ವಿಷಯಕ್ಕೆ ಹೋಗಿ

ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಂಡಿ ಮುಚ್ಚುವ ಕಾರ್ಯಕ್ಕೆ ಚಾಲನೆ

ಹುಳಿಯಾರು ಪಟ್ಟಣದ ಮುಖಾಂತರ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಎದ್ವಾತದ್ವಾ ಗುಂಡಿಗಳುಂಟಾಗಿ ಸಾವಿಗೆ ಹೆದ್ದಾರಿಯಾಗಿದ್ದ ರಸ್ತೆಯ ಗುಂಡಿ ಮುಚ್ಚಬೇಕೆಂಬ ಬೇಡಿಕೆಗೆ ಕೊನೆಗೂ ಮಣಿದ ಹೆದ್ದಾರಿ ಇಲಾಖೆ ಗುಂಡಿ ಮುಚ್ಚುವ ಕಾರ್ಯಾರಂಭ ಮಾಡಿತು. ಈ ಕಾರ್ಯಕ್ಕೆ ಸಂಸದ ಎಸ್.ಪಿ.ಮುದ್ದಹನುಮೇಗೌಡ ಚಾಲನೆ ನೀಡಿದರು.
ಹುಳಿಯಾರಿನಲ್ಲಿ ಹೆದ್ದಾರಿ ರಸ್ತೆ ಗುಂಡಿ ಮುಚ್ಚುವ ಕಾರ್ಯಕ್ಕೆ ಸಂಸದ ಎಸ್.ಪಿ.ಮುದ್ದಹನುಮೇಗೌಡ ಚಾಲನೆ ನೀಡಿದರು.ಜಬೀಉಲ್ಲಾ,ರಂಗನಾಥ್,ಗೀತಾ ಪ್ರದೀಪ್,ಗೀತಾಬಾಬುಮಂಜುಳಮ್ಮ,ಅಶೋಕ್,ಸಿದ್ದರಾಮಣ್ಣ,ಸೀಮೆ ಎಣ್ಣೆ ಕೃಷ್ಣಯ್ಯ ಇದ್ದಾರೆ.

ರಾ.ಹೆದ್ದಾರಿ ೨೩೪ಗೆ ಸಂಬಂಧಿಸಿದಂತೆ ಹುಳಿಯಾರು ಶಿರಾ ಮಾರ್ಗವಾಗಿ ಒಟ್ಟು ೪೭ ಕಿಮೀ ರಸ್ತೆಯ ಗುಂಡಿಮುಚ್ಚುವ ಕಾಮಗಾರಿಗೆ ೧.೯೭ಕೋಟಿಗೆ ಎಸ್ಟಿಮೇಷನ್ ಮಾಡಿದ್ದು ಸಧ್ಯ ೮೫ ಲಕ್ಷ ಮಂಜೂರಾಗಿದ್ದು ಹೈದರಬಾದಿನ ಜೇಎಂಸಿ ಕಂಪನಿಗೆ ಗುತ್ತಿಗೆ ನೀಡಲಾಗಿದೆ ಎಂದರು. ಕಾಮಗಾರಿ ಈಗಿನಿಂದಲೆ ಪ್ರಾರಂಭವಾಗಲಿದ್ದು ಗುಣಮಟ್ಟ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಸದಸ್ಯರುಗಳು ಗಮನ ಮಾಡಬೇಕೆಂದರು.

ಹುಳಿಯಾರು ಪಟ್ಟಣದಲ್ಲಿ ಎರಡು ರಾ.ಹೆದ್ದಾರಿಗಳು ಹಾದುಹೋಗಲಿದ್ದು ಅದಕ್ಕೆ ಸಂಬಂಧಿಸಿದ ಕಾಮಗಾರಿಗಳ ಟೆಂಡರ್ ಪ್ರಕಿಯೆ ಮುಗಿದ ನಂತರ ರಸ್ತೆ ಕಾರ್ಯ ಪ್ರಾರಂಭವಾಗಲಿದೆ ಎಂದರು.

ಹೆದ್ದಾರಿ ಅಗಲೀಕರಣದ ಕುರಿತಂತೆ ಸಾರ್ವಜನಿಕರು ಗೊಂದಲಕ್ಕೀಡಾಗಬೇಡಿರೆಂದ ಸಂಸದರು ರಾ.ಹೆದ್ದಾರಿ ೨೩೪ ಪಟ್ಟಣದ ಒಳಗೆ ಹಾದುಹೋಗಲಿದ್ದು ಮತ್ತೊಂದು ಹೆದ್ದಾರಿ ೧೫೦ಎ ಕೂಡ ಪಟ್ಟಣದ ಮುಖಾಂತರವೇ ಹಾದುಹೋಗಬೇಕಿದ್ದು ಇದಕ್ಕೆ ಬೈಪಾಸ್ ರಸ್ತೆ ನಿರ್ಮಿಸಲು ಹೆದ್ದಾರಿ ಅಧಿಕಾರಿಗಳೊಂದಿಗೆ ಸಮಾಲೋಚಿಸಿದ್ದು ರೋಡ್ ಬಗ್ಗೆ ಆತಂಕ ಅನಗತ್ಯವೆಂದರು.

ಕಾದು ಹೈರಾಣದ ಸದಸ್ಯರು : ಮುಂಜಾನೆ ಒಂಬತ್ತು ಘಂಟೆಗೆ ಕಾರ್ಯಕ್ರಮ ನಿಗದಿಯಾಗಿದ್ದು ಶಾಸಕರ ಆಗಮನದ ನಿರೀಕ್ಷೆಯಲ್ಲಿ ಹುಳಿಯಾರು ಗ್ರಾಪಂ ಸದಸ್ಯರಲ್ಲಿ ಬಹುಪಾಲು ಮಂದಿ ಕಾದುಕುಳಿತಿದ್ದರು.ಹತ್ತು ಗಂಟೆ,ಹನ್ನೊಂದು ಗಂಟೆಯಾದರೂ ಶಾಸಕರ ಆಗಮನವಾಗದೆ ಈ ಬಗ್ಗೆ ಸರಿಯಾದ ಮಾಹಿತಿಯಿಲ್ಲದೆ ಸದಸ್ಯರುಗಳು ,ಜೆಡಿಎಸ್ ಕಾರ್ಯಕರ್ತರುಗಳೂ ಹೈರಾಣಾಗಿ ಹೋದರು.
ಸಂಸದರು ಕೂಡಾ ಆಗಮಿಸುವ ಸುದ್ದಿಯಿದ್ದರಿಂದ ಕಾಂಗ್ರೆಸ್ ನವರು ಕೂಡ ಸೇರಿದ್ದರು.ಮೂರು ಗಂಟೆ ತಡವಾಗಿ ಹನ್ನೇರಡು ಗಂಟೆಗೆ ತರಾತುರಿಯಲಿ ಆಗಮಿಸಿದ ಸಂಸದರು ಪೂಜೆಯಲ್ಲಿ ಭಾಗವಹಿಸಿ ಜೆಸಿಬಿ ಮುಂದೆ ಕಾಯಿ ಹೊಡೆದು ತರಾತುರಿಯಲ್ಲಿ ನಿರ್ಗಮಿಸಿದರು.ಪತ್ರಕರ್ತರ ಒತ್ತಾಯಕ್ಕೆ ಮಣಿದು ಹೆದ್ದಾರಿ ಕಾಮಗಾರಿ ಬಗ್ಗೆ ನಾಲ್ಕು ಮಾತಾಡಿದರು.ಬೆಳಿಗ್ಗೆ ೯ ಗಂಟೆಯಿಂದ ಕಾದಿದ್ದವರಿಗೆ ಕೇವಲ ಹತ್ತೆನಿಮಿಷದಲ್ಲಿ ಕಾರ್ಯಕ್ರಮದಿಂದ ಸಂಸದರು ನಿರ್ಗಮಿಸಿದ್ದು ಟೀಕೆಗೆ ಕಾರಣವಾಯಿತು.

ರಸ್ತೆ ಅಗಲೀಕರಣ ಹಾಗೂ ಬೈಪಾಸ್ ನಿರ್ಮಾಣದ ಬಗ್ಗೆ ಸಂಸದರಿಂದ ಭರವಸೆಯ ಮಾತು ಕೇಳಲು ಬಂದಿದ್ದ ಜನತೆ ನಿರಾಸೆಯಿಂದ ನಿರ್ಗಮಿಸಿದರು.


ಈ ಸಂದರ್ಭದಲ್ಲಿ ಜಿಲ್ಲಾಪಂಚಾಯ್ತಿ ಸದಸ್ಯೆ ಮಂಜುಳಾಗವೀರಂಗಯ್ಯ,ತಾಲ್ಲೂಕ್ ಪಂಚಾಯ್ತಿ ಸದಸ್ಯೆ ಬೀಬಿ ಪಾತೀಮಾ,ಗ್ರಾಪಂ ಅಧ್ಯಕ್ಷೆ ಗೀತಾ ಪ್ರದೀಪ್,ಶೇಷಾನಾಯ್ಕ್,ಸೀಮೆ ಎಣ್ಣೆ ಕೃಷ್ಣಯ್ಯ,ಹೆದ್ದಾರಿ ಇಂಜಿನೀಯರ್ ಶಿವಕುಮಾರ್, ಎಪಿಎಂಸಿ ಅಧ್ಯಕ್ಷ ಸಿದ್ದರಾಮಣ್ಣ,ಬಗರ್ ಹುಕುಂ ಕಮಿಟಿ ಅಶೋಕ್,ಗ್ರಾಪಂ ಸದಸ್ಯರಾದ ದಯಾನಂದ್ ,ಗೀತಾಬಾಬು,ಪುಟ್ಟಿಬಾಯಿ,ಸಿದ್ದಗಂಗಮ್ಮ,ಕೆಂಪಮ್ಮ, ಪುಟ್ಟರಾಜು, ಡಾಬಾಸೂರಪ್ಪ,ಗಿರೀಶ್ ,ದನುಷ್ ರಂಗನಾಥ್,ಜಬೀಉಲ್ಲಾ,ಪಿಎಲ್ಡಿ ಬ್ಯಾಂಕ್ ಸದಸ್ಯ ಶಿವಕುಮಾರ್, ಪ್ರಸನ್ನಕುಮಾರ್,ದಬ್ಬಗುಂಟೆ ರವಿಕುಮಾರ್ ಇನ್ನಿತರರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...