ವಿಷಯಕ್ಕೆ ಹೋಗಿ

ಮೊಬೈಲ್ ಕರೆ ಮಾಡಿ ಎಟಿಎಂ ನಂಬರ್ ಪಡೆದು ಹಣ ವಂಚನೆ

        ತಾನು ಎಸ್ ಬಿಐ ಬ್ಯಾಂಕ್ ಸಿಬ್ಬಂದಿ ಎಂದು ಹೇಳಿಕೊಂಡು ಮೊಬೈಲ್ ಕರೆ ಮಾಡಿ ಮಾತನಾಡಿ ಖಾತೆದಾರನ ಎಟಿಎಂ ಕಾರ್ಡ್ ನಂಬರ್ ಹಾಗೂ ಪಾಸ್ ವರ್ಡ್ ಪಡೆದು ಕ್ಷಣಾರ್ಧದಲ್ಲೆ ಆತನ ಖಾತೆಯಿಂದ ಹನ್ನೆರಡು ಸಾವಿರಐದುನೂರು ರೂಪಾಯಿ ಲಪಾಟಾಯಿಸಿರುವ ಘಟನೆ ಪಟ್ಟಣದ ಎಸ್ ಬಿಐ ನಲ್ಲಿ ಜರುಗಿದೆ.
                 ಪಟ್ಟಣದ ಕೋಳಿ ವ್ಯಾಪಾರಿ ಮುಬಾರಕ್ ಪಾಷ ಎಂಬುವರೆ ಹಣ ಕಳೆದುಕೊಂಡವರು.ಈತ ಎಸ್ ಬಿಐ ಬ್ಯಾಂಕಿನಲ್ಲಿ ಖಾತೆ ಹೊಂದಿದ್ದು ಖಾತೆಯಿಂದ ಮೊದಲು ಐದು ಸಾವಿರ ನಂತರ ಏಳು ಸಾವಿರದ್ ಐದುನೂರು ರೂಪಾಯಿಗಳು ಪಾಸ್ ವರ್ಡ್ ಹೇಳಿದ ಒಂದೇ ನಿಮಿಷದಲ್ಲಿ ಕಳೆದುಕೊಂಡಿದ್ದಾನೆ.ಈ ಹಣ ಮುಂಬಯಿಯ ಖಾತೆಯೊದಕ್ಕೆ ಜಮಾವಾಗಿರುವ ಮೆಸೇಜ್ ಬಂದಿದೆ.
ಅಪರಿಚಿತ ವ್ಯಕ್ತಿಗೆ ಎಟಿಎಂ ಕಾರ್ಡ್ ನಂಬರ್ ಕೊಟ್ಟು ವಂಚನೆಗೊಳಪಟ್ಟ ಹುಳಿಯಾರಿನ ಮುಬಾರಕ್ ಪಾಷ 

                 ಈತ ಕೋಳೀ ವ್ಯಾಪಾರಕ್ಕೆ ಕೋಳಿ ತೆಗೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲ್ಲಿ ಈತನ ಮೊಬೈಲ್ ಗೆ ಕರೆ ಮಾಡಿದ ವ್ಯಕ್ತಿ ತಾನು ಎಸ್ ಬಿಐ ಬ್ಯಾಂಕಿನ ಸಿಬ್ಬಂದಿ ಎಂದು ಹಿಂದಿ ಭಾಷೆಯಲ್ಲಿ ಮಾತನಾಡಿ ನಿನ್ನ ಎಟಿಎಂ ಕಾರ್ಡಿನಲ್ಲಿನ ತಾಂತ್ರಿ ಸಮಸ್ಯೆಯಿಂದ ಕಾರ್ಡ್ ಲಾಕ್ ಮಾಡಲಾಗುತ್ತದೆ ಎಂದು ಹೇಳಿದ್ದಾನೆ.ಲಾಕ್ ಆದರೆ ಸಮಸ್ಯೆಯಾಗುತ್ತದೆ ಇದಕ್ಕೇನು ಮಾಡಬೇಕೆಂದು ಕೇಳಿದಾಗ ಅದನ್ನು ಸರಿಮಾಡಲು ನಿಮ್ಮ ಎಟಿಎಂ ನಂಬರ್ ಹಾಗೂ ಮೆಸೇಜ್ ನಲ್ಲಿ ಬರುವ ಓಟಿಪಿ ನಂಬರ್ ತಿಳಿಸುವಂತೆ ಹೇಳಿದ್ದಾನೆ.ಆತ ಹೇಳಿದಂತೆ ಎಟಿಎಂ ನಂಬರ್ ಹಾಗೂ ಪಾಸ್ ವರ್ಡ್ ಬಗ್ಗೆ ಮಾಹಿತಿ ನೀಡುತ್ತಿದ್ದಂತೆ ಈತನ ಖಾತೆಯಿಂದ ಹಣ ಡ್ರಾ ಮಾಡಿರುವ ಮೆಸೇಜ್ ಬಂದಿದೆ.

             ಕೂಡಲೇ ಎಚ್ಚೆತ್ತ ಮುಬಾರಕ್ ಬ್ಯಾಂಕಿಗೆ ಬರುವಷ್ಟರಲ್ಲೇ ಖಾತೆಯಲ್ಲಿ ಉಳಿದಿದ್ದ ಏಳುವರೆ ಸಾವಿರ ರೂಪಾಯಿಗಳನ್ನು ಜಮಾ ಮಾಡಿಕೊಂಡಿವ ಮೆಸೆಜ್ ಬಂದಿದೆ. ಕೂಡಲೇ ಬ್ಯಾಂಕ್‌ಗೆ ತೆರಳಿ ಖಾತೆ ಪರಿಶೀಲಿಸಿದಾಗ ಹಣ ಕಳೆದುಕೊಂಡಿರುವುದು ಖಾತ್ರಿಯಾಗಿದೆ. ಈ ಬಗ್ಗೆ ಬ್ಯಾಂಕಿನ ವ್ಯವಸ್ಥಾಪಕರಲ್ಲಿ ಹಾಗೂ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.


              ಇದೇ ರೀತಿ ಕೆನರಾ ಬ್ಯಾಂಕಿನಲ್ಲೂ ಪಾಸ್ ವರ್ಡ್ ಪಡೆದು ವಂಚಿಸಿರುವ ಘಟನೆ ಜರುಗಿದ್ದು ಪಟ್ಟಣದಲ್ಲಿ ಕಳೆದೊಂದು ವಾರದಲ್ಲಿ ಏಳೆಂಟು ಮಂದಿ ಈ ರೀತಿಯಾಗಿ ಹಣ ಕಳೆದುಕೊಂಡ ಘಟನೆ ವರದಿಯಾಗಿದೆ.
-------------------------------------------------
ಎಟಿಎಂ ನಂಬರ್ ಕೇಳಿ ಕರೆ ಮಾಡುವ ಪರಿಪಾಠ ಯಾವುದೇ ಬ್ಯಾಂಕಿನಲಿಲ್ಲ. ಎಟಿಎಂ ಕಾರ್ಡ್ ನಂಬರ್ ಕೇಳಿ ತಿಳಿದುಕೊಂಡು ನಿಮ್ಮ ಖಾತೆಯಿಂದ ಹಣ ಲಪಾಟಿಯಿಸುವ ಜಾಲ ಹೆಚ್ಚುತ್ತಿದೆ.
ದಯಮಾಡಿ ಇಂತಹ ಕರೆ ಯಾರೇ ಮಾಡಿದರೂ ನಿಮ್ಮ ಎಟಿಎಂ ನಂಬರ್ ಕೊಡಬೇಡಿ.ಯಾವುದೇ ಕರೆಗಳಿಗೆ ಉತ್ತರಿಸಬೇಡಿ.:ರಾಧಕೃಷ್ಣ, ವ್ಯವಸ್ಥಾಪಕ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...