ವಿಷಯಕ್ಕೆ ಹೋಗಿ

ಮೊಬೈಲ್ ಕರೆ ಮಾಡಿ ಎಟಿಎಂ ನಂಬರ್ ಪಡೆದು ಹಣ ವಂಚನೆ

        ತಾನು ಎಸ್ ಬಿಐ ಬ್ಯಾಂಕ್ ಸಿಬ್ಬಂದಿ ಎಂದು ಹೇಳಿಕೊಂಡು ಮೊಬೈಲ್ ಕರೆ ಮಾಡಿ ಮಾತನಾಡಿ ಖಾತೆದಾರನ ಎಟಿಎಂ ಕಾರ್ಡ್ ನಂಬರ್ ಹಾಗೂ ಪಾಸ್ ವರ್ಡ್ ಪಡೆದು ಕ್ಷಣಾರ್ಧದಲ್ಲೆ ಆತನ ಖಾತೆಯಿಂದ ಹನ್ನೆರಡು ಸಾವಿರಐದುನೂರು ರೂಪಾಯಿ ಲಪಾಟಾಯಿಸಿರುವ ಘಟನೆ ಪಟ್ಟಣದ ಎಸ್ ಬಿಐ ನಲ್ಲಿ ಜರುಗಿದೆ.
                 ಪಟ್ಟಣದ ಕೋಳಿ ವ್ಯಾಪಾರಿ ಮುಬಾರಕ್ ಪಾಷ ಎಂಬುವರೆ ಹಣ ಕಳೆದುಕೊಂಡವರು.ಈತ ಎಸ್ ಬಿಐ ಬ್ಯಾಂಕಿನಲ್ಲಿ ಖಾತೆ ಹೊಂದಿದ್ದು ಖಾತೆಯಿಂದ ಮೊದಲು ಐದು ಸಾವಿರ ನಂತರ ಏಳು ಸಾವಿರದ್ ಐದುನೂರು ರೂಪಾಯಿಗಳು ಪಾಸ್ ವರ್ಡ್ ಹೇಳಿದ ಒಂದೇ ನಿಮಿಷದಲ್ಲಿ ಕಳೆದುಕೊಂಡಿದ್ದಾನೆ.ಈ ಹಣ ಮುಂಬಯಿಯ ಖಾತೆಯೊದಕ್ಕೆ ಜಮಾವಾಗಿರುವ ಮೆಸೇಜ್ ಬಂದಿದೆ.
ಅಪರಿಚಿತ ವ್ಯಕ್ತಿಗೆ ಎಟಿಎಂ ಕಾರ್ಡ್ ನಂಬರ್ ಕೊಟ್ಟು ವಂಚನೆಗೊಳಪಟ್ಟ ಹುಳಿಯಾರಿನ ಮುಬಾರಕ್ ಪಾಷ 

                 ಈತ ಕೋಳೀ ವ್ಯಾಪಾರಕ್ಕೆ ಕೋಳಿ ತೆಗೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲ್ಲಿ ಈತನ ಮೊಬೈಲ್ ಗೆ ಕರೆ ಮಾಡಿದ ವ್ಯಕ್ತಿ ತಾನು ಎಸ್ ಬಿಐ ಬ್ಯಾಂಕಿನ ಸಿಬ್ಬಂದಿ ಎಂದು ಹಿಂದಿ ಭಾಷೆಯಲ್ಲಿ ಮಾತನಾಡಿ ನಿನ್ನ ಎಟಿಎಂ ಕಾರ್ಡಿನಲ್ಲಿನ ತಾಂತ್ರಿ ಸಮಸ್ಯೆಯಿಂದ ಕಾರ್ಡ್ ಲಾಕ್ ಮಾಡಲಾಗುತ್ತದೆ ಎಂದು ಹೇಳಿದ್ದಾನೆ.ಲಾಕ್ ಆದರೆ ಸಮಸ್ಯೆಯಾಗುತ್ತದೆ ಇದಕ್ಕೇನು ಮಾಡಬೇಕೆಂದು ಕೇಳಿದಾಗ ಅದನ್ನು ಸರಿಮಾಡಲು ನಿಮ್ಮ ಎಟಿಎಂ ನಂಬರ್ ಹಾಗೂ ಮೆಸೇಜ್ ನಲ್ಲಿ ಬರುವ ಓಟಿಪಿ ನಂಬರ್ ತಿಳಿಸುವಂತೆ ಹೇಳಿದ್ದಾನೆ.ಆತ ಹೇಳಿದಂತೆ ಎಟಿಎಂ ನಂಬರ್ ಹಾಗೂ ಪಾಸ್ ವರ್ಡ್ ಬಗ್ಗೆ ಮಾಹಿತಿ ನೀಡುತ್ತಿದ್ದಂತೆ ಈತನ ಖಾತೆಯಿಂದ ಹಣ ಡ್ರಾ ಮಾಡಿರುವ ಮೆಸೇಜ್ ಬಂದಿದೆ.

             ಕೂಡಲೇ ಎಚ್ಚೆತ್ತ ಮುಬಾರಕ್ ಬ್ಯಾಂಕಿಗೆ ಬರುವಷ್ಟರಲ್ಲೇ ಖಾತೆಯಲ್ಲಿ ಉಳಿದಿದ್ದ ಏಳುವರೆ ಸಾವಿರ ರೂಪಾಯಿಗಳನ್ನು ಜಮಾ ಮಾಡಿಕೊಂಡಿವ ಮೆಸೆಜ್ ಬಂದಿದೆ. ಕೂಡಲೇ ಬ್ಯಾಂಕ್‌ಗೆ ತೆರಳಿ ಖಾತೆ ಪರಿಶೀಲಿಸಿದಾಗ ಹಣ ಕಳೆದುಕೊಂಡಿರುವುದು ಖಾತ್ರಿಯಾಗಿದೆ. ಈ ಬಗ್ಗೆ ಬ್ಯಾಂಕಿನ ವ್ಯವಸ್ಥಾಪಕರಲ್ಲಿ ಹಾಗೂ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.


              ಇದೇ ರೀತಿ ಕೆನರಾ ಬ್ಯಾಂಕಿನಲ್ಲೂ ಪಾಸ್ ವರ್ಡ್ ಪಡೆದು ವಂಚಿಸಿರುವ ಘಟನೆ ಜರುಗಿದ್ದು ಪಟ್ಟಣದಲ್ಲಿ ಕಳೆದೊಂದು ವಾರದಲ್ಲಿ ಏಳೆಂಟು ಮಂದಿ ಈ ರೀತಿಯಾಗಿ ಹಣ ಕಳೆದುಕೊಂಡ ಘಟನೆ ವರದಿಯಾಗಿದೆ.
-------------------------------------------------
ಎಟಿಎಂ ನಂಬರ್ ಕೇಳಿ ಕರೆ ಮಾಡುವ ಪರಿಪಾಠ ಯಾವುದೇ ಬ್ಯಾಂಕಿನಲಿಲ್ಲ. ಎಟಿಎಂ ಕಾರ್ಡ್ ನಂಬರ್ ಕೇಳಿ ತಿಳಿದುಕೊಂಡು ನಿಮ್ಮ ಖಾತೆಯಿಂದ ಹಣ ಲಪಾಟಿಯಿಸುವ ಜಾಲ ಹೆಚ್ಚುತ್ತಿದೆ.
ದಯಮಾಡಿ ಇಂತಹ ಕರೆ ಯಾರೇ ಮಾಡಿದರೂ ನಿಮ್ಮ ಎಟಿಎಂ ನಂಬರ್ ಕೊಡಬೇಡಿ.ಯಾವುದೇ ಕರೆಗಳಿಗೆ ಉತ್ತರಿಸಬೇಡಿ.:ರಾಧಕೃಷ್ಣ, ವ್ಯವಸ್ಥಾಪಕ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.