ವಿಷಯಕ್ಕೆ ಹೋಗಿ

ಜನವಸತಿ ಜಾಗದಲ್ಲಿ ಮೊಬೈಲ್ ಟವರ್

ಗಡುವು ಮುಗಿದರೂ ಸ್ಥಳಾಂತರಿಸದ ಟವರ್ ವಿದ್ಯುತ್ ಸಂಪರ್ಕ ಕಡಿತ
------------------------
ಜನವಸತಿ ಪ್ರದೇಶದಲ್ಲಿ ಮೊಬೈಲ್ ಟವರ್ ನಿರ್ಮಿಸಿದಲ್ಲದೆ ಇದರ ಸೂಕ್ತ ನಿರ್ವಹಣೆಗೆ ವಿಫಲರಾಗಿ ಆಗಾಗ್ಗೆ ಸಮಸ್ಯೆಗೆ ಕಾರಣವಾಗುತ್ತಿದ್ದ ಟವರ್ ನವರಿಗೆ ನೀಡಿದ್ದ ಅಂತಿಮ ಗಡುವು ನೀಡಿದ್ದಾಗ್ಯೂ ಸ್ಥಳಾಂತರಿಸದೆ ನಿರ್ಲಕ್ಷ್ಯ ವಹಿಸಿದ್ದಾರೆಂದು ಆರೋಪಿಸಿ ಟವರ್ ಗೆ ಸರಬರಾಜಾಗುತ್ತಿದ್ದ ವಿದ್ಯುತ್ ಸಂಪರ್ಕವನ್ನು ಗ್ರಾಮ ಪಂಚಾಯ್ತಿಯವರು ಕಡಿತಗೊಳಿಸಿದ ಘಟನೆ ಹುಳಿಯಾರಿನಲ್ಲಿ ನಡೆದಿದೆ.
ಹುಳಿಯಾರಿನ ಜನವಸತಿ ಪ್ರದೇಶದಲ್ಲಿ ಸ್ಥಾಪಿಸಿರುವ ಮೊಬೈಲ್ ಟವರ್ ಸ್ಥಳಾಂತರವಾಗಬೇಕೆಂದು ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಯಿತು.ಈ ಸಂದರ್ಭದಲ್ಲಿ ಬಡಾವಣೆಯ ಸಾಕಷ್ಟು ಜನ ಸೇರಿದ್ದರು.

ಸಮಸ್ಯೆ ಏನು: ಜನ ವಸತಿ ಪ್ರದೇಶದಲ್ಲಿ ದೂರ ಸಂಪರ್ಕ ಸ್ಥಾವರ ಅಳವಡಿಸಲು ನ್ಯಾಯಾಲಯ ಕೆಲವೊಂದು ಷರತ್ತುಗಳನ್ನು ವಿಧಿಸಿದ್ದು ದೂರಸಂಪರ್ಕ ಸ್ಥಾವರ ನಿರ್ಮಿಸಲು ಸ್ಥಳಿಯ ಪಂಚಾಯ್ತಿ ಪರವಾನಿಗೆ ಅಗತ್ಯವಾಗಿದ್ದು ಸಾರ್ವಜನಿಕ ಸುರಕ್ಷತೆ ಹಾಗೂ ಆರೋಗ್ಯದ ಅಂಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಆದೇಶವಿದೆ.ಹಾಗಿದ್ದು ಕೂಡ ಬೆಂಗಳೂರಿನ ಇಂಡಸ್ ಟವರ್ಸ್ ಸಂಸ್ಥೆಯವರು ಪಟ್ಟಣದ ನಾಲ್ಕನೇ ಬ್ಲಾಕಿನಲ್ಲಿ ನಿರ್ಮಿಸಿರುವ ಟವರ್ ಗೆ ಸೂಕ್ತ ಸುರಕ್ಷತ ಕ್ರಮ ಕೈಗೊಂಡಿಲ್ಲ ಹಾಗೂ ಯಾವುದೋ ಜಾಗದ ಪರವಾನಿಗೆ ಪಡೆದು ಸುಳ್ಳು ಮಾಹಿತಿ ನೀಡಿ ಟವರ್ ನಿರ್ಮಿಸಿದ್ದಾರೆಂಬುದು ಇಲ್ಲಿನ ನಿವಾಸಿಗಳ ಹಾಗೂ ಸದಸ್ಯ ಧನುಶ್ ರಂಗನಾಥ್ ಅವರ ಆರೋಪಿಸಿದರು.

ಗ್ರಾಮ ಪಂಚಾಯ್ತಿಯ ಪರವಾನಗಿ ಪಡೆಯದೆ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸಿರುವ ಇವರಿಗೆ ಗ್ರಾಪಂಯವರು ಸದರಿ ಸ್ಥಳದಿಂದ ಸ್ಥಳಾಂತರಗೊಳ್ಳಲು ಮೂರು ತಿಂಗಳ ಗಡುವು ನೀಡಿ ನೋಟಿಸ್ ನೀಡಿದ್ದರು, ಅಲ್ಲದೆ ಸದರಿ ಜಾಗ ನೀಡಿದ್ದ ಮಾಲೀಕರು ಕೂಡ ಕರಾರು ರದ್ದುಪಡಿಸಿ ಟವರ್ ವರ್ಗಾಯಿಸಿಕೊಳ್ಳಿ ಎಂದು ತಿಳಿಸಿದ್ದರು.. ಇಷ್ಟೆಲ್ಲಾ ಆದರೂ ಕೂಡ ಈ ಬಗ್ಗೆ ಗಮನ ಮಾಡದಿದ್ದ ಟವರ್ ಸಂಸ್ಥೆಯವರ ಮೇಲೆ ಕ್ರಮಕ್ಕೆ ಮುಂದಾದ ಗ್ರಾಮಪಂಚಾಯ್ತಿಯವರು ಟವರ್ ಗೆ ನೀಡಲಾಗಿದ್ದ ವಿದ್ಯುತ್ ಸಂಪರ್ಕ ಕಡಿತಗೊಳಿಸಿದರು.

ವಿಷಯ ತಿಳಿದ ಸಂಸ್ಥೆಯವರು ಸ್ಥಳಕ್ಕಾಗಮಿಸಿ ಟವರ್ ಆಫ್ ಆದರೆ ಎಲ್ಲಾ ಗ್ರಾಹಕರಿಗೂ ಅನಾನುಕೂಲವಾಗಲಿದೆ.ಅಲ್ಲದೆ ಈಗಾಗಲೆ ಬೇರೊಂದು ಸ್ಥಳ ನೋಡಿದ್ದು ಅಲ್ಲಿ ಟವರ್ ಸ್ಥಾಪನೆಗೆ ಸಾಯಿಲ್ ಟೆಸ್ಟ್ ಮತ್ತಿತರ ಅನುಮತಿಗಾಗಿ ಕನಿಷ್ಟ ಅರವತ್ತು ದಿನಗಳ ಕಾಲಾವಕಾಶ ಕೋರಿದ್ದರ ಮೇರೆಗೆ ಮುವತ್ತು ಸಾವಿರ ಅಭಿವೃದ್ಧಿ ಶುಲ್ಕವೆಂದು ಕಟ್ಟಿಸಿಕೊಂಡು ಮುಂದಿನ ಮೂರು ತಿಂಗಳ ಗಡುವು ನೀಡಲಾಯಿತು.
ಆರೋಪ: ಸದರಿ ಸ್ಥಳದಲ್ಲಿ ಎರಡು ಟವರ್ ಗಳಿದ್ದು ಒಂದಕ್ಕೆ ಮಾತ್ರ ಪುನಃ ವಿದ್ಯುತ್ ಸಂಪರ್ಕ ಕಲ್ಪಿಸಿ ಮತ್ತೊಂದಕ್ಕೆ ನಿರಾಕರಿಸಿದ್ದಾರೆಂದು ಸದಸ್ಯ ರಾಘವೇಂದ್ರ,ಜಬೀಉಲ್ಲಾ,ಮಾಜಿ ಸದಸ್ಯರಾದ ಅಶೋಕ್ ಬಾಬು ಆರೋಪಿಸಿದ್ದು ಈ ಎರಡು ಟವರ್ ಗಳು ಇಲ್ಲಿಂದ ಸ್ಥಾಳಾಂತರವಾಗಲೇ ಬೇಕೆಂದು ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ನ್ಗ್ರಾ.ಪಂ. ಸದಸ್ಯರುಗಳಾದ ರಂಗನಾಥ್, ದಯಾನಂದ್, ಬೇಕರಿ ಧರ್ಮರಾಜ್, ಜಯಕರ್ನಾಟಕ ಗೂಬೆಹಳ್ಳಿಚಂದ್ರು, ಮೋಹನ್‌ಕುಮಾರ ರೈ, ಇಮ್ರಾಜ್ ,ಬೆಸ್ಕಾಂನ ಎಸ್‌ಓ ಉಮೇಶ್ ನಾಯ್ಕ, ಮೂರ್ತಿ ಮತ್ತಿತರರು ಇದ್ದರು.
-------------------------------
ಇಂಡಸ್ ಟವರ್ಸ್ ನವರಿಂದ ಮುವತ್ತು ಸಾವಿರ ಅಭಿವೃದ್ಧಿ ಶುಲ್ಕ ಪಾವತಿಸಿಕೊಂಡಿದ್ದು ಅದರಂತೆ ಮತ್ತೊಂದು ಟವರ್ ನವರು ಕೂಡ ಅಷ್ಟೆ ಶೂಲ್ಕ ಪಾವತಿಸಿ ಮುಂದಿನ ಮೂರು ತಿಂಗಳಿನೊಳಗಾಗಿ ಇಲ್ಲಿಂದ ಸ್ಥಳಾಂತರಗೊಳ್ಳಲಿ.ಸಾರ್ವಜನಿಕ ಸುರಕ್ಷತೆ ಹಾಗೂ ಆರೋಗ್ಯದ ದೃಷ್ಟಿಯಿಂದ ಯಾವುದೇ ಟವರ್ ನವರಿಗೂ ನಮ್ಮ ನಾಲ್ಕನೇ ಬ್ಲಾಕಿನಲ್ಲಿ ಅವಕಾಶಕೊಡುವುದಿಲ್ಲ.-ಧನುಷ್ ರಂಗನಾಥ್
-------------------------------

ಟವರ್ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದು ಸರಿಯಷ್ಟೆ.ಆದರೆ ಏಕಾಏಕಿ ಇಂಡಸ್ ಟವರ್ಸ್ ನವರಿಂದ ಅಭಿವೃದ್ಧಿ ಶುಲ್ಕವೆಂದು ಮುವತ್ತು ಸಾವಿರ ಪಾವತಿಸಿಕೊಂಡು ಇದೇ ಜಾಗದಲ್ಲಿ ಮುಂದುವರಿಯಲು ಅವಕಾಶ ಕೊಟ್ಟಿದ್ದು ಸರಿಯಲ್ಲ.ಅಲ್ಲದೆ ಪಂಚಾಯ್ತಿಯಿಂದ ಸರ್ವ ಸದಸ್ಯರುಗಳು ತೀರ್ಮಾನಿಸಿ ತೆಗೆದುಕೊಳ್ಳಬೇಕಾದ ತೀರ್ಮಾನವನ್ನು ಕೇವಲ ಒಬ್ಬರೆ ಸದಸ್ಯರು ತೆಗೆದುಕೊಂಡಿದ್ದು ತಪ್ಪು.ಒಂದು ಕಂಪನಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿ ಮತ್ತೊಂದು ಟವರ್ ನವರಿಗೆ ನಿರಾಕರಿಸಿರುವುದು ಸರಿಯಲ್ಲ: ರಾಘವೇಂದ್ರ ,ಗ್ರಾಪಂ ಸದಸ್ಯ
-------------------------------------

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.