ವಿಷಯಕ್ಕೆ ಹೋಗಿ

ಹುಳಿಯಾರು ಹೋಬಳಿ ಅಂಬಾಪುರ ಗ್ರಾಮದ 25 ಎಕರೆ ಅರಣ್ಯಭೂಮಿ ಕಬಳಿಕೆ!

25 ಎಕರೆ ಅರಣ್ಯಭೂಮಿ ಕಬಳಿಕೆ!
--------------------------
ವಿಜಯವಾಣಿಯಲ್ಲಿ ವಿಶೇಷ ವರದಿ :ಜಗನ್ನಾಥ್ ಕಾಳೇನಹಳ್ಳಿ
---------------------------------------------
ತುಮಕೂರು: 225 ಎಕರೆ ಸರ್ಕಾರಿ ಭೂಮಿಯನ್ನು ಕಬಳಿಸುವ ಭೂಗಳ್ಳರ ಸಂಚು ಇದೀಗ ಬಯಲಾಗಿದೆ. ತಹಸೀಲ್ದಾರ್ ಸೇರಿ ಇತರ 8 ಅಧಿಕಾರಿಗಳು ಅಕ್ರಮದಲ್ಲಿ ಶಾಮೀಲಾಗಿರುವ ಸಂಬಂಧ ವಿಜಯವಾಣಿಗೆ ದಾಖಲೆಗಳು ಲಭ್ಯವಾಗಿವೆ. ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಹೋಬಳಿ ಅಂಬಾಪುರ ಗ್ರಾಮದ ಸರ್ವೆ ನಂ.46ರ 421.35 ಎಕರೆ ಸರ್ಕಾರಿ ಭೂಮಿಯಲ್ಲಿ ಮೀಸಲು ಅರಣ್ಯಕ್ಕೆ ಹೊಂದಿಕೊಂಡಿರುವ 225 ಎಕರೆ ಭೂಮಿಯನ್ನು ಕಬಳಿಸುವ ಯತ್ನ ನಡೆದಿದೆ. 

ಬಡವರು, ದಲಿತರಿಗೆ ಮಂಜೂರಾದ ಭೂಮಿಯನ್ನು ಕೆ.ಬಿ.ಕ್ರಾಸ್ನ ಎಸ್.ರುದ್ರೇಶ್ ಎಂಬುವರು ಜಿಪಿಎ ಮಾಡಿಸಿಕೊಂಡು ತನ್ನ ಹೆಸರಿಗೆ ಖಾತೆ ಮಾಡಿಸಿಕೊಳ್ಳಲು ಮುಂದಾಗಿದ್ದು, ಹಗರಣದಲ್ಲಿ ಭಾಗಿಯಾಗಿರುವ ಚಿಕ್ಕನಾಯಕನಹಳ್ಳಿ ತಹಸೀಲ್ದಾರ್ (2014ರ ಅವಧಿಯಲ್ಲಿ)ಆಗಿದ್ದ ಕಾಮಾಕ್ಷಮ್ಮ ಸೇರಿ 8 ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ತಿಪಟೂರು ಉಪವಿಭಾಗಾಧಿಕಾರಿ ಪ್ರಜ್ಞಾ ಅಮ್ಮೆಂಬಳ್ ಜಿಲ್ಲಾಧಿಕಾರಿಗೆ ಶಿಫಾರಸು ಮಾಡಿದ್ದಾರೆ.

ಯಾರ್ಯಾರ ವಿರುದ್ಧ ಕ್ರಮಕ್ಕೆ ಶಿಫಾರಸು?
---------------------------------
ಕಾಮಾಕ್ಷಮ್ಮ-ತಹಸೀಲ್ದಾರ್(ಚಿಕ್ಕನಾಯಕನಹಳ್ಳಿ), ಇ.ಪ್ರಕಾಶ್-ಭೂದಾಖಲೆಗಳ ಉಪನಿರ್ದೇಶಕ (ಡಿಸಿ ಕಚೇರಿ), ಮಂಜುನಾಥ ತಾನವೆ-ಭೂ ದಾಖಲೆಗಳ ಸಹಾಯಕ ನಿರ್ದೇಶಕ(ತಿಪಟೂರು ಎಸಿ ಕಚೇರಿ), ಬಸವರಾಜು-ಉಪತಹಸೀಲ್ದಾರ್(ನಾಡಕಚೇರಿ, ಹುಳಿಯಾರು), ಮಹೇಶ್-ಪರ್ಯಾವೇಕ್ಷಕ(ಚಿಕ್ಕನಾಯಕನಹಳ್ಳಿ ತಾಲೂಕು ಕಚೇರಿ), ಸಿ.ಆರ್.ಬಸವರಾಜು-ತಾಲೂಕು ಮೋಜಿಣಿದಾರ (ಚಿಕ್ಕನಾಯಕನಹಳ್ಳಿ), ಹನುಮಂತನಾಯ್ಕ-ಕಂದಾಯ ತನಿಖಾಧಿಕಾರಿ(ಹುಳಿಯಾರು), ಮಂಜುನಾಥ್-ಗ್ರಾಮಲೆಕ್ಕಿಗ (ಬೆಳ್ಳಾರ ವೃತ್ತ, ಹುಳಿಯಾರು).

2006ರಿಂದಲೇ ಜಿಪಿಎ!
-------------------
ಮುತ್ತಗದಹಳ್ಳಿ ಮೀಸಲು ಅರಣ್ಯದಲ್ಲಿನ ಸರ್ಕಾರಿ ಭೂಮಿ ಪಡೆದಿದ್ದ ಬಡವರು, ದಲಿತರನ್ನು ಪತ್ತೆ ಹಚ್ಚಿ ಎಕರೆಗೆ 50 ಸಾವಿರ ರೂ.ನಂತೆ ನೀಡಿ, ಕೆ.ಬಿ.ಕ್ರಾಸ್ನ ಎಸ್.ರುದ್ರೇಶ್ ತನ್ನ ಹೆಸರಿಗೆ ಜಿಪಿಎ ಮಾಡಿಸಿಕೊಂಡಿದ್ದಾರೆ. 2006ರಿಂದಲೇ ಈ ಕೆಲಸ ಆರಂಭಿಸಿದ್ದ ರುದ್ರೇಶ್ಗೆ ಸರ್ಕಾರಿ ಅಧಿಕಾರಿಗಳೇ ಭೂ ದಾಖಲೆಗಳನ್ನು ಒದಗಿಸಿಕೊಟ್ಟಿದ್ದಾರೆ. ಪತ್ನಿ ಸುಜಾತಾ, ಪುತ್ರಿ ಆರ್.ಯಶಸ್ವಿನಿ ಹೆಸರಲ್ಲೂ ಕೆಲವು ಜಮೀನಿನ ಜಿಪಿಎ ಇದೆ. ಈಗ ಎಕರೆಗೆ 5 ಲಕ್ಷ ರೂ.ನಂತೆ ಮಾರಾಟಕ್ಕೆ ರುದ್ರೇಶ್ ಮುಂದಾಗಿದ್ದಾರೆ ಎನ್ನಲಾಗಿದೆ.

ಏನಿದು ಪ್ರಕರಣ?
-------------------
ಅಂಬಾಪುರ ಗ್ರಾಮದ ಸರ್ವೆ ನಂ.46ರ 300 ಎಕರೆ ಪ್ರದೇಶವನ್ನು 1926ರಲ್ಲಿ ಮೈಸೂರು ಮಹಾರಾಜರ ಅಧಿಸೂಚನೆಯಂತೆ ಮುತ್ತಗದಹಳ್ಳಿ ಮೀಸಲು ಅರಣ್ಯ ಎಂದು ಗುರುತಿಸಲಾಗಿತ್ತು (ಇದರಲ್ಲಿ 91 ಎಕರೆಯನ್ನು 1974ರಲ್ಲಿ ತೋಟಗಾರಿಕೆ ಇಲಾಖೆಗೆ ವರ್ಗಾಯಿಸಲಾಗಿತ್ತು). ಈ ಪೈಕಿ 121.35 ಎಕರೆ ಗೋಮಾಳ ಜಮೀನು ಮಾತ್ರ ಕಂದಾಯ ಇಲಾಖೆ ವ್ಯಾಪ್ತಿಯಲ್ಲಿತ್ತು. 1977ರಲ್ಲಿ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 225 ಎಕರೆ ಭೂಮಿಯನ್ನು ಬಡವರು, ದಲಿತರು, ಭೂರಹಿತರು ಹೀಗೆ 78 ಮಂದಿಗೆ ಮಂಜೂರು ಮಾಡಲಾಗಿತ್ತು. ಏಕವ್ಯಕ್ತಿ ಕೋರಿಕೆ ಅಡಿ 2014ರಲ್ಲಿ ಸರ್ವೆ ನಡೆಸಿ, ಖಾತೆ ಮಾಡಿಸಿಕೊಡಲು (ದುರಸ್ತಿಪಡಿಸಲು) ಆದೇಶ ಕೋರಿ ಭೂದಾಖಲೆಗಳ ಉಪನಿರ್ದೇಶಕರ ಕಚೇರಿಗೆ ಅಂದಿನ ತಹಸೀಲ್ದಾರ್ ಕಾಮಾಕ್ಷಮ್ಮ ಕಡತ ಸಲ್ಲಿಸಿದ್ದರು. ಬಳಿಕ 58 ಮಂದಿ ಹಕ್ಕುದಾರರಿಗೆ ಮಾತ್ರ ದಾಖಲೆ ಮಾಡಿಕೊಡಲು ಭೂದಾಖಲೆಗಳ ಉಪನಿರ್ದೇಶಕರ ಕಚೇರಿಯಿಂದ ಆದೇಶ ನೀಡಲಾಗಿತ್ತು. ಜಮೀನು ದಾಖಲೆಗೆ ಅನುಮತಿ ಕೋರಿ ಎಸಿ ಕಚೇರಿಗೆ ಕಡತ ಬಂದಾಗ ಅದರಲ್ಲಿ ಹಲವು ಲೋಪಗಳನ್ನು ಉಪವಿಭಾಗಾಧಿಕಾರಿ ಗಮನಿಸಿದ್ದಾರೆ. ಮೀಸಲು ಅರಣ್ಯಕ್ಕೆ ಸೇರಿದ ಭೂಮಿ ಕಾನೂನುಬಾಹಿರವಾಗಿ ಮಂಜೂರಾಗಿತ್ತು ಎಂಬ ಅಂಶ ಮುಚ್ಚಿಡಲಾಗಿತ್ತು. ಮಾತ್ರವಲ್ಲದೆ, ಅರಣ್ಯ ಇಲಾಖೆಗೆ ಸೇರಿದ ಜಾಗ ಎಷ್ಟಿದೆ ಎಂಬುದನ್ನು ಪರಿಶೀಲಿಸದೆ ದಾಖಲಾತಿ ತಯಾರಿಸಲು ಅಂದಿನ ತಹಸೀಲ್ದಾರ್ ಒಪ್ಪಿಗೆ ನೀಡಿದ್ದರು. ಇದಲ್ಲದೆ ಜಮೀನು ಸರ್ವೆ ಕಾರ್ಯಕ್ಕೆ ನೀಡಿದ ನೋಟಿಸ್ನಲ್ಲಿ ಬಹುತೇಕ ಹಕ್ಕುದಾರರ ಪರ ಕೆ.ಬಿ.ಕ್ರಾಸ್ನ ಎಸ್.ರುದ್ರೇಶ್ ಎಂಬುವರ ಹೆಸರು ನಮೂದಾಗಿದ್ದನ್ನು ಉಪವಿಭಾಗಾಧಿಕಾರಿ ಗಮನಿಸಿದ್ದಾರೆ. ಭೂಮಾಫಿಯಾದೊಂದಿಗೆ ಅಧಿಕಾರಿಗಳು ಕೈಜೋಡಿಸಿ ಸರ್ಕಾರಿ ಭೂಮಿ ಕಬಳಿಸಲು ಮುಂದಾಗಿದ್ದು, ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಉಪವಿಭಾಗಾಧಿಕಾರಿ ಪ್ರಜ್ಞಾ ಅಮ್ಮೆಂಬಳ್ ಡಿಸಿಗೆ ಪತ್ರ ಬರೆದಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.