ವಿಷಯಕ್ಕೆ ಹೋಗಿ

ಹುಳಿಯಾರು ಅಭಿವೃದ್ಧಿಗೆ ಬದ್ದ :ಶಾಸಕ ಸುರೇಶ್ ಬಾಬು

ತಾಲ್ಲೂಕ್ ಮಟ್ಟಕ್ಕೆ ಸರಿಸಮಾನಾಗಿರುವ ಹುಳಿಯಾರಿನ ಅಭಿವೃದ್ಧಿಗೆ ತಾವು ಹೆಚ್ಚು ಒತ್ತು ನೀಡಿದ್ದು ಅಗತ್ಯ ಸೌಲಭ್ಯ ಒದಗಿಸಲು ತಾವು ಬದ್ದವಿರುವುದಾಗಿ ಶಾಸಕ ಸಿ.ಬಿ.ಸುರೇಶ್ ಬಾಬು ನುಡಿದರು.

ಪಟ್ಟಣದ ಶ್ರೀ ದುರ್ಗಾಪರಮೇಶ್ವರಿ ದೇವಾಲಯದ ಆವರಣದಲ್ಲಿ ಬೆಂಗಳೂರಿನ ಪೆಂಟಾಪ್ಯೂರ್ ಕಂಪನಿ ಹಾಗೂ ಗ್ರಾಪಂ ಸಂಯುಕ್ತಾಶ್ರಯಲ್ಲಿ ನಿರ್ಮಾಣಗೊಂಡ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಹುಳಿಯಾರಿನ ಶ್ರೀ ದುರ್ಗಾಪರಮೇಶ್ವರಿ ದೇವಾಲಯದ ಆವರಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಶಾಸಕ ಸಿ.ಬಿ.ಸುರೇಶ್ ಬಾಬು ಉದ್ಘಾಟಿಸಿದರು.ಜಿಪಂ ಸದಸ್ಯೆ ಮಂಜುಳಮ್ಮ,ತಾಲ್ಲೂಕ್ ಪಂಚಾಯ್ತಿ ಅಧ್ಯಕ್ಷೆ ಜಯಲಕ್ಷ್ಮಮ್ಮ,ಹುಳಿಯಾರು ಗ್ರಾಪಂ ಅಧ್ಯಕ್ಷೆ ಗೀತಾ ಪ್ರದೀಪ್,ಉಪಾಧ್ಯಕ್ಷ ಗಣೇಶ್,ವಾರ್ಡ್ ಸದಸ್ಯ ಧನುಷ್ ರಂಗನಾಥ್,ದಯಾನಂದ್ ಚಿತ್ರದಲ್ಲಿದ್ದಾರೆ.

ಹುಳಿಯಾರು ಭಾಗದಲ್ಲಿ ನೀರಿನ ಸಮಸ್ಯೆ ತೀವ್ರತರವಾಗಿದ್ದು ಇಲ್ಲಿ ದೊರೆಕುವ ನೀರಿನ ಟಿಡಿಎಸ್ ಗರಿಷ್ಟ ಮಟ್ಟಮುಟ್ಟಿದ್ದು ಫ್ಲೋರೈಡ್‌ಯುಕ್ತ ನೀರು ಕುಡಿಯಲು ಯೋಗ್ಯವಾಗಿರಲಿಲ್ಲ. ಇಲ್ಲಿನ ಜನರಿಗೆ ಶುದ್ದ ಕುಡಿಯುವ ನೀರು ಕೊಡಲು ಸಂಕಲ್ಪಮಾಡಿದ ಫಲವಾಗಿ ಇಂದು ಎರಡು ರೂಪಾಯಿಗೆ ಹತ್ತು ಲೀಟರ್ ನೀರು ಕೊಡುವ ಈ ಘಟಕಕ್ಕೆ ಚಾಲನೆ ನೀಡಲಾಗಿದೆ.ಈ ಘಟಕದ ನೀರು ಸುರಕ್ಷಿತವಾಗಿದ್ದು ಅತಿ ಕಡಿಮೆ ದರಕ್ಕೆ ನೀರು ಸಿಗುವ ಜತೆಗೆ ಶುದ್ಧ ನೀರಿನಿಂದ ಜನರ ಆರೋಗ್ಯ ಸಮಸ್ಯೆಗಳು ಕಡಿಮೆಯಾಗುತ್ತವೆ.ಈ ನೀರೀನ ಘಟಕದಿಂದ ಎಲ್ಲರೂ ಅನುಕೂಲ ಹೊಂದಬೇಕೆಂದರು.

ತಾಲ್ಲೂಕಿನಲ್ಲಿ ಒಟ್ಟು ೪೮ ನೀರಿನ ಘಟಕಗಳಿಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯಇಲಾಖೆಯಿಂದ ಮಂಜೂರಾತಿ ಪಡೆಯಲಾಗಿದ್ದು ಹುಳಿಯಾರಿನ ಜನ ಸಾಂದ್ರತೆಗೆ ಅನುಗುಣವಾಗಿ ಇಂತಹ ಮತ್ತೆರಡು ಘಟಕವನ್ನು ಎಪಿಎಂಸಿ ಭಾಗದಲ್ಲಿ ಹಾಗೂ ವಾಸವಿ ಶಾಲೆ ಬಳಿ ಸ್ಥಾಪಿಸಲು ಸೂಚಿಸಲಾಗಿದೆ ಎಂದರು.

ಈ ಘಟಕದ ನಿರ್ವಹಣೆಯನ್ನು ಮುಂದಿನ ಏಳು ವರ್ಷಗಳ ಕಾಲ ಪೆಂಟಾಪ್ಯೂರ್ ಕಂಪನಿಯೇ ನಿಭಾಯಿಸಲಿದ್ದು ಗ್ರಾಮ ಪಂಚಾಯ್ತಿಯವರೂ ಸಹ ಸದಸ್ಯರನೊಳಗೊಂದ ಸಮಿತಿ ರಚಿಸಿಕೊಂಡು ಜನರಿಗೆ ತೊಂದರೆಯಾಗದ ರೀತಿ ಇದನ್ನು ನಿಭಾಯಿಸಬೇಕೆಂದರು.

ಗ್ರಾಮೀಣ ಕುಡಿಯುವ ನೀರು ಇಲಾಖೆಯ ಶಿವಾನಂದ್ ಮಾತನಾಡಿ ನೀರಿನ ಸಮಸ್ಯೆ ನಿವಾರಿಸಲು ಕಳೆದೆರಡು ತಿಂಗಳಿನಿಂದ ಹುಳಿಯಾರಿನಲ್ಲಿ ಹನ್ನೆರಡು ಕೊಳವೆ ಬಾವಿಗಳನ್ನು ಕೊರಯಲಾಗಿದೆ.ಪ್ರತಿ ಕೊಳವೆ ಬಾವಿಯಲ್ಲೂ ನೀರಿನ ಟಿಡಿಎಸ್ ಹೆಚ್ಚಿದ್ದು ಶುದ್ದುಕುಡಿಯುವ ನೀರು ಒದಗಿಸಬೇಕೆಂಬ ಹಿನ್ನಲೆಯಲ್ಲಿ ಈ ಘಟಕಕ್ಕೆ ಚಾಲನೆ ನೀಡಲಾಗಿದೆ ಎಂದರು.

ಜಿಪಂ ಸದಸ್ಯೆ ಮಂಜುಳಮ್ಮ,ತಾಲ್ಲೂಕ್ ಪಂಚಾಯ್ತಿ ಅಧ್ಯಕ್ಷೆ ಯಳನಾಡು ಜಯಲಕ್ಷ್ಮಮ್ಮ,ಹುಳಿಯಾರು ಗ್ರಾಪಂ ಅಧ್ಯಕ್ಷೆ ಗೀತಾ ಪ್ರದೀಪ್,ವಾರ್ಡ್ ಸದಸ್ಯ ಧನುಷ್ ರಂಗನಾಥ್,ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಧ್ಯಕ್ಷ ಶ್ಪಟಾಕಿ ಶಿವಣ್ಣ,ಕಲಾವಿದ ಗೌಡಿ ಮಾತನಾಡಿದರು.

ಉಪಾಧ್ಯಕ್ಷ ಗಣೇಶ್,ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಅಡವೀಶ್ ಕುಮಾರ್, ಗ್ರಾಪಂ ಸದಸ್ಯರುಗಳಾದ ಶಂಕರ್,ದಯಾನಂದ್,ರಾಘವೇಂದ್ರ,ಸಿದ್ದಗಂಗಮ್ಮ,ಕೋಳಿ ಶ್ರೀನಿವಾಸ್,ಹೇಮಂತ್ ಕುಮಾರ್,ಗೀತಾ ಅಶೋಕ್ ಬಾಬು,ಕೆಂಪಮ್ಮ, ಪುಟ್ಟಮ್ಮ, ಶಶಿಕಲಾ ಸೇರಿದಂತೆ ಎಲ್ಲಾಸದಸ್ಯರುಗಳು ಉಪಸ್ಥಿತರಿದ್ದರು.
--------------------------------
ಹುಳಿಯಾರನ್ನು ಶೀಘ್ರ ಪಟ್ಟಣ ಪಂಚಾಯ್ತಿಯನ್ನಾಗಿ ಮಾಡಲು ತಾವು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಗ್ರಾಮೀಣಾಭಿವೃದ್ಧಿ ಸಚಿವರೊಂದಿಗೆ ಮತನಾಡಿದ್ದು ಸರ್ಕಾರ ಪಂಚಾಯ್ತಿಗಳ ಪುನರ್ ರಚನೆಗೆ ಮುಂದಾದಾಗ ಹುಳಿಯಾರು ಹೆಸರು ಮೊದಲೆಯದಾಗಿ ಪಟ್ಟಿಯಲ್ಲಿರುತ್ತದೆ.ಈ ಬಗ್ಗೆ ಸಂಶಯವೇ ಬೇಡ : ಶಾಸಕ ಸುರೇಶ್ ಬಾಬು
-------------------------------------

ಶಿಷ್ಟಾಚಾರ ಉಲ್ಲಂಘನೆ: ಇಂದು ನಡೆದ ಶುದ್ಧ ಕುಡಿಯುವ ನೀರಿನ ಘಟಕಕ್ಕೆಉದ್ಘಾಟನ ಸಮಾರಂಭವು ಸರ್ಕಾರಿ ಕಾರ್ಯಕ್ರಮವಾಗಿದ್ದು ಗ್ರಾಮೀಣ ಕುಡಿಯುವ ನೀರು ಇಲಾಖೆಯ ಎಇಇ ರುದ್ರಮುನಿಯವರು ಈ ಬಗ್ಗೆ ಆಹ್ವಾನ ಪತ್ರಿಕೆಯನ್ನು ಮುದ್ರಿಸದೆ ,ಜಿಲ್ಲಾ ಸಚಿವರಿಗೂ,ಸಂಸದರಿಗೂ ಆಹ್ವಾನ ನೀಡದೆ ಶಿಷ್ಟಾಚಾರ ಉಲ್ಲಂಘಿಸಿದ್ದಾರೆ.ಈ ಬಗ್ಗೆ ಇಲಾಖೆಗೆ ದೂರು ಸಲ್ಲಿಸುವೆ:ಕಾಂಗ್ರೆಸ್ ವಕ್ತಾರ ಪ್ರಸನ್ನ ಕುಮಾರ್ 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...