ರಕ್ರಿಯೆ ಬಾಕಿಯಿದೆ ಎಂದರು. ಸದ್ಯ ಗುಂಡಿಮುಚ್ಚುವ ಕಾರ್ಯಕ್ಕೆ ೧.೯೦ಕೋಟಿ ಹಣ ಬಿಡುಗಡೆಯಾಗಿದ್ದು ತ್ವರಿತವಾಗಿ ಗುಂಡಿಮುಚ್ಚುವ ಕಾರ್ಯ ಕೈಗೊಳ್ಳಲಾಗುವುದೆಂದರು.

             
    ಸಭೆಯಲ್ಲಿ ಮಾತನಾಡಿದ ನಟರಾಜುಗುಪ್ತ,ಎಂಪಿಎಸ್ ರಾಜು,ರಂಗನಾಥ್ ಮತ್ತಿತರರು ಬೀದರ್ ಶ್ರೀರಂಗಪಟ್ಟಣ ರಸ್ತೆ ರಾಷ್ಟ್ರೀಯ ಹೆದ್ದಾರಿಯನ್ನಾಗಿ ಪರಿವರ್ತನೆ ಮಾಡಲು ಸರಕಾರ ಮುಂದಾಗಿ, ಈಗಾಗಲೇ ಸರ್ವೆ ಕಾರ್ಯಕ್ಕೆ ಚಾಲನೆ ನೀಡಿದೆ.ಈ ರಸ್ತೆ ಹುಳಿಯಾರು ಪಟ್ಟಣದ ಒಳಭಾಗದಲ್ಲಿ ಹಾದು ಹೋಗುವುದಾಗಿ ಪ್ರಾಚಾರ ಪಡೆದಿದ್ದು ಹೀಗೇನಾದರೂ ಆದಲ್ಲಿ ಬಸ್‌ ನಿಲ್ದಾಣ, ದೇವಾಲಯ, ಕೆರೆ, ಮಳಿಗೆ,ನೂರಾರು ಮನೆಗಳು ನಾಶವಾಗಿ ಎಲ್ಲರೂ ಬೀದಿಪಾಲಾಗಬೇಕಾಗುತ್ತದೆ. ಇದರಿಂದ ಗ್ರಾಮಸ್ಥರಲ್ಲಿ ಆತಂಕ ಉಂಟಾಗಿದೆ..ಹೆದ್ದಾರಿ ರಸ್ತೆ ವಿಸ್ತರಿಸುವ ಬದಲು ಬೈಪಾಸ್‌ ರಸ್ತೆ ನಿರ್ಮಿಸಲು ಮುಂದಾಗಬೇಕು ಎಂದು ಒತ್ತಾಯಿಸಿದರು.

             ಸಭೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ, ಉಪಾಧ್ಯಕ್ಷ ಗಣೇಶ್, ಜಬೀಸಾಬ್, ಅಶೋಕ್ ಬಾಬು,ದಯಾನಂದ್,ತಾಪಂ ಸದಸ್ಯೆ ಬೀಬಿ ಫಾತೀಮಾ,ಜಹೀರ್ ಸಾಬ್,ರಾಘವೇಂದ್ರ,ಪುಟ್ಟಿಬಾಯಿ, ಹೇಮಂತ,ಬಡಗಿರಾಮಣ್ಣ ,ಜೆಡಿಎಸ್ ಯುವ ಘಟಕದ ಗೌಡಿ,ಸಮಗ್ರ ಅಭಿವೃದ್ದಿ ಫೋರಂ ಸದಸ್ಯರುಗಳು, ಗ್ರಾಮ ಪಂಚಾಯಿತಿ ಸದಸ್ಯರು,ಸಾರ್ವಜನಿಕರು ಪಾಲ್ಗೊಂಡಿದ್ದರು.
------------------------
ಪಟ್ಟಣದಲ್ಲಿ ಎರಡು ಹೆದ್ದಾರಿ ಹಾದು ಹೋಗುವುದರ ಪರಿಣಾಮ ರಸ್ತೆಯ ಒತ್ತಡ ತಪ್ಪಿಸಲು ೧೫೦ ಎ ಹೆದ್ದಾರಿಗೆ ಬೈಪಾಸ್ ರಸ್ತೆ ನಿರ್ಮಿಸುವಂತೆ ಅಧಿಕಾರಿಗಳೊಂದಿಗೆ ಸಮಾಲೋಚಿಸಲಾಗಿದ್ದು ಬೈಪಾಸ್ ರಸ್ತೆ ಬಳ್ಳೆಕಟ್ಟೆಯಿಂದ ಕೆಂಕೆರೆವರೆಗೆ ನಿರ್ಮಿಸಲು ಉದ್ದೇಶಿಸಲಾಗಿದೆ .ಅಲ್ಲದೆ ಬೈಪಾಸ್ ರಸ್ತೆ ನಿರ್ಮಿಸುವಾಗ ಕೂಡ ರೈತರ ಜಮೀನು ಮನೆಗಳಿಗೆ ಹಾನಿಯಾಗದಂತೆ ಸರ್ಕಾರಿ ಜಾಗದಲ್ಲೆ ನಿರ್ಮಿಸುವಂತೆ ಕ್ರಮಕೈಗೊಳ್ಳಲಾಗುವುದು.ಹಾಗಾಗಿ ರೈತಾಪಿ ಜನರು ಕೂಡ ಅನಗತ್ಯ ಭೀತಿ ಹೊಂದುವುದು ಬೇಡ :ಶಾಸಕ ಸಿ.ಬಿ.ಸುರೇಶ್ ಬಾಬು
---------------------------

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.