ವಿಷಯಕ್ಕೆ ಹೋಗಿ

ಈ ಪಂಚಾಯ್ತಿ ಮಳಿಗೆಗಳಲ್ಲಿ ೧೮ ವರ್ಷದಿಂದ ಬಾಡಿಗೆ ವಸೂಲಿಯಾಗಿಲ್ಲ.

ಬಾಡಿಗೆಯು ಎಷ್ಟೆಂದು ನಿಗದಿಯೂ ಮಾಡಿಲ್ಲ
----------------------
ವರದಿ : ಡಿ.ಆರ್.ನರೇಂದ್ರ ಬಾಬು

ಹುಳಿಯಾರು ಪಂಚಾಯ್ತಿ ಹಣ ಬಳಸಿ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿದ್ದ ಮಳಿಗೆಯ ಬಾಡಿಗೆ ವಸೂಲಿ ಮಾಡಲು ಪಂಚಾಯ್ತಿ ಅಧಿಕಾರಿಗಳು ಅಸಡ್ಡೆ ಮಾಡಿದ ಪರಿಣಾಮ ಒಂದಲ್ಲ ಎರಡಲ್ಲ ಬರೋಬ್ಬರಿ ಹದಿನೆಂಟು ವರ್ಷಗಳಿಂದ ಗ್ರಾಪಂ ಮಳಿಗೆಗಳ ಬಾಡಿಗೆ ವಸೂಲಿಯಾಗದೆ ಲಕ್ಷಾಂತರ ರೂಪಾಯಿ ಬಾಕಿ ಬೆಳದಿದೆ.ಆ ಬಾಕಿಯನ್ನಾದರೂ ವಸೂಲಿ ಮಾಡೋಣವೆಂದರೆ ಯಾವ ಸಾಲಿನಿಂದ ಬಾಕಿ ನಿಂತಿದೆ,ಇವರುಗಳು ಇಟ್ಟಿರುವ ಠೇವಣಿಯಾದರೂ ಎಷ್ಟು ಎಂಬುದರ ಬಗ್ಗೆ ಸರಿಯಾದ ದಾಖಲೆಗಳೆ ಇಲ್ಲದಾಗಿದೆ.
ಹುಳಿಯಾರು ಬಸ್ ನಿಲ್ದಾಣದಲ್ಲಿನ ೬ ಮಳಿಗೆಗಳ ಲಕ್ಷಾಂತರ ರೂಪಾಯಿ ಬಾಕಿ ವಸೂಲಾತಿಗಾಗಿ ಮಳಿಗೆಗೆ ಬೀಗ ಜಡಿದರು.

ಲಭ್ಯವಿಲ್ಲ:ಇದಕ್ಕೆ ನಿಗದಿಪಡಿಸಲಾದ ಬಾಡಿಗೆ ಎಷ್ಟು,ಇದರ ಹಾಲಿ ಮಾಲೀಕರ್ಯಾರು,ಈ ಸಾಲಿನವರೆಗೂ ಇದರ ಬಾಡಿಗೆ ಬಾಕಿಯಿರುವುದೆಷ್ಟು ...ಉಹೂ..ಇದ್ಯಾವುದೆ ವಿವರ ಈ ಪಂಚಾಯ್ತಿಯಲ್ಲಿ ಸಿಗುವುದಿಲ್ಲ.ಹತ್ತಾರು ವರ್ಷದ ಹಿಂದಿನ ಪುಸ್ತಕವೊಂದರಲ್ಲಿ ಅರ್ಧಪುಟದಲ್ಲಿ ಹಿಂದಿನ ಕಾರ್ಯದರ್ಶಿ ಬರೆದಿರುವ ಮಳಿಗೆ ಲೆಕ್ಕದಲ್ಲಿ ಮಾತ್ರ ಬಾಡಿಗೆದಾರರ ಹೆಸರು ದಾಖಲಾಗಿರುವುದು ಬಿಟ್ಟರೆ ಇದುವರೆಗೂ ಅದರ ಪೋಸ್ಟಿಂಗ್ ಕೂಡ ಮುಂದಿನ ಪುಸ್ತಕಕ್ಕೆ ಆಗಿಲ್ಲ.ಸದ್ಯ ಲಭ್ಯವಿರುವ ಅರ್ಧಪುಟದ ಮಾಹಿತಿ ಪ್ರಕಾರ ಈ ಮಳಿಗೆಗಳ ಹದಿನೆಂಟು ವರ್ಷದಿಂದ ಬಾಕಿನಿಂತಿದೆ ಎಂದು ತಿಳಿದಬರುತ್ತದೆ

ಆ ಪ್ರಕಾರವೇ ಲೆಖ್ಕ ಹಾಕಿದರೆ ಪಂಚಾಯ್ತಿಗೆ ಇದರ ಬಾಬತ್ತಿನಿಂದ ಬರಬೇಕಿರುವ ಬಾಕಿಯೇ ಸುಮಾರು ಹತ್ತು ಲಕ್ಷವನ್ನು ಮೀರುತ್ತೆ.ಹಾಗಂತ ಇದರ ಮಾಲೀಕರುಗಳು ತೀರಾ ಬಡವರು ಅಲ್ಲ,ಕಟ್ಟಲಾರದ ಸ್ಥಿತಿಯಲ್ಲಿರುವವರು ಅಲ್ಲ.ಪಂಚಾಯ್ತಿಯಿಂದ ಮಳಿಗೆಗೆಳ ನಿರ್ಮಾಣ ಮಾಡಿದಾಗ ಸರಿಯಾಶ್ದ ಮೆಟ್ಟಿಲು ವ್ಯವಸ್ಥೆ ಹಾಗೂ ವಿದ್ಯುತ್ ಸಂಪರ್ಕ ಕಲ್ಪಿಸದಿದ್ದೆ ಸಮಸ್ಯೆಗೆ ಕಾರಣವಾಗಿದೆ. ನೀವು ವಿದ್ಯುತ್ ಸಂಪರ್ಕ ಕೊಡಿ,ಅಲ್ಲಿಯವರೆಗೂ ನಾವು ಬಾಡಿಗೆ ಪಾವತಿ ಮಾಡುವುದಿಲ್ಲ ಎಂದಿದ್ದೆ ಕಾರಣವಾಗಿ ಪಂಚಾಯ್ತಿಯವರು ಅಗತ್ಯ ಸೌಕರ್ಯ ಕಲ್ಪಿಸಲು ವಿಫಲವಾಗಿ ಇತ್ತ ತಿರುಗಿ ನೋಡದಂತಾದರು. ಕಡೇ ಪಕ್ಷ ಬಾಡೀಗೆಯನ್ನು ನಿಗದಿ ಮಾಡಲಾಗದ ಪರಿಣಾಮ ಬೆಟ್ಟದಷ್ಟು ಬಾಕಿ ಬೆಳೆದು ನಿಂತಿದೆ.

ಅವ್ಯವಸ್ಥೆ:ಮೇಲ್ಭಾಗದಲ್ಲಿರುವ ಈ ಮಳಿಗೆ ಹತ್ತಲು ನಿರ್ಮಿಸಿರುವ ಮೆಟ್ಟಿಲುಗಳು ತೀರಾ ಕಿರಿದಾಗಿದ್ದು ಇದನ್ನು ಹತ್ತುವುದೆ ತ್ರಾಸದಾಯಕ.ಅಂಗಡಿಗಳ ಮರೆಯಲ್ಲಿ ಮೆಟ್ಟಿಲಿರುವುದರಿಂದ ಎಷ್ಟೋ ಜನಕ್ಕಿದು ತುರ್ತು ಶೌಚಾಲಯದ ಸ್ಥಳವಾಗಿದೆ.ಹಾಗಂತ ಅಂಗಡಿದಾರರು ಸುಮ್ಮನಿಲ್ಲ.ಗೌಡನ್ ಗಾಗಿ ಈ ಸ್ಥಳ ಬಳಸಿಕೊಂಡಿದ್ದಲ್ಲದೆ ಇದರಲ್ಲಿ ಒಬ್ಬಿಬ್ಬರನ್ನು ಬಿಟ್ಟರೆ ಇನ್ನುಳಿದವರು ಅದೇ ಜಾಗವನ್ನು ತಾವೇ ಬೇರೊಬ್ಬರಿಗೆ ಬಾಡಿಗೆ ನೀಡಿ ಸಾವಿರಾರು ರೂಪಾಯಿ ವಸೂಲಿ ಮಾಡುತಿದ್ದಾರೆ.
ಈ ಬಗ್ಗೆ ಮೊನ್ನೆ ನಡೆದ ಸಾಮಾನ್ಯ ಸಭೆಯಲ್ಲಿ ಚರ್ಚೆಯಾಗಿ ಬಾಡಿಗೆ ಕಟ್ಟದಿದ್ದ ಮೇಲೆ ಬೀಗ ಹಾಕಿ ಠೇವಣಿ ಮುಟ್ಟುಗೋಲು ಹಾಕಲು ತೀರ್ಮಾನಿಸಿದ ಸದಸ್ಯರುಗಳು ತಾವೇ ಖುದ್ದಾಗಿ ನಿಂತು ಬೀಗ ಜಡಿದಿದ್ದಾರೆ.ಇವರುಗಳಿಗೆ ಪುನರ್ ನವೀಕರಣ ಮಾಡುವುದೆ ಬೇಡ ಎಂದು ವಸೂಲಾತಿಗಾಗಿ ಬಿಗಿ ನಿಲುವು ತೆಗೆದುಕೊಂಡಿದ್ದಾರೆ,
ಅಲ್ಪಸ್ವಲ್ಪ ಕಂದಾಯ ಬಾಕಿಉಳಿಸಿಕೊಂಡ ಬಡವರನ್ನು ಬಿಪಿಎಲ್ ಪಡಿತರ ಚೀಟಿ ನವೀಕರಣದಂತಹ ಅತ್ಯವಶ್ಯಕ ಸಮಯದಲ್ಲಿ ಸತಾಯಿಸುತ್ತಿದ್ದ ಹುಳಿಯಾರು ಪಂಚಾಯ್ತಿ ಕೊನೆಗೂ ಬಾಡಿಗೆ ವಸೂಲಾತಿಗಾಗಿ ಬೀಗ ಹಾಕಿದ ನಿರ್ಧಾರವನ್ನು ಸಾರ್ವಜನಿಕರು ಶ್ಲಾಘಿಸಿದ್ದಾರೆ.

---------------------------------------------------------
ಕೆರೆಅಂಗಳದಲ್ಲಿದ ಅಂಗಡಿಗಳನ್ನು ತೆರವುಗಿಒಳಿಸಿರುವುದರಿಂದ ವ್ಯಾಪಾರಕ್ಕೆ ಸೂಕ್ತ ಸ್ಥಳವಿಲ್ಲದೆ ಪರದಾಡುತ್ತಿರುವ ವ್ಯಾಪಾರಸ್ಥರು ಸಾಕಷ್ಟಿದ್ದಾರೆ.ಮಳಿಗೆ ಮರುಹಾರಾಜಿನ ನಿರ್ಧಾರವನ್ನು ತೆಗೆದುಕೊಂಡು ಪಂಚಾಯ್ತಿಗೆ ಆದಾಯಮೂಲ ಮಾಡಿಕೊಳ್ಳಬೇಕು:ವೆಂಕಟೇಶ್,ಗ್ರಾಪಂ ಸದಸ್ಯ
----------------------------
ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಾಲಾಗುವುದು.ಅಂಗಡಿದಾರರಿಗೆ ನೋಟೀಸ್ ನೀಡಿ ಮಳಿಗೆ ಬಾಡಿಗೆ ನೀಡದವರ ಠೇವಣಿ ಮುಟ್ಟುಗೋಲು ಹಾಕಿಕೊಂಡು ಮರು ಟೆಂಡರ್ ಕರೆದು ಮಳಿಗೆ ಹಂಚಿಕೆ ಮಾಡಲು ಕ್ರಮತೆಗೆದುಕೊಳ್ಳಲಾಗುವುದು : ಪಿಡಿಓ ಅಡವೀಶ್ ಕುಮಾರ್
------------------------------------------------------

ಈ ಹಿಂದೆ ಮೆಟ್ಟಿಲು ನಿರ್ಮಾಣಕ್ಕೆ ಹತ್ತು ಸಾವಿರ ರೂಪಾಯಿ ಹಾಗೂ ಅಭಿವೃದ್ಧಿ ಶುಲ್ಕವಾಗಿ ಎರಡು ಸಾವಿರ ರೂಪಾಯಿಗಳನ್ನು ಕೊಟ್ಟಾಗ್ಯೂ ಯಾವುದೇ ಸೌಕರ್ಯ ಕಲ್ಪಿಸಿಲ್ಲ..ಒಂದೆರಡು ಬಾರಿ ಈ ಬಗ್ಗೆ ಕೇಳಿದಾಗಲೂ ನಿಮ್ಮ ಮಳಿಗೆ ಬಾಡಿಗೆ ಎಷ್ಟೆಂದೆ ನಿಗದಿಯಾಗಿಲ್ಲ ಎಂದು ತಿಳಿಸಿದ್ದರಿಂದ ಬಾಡಿಗೆ ಬಾಕಿಯಿದೆ.ಬಾಕಿ ತಿಳಿಸಿದಲ್ಲಿ ಈ ಕ್ಷಣವೆ ಕಟ್ಟಲು ಸಿದ್ದ : ಮಳಿಗೆದಾರರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...