ವಿಷಯಕ್ಕೆ ಹೋಗಿ

ಇದು ಗ್ರಾಮಸಭೆಯಲ್ಲ ಗದ್ದಲದ ಸಭೆ

ಗದ್ದಲದಲ್ಲೆ ಮುಗಿದ ಹುಳಿಯಾರು ಗ್ರಾಪಂ ಗ್ರಾಮ ಸಭೆ
--------------------------
         ವಿವಿಧ ಯೋಜನೆಯ ಫಲಾನುಭವಿಗಳ ಆಯ್ಕೆ ಕುರಿತು ಕರೆಯಲಾಗಿದ್ದ ಹುಳಿಯಾರುಗ್ರಾಮಸಭೆ ಸಾರ್ವಜನಿಕರ ಗದ್ದಲಕ್ಕೆ ಬಲಿಯಾಯಿತು.
                    ಪೂರ್ವ ನಿಯೋಜನೆಯಂತೆ ಬುಧವಾರ ಬೆಳಗ್ಗೆ ಹುಳಿಯಾರು ಗ್ರಾಮಪಂಚಾಯಿತಿ ಆವರಣದಲ್ಲಿ ೨೦೧೫-೧೬ ನೇ ಸಾಲಿನ ಇಂದಿರಾ ಆವಾಸ್ ಮತ್ತು ಬಸವ ವಸತಿ ಯೋಜನೆಯ ಫಲಾನುಭವಿಗಳ ಆಯ್ಕೆಮಾಡಲು ಗ್ರಾಮಸಭೆಯನ್ನು ಕರೆಯಲಾಗಿತ್ತು. ಗ್ರಾಮಸಭೆ ಬಗ್ಗೆ ತಿಳುವಳಿಕೆ ನೀಡಲು ಕರಪತ್ರಗಳನ್ನು ಹಂಚಲಾಗಿತ್ತು.ಅಲ್ಲದೆ ಪಟ್ಟಣದ ಎಲ್ಲಾ ವಾರ್ಡುಗಳಲ್ಲಿ ವಾರ್ಡ್ ಸಭೆ ನಡೆಸಿ ವಸತಿ ಯೋಜನೆಯ ಅರ್ಹರಿಂದ ಅರ್ಜಿಯನ್ನು ಸ್ವೀಕರಿಸಲಾಗಿತ್ತು.
ಹುಳಿಯಾರಿನಲ್ಲಿ ವಸತಿಯೋಜನೆ ಫಲಾನುಭವಿಗಳ ಆಯ್ಕೆಗಾಗಿ ನಡೆದ ಗ್ರಾಮ ಸಭೆ

                ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಡವೀಶ್ ಕುಮಾರ್ ಎಲ್ಲರನ್ನು ಸ್ವಾಗತಿಸಿ ೨೦೧೫-೧೬ನೇ ಸಾಲಿನ ಇಂದಿರಾ ಅವಾಜ್ ಮತ್ತು ಬಸವ ವಸತಿ ಯೋಜನೆಯಡಿ ೫೪ ಮನೆಗಳು ಮಂಜೂರಾಗಿದ್ದು ನಿಯಮಾವಳಿಯಂತೆ ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತ ಹಾಗೂ ಇತರ ಸಮುದಾಯಗಳ ಪಲಾನುಭವಿಗಳ ಪಾರದರ್ಶಕ ಆಯ್ಕೆಗಾಗಿ ಗ್ರಾಮ ಸಭೆ ಆಯೋಜಿಸಲಾಗಿದೆ .ಪ್ರತಿ ವಾರ್ಡಿನಲ್ಲೂ ಅರ್ಜಿ ಪಡೆದು ಪರಿಶೀಲಿಸಿ ಫಲಾನುಭವಿಗಳ ಆಯ್ಕೆ ಮಾಡಲಾಗಿದೆ.ಅಲ್ಲಿ ಆಯ್ಕೆಯಾಗದವರನ್ನು ಇಲ್ಲಿ ಆಯ್ಕೆ ಮಾಡಲಾಗುವುದು ಎಂದರು.
                ಎಲ್ಲಾ ವಾರ್ಡುಗಳಲ್ಲಿ ಆಯ್ಕೆ ಮಾಡಲಾಗಿರುವ ಹಾಗೂ ಅರ್ಜಿ ಸ್ವೀಕರಿಸುವವರ ಹೆಸರುಗಳನ್ನು ಓದಲಾಯಿತು.
          ಸಭೆ ಪ್ರಾರಂಭವಾಗುವುದನ್ನೆ ಕಾಯುತ್ತಿದ್ದ ಸಾರ್ವಜನಿಕರು ಸಭೆ ಶುರುವಾಗುತ್ತಿದ್ದಂತೆಯೇ ಪಂಚಾಯ್ತಿವ್ಯಾಪ್ತಿಯಲ್ಲಿ ಎಲ್ಲಡೆ ನೀರಿನ ಸಮಸ್ಯೆ,ಸ್ವಚ್ಛತಾ ಸಮಸ್ಯೆ ತಲೆದೋರಿದ್ದು ಕಳೆದೆರಡು ವರ್ಷಗಳಿಂದ ಗ್ರಾಮಸಭೆಯನ್ನು ನಡೆಸಿಲ್ಲವೇಕೆಂದು ಅಧಿಕಾರಿಗಳು ಮತ್ತು ಸದಸ್ಯರುಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.ಇ ಸ್ವತ್ತು ಖಾತೆಗಳನ್ನು ಮಾಡಲು ಸತಾಯಿಸಲಾಗುತ್ತಿದೆ.ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಣಮಾಡತೊಡಗಿದ್ದಾರೆಂದು ಸಭೆಯಲ್ಲಿ ಆರೋಪಿಸಿದರು.
                   ವಾರ್ಡು ಸಭೆಯಲ್ಲಿ ಆಯ್ಕೆ ಮಾಡಲಾಗಿರುವ ಫಲಾನುಭವಿಗಳ ಆಯ್ಕೆಯಲ್ಲಿ ಗೊಂದಲವಿದ್ದು ಅರ್ಹರನ್ನು ಗುರುತಿಸುವಲ್ಲಿ ಸದಸ್ಯರು ಹಾಗೂ ಪಿಡಿಒ ನಿರ್ಲಕ್ಷ್ಯತೆ ತೋರಿದ್ದು ಕೆಲವರಿಗೆ ಅನ್ಯಾಯವಾಗಿದೆ ಎಂದು ದೂರಿದರು.ಕೆಲವೇ ಸದಸ್ಯರು ಸೇರಿಕೊಂಡು ತಮಗೆ ಬೇಕಾದ ಫಲಾನುಭವಿಗಳನ್ನು ಆಯ್ಕೆ ಮಾಡಿದ್ದಾರೆ.ಯೋಜನೆಯ ನಿಬಂಧನೆಗಳನ್ನು ಗಾಳಿಗೆ ತೂರಿ ಗುಡಿಸಲು ವಾಸಿಗಳಿಗೆ ಹಂಚಿಕೆ ಮಾಡಬೇಕಾಗಿದ್ದ ಮನೆಗಳನ್ನು ಎಲ್ಲಾ ಸೌಕರ್ಯವಿರುವವರಿಗೆ ನೀಡಲಾಗಿದೆ ಎಂದು ಆರೋಪಿಸಿದರು. ಈ ಯೋಜನೆಯಲ್ಲಿ ಬಂದಿರುವ ಮನೆಯ ಬಗ್ಗೆ ಆಯಾ ವಾರ್ಡುಗಳಲ್ಲಿ ಸರಿಯಾಗಿ ಪ್ರಚಾರ ನಡೆಸಿಲ್ಲ.ಆಯ್ಕೆ ಮಾಡಲಾಗಿರುವ ಫಲಾನುಭವಿಗಳ ಆಯ್ಕೆಯನ್ನು ಪುನರ್ ಪರಿಶೀಲಿಸಿ ಅರ್ಹ ಫಲಾನುಭವಿಗಳಿಗೆ ಮನೆ ನೀಡಬೇಕೆಂದು ಒತ್ತಾಯಿಸಿದರು.
ಗ್ರಾಮಸಭೆಯಲ್ಲಿ ನಡೆದ ಗದ್ದಲ ನಿಯಂತ್ರಿಸಲು ಆಗಮಿಸಿದ್ದ ಪೋಲಿಸರು.
                         ಅಧ್ಯಕ್ಷತೆ ವಹಿಸಿದ್ದ ಪಂಚಾಯಿತಿ ಅಧ್ಯಕ್ಷರಾದ ಹೆಚ್.ಎನ್.ಗೀತಾ ಮಾತನಾಡಿ ವಸತಿ ಯೋಜನೆಯ ಫಲಾನುಭವಿಗಳನ್ನು ಆಯ್ಕೆ ಪಾರದರ್ಶಕವಾಗಿದ್ದು ಸಾರ್ವಜನಿಕರು ತಮಗೆ ಸಮಸ್ಯೆಗಳು ಎದುರಾದರೆ ಕಚೇರಿಗೆ ನೇರವಾಗಿ ಭೇಟಿ ನೀಡಿ ಅಥವಾ ತಮಗೆ ದೂರನ್ನು ನೀಡುವ ಮೂಲಕ ಪರಿಹಾರ ಕಂಡುಕೊಳ್ಳಬೇಕು ಎಂದರು.
ಸಭೆಯ ನೊಡೆಲ್ ಅಧಿಕಾರಿಯಾಗಿ ಸಹಾಯಕ ಕಾರ್ಯಪಾಲಕ ಅಭಿಯಂತರ ದೇವರಾಜು ಆಗಮಿಸಿದ್ದರು.ಜಿಪಂ ಸದಸ್ಯೆ ಎನ್.ಜಿ.ಮಂಜುಳಾ,ಪಂಚಾಯಿತಿ ಉಪಾಧ್ಯಕ್ಷ ಗಣೇಶ್, ಸದಸ್ಯರಾದ ಜಬೀಉಲ್ಲಾ,ಸಿದ್ದಗಂಗಮ್ಮ,ಧನುಷ್ ರಂಗನಾಥ್,ಗೀತಾ ಅಶೋಕ್,ದಯಾನಂದ್,
ರಂಗಮ್ಮ, ರಾಘವೇಂದ್ರ, ಶ್ರಿನಿವಾಸ್,ಚಂದ್ರಣ್ಣ,ಪಟಾಕಿ ಶಿವಣ್ಣ,ಪುಟ್ಟರಾಜು,ಡಾಬಾಸುರೇಶ್,
 ವೆಂಕಟೇಶ್,ಬಿಂದು ರಮೇಶ್,ಅಹ್ಮದ್ ಖಾನ್,ಕಾಯಿ ಕುಮಾರ್ ಮತ್ತಿತರ ಸದಸ್ಯರು ಉಪಸ್ಥಿತರಿದ್ದರು.
-------------------------------------------
ಸಭೆ ಪ್ರಾರಂಭದಿಂದ ಅಂತ್ಯದವರೆಗೂ ಬರಿ ಗದ್ದಲದಿಂದಲೇ ಕೂಡಿತ್ತು..ಸರಿಯಾದ ಆಸನದ ವ್ಯವಸ್ಥೆಯಿಲ್ಲದೆ ಸಾರ್ವಜನಿಕರು ಗ್ರಾಮಸಭೆಯಲ್ಲಿ ನಿಂತೆ ಮಾತಾಡೂವಂತಾಯಿತು.ಸಾಲದಕ್ಕೆ ಮೈಕ್ ವ್ಯವಸ್ಥೆ ಸರಿಯಿಲ್ಲದೆ ಯಾರೇನೂ ಮಾತಾಡುತ್ತಿದ್ದಾರೆಂಬುದೆ ಕೇಳದಂತಾಗಿತ್ತು. ಸಭೆಯಲ್ಲಿ ಕುಳಿತಿದ್ದವರು ಅಧ್ಯಕ್ಷರ ವೇದಿಕೆ ಮುಂದೆ ಜಮಾಯಿಸಿ ಏರು ಧ್ವನಿಯಲ್ಲಿ ಮೇಜು ಕುಟ್ಟಿ ಮಾತಾಡುವುದು ನಡೆದೆಯಿತ್ತು.ಸಭೆಗೆ ಆಗಮಿಸಿದ್ದವರನ್ನು ಕೂರಿಸಿವುದರೊಳಗೆ ಪೋಲಿಸರು ಹೈರಾಣಾದರು.ಗ್ರಾಪಂ ಚುನಾವಣೆಯಲ್ಲಿ ಸೋತಿದ್ದವರಿಗೆ ಈ ಗ್ರಾಮ ಸಭೆ ಅಸ್ತ್ರ ದೊರೆತಂತಾಗಿದ್ದು ಅನಗತ್ಯ ಗೊಂದಲ,ಕದನ ಹುಟ್ಟು ಹಾಕಲು ಕಾರಣವಾಯಿತು

--------------------------------------------

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...