ವಿಷಯಕ್ಕೆ ಹೋಗಿ

ಗಾಣಧಾಳು ಗ್ರಾ.ಪಂ. ಕಚೇರಿಗೆ ಬೀಗ

ಶುಕ್ರವಾರ ಬೀಗ ತೆರವು
 ಹುಳಿಯಾರು ಹೋಬಳಿ ಗಾಣಧಾಳು ಗ್ರಾಮ ಪಂಚಾಯ್ತಿಗೆ ನರೇಗಾ ಕಾಮಗಾರಿ ಬಿಲ್ ಪಾವತಿಸಲು                                      ಒತ್ತಾಯಿಸಿ ಬೀಗಜಡಿದು ಪ್ರತಿಭಟಿಸಿದರು.
ಉದ್ಯೋಗಖಾತ್ರಿ ಕಾಮಗಾರಿಗಳ ಹಣ ಬಿಡುಗಡೆ ವಿಳಂಬ ಖಂಡಿಸಿ ಫ‌ಲಾನುಭವಿಗಳು ಗ್ರಾ.ಪಂಗೆ 
 ಬೀಗ ಜಡಿದು ಪ್ರತಿಭಟಿಸಿದ ಘಟನೆ ಹೋಬಳಿಯ ಗಾಣಧಾಳು ಗ್ರಾಮದಲ್ಲಿ ಗುರುವಾರ ನಡೆಯಿತು.
ಗ್ರಾ.ಪಂ.ಯಲ್ಲಿ ಅಧ್ಯಕ್ಷೆ ಸರಸ್ವತಿಬಾಯಿ ಸಾಮಾನ್ಯ ಸಭೆ ಕರೆದಿದ್ದರು. 

ವಿಷಯ ತಿಳಿದ ಗ್ರಾಮಸ್ಥರು ಸಭೆಯ ನಡುವೆಯೇ ಉದ್ಯೋಗ ಖಾತ್ರಿ ಹಣ ಪಾವತಿಗೆ ಒತ್ತಾಯಿಸಿದರು. ‘ಮೊದಲು ನಮ್ಮ ಕೂಲಿ ಹಣ ಕೊಡಿ, ಆಮೇಲೆ ನಿಮ್ಮ ಸಭೆ ನಡೆಸಿ’ ಎಂದಾಗ ಗ್ರಾಪಂ ಸದಸ್ಯರುಗಳು ಅವರುಗಳ ಬೆಂಬಲಕ್ಕೆ ನಿಂತರು. ನರೇಗಾ ಯೋಜನೆಯಡಿ ಚೆಕ್ ಡ್ಯಾಂ, ಹುದಿ– ಬದು ನಿರ್ಮಾಣ, ಕೊಟ್ಟಿಗೆ ಮನೆ, ಇಂಗುಗುಂಡಿ ಸೇರಿದಂತೆ ಅನೇಕ ಕಾಮಗಾರಿ ಪೂರ್ಣಗೊಂಡು 2 ವರ್ಷ ಕಳೆದರೂ ರೈತರಿಗೆ ಹಣ ಸಂದಾಯವಾಗಿಲ್ಲ ಎಂದು ದೂರಿ ಕಾಮಗಾರಿಯ ಹಣ ಪಾವತಿಗೆ ಪಟ್ಟು ಹಿಡಿದರು. ಗ್ರಾಪಂ ಕಾರ್ಯದರ್ಶಿಯಿಂದ ಸಮಂಜಸವಾದ ಉತ್ತರ ಬಾರದಿದ್ದರಿಂದ ಸದಸ್ಯರೂ ಸಭೆಯಿಂದ ಹೊರಬಂದರಿಂದ ರೊಚಿಗೆದ್ದ ಫಲಾನುಭವಿಗಳು ಕಚೇರಿಗೆ ಬೀಗ ಜಡಿದು ಹಣ ಪಾವತಿ ಆಗುವವರೆಗೂ ಬೀಗ ತೆರೆಯುವುದಿಲ್ಲವೆಂದು ಪಟ್ಟು ಹಿಡಿದರು.

2012-13 ನೇ ಸಾಲಿನ 172 ಮಂದಿಗೆ ಶೌಚಾಲಯದ ಸಪ್ಲೆ ಬಿಲ್‌ 1199 ರೂ. ಪಾವತಿ ಆಗಿಲ್ಲ. 2012-13 ನೇ ಸಾಲಿನ ಕೆಲವರಿಗೆ ಕಾಮಗಾರಿಯ ಹಣ ಬಂದಿಲ್ಲ.ಕೆಲ ಕಾಮಗಾರಿಗಳ ಎನ್ಎಂಆರ್ ಹಣ ಬಂದಿದೆಯಾದರೂ ಸರಕುಗಳ ಬಿಲ್ ಪಾವತಿಯಾಗಿಲ್ಲ. ಕೆಲ ಬೇಕಾದವರಿಗೆ ಪೂರ್ತಿ ಹಣ ಪಾವತಿಯಾಗಿದ್ದು ಹಣ ನೀಡುವಲ್ಲೂ ತಾರತಮ್ಯ ಮಾಡಲಾಗಿದೆ.ರೈತರ ಕಾಮಗಾರಿಗಳ ಹಣ ಮಂಜೂರಿಗೆ ಮಾತ್ರ ವಿಳಂಬ ಮಾಡುತ್ತಿದ್ದಾರೆ. ಅದರೆ ರಸ್ತೆ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಮಾಡಿರುವ ಗುತ್ತಿಗೆದಾರರಿಗೆ ಹಣ ನೀಡಿದ್ದಾರೆ ಎಂದು ಕೆಲವರು ಆರೋಪಿಸಿದರು.

ಈ ಬಗ್ಗೆ ಸ್ಪಷ್ಟನೆ ನೀಡಿದ ಕಾರ್ಯದರ್ಶಿ ಜ್ಞಾನಮೂರ್ತಿ ಕಾಮಗಾರಿ ಬಿಲ್‌ ಆಧಾರ್‌ ಕಾರ್ಡ್‌ ಎಂಟ್ರಿ ಇಲ್ಲದವರಿಗೆ ಪಾವತಿಯಾಗಿಲ್ಲ ಉಳಿದವರಿಗೆ ಪಾವತಿಯಾಗಿದೆ. ಉದ್ದೇಶಪೂರ್ವಕವಾಗಿ ಸಾರ್ವಜನಿಕರಿಗೆ ತೊಂದರೆ ಮಾಡಿಲ್ಲ ಎಂದರಾದರೂ ಇವರ ಉತ್ತರಕ್ಕೆ ಫ‌ಲಾನುಭವಿಗಳು ತೃಪ್ತರಾಗದೆ ಮೇಲಧಿಕಾರಿಗಳು ಬಂದು ಸ್ಪಷ್ಟ ಭರವಸೆ ನೀಡದ ವಿನಃ ಬೀಗ ತೆಗೆಯುವುದಿಲ್ಲ ಎಂದು ಪಟ್ಟು ಹಿಡಿದಿದ್ದರು.ಮುಖಂಡರಾದ ಎಂ.ಎಸ್.ಶಕ್ತಿಪ್ರಸಾದ್, ಜಿ.ಬಿ.ಪ್ರಕಾಶ್, ಜಿ.ಟಿ.ತಿಮ್ಮಯ್ಯ, ಪರಮೇಶ್, ಪುಟ್ಟರಾಜು ಇತರರು ಇದ್ದರು.
-------------
ಶುಕ್ರವಾರದಂದು ಉದ್ಯೋಗಖಾತ್ರಿ ಉಸ್ತುವಾರಿ ಅಧಿಕಾರಿ ರವೀಂದ್ರ ಗಾಣಧಾಳುವಿಗೆ ಭೇಟಿ ನೀಡಿ ಪ್ರತಿಭಟನ ನಿರತರೊಂದಿಗೆ ಸಮಾಲೋಚಿಸಿ ಎಲ್ಲರ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದರ ಮೇರೆಗೆ ಪ್ರತಿಭಟನೆ ಹಿಂಪಡೆಯಲಾಯಿತು.

-------------------

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...