ವಿಷಯಕ್ಕೆ ಹೋಗಿ

ಹುಳಿಯಾರಿನಲ್ಲಿ ಕರ್ನಾಟಕ ಬಂದ್‌ ಯಶಸ್ವಿ

ಮಹದಾಯಿ ಮತ್ತು ಕಳಸಾ-ಬಂಡೂರಿಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಹಾಗೂ ರೈತಸಂಘ ಶನಿವಾರದಂದು ಕರೆದಿದ್ದ ಬಂದ್ ಗೆ ಹುಳಿಯಾರಿನಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದ್ದು ಅಂಗಡಿಮುಗ್ಗಟ್ಟುಗಳು,ಹೋಟೆಲ್ ಗಳನ್ನು ಸ್ವಯಂಪ್ರೇರಿತರಾಗಿ ಬಾಗಿಲು ಹಾಕುವ ಮುಖಾಂತರ ಹೋರಾಟಕ್ಕೆ ಕೈಜೋಡಿಸಿದರು.
ನಿತ್ಯ ಲಕ್ಷಾಂತರ ರೂಪಾಯಿ ವಹಿವಾಟು ನಡೆಸುವ ಹುಳಿಯಾರು ಎಪಿಎಂಸಿಅಂಗಡಿಗಳು ಬಾಗಿಲು ಮುಚ್ಚಿರುವುದು.

ಮುಂಜಾನೆ ಸುರಿದ ಮಳೆಯು ಕೂಡ ಬಂದ್ ಗೆ ಸಹಕಾರಿಯಾಗಿದ್ದು ಹತ್ತು ಗಂಟೆಯವರೆಗೂ ಮಳೆ ಬರುತ್ತಿದ್ದರಿಂದ ಜನ ಹೊರಗೆ ಬಾರದ ಸ್ಥಿತಿ ನಿರ್ಮಾಣವಾಗಿ ಬಂದ್ ನ ಯಶಸ್ಸಿಗೆ ಕಾರಣವಾಯಿತು. 

ವರ್ತಕರ ಸಂಘ, ಆಟೋ, ಟ್ಯಾಕ್ಸಿ, ಖಾಸಗಿ ಬಸ್ ಮಾಲೀಕರು, ಕಾರ್ಮಿಕರು,ಕನ್ನಡಪರ ಸಂಘಟನೆಗಳು,ರೈತಸಂಘ ಸೇರಿದಂತೆ ಮುಂತಾದ ಸಂಘಟನೆಳು ಬಂದ್‌ಗೆ ಸಾಥ್‌ ನೀಡಿದ್ದರಿಂದ ಯಾವುದೇ ವ್ಯಾಪಾರ ವ್ಯವಹಾರ ಜರುಗದೆ ಪಟ್ಟಣ ವ್ಯವಹಾರ ಬಹುತೇಕ ಸ್ತಬ್ಧವಾಗಿತ್ತು.

ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸರ್ಕಾರಿ ಹಾಗೂ ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.ಮೆಡಿಕಲ್ ಸ್ಟೋರ್,ಆಸ್ಪತ್ರೆ,ಪೆಟ್ರೋಲ್ ಬಂಕ್ ಎಂದಿನಂತೆ ತೆರದಿತ್ತು.ಖಾಸಗಿ ಬಸ್ ಗಳು,ಲಾರಿಗಳು,ಆಟೋಗಳು,ಟೂರಿಸ್ಟ್‌ ಟ್ಯಾಕ್ಸಿಗಳು ರಸ್ತೆಗಿಳಿಯದಿದ್ದರಿಂದ ಬಹುತೇಕ ನಿರ್ಜನವಾಗಿತ್ತು. ಕೆ ಎಸ್ ಆರ್ಟಿಸಿ ಬಸ್‌ಗಳು ಕೂಡ ಆಗಮಿಸದ್ದರಿಂದ ಬಸ್‌ ಸಂಚಾರ ಸಂಪೂರ್ಣ ಸ್ಥಗಿತವಾಗಿತ್ತು. ಬಂದ್ ವಿಚಾರ ಮುಂಚಿತವಾಗಿಯೇ ತಿಳಿದಿದ್ದರಿಂದ ಪ್ರಯಾಣಿಕರು ಅಷ್ಟಾಗಿ ಕಂಡುಬರಲಿಲ್ಲ.ಸಂಚಾರಕ್ಕೆ ದ್ವಿಚಕ್ರ ವಾಹನ ಬಳಕೆಯಾಗಿತ್ತು.
ಬಸ್ ಸಂಚಾರವಿಲ್ಲದೆ ಬಿಕೋ ಎನ್ನುತ್ತಿರುವ ಹುಳಿಯಾರು ಬಸ್ ನಿಲ್ದಾಣ

 ಹೋಟೆಲ್‌ಗ‌ಳು,ಟೀ ಅಂಗಡಿಗಳು ಬಾಗಿಲು ಮುಚ್ಚಿದ್ದು ನಿತ್ಯ ಗ್ರಾಹಕರಿಗೆ ಅನಾನುಕೂಲವಾಯಿತು.
ರಾಷ್ಟ್ರೀಕೃತ ಬ್ಯಾಂಕುಗಳೂ,ಸರ್ಕಾರಿ ಕಚೇರಿ,ಅಂಚೆ ಕಛೇರಿಗಳಿಗೆ ಶುಕ್ರವಾರ ಬಕ್ರೀದ್‌ ರಜೆ, ನಾಲ್ಕನೇ ಶನಿವಾರ ಪ್ರಯುಕ್ತ ರಜೆ ಹಾಗೂ ಭಾನುವಾರದಂದು ಎಂದಿನ ರಜೆ ಇರುವುದರಿಂದ ಸಿಬ್ಬಂದಿಗಳು ಬಾರದೆ ಬಂದ್‌ಗೆ ಸಹಕಾರ ಸಿಕ್ಕಂತಾಯಿತು.

ಬಂದ್ ಹಿನ್ನೆಲೆಯಲ್ಲಿ ಬೆಳಿಗ್ಗೆಯಿಂದ ರಸ್ತೆಗಿಳಿಯದ ಬಸ್, ಆಟೋಗಳು ಸಂಚಾರ ಸಂಜೆ ನಂತರ ಪ್ರಾರಂಭವಾದರೆ ಮುಚ್ಚಲ್ಪಟ್ಟಿದ ಅಂಗಡಿಗಳಲ್ಲಿ ಸಂಜೆನಂತರ ಕೆಲವರು ತೆರೆದು ವ್ಯಾಪಾರ ಪ್ರಾರಂಭಿಸಿದರು.

ಬಂದ್‌ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್‌ ಬಂದೋಬಸ್ತ್ ಕಲ್ಪಿಸಲಾಗಿತ್ತು.


ಕನ್ನಡಪರ ಸಂಘಟನೆಗಳು,ರೈತಸಂಘಟನೆಗಳು ಸಾಕಷ್ಟಿದ್ದರೂ ಯಾವೊಂದು ಸಂಘಟನೆಯವರು ಒಂದೆಡೆ ಸೇರಿ ಮೆರವಣಿಗೆ ಮಾಡುವುದಾಗಲಿ,ಘೋಷಣೆ ಕೂಗುವುದಾಗಲಿ, ಮನವಿ ಅರ್ಪಿಸುವುದಾಗಲಿ,ಈ ಬಗ್ಗೆ ಅರಿವು ಮೂಡಿಸುವುದಾಗಲಿ ಮಾಡದೆ ಮೌನವಹಿಸಿದ್ದು ಪ್ರಜ್ಞಾವಂತರ ಟೀಕೆಗೆ ಕಾರಣವಾಯಿತು

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...