ವಿಷಯಕ್ಕೆ ಹೋಗಿ

ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಂಡಿ ಮುಚ್ಚುವ ಕಾರ್ಯಕ್ಕೆ ಚಾಲನೆ

ಹುಳಿಯಾರು ಪಟ್ಟಣದ ಮುಖಾಂತರ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಎದ್ವಾತದ್ವಾ ಗುಂಡಿಗಳುಂಟಾಗಿ ಸಾವಿಗೆ ಹೆದ್ದಾರಿಯಾಗಿದ್ದ ರಸ್ತೆಯ ಗುಂಡಿ ಮುಚ್ಚಬೇಕೆಂಬ ಬೇಡಿಕೆಗೆ ಕೊನೆಗೂ ಮಣಿದ ಹೆದ್ದಾರಿ ಇಲಾಖೆ ಗುಂಡಿ ಮುಚ್ಚುವ ಕಾರ್ಯಾರಂಭ ಮಾಡಿತು. ಈ ಕಾರ್ಯಕ್ಕೆ ಸಂಸದ ಎಸ್.ಪಿ.ಮುದ್ದಹನುಮೇಗೌಡ ಚಾಲನೆ ನೀಡಿದರು.
ಹುಳಿಯಾರಿನಲ್ಲಿ ಹೆದ್ದಾರಿ ರಸ್ತೆ ಗುಂಡಿ ಮುಚ್ಚುವ ಕಾರ್ಯಕ್ಕೆ ಸಂಸದ ಎಸ್.ಪಿ.ಮುದ್ದಹನುಮೇಗೌಡ ಚಾಲನೆ ನೀಡಿದರು.ಜಬೀಉಲ್ಲಾ,ರಂಗನಾಥ್,ಗೀತಾ ಪ್ರದೀಪ್,ಗೀತಾಬಾಬುಮಂಜುಳಮ್ಮ,ಅಶೋಕ್,ಸಿದ್ದರಾಮಣ್ಣ,ಸೀಮೆ ಎಣ್ಣೆ ಕೃಷ್ಣಯ್ಯ ಇದ್ದಾರೆ.

ರಾ.ಹೆದ್ದಾರಿ ೨೩೪ಗೆ ಸಂಬಂಧಿಸಿದಂತೆ ಹುಳಿಯಾರು ಶಿರಾ ಮಾರ್ಗವಾಗಿ ಒಟ್ಟು ೪೭ ಕಿಮೀ ರಸ್ತೆಯ ಗುಂಡಿಮುಚ್ಚುವ ಕಾಮಗಾರಿಗೆ ೧.೯೭ಕೋಟಿಗೆ ಎಸ್ಟಿಮೇಷನ್ ಮಾಡಿದ್ದು ಸಧ್ಯ ೮೫ ಲಕ್ಷ ಮಂಜೂರಾಗಿದ್ದು ಹೈದರಬಾದಿನ ಜೇಎಂಸಿ ಕಂಪನಿಗೆ ಗುತ್ತಿಗೆ ನೀಡಲಾಗಿದೆ ಎಂದರು. ಕಾಮಗಾರಿ ಈಗಿನಿಂದಲೆ ಪ್ರಾರಂಭವಾಗಲಿದ್ದು ಗುಣಮಟ್ಟ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಸದಸ್ಯರುಗಳು ಗಮನ ಮಾಡಬೇಕೆಂದರು.

ಹುಳಿಯಾರು ಪಟ್ಟಣದಲ್ಲಿ ಎರಡು ರಾ.ಹೆದ್ದಾರಿಗಳು ಹಾದುಹೋಗಲಿದ್ದು ಅದಕ್ಕೆ ಸಂಬಂಧಿಸಿದ ಕಾಮಗಾರಿಗಳ ಟೆಂಡರ್ ಪ್ರಕಿಯೆ ಮುಗಿದ ನಂತರ ರಸ್ತೆ ಕಾರ್ಯ ಪ್ರಾರಂಭವಾಗಲಿದೆ ಎಂದರು.

ಹೆದ್ದಾರಿ ಅಗಲೀಕರಣದ ಕುರಿತಂತೆ ಸಾರ್ವಜನಿಕರು ಗೊಂದಲಕ್ಕೀಡಾಗಬೇಡಿರೆಂದ ಸಂಸದರು ರಾ.ಹೆದ್ದಾರಿ ೨೩೪ ಪಟ್ಟಣದ ಒಳಗೆ ಹಾದುಹೋಗಲಿದ್ದು ಮತ್ತೊಂದು ಹೆದ್ದಾರಿ ೧೫೦ಎ ಕೂಡ ಪಟ್ಟಣದ ಮುಖಾಂತರವೇ ಹಾದುಹೋಗಬೇಕಿದ್ದು ಇದಕ್ಕೆ ಬೈಪಾಸ್ ರಸ್ತೆ ನಿರ್ಮಿಸಲು ಹೆದ್ದಾರಿ ಅಧಿಕಾರಿಗಳೊಂದಿಗೆ ಸಮಾಲೋಚಿಸಿದ್ದು ರೋಡ್ ಬಗ್ಗೆ ಆತಂಕ ಅನಗತ್ಯವೆಂದರು.

ಕಾದು ಹೈರಾಣದ ಸದಸ್ಯರು : ಮುಂಜಾನೆ ಒಂಬತ್ತು ಘಂಟೆಗೆ ಕಾರ್ಯಕ್ರಮ ನಿಗದಿಯಾಗಿದ್ದು ಶಾಸಕರ ಆಗಮನದ ನಿರೀಕ್ಷೆಯಲ್ಲಿ ಹುಳಿಯಾರು ಗ್ರಾಪಂ ಸದಸ್ಯರಲ್ಲಿ ಬಹುಪಾಲು ಮಂದಿ ಕಾದುಕುಳಿತಿದ್ದರು.ಹತ್ತು ಗಂಟೆ,ಹನ್ನೊಂದು ಗಂಟೆಯಾದರೂ ಶಾಸಕರ ಆಗಮನವಾಗದೆ ಈ ಬಗ್ಗೆ ಸರಿಯಾದ ಮಾಹಿತಿಯಿಲ್ಲದೆ ಸದಸ್ಯರುಗಳು ,ಜೆಡಿಎಸ್ ಕಾರ್ಯಕರ್ತರುಗಳೂ ಹೈರಾಣಾಗಿ ಹೋದರು.
ಸಂಸದರು ಕೂಡಾ ಆಗಮಿಸುವ ಸುದ್ದಿಯಿದ್ದರಿಂದ ಕಾಂಗ್ರೆಸ್ ನವರು ಕೂಡ ಸೇರಿದ್ದರು.ಮೂರು ಗಂಟೆ ತಡವಾಗಿ ಹನ್ನೇರಡು ಗಂಟೆಗೆ ತರಾತುರಿಯಲಿ ಆಗಮಿಸಿದ ಸಂಸದರು ಪೂಜೆಯಲ್ಲಿ ಭಾಗವಹಿಸಿ ಜೆಸಿಬಿ ಮುಂದೆ ಕಾಯಿ ಹೊಡೆದು ತರಾತುರಿಯಲ್ಲಿ ನಿರ್ಗಮಿಸಿದರು.ಪತ್ರಕರ್ತರ ಒತ್ತಾಯಕ್ಕೆ ಮಣಿದು ಹೆದ್ದಾರಿ ಕಾಮಗಾರಿ ಬಗ್ಗೆ ನಾಲ್ಕು ಮಾತಾಡಿದರು.ಬೆಳಿಗ್ಗೆ ೯ ಗಂಟೆಯಿಂದ ಕಾದಿದ್ದವರಿಗೆ ಕೇವಲ ಹತ್ತೆನಿಮಿಷದಲ್ಲಿ ಕಾರ್ಯಕ್ರಮದಿಂದ ಸಂಸದರು ನಿರ್ಗಮಿಸಿದ್ದು ಟೀಕೆಗೆ ಕಾರಣವಾಯಿತು.

ರಸ್ತೆ ಅಗಲೀಕರಣ ಹಾಗೂ ಬೈಪಾಸ್ ನಿರ್ಮಾಣದ ಬಗ್ಗೆ ಸಂಸದರಿಂದ ಭರವಸೆಯ ಮಾತು ಕೇಳಲು ಬಂದಿದ್ದ ಜನತೆ ನಿರಾಸೆಯಿಂದ ನಿರ್ಗಮಿಸಿದರು.


ಈ ಸಂದರ್ಭದಲ್ಲಿ ಜಿಲ್ಲಾಪಂಚಾಯ್ತಿ ಸದಸ್ಯೆ ಮಂಜುಳಾಗವೀರಂಗಯ್ಯ,ತಾಲ್ಲೂಕ್ ಪಂಚಾಯ್ತಿ ಸದಸ್ಯೆ ಬೀಬಿ ಪಾತೀಮಾ,ಗ್ರಾಪಂ ಅಧ್ಯಕ್ಷೆ ಗೀತಾ ಪ್ರದೀಪ್,ಶೇಷಾನಾಯ್ಕ್,ಸೀಮೆ ಎಣ್ಣೆ ಕೃಷ್ಣಯ್ಯ,ಹೆದ್ದಾರಿ ಇಂಜಿನೀಯರ್ ಶಿವಕುಮಾರ್, ಎಪಿಎಂಸಿ ಅಧ್ಯಕ್ಷ ಸಿದ್ದರಾಮಣ್ಣ,ಬಗರ್ ಹುಕುಂ ಕಮಿಟಿ ಅಶೋಕ್,ಗ್ರಾಪಂ ಸದಸ್ಯರಾದ ದಯಾನಂದ್ ,ಗೀತಾಬಾಬು,ಪುಟ್ಟಿಬಾಯಿ,ಸಿದ್ದಗಂಗಮ್ಮ,ಕೆಂಪಮ್ಮ, ಪುಟ್ಟರಾಜು, ಡಾಬಾಸೂರಪ್ಪ,ಗಿರೀಶ್ ,ದನುಷ್ ರಂಗನಾಥ್,ಜಬೀಉಲ್ಲಾ,ಪಿಎಲ್ಡಿ ಬ್ಯಾಂಕ್ ಸದಸ್ಯ ಶಿವಕುಮಾರ್, ಪ್ರಸನ್ನಕುಮಾರ್,ದಬ್ಬಗುಂಟೆ ರವಿಕುಮಾರ್ ಇನ್ನಿತರರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...