16ವರ್ಷಗಳ ನಂತರ ನಡೆಯುತ್ತಿರುವ ಅಪರೂಪದ ಕಾರ್ಯಕ್ರಮ ------------------------------- ಹುಳಿಯಾರು:ಹೋಬಳಿಯ ತಮ್ಮಡಿಹಳ್ಳಿಯಲ್ಲಿ ನವಂಬರ್ 1ರ ಭಾನುವಾರ ಬೆಳಿಗ್ಗೆ 10ಗಂಟೆಗೆ ಸಿದ್ದರಾಮೇಶ್ವರ ಸ್ವಾಮಿಯವರ ತೆಪ್ಪೋತ್ಸವ ಹಮ್ಮಿಕೊಳ್ಳಲಾಗಿದೆ. ಇತ್ತೀಚೆಗೆ ಸುರಿದ ಮಳೆಯಿಂದಾಗಿ 16ವರ್ಷಗಳ ನಂತರ ಕೆರೆ ತುಂಬಿದ್ದು ಈ ನಿಮಿತ್ತ ಶ್ರೀಸಿದ್ದರಾಮೇಶ್ವರ ಸ್ವಾಮಿಯವರನ್ನು ಪುಷ್ಪಾಲಂಕೃತ ಮಂಟಪದಲ್ಲಿ ಕೂರಿಸಿ ಊರಮುಂದಿರುವ ಕೆರೆಯಲ್ಲಿ ತೆಪ್ಪೋತ್ಸವ ನಡೆಸಲಾಗುವುದು. ಈ ಅಪರೂಪದ ಕಾರ್ಯಕ್ರಮಕ್ಕೆ ಯಳನಾಡು-ಅರಸಿಕೆರೆ ಮಹಾಸಂಸ್ಥಾನ ಮಠದ ಶ್ರೀ ಜ್ಞಾನಪ್ರಭು ಸಿದ್ದರಾಮ ದೇಶಿಕೇಂದ್ರ ಮಹಾಸ್ವಾಮಿಗಳು,ತಿಪಟೂರು ತಾಲ್ಲೂಕ್ ಕೆರೆಗೋಡಿ ರಂಗಾಪುರ ಸುಕ್ಷೇತ್ರದ ಗುರುಪರದೇಶಿಕೇಂದ್ರಮಹಾಸ್ವಾಮಿಗಳು,ವಿರಕ್ತಮಠ ಕುಪ್ಪೂರು ತಮ್ಮಡಿಹಳ್ಳಿಯ ಶ್ರೀ ಅಭಿನವ ಮಲ್ಲಿಕಾರ್ಜುನ ದೇಶಿಕೇಂದ್ರ ಮಹಾಸ್ವಾಮಿಗಳು ಆಗಮಿಸಿ ದಿವ್ಯಸಾನಿಧ್ಯ ವಹಿಸಲಿದ್ದಾರೆ. ಈ ಅಪರೂಪದ ದೃಶ್ಯವನ್ನು ಕಣ್ ತುಂಬಿಕೊಳ್ಳಲು ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಕೋರಲಾಗಿದೆ.
📰 ಹುಳಿಯಾರು ಸೇರಿದಂತೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸ್ಥಳಿಯ ಸುದ್ದಿ ಸಮಾಚಾರದ ಬ್ಲಾಗ್........ ✍️ನರೇಂದ್ರಬಾಬು ಹುಳಿಯಾರು-📞9448760070