ವಿಷಯಕ್ಕೆ ಹೋಗಿ

ಬೆಂಗಳೂರು ಬಸ್ ಗಳು ರಶೋ.......ರಶ್

                                           ಪರದಾಡಿದ ಪ್ರಯಾಣಿಕರು
                                           ---------------------------
ದಸರಾ ಹಬ್ಬಕ್ಕೆ ಸಾಲಾಗಿ ರಜೆ ಸಿಕ್ಕ ಹಿನ್ನಲೆಯಲ್ಲಿ ತಂತಮ್ಮ ಗ್ರಾಮಗಳಿಗೆ ಆಗಮಿಸಿದ್ದವರು ಇಂದು ವಾಪಸ್ ತೆರಳಲು ಬಸ್ ಗಳು ಸಿಗದೆ ಪರಿಪಾಟಲು ಪಡುವಂತಾಯಿತು.ದಸರಾ,ಆಯುಧಪೂಜೆ ಸಾಲು ರಜೆಗಳು ಮುಗಿದ ಹಿನ್ನಲೆಯಲ್ಲಿ ಸೋಮವಾರ ಮುಂಜಾನೆ ಬೆಂಗಳೂರಿಗೆ ತೆರಳುವವರು ಅಪಾರ ಸಂಖ್ಯೆಯಲ್ಲಿ ಬಸ್ ನಿಲ್ದಾಣಕ್ಕೆ ಆಗಮಿಸಿದ್ದರಿಂದ ದಟ್ಟಣೆ ಹೆಚ್ಚಾಗಿತ್ತು.

ಹುಳಿಯಾರು ಬಸ್ ನಿಲ್ದಾಣದಲ್ಲಿ ಬಸ್ ಹತ್ತಲು ಮುಗಿಬಿದ್ದಿರುವ ಪ್ರಯಾಣಿಕರು.
ಹುಳಿಯಾರು ಸೇರಿದಂತೆ ಸುತ್ತಮುತ್ತಲ ಹಳ್ಳಿಗಳ ಸಾಕಷ್ಟು ಮಂದಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿರುವವರೇ ಆಗಿದ್ದು ಹಬ್ಬಕ್ಕೆಂದು ತಂತಮ್ಮ ಊರುಗಳಿಗೆ ಬಂದಿದ್ದರು. ಹಬ್ಬ ಹಾಗೂ ಭಾನುವಾರದ ರಜೆ ಮುಗಿಸಿ ಸೋಮವಾರದಂದು ವಾಪಸ್ಸ್ ಕೆಲಸಕ್ಕೆ ಹಾಜರಾಗಲು ಬಸ್ ನಲ್ಲಿ ತೆರಳಲು ಬಂದಿದ್ದರಿಂದ ಬೆಳಿಗ್ಗೆ ನಾಲ್ಕು ಗಂಟೆಯಿಂದಲೇ ಬಸ್ ನಿಲ್ದಾಣ ಗಿಜುಗುಟ್ಟುತ್ತಿತ್ತು. ಎಲ್ಲಾ ಬಸ್ಸುಗಳು ಹೊಸದುರ್ಗದಿಂದ ಬರುತ್ತಿದ್ದವಾದ್ದರಿಂದ ಹುಳಿಯಾರಿಗೆ ಬರುವಷ್ಟರಲ್ಲೇ ಬಸ್ ಸೀಟ್ ಗಳೆಲ್ಲಾ ತುಂಬಿದ್ದು ಪ್ರಯಾಣಿಕರು ಪರದಾಡುವಂತಾಗಿತ್ತು. ಬರುತ್ತಿದ್ದ ಬಸ್ ಗೆ ಒಮ್ಮೆಲೆ ಎಲ್ಲಾ ಪ್ರಯಾಣಿಕರು ನುಗ್ಗುತ್ತಿದ್ದರಿಂದ ಬಸ್ ಹತ್ತುವುದೆ ತ್ರಾಸದಾಯಕವಾಗಿತ್ತು. ಸರ್ಕಾರಿ ಬಸ್ ಜೊತೆಗೆ ಇಂದು ಹೆಚ್ಚುವರಿಯಾಗಿ ಖಾಸಗಿ ಬಸ್ ಗಳು ಸಂಚರಿಸಿದ್ದರೂ ಕೂಡ ಎಲ್ಲಾ ಬಸ್ ಗಳು ಪುಲ್ ರಶ್ ಆಗಿದ್ದು ನಿಂತುಕೊಂಡು ಹೋಗಲು ಕೂಡ ಆಗದಷ್ಟು ಕಿಕ್ಕಿರಿದು ಪ್ರಯಾಣಿಕರು ತುಂಬಿದ್ದರು. ಇದರಿಂದ ಬೆಂಗಳುರಿಗೆ ಹೋಗುವುದು ಬಲು ಪ್ರಯಾಸವಾಗಿಬಿಟ್ಟಿತ್ತು.

ಬಸ್,ಲಾರಿ,ಕಾರು ಸೇರಿದಂತೆ ಯಾವುದೇ ವಾಹನ ಬಂದರೂ ಸರಿ ಜನ ಜೇನುನೋಣದಂತೆ ಅದರಬಳಿ ಮುತ್ತಿಕೊಂಡು, ಜಾಗವಿಲ್ಲದ್ದನ್ನು ಕಂಡು ನಿರಾಸೆಯಿಂದ ವಾಪಸ್ಸಾಗುತ್ತಿದ್ದರು. ಹೇಗಾದರೂ ಸರಿ ಬೆಂಗಳುರು ತಲುಪಬೇಕೆಂದು ಧಾವಂತದಲ್ಲಿದ್ದರು.

ಒಟ್ಟಾರೆ ಪ್ರತಿ ವರ್ಷ ಆಯುಧ ಪೂಜೆ ಇನ್ನಿತರೆ ಹಬ್ಬಹರಿದಿನದ ಸಮಯದಲ್ಲಿ ಪ್ರಯಾಣಿಕರ ಈ ಸಮಸ್ಯೆ ಬಗ್ಗೆ ಸಾರಿಗೆ ಇಲಾಖೆಯವರಿಗೆ ಅರಿವಿದ್ದರು ಸಹ ಹೆಚ್ಚುವರಿ ಬಸ್ ಗಳನ್ನು ಬಿಡದೆ ಇರುವ ಇಲಾಖೆಯ ಕಾರ್ಯವೈಖರಿ ಬಗ್ಗೆ ಪ್ರಯಾಣಿಕರು ಹರಿಹಾಯುತ್ತಿದ್ದರು .ಗ್ರಾಮಾಂತರ ಪ್ರದೇಶದಲ್ಲಿ ಎಲ್ಲರೂ ಹೆಚ್ಚಾಗಿ ಸಾರಿಗೆ ಬಸ್ಸನ್ನೆ ಅವಲಂಬಿಸಬೇಕಿದ್ದು ಇಂತಹ ದಿನಗಳಲ್ಲಿ ಹುಳಿಯಾರಿನಿಂದ ಬೆಂಗಳೂರು ಕಡೆ ಹೋಗಲು ಕೆಲವೊಂದು ವಿಶೇಷ ಬಸ್ ಗಳನ್ನು ಬಿಡಬೇಕೆಂಬುದು ಪ್ರಯಾಣಿಕರ ಆಗ್ರಹವಾಗಿದೆ..ವಿಭಾಗೀಯ ನಿಯಂತ್ರಕರು ಈ ಬಗ್ಗೆ ಗಮನ ಹರಿಸುವ ಅವಶ್ಯಕತೆಯಿದೆ.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...