ವಿಷಯಕ್ಕೆ ಹೋಗಿ

ಹುಳಿಯಾರು ಅಭಿವೃದ್ಧಿಗೆ ಬದ್ದ :ಶಾಸಕ ಸುರೇಶ್ ಬಾಬು

ತಾಲ್ಲೂಕ್ ಮಟ್ಟಕ್ಕೆ ಸರಿಸಮಾನಾಗಿರುವ ಹುಳಿಯಾರಿನ ಅಭಿವೃದ್ಧಿಗೆ ತಾವು ಹೆಚ್ಚು ಒತ್ತು ನೀಡಿದ್ದು ಅಗತ್ಯ ಸೌಲಭ್ಯ ಒದಗಿಸಲು ತಾವು ಬದ್ದವಿರುವುದಾಗಿ ಶಾಸಕ ಸಿ.ಬಿ.ಸುರೇಶ್ ಬಾಬು ನುಡಿದರು.

ಪಟ್ಟಣದ ಶ್ರೀ ದುರ್ಗಾಪರಮೇಶ್ವರಿ ದೇವಾಲಯದ ಆವರಣದಲ್ಲಿ ಬೆಂಗಳೂರಿನ ಪೆಂಟಾಪ್ಯೂರ್ ಕಂಪನಿ ಹಾಗೂ ಗ್ರಾಪಂ ಸಂಯುಕ್ತಾಶ್ರಯಲ್ಲಿ ನಿರ್ಮಾಣಗೊಂಡ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಹುಳಿಯಾರಿನ ಶ್ರೀ ದುರ್ಗಾಪರಮೇಶ್ವರಿ ದೇವಾಲಯದ ಆವರಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಶಾಸಕ ಸಿ.ಬಿ.ಸುರೇಶ್ ಬಾಬು ಉದ್ಘಾಟಿಸಿದರು.ಜಿಪಂ ಸದಸ್ಯೆ ಮಂಜುಳಮ್ಮ,ತಾಲ್ಲೂಕ್ ಪಂಚಾಯ್ತಿ ಅಧ್ಯಕ್ಷೆ ಜಯಲಕ್ಷ್ಮಮ್ಮ,ಹುಳಿಯಾರು ಗ್ರಾಪಂ ಅಧ್ಯಕ್ಷೆ ಗೀತಾ ಪ್ರದೀಪ್,ಉಪಾಧ್ಯಕ್ಷ ಗಣೇಶ್,ವಾರ್ಡ್ ಸದಸ್ಯ ಧನುಷ್ ರಂಗನಾಥ್,ದಯಾನಂದ್ ಚಿತ್ರದಲ್ಲಿದ್ದಾರೆ.

ಹುಳಿಯಾರು ಭಾಗದಲ್ಲಿ ನೀರಿನ ಸಮಸ್ಯೆ ತೀವ್ರತರವಾಗಿದ್ದು ಇಲ್ಲಿ ದೊರೆಕುವ ನೀರಿನ ಟಿಡಿಎಸ್ ಗರಿಷ್ಟ ಮಟ್ಟಮುಟ್ಟಿದ್ದು ಫ್ಲೋರೈಡ್‌ಯುಕ್ತ ನೀರು ಕುಡಿಯಲು ಯೋಗ್ಯವಾಗಿರಲಿಲ್ಲ. ಇಲ್ಲಿನ ಜನರಿಗೆ ಶುದ್ದ ಕುಡಿಯುವ ನೀರು ಕೊಡಲು ಸಂಕಲ್ಪಮಾಡಿದ ಫಲವಾಗಿ ಇಂದು ಎರಡು ರೂಪಾಯಿಗೆ ಹತ್ತು ಲೀಟರ್ ನೀರು ಕೊಡುವ ಈ ಘಟಕಕ್ಕೆ ಚಾಲನೆ ನೀಡಲಾಗಿದೆ.ಈ ಘಟಕದ ನೀರು ಸುರಕ್ಷಿತವಾಗಿದ್ದು ಅತಿ ಕಡಿಮೆ ದರಕ್ಕೆ ನೀರು ಸಿಗುವ ಜತೆಗೆ ಶುದ್ಧ ನೀರಿನಿಂದ ಜನರ ಆರೋಗ್ಯ ಸಮಸ್ಯೆಗಳು ಕಡಿಮೆಯಾಗುತ್ತವೆ.ಈ ನೀರೀನ ಘಟಕದಿಂದ ಎಲ್ಲರೂ ಅನುಕೂಲ ಹೊಂದಬೇಕೆಂದರು.

ತಾಲ್ಲೂಕಿನಲ್ಲಿ ಒಟ್ಟು ೪೮ ನೀರಿನ ಘಟಕಗಳಿಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯಇಲಾಖೆಯಿಂದ ಮಂಜೂರಾತಿ ಪಡೆಯಲಾಗಿದ್ದು ಹುಳಿಯಾರಿನ ಜನ ಸಾಂದ್ರತೆಗೆ ಅನುಗುಣವಾಗಿ ಇಂತಹ ಮತ್ತೆರಡು ಘಟಕವನ್ನು ಎಪಿಎಂಸಿ ಭಾಗದಲ್ಲಿ ಹಾಗೂ ವಾಸವಿ ಶಾಲೆ ಬಳಿ ಸ್ಥಾಪಿಸಲು ಸೂಚಿಸಲಾಗಿದೆ ಎಂದರು.

ಈ ಘಟಕದ ನಿರ್ವಹಣೆಯನ್ನು ಮುಂದಿನ ಏಳು ವರ್ಷಗಳ ಕಾಲ ಪೆಂಟಾಪ್ಯೂರ್ ಕಂಪನಿಯೇ ನಿಭಾಯಿಸಲಿದ್ದು ಗ್ರಾಮ ಪಂಚಾಯ್ತಿಯವರೂ ಸಹ ಸದಸ್ಯರನೊಳಗೊಂದ ಸಮಿತಿ ರಚಿಸಿಕೊಂಡು ಜನರಿಗೆ ತೊಂದರೆಯಾಗದ ರೀತಿ ಇದನ್ನು ನಿಭಾಯಿಸಬೇಕೆಂದರು.

ಗ್ರಾಮೀಣ ಕುಡಿಯುವ ನೀರು ಇಲಾಖೆಯ ಶಿವಾನಂದ್ ಮಾತನಾಡಿ ನೀರಿನ ಸಮಸ್ಯೆ ನಿವಾರಿಸಲು ಕಳೆದೆರಡು ತಿಂಗಳಿನಿಂದ ಹುಳಿಯಾರಿನಲ್ಲಿ ಹನ್ನೆರಡು ಕೊಳವೆ ಬಾವಿಗಳನ್ನು ಕೊರಯಲಾಗಿದೆ.ಪ್ರತಿ ಕೊಳವೆ ಬಾವಿಯಲ್ಲೂ ನೀರಿನ ಟಿಡಿಎಸ್ ಹೆಚ್ಚಿದ್ದು ಶುದ್ದುಕುಡಿಯುವ ನೀರು ಒದಗಿಸಬೇಕೆಂಬ ಹಿನ್ನಲೆಯಲ್ಲಿ ಈ ಘಟಕಕ್ಕೆ ಚಾಲನೆ ನೀಡಲಾಗಿದೆ ಎಂದರು.

ಜಿಪಂ ಸದಸ್ಯೆ ಮಂಜುಳಮ್ಮ,ತಾಲ್ಲೂಕ್ ಪಂಚಾಯ್ತಿ ಅಧ್ಯಕ್ಷೆ ಯಳನಾಡು ಜಯಲಕ್ಷ್ಮಮ್ಮ,ಹುಳಿಯಾರು ಗ್ರಾಪಂ ಅಧ್ಯಕ್ಷೆ ಗೀತಾ ಪ್ರದೀಪ್,ವಾರ್ಡ್ ಸದಸ್ಯ ಧನುಷ್ ರಂಗನಾಥ್,ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಧ್ಯಕ್ಷ ಶ್ಪಟಾಕಿ ಶಿವಣ್ಣ,ಕಲಾವಿದ ಗೌಡಿ ಮಾತನಾಡಿದರು.

ಉಪಾಧ್ಯಕ್ಷ ಗಣೇಶ್,ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಅಡವೀಶ್ ಕುಮಾರ್, ಗ್ರಾಪಂ ಸದಸ್ಯರುಗಳಾದ ಶಂಕರ್,ದಯಾನಂದ್,ರಾಘವೇಂದ್ರ,ಸಿದ್ದಗಂಗಮ್ಮ,ಕೋಳಿ ಶ್ರೀನಿವಾಸ್,ಹೇಮಂತ್ ಕುಮಾರ್,ಗೀತಾ ಅಶೋಕ್ ಬಾಬು,ಕೆಂಪಮ್ಮ, ಪುಟ್ಟಮ್ಮ, ಶಶಿಕಲಾ ಸೇರಿದಂತೆ ಎಲ್ಲಾಸದಸ್ಯರುಗಳು ಉಪಸ್ಥಿತರಿದ್ದರು.
--------------------------------
ಹುಳಿಯಾರನ್ನು ಶೀಘ್ರ ಪಟ್ಟಣ ಪಂಚಾಯ್ತಿಯನ್ನಾಗಿ ಮಾಡಲು ತಾವು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಗ್ರಾಮೀಣಾಭಿವೃದ್ಧಿ ಸಚಿವರೊಂದಿಗೆ ಮತನಾಡಿದ್ದು ಸರ್ಕಾರ ಪಂಚಾಯ್ತಿಗಳ ಪುನರ್ ರಚನೆಗೆ ಮುಂದಾದಾಗ ಹುಳಿಯಾರು ಹೆಸರು ಮೊದಲೆಯದಾಗಿ ಪಟ್ಟಿಯಲ್ಲಿರುತ್ತದೆ.ಈ ಬಗ್ಗೆ ಸಂಶಯವೇ ಬೇಡ : ಶಾಸಕ ಸುರೇಶ್ ಬಾಬು
-------------------------------------

ಶಿಷ್ಟಾಚಾರ ಉಲ್ಲಂಘನೆ: ಇಂದು ನಡೆದ ಶುದ್ಧ ಕುಡಿಯುವ ನೀರಿನ ಘಟಕಕ್ಕೆಉದ್ಘಾಟನ ಸಮಾರಂಭವು ಸರ್ಕಾರಿ ಕಾರ್ಯಕ್ರಮವಾಗಿದ್ದು ಗ್ರಾಮೀಣ ಕುಡಿಯುವ ನೀರು ಇಲಾಖೆಯ ಎಇಇ ರುದ್ರಮುನಿಯವರು ಈ ಬಗ್ಗೆ ಆಹ್ವಾನ ಪತ್ರಿಕೆಯನ್ನು ಮುದ್ರಿಸದೆ ,ಜಿಲ್ಲಾ ಸಚಿವರಿಗೂ,ಸಂಸದರಿಗೂ ಆಹ್ವಾನ ನೀಡದೆ ಶಿಷ್ಟಾಚಾರ ಉಲ್ಲಂಘಿಸಿದ್ದಾರೆ.ಈ ಬಗ್ಗೆ ಇಲಾಖೆಗೆ ದೂರು ಸಲ್ಲಿಸುವೆ:ಕಾಂಗ್ರೆಸ್ ವಕ್ತಾರ ಪ್ರಸನ್ನ ಕುಮಾರ್ 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...