ವಿಷಯಕ್ಕೆ ಹೋಗಿ

ಇದು ಗ್ರಾಮಸಭೆಯಲ್ಲ ಗದ್ದಲದ ಸಭೆ

ಗದ್ದಲದಲ್ಲೆ ಮುಗಿದ ಹುಳಿಯಾರು ಗ್ರಾಪಂ ಗ್ರಾಮ ಸಭೆ
--------------------------
         ವಿವಿಧ ಯೋಜನೆಯ ಫಲಾನುಭವಿಗಳ ಆಯ್ಕೆ ಕುರಿತು ಕರೆಯಲಾಗಿದ್ದ ಹುಳಿಯಾರುಗ್ರಾಮಸಭೆ ಸಾರ್ವಜನಿಕರ ಗದ್ದಲಕ್ಕೆ ಬಲಿಯಾಯಿತು.
                    ಪೂರ್ವ ನಿಯೋಜನೆಯಂತೆ ಬುಧವಾರ ಬೆಳಗ್ಗೆ ಹುಳಿಯಾರು ಗ್ರಾಮಪಂಚಾಯಿತಿ ಆವರಣದಲ್ಲಿ ೨೦೧೫-೧೬ ನೇ ಸಾಲಿನ ಇಂದಿರಾ ಆವಾಸ್ ಮತ್ತು ಬಸವ ವಸತಿ ಯೋಜನೆಯ ಫಲಾನುಭವಿಗಳ ಆಯ್ಕೆಮಾಡಲು ಗ್ರಾಮಸಭೆಯನ್ನು ಕರೆಯಲಾಗಿತ್ತು. ಗ್ರಾಮಸಭೆ ಬಗ್ಗೆ ತಿಳುವಳಿಕೆ ನೀಡಲು ಕರಪತ್ರಗಳನ್ನು ಹಂಚಲಾಗಿತ್ತು.ಅಲ್ಲದೆ ಪಟ್ಟಣದ ಎಲ್ಲಾ ವಾರ್ಡುಗಳಲ್ಲಿ ವಾರ್ಡ್ ಸಭೆ ನಡೆಸಿ ವಸತಿ ಯೋಜನೆಯ ಅರ್ಹರಿಂದ ಅರ್ಜಿಯನ್ನು ಸ್ವೀಕರಿಸಲಾಗಿತ್ತು.
ಹುಳಿಯಾರಿನಲ್ಲಿ ವಸತಿಯೋಜನೆ ಫಲಾನುಭವಿಗಳ ಆಯ್ಕೆಗಾಗಿ ನಡೆದ ಗ್ರಾಮ ಸಭೆ

                ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಡವೀಶ್ ಕುಮಾರ್ ಎಲ್ಲರನ್ನು ಸ್ವಾಗತಿಸಿ ೨೦೧೫-೧೬ನೇ ಸಾಲಿನ ಇಂದಿರಾ ಅವಾಜ್ ಮತ್ತು ಬಸವ ವಸತಿ ಯೋಜನೆಯಡಿ ೫೪ ಮನೆಗಳು ಮಂಜೂರಾಗಿದ್ದು ನಿಯಮಾವಳಿಯಂತೆ ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತ ಹಾಗೂ ಇತರ ಸಮುದಾಯಗಳ ಪಲಾನುಭವಿಗಳ ಪಾರದರ್ಶಕ ಆಯ್ಕೆಗಾಗಿ ಗ್ರಾಮ ಸಭೆ ಆಯೋಜಿಸಲಾಗಿದೆ .ಪ್ರತಿ ವಾರ್ಡಿನಲ್ಲೂ ಅರ್ಜಿ ಪಡೆದು ಪರಿಶೀಲಿಸಿ ಫಲಾನುಭವಿಗಳ ಆಯ್ಕೆ ಮಾಡಲಾಗಿದೆ.ಅಲ್ಲಿ ಆಯ್ಕೆಯಾಗದವರನ್ನು ಇಲ್ಲಿ ಆಯ್ಕೆ ಮಾಡಲಾಗುವುದು ಎಂದರು.
                ಎಲ್ಲಾ ವಾರ್ಡುಗಳಲ್ಲಿ ಆಯ್ಕೆ ಮಾಡಲಾಗಿರುವ ಹಾಗೂ ಅರ್ಜಿ ಸ್ವೀಕರಿಸುವವರ ಹೆಸರುಗಳನ್ನು ಓದಲಾಯಿತು.
          ಸಭೆ ಪ್ರಾರಂಭವಾಗುವುದನ್ನೆ ಕಾಯುತ್ತಿದ್ದ ಸಾರ್ವಜನಿಕರು ಸಭೆ ಶುರುವಾಗುತ್ತಿದ್ದಂತೆಯೇ ಪಂಚಾಯ್ತಿವ್ಯಾಪ್ತಿಯಲ್ಲಿ ಎಲ್ಲಡೆ ನೀರಿನ ಸಮಸ್ಯೆ,ಸ್ವಚ್ಛತಾ ಸಮಸ್ಯೆ ತಲೆದೋರಿದ್ದು ಕಳೆದೆರಡು ವರ್ಷಗಳಿಂದ ಗ್ರಾಮಸಭೆಯನ್ನು ನಡೆಸಿಲ್ಲವೇಕೆಂದು ಅಧಿಕಾರಿಗಳು ಮತ್ತು ಸದಸ್ಯರುಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.ಇ ಸ್ವತ್ತು ಖಾತೆಗಳನ್ನು ಮಾಡಲು ಸತಾಯಿಸಲಾಗುತ್ತಿದೆ.ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಣಮಾಡತೊಡಗಿದ್ದಾರೆಂದು ಸಭೆಯಲ್ಲಿ ಆರೋಪಿಸಿದರು.
                   ವಾರ್ಡು ಸಭೆಯಲ್ಲಿ ಆಯ್ಕೆ ಮಾಡಲಾಗಿರುವ ಫಲಾನುಭವಿಗಳ ಆಯ್ಕೆಯಲ್ಲಿ ಗೊಂದಲವಿದ್ದು ಅರ್ಹರನ್ನು ಗುರುತಿಸುವಲ್ಲಿ ಸದಸ್ಯರು ಹಾಗೂ ಪಿಡಿಒ ನಿರ್ಲಕ್ಷ್ಯತೆ ತೋರಿದ್ದು ಕೆಲವರಿಗೆ ಅನ್ಯಾಯವಾಗಿದೆ ಎಂದು ದೂರಿದರು.ಕೆಲವೇ ಸದಸ್ಯರು ಸೇರಿಕೊಂಡು ತಮಗೆ ಬೇಕಾದ ಫಲಾನುಭವಿಗಳನ್ನು ಆಯ್ಕೆ ಮಾಡಿದ್ದಾರೆ.ಯೋಜನೆಯ ನಿಬಂಧನೆಗಳನ್ನು ಗಾಳಿಗೆ ತೂರಿ ಗುಡಿಸಲು ವಾಸಿಗಳಿಗೆ ಹಂಚಿಕೆ ಮಾಡಬೇಕಾಗಿದ್ದ ಮನೆಗಳನ್ನು ಎಲ್ಲಾ ಸೌಕರ್ಯವಿರುವವರಿಗೆ ನೀಡಲಾಗಿದೆ ಎಂದು ಆರೋಪಿಸಿದರು. ಈ ಯೋಜನೆಯಲ್ಲಿ ಬಂದಿರುವ ಮನೆಯ ಬಗ್ಗೆ ಆಯಾ ವಾರ್ಡುಗಳಲ್ಲಿ ಸರಿಯಾಗಿ ಪ್ರಚಾರ ನಡೆಸಿಲ್ಲ.ಆಯ್ಕೆ ಮಾಡಲಾಗಿರುವ ಫಲಾನುಭವಿಗಳ ಆಯ್ಕೆಯನ್ನು ಪುನರ್ ಪರಿಶೀಲಿಸಿ ಅರ್ಹ ಫಲಾನುಭವಿಗಳಿಗೆ ಮನೆ ನೀಡಬೇಕೆಂದು ಒತ್ತಾಯಿಸಿದರು.
ಗ್ರಾಮಸಭೆಯಲ್ಲಿ ನಡೆದ ಗದ್ದಲ ನಿಯಂತ್ರಿಸಲು ಆಗಮಿಸಿದ್ದ ಪೋಲಿಸರು.
                         ಅಧ್ಯಕ್ಷತೆ ವಹಿಸಿದ್ದ ಪಂಚಾಯಿತಿ ಅಧ್ಯಕ್ಷರಾದ ಹೆಚ್.ಎನ್.ಗೀತಾ ಮಾತನಾಡಿ ವಸತಿ ಯೋಜನೆಯ ಫಲಾನುಭವಿಗಳನ್ನು ಆಯ್ಕೆ ಪಾರದರ್ಶಕವಾಗಿದ್ದು ಸಾರ್ವಜನಿಕರು ತಮಗೆ ಸಮಸ್ಯೆಗಳು ಎದುರಾದರೆ ಕಚೇರಿಗೆ ನೇರವಾಗಿ ಭೇಟಿ ನೀಡಿ ಅಥವಾ ತಮಗೆ ದೂರನ್ನು ನೀಡುವ ಮೂಲಕ ಪರಿಹಾರ ಕಂಡುಕೊಳ್ಳಬೇಕು ಎಂದರು.
ಸಭೆಯ ನೊಡೆಲ್ ಅಧಿಕಾರಿಯಾಗಿ ಸಹಾಯಕ ಕಾರ್ಯಪಾಲಕ ಅಭಿಯಂತರ ದೇವರಾಜು ಆಗಮಿಸಿದ್ದರು.ಜಿಪಂ ಸದಸ್ಯೆ ಎನ್.ಜಿ.ಮಂಜುಳಾ,ಪಂಚಾಯಿತಿ ಉಪಾಧ್ಯಕ್ಷ ಗಣೇಶ್, ಸದಸ್ಯರಾದ ಜಬೀಉಲ್ಲಾ,ಸಿದ್ದಗಂಗಮ್ಮ,ಧನುಷ್ ರಂಗನಾಥ್,ಗೀತಾ ಅಶೋಕ್,ದಯಾನಂದ್,
ರಂಗಮ್ಮ, ರಾಘವೇಂದ್ರ, ಶ್ರಿನಿವಾಸ್,ಚಂದ್ರಣ್ಣ,ಪಟಾಕಿ ಶಿವಣ್ಣ,ಪುಟ್ಟರಾಜು,ಡಾಬಾಸುರೇಶ್,
 ವೆಂಕಟೇಶ್,ಬಿಂದು ರಮೇಶ್,ಅಹ್ಮದ್ ಖಾನ್,ಕಾಯಿ ಕುಮಾರ್ ಮತ್ತಿತರ ಸದಸ್ಯರು ಉಪಸ್ಥಿತರಿದ್ದರು.
-------------------------------------------
ಸಭೆ ಪ್ರಾರಂಭದಿಂದ ಅಂತ್ಯದವರೆಗೂ ಬರಿ ಗದ್ದಲದಿಂದಲೇ ಕೂಡಿತ್ತು..ಸರಿಯಾದ ಆಸನದ ವ್ಯವಸ್ಥೆಯಿಲ್ಲದೆ ಸಾರ್ವಜನಿಕರು ಗ್ರಾಮಸಭೆಯಲ್ಲಿ ನಿಂತೆ ಮಾತಾಡೂವಂತಾಯಿತು.ಸಾಲದಕ್ಕೆ ಮೈಕ್ ವ್ಯವಸ್ಥೆ ಸರಿಯಿಲ್ಲದೆ ಯಾರೇನೂ ಮಾತಾಡುತ್ತಿದ್ದಾರೆಂಬುದೆ ಕೇಳದಂತಾಗಿತ್ತು. ಸಭೆಯಲ್ಲಿ ಕುಳಿತಿದ್ದವರು ಅಧ್ಯಕ್ಷರ ವೇದಿಕೆ ಮುಂದೆ ಜಮಾಯಿಸಿ ಏರು ಧ್ವನಿಯಲ್ಲಿ ಮೇಜು ಕುಟ್ಟಿ ಮಾತಾಡುವುದು ನಡೆದೆಯಿತ್ತು.ಸಭೆಗೆ ಆಗಮಿಸಿದ್ದವರನ್ನು ಕೂರಿಸಿವುದರೊಳಗೆ ಪೋಲಿಸರು ಹೈರಾಣಾದರು.ಗ್ರಾಪಂ ಚುನಾವಣೆಯಲ್ಲಿ ಸೋತಿದ್ದವರಿಗೆ ಈ ಗ್ರಾಮ ಸಭೆ ಅಸ್ತ್ರ ದೊರೆತಂತಾಗಿದ್ದು ಅನಗತ್ಯ ಗೊಂದಲ,ಕದನ ಹುಟ್ಟು ಹಾಕಲು ಕಾರಣವಾಯಿತು

--------------------------------------------

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.