ವಿಷಯಕ್ಕೆ ಹೋಗಿ

ಹುಳಿಯಾರಿನಲ್ಲಿ ಸಂಭ್ರಮದ ಗಣಪತಿ ವಿಸರ್ಜನೋತ್ಸವ

ಹುಳಿಯಾರು ಪಟ್ಟಣದ ಶ್ರೀ ಪ್ರಸನ್ನ ಗಣಪತಿ ದೇವಾಲಯದಲ್ಲಿ ಸ್ಥಾಪಿಸಲಾಗಿದ್ದ ಪಾರ್ವತಿ ಪರಮೇಶ್ವರ ಸಹಿತ ಗಣಪತಿ ಹಾಗೂ ಗಜಾನನ ಯುವಕ ಸಂಘದಿಂದ ಪ್ರತಿಷ್ಟಾಪಿಸಲಾಗಿದ್ದ ಬೆಂಕಿ ಗಣಪತಿಯನ್ನು ರಾಜಬೀದಿಯಲ್ಲಿ ಅದ್ದೂರಿ ಮೆರವಣಿಗೆ ನಡೆಸಿ ನಂತರ ಶುಕ್ರವಾರದಂದು ವಿಸರ್ಜಿಸಲಾಯಿತು.

          ಕಳೆದ ಮೂರು ದಿನಗಳಿಂದ ಈ ಸಂಬಂಧ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಬುಧವಾರದಂದು ಹೋಮಹವನಾದಿಗಳನ್ನು ನಡೆದು ಅನ್ನಸಂತರ್ಪಣೆ ಮಾಡಿದರೆ ಗುರುವಾರದಂದು ಸಾಂಸ್ಕೃತಿಕಕಾರ್ಯಕ್ರಮ ಹಾಗೂ ಸಂಜೆ ಉತ್ಸವ ,ಮೆರವಣಿಗೆ ಏರ್ಪಡಿಸಲಾಗಿತ್ತು.


ವಿಶೇಷ ಪೂಜೆ ಸಲ್ಲಿಸಿದ ತರವಾಯು ಭವ್ಯವಾದ ಹೂವಿನ ಮಂಟಪದಲ್ಲಿ ಅಲಂಕೃತ ಗಣಪತಿಯನ್ನು ಕೂರಿಸಿ ಅಲಂಕರಿಸಿ ಪಟ್ಟಣದ ಗಾಂಧಿಪೇಟೆ,ಬಸ್ ನಿಲ್ದಾಣ,ರಾಂಗೋಪಾಲ್ ಸರ್ಕಲ್ ಮುಂತಾದ ಬೀದಿಗಳಲ್ಲಿ ಭಕ್ತಾದಿಗಳೊಂದಿಗೆ ಮೆರವಣಿಗೆ ನಡೆಸಿ ಶುಕ್ರವಾರ ಮುಂಜಾನೆ ಸಮೀಪದ ತಿರುಮಲಾಪುರದ ಕೆರೆಯಲ್ಲಿ ಮೂರ್ತಿಯ ಗಂಗಾಪ್ರವೇಶ ಮಾಡಲಾಯಿತು.
            ಮೆರವಣಿಗೆ ಸಂದರ್ಭದಲ್ಲಿ ವೀರಗಾಸೆ, ಗೊಂಬೆ ಕುಣಿತ, ಚಿಟ್ಟಿಮೇಳ, ನಾದಸ್ವರ, ಸ್ಯಾಕ್ಸೋಪೋನ್ ವಾದನಗಳು ಉತ್ಸವಕ್ಕೆ ಮೆರಗು ನೀಡಿದವು. ಬೀದಿಗಳಲ್ಲಿ ಮೆರವಣಿಗೆ ಸಾಗಿದ ಸಂದರ್ಭದಲ್ಲಿ ಭಕ್ತರು ರಸ್ತೆಯನ್ನು ಸ್ವಚ್ಛಗೊಳಿಸಿ ರಂಗೋಲಿ ಹಾಕಿ ಸ್ವಾಮಿಗೆ ಪೂಜೆ ಸಲ್ಲಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.


          ಪ್ರಸನ್ನ ಗಣಪತಿ ಸೇವಾ ಟ್ರಸ್ಟ್ ನ ಅಧ್ಯಕ್ಷ ಮೋಹನ್ ಕುಮಾರ್,ದಯಾನಂದ್,ತಾಂಡವಮೂರ್ತಿ,ಹೂವಿನ ಮಲ್ಲೇಶಣ್ಣ.ರಾಜೇಂದ್ರ,ಕಲಾವಿದ ಗೌಡಿ,ಹೂವಿನ ಬಸವರಾಜು,ಮೆಡಿಕಲ್ ಚಂಬಣ್ಣ,ಏಜೆಂಟ್ ಕುಮಾರ್,ತಮ್ಮಯ್ಯ,ಗಾರೆ ವೆಂಕಟೇಶ್ ಹಾಗೂ ಗಜಾನನ ಯುವಕ ಸಂಘದ ಓಡೆಯರ್ ಸೇರಿದಂತೆ ಹಲವಾರು ಮಂದಿ ಮೆರವಣಿಗೆಯ ಉಸ್ತುವಾರಿ ವಹಿಸಿದ್ದರು.ಮೆರವಣಿಗೆ ಶಾಂತಿಯುತವಾಗಿ ಸಾಗಲು ಭಾರಿ ಪೋಲಿಸ್ ಭದ್ರತೆ ಏರ್ಪಡಿಸಲಾಗಿತ್ತು.
--------------------------------
ಹಾರ ,ಲಾಡು ಹರಾಜು : ಗಣಪತಿಗೆ ಹಾಕಿದ್ದ ಹಾರ ಹಾಗೂ ಪ್ರಸಾದವಾಗಿ ಗಣಪತಿಯ ಹಸ್ತದಲ್ಲಿ ಇಡಲಾಗಿದ್ದ ಲಾಡುವನ್ನು ಭಕ್ತಾಧಿಗಳ ಸಮ್ಮೂಖದಲ್ಲಿ ಹರಾಜು ಮಾಡಲಾಯಿತು.ಜಿದ್ದಾಜಿದ್ದಿನಿಂದ ಕೂಡಿದ್ದ ಹರಾಜಿನಲ್ಲಿ ಮೂರು ಕೇಜಿ ತೂಗುತ್ತಿದ್ದ ಸಿಹಿಲಾಡುವನ್ನು ೨೩೦೧ ರೂಪಾಯಿಗಳಿಗೆ ಹಾಗೂ ಸ್ವಾಮಿಗೆ ಹಾಕಲಾಗಿದ್ದ ಹಾರವನ್ನು ೧೦೦೧ ರೂಪಾಯಿಗಳಿಗೆ ಬಂಗಾರದ ಅಂಗಡಿ ಶಂಕರ್ ಖರೀದಿಸಿದರೆ ಮತ್ತೊಂದು ಹಾರವನ್ನು ೧೦೦೧ ರೂಗಳಿಗೆ ಗಣೇಶ್ ಬೇಕರಿಯವರು ಹರಾಜಿನಲ್ಲಿ ತಮ್ಮದಾಗಿಸಿಕೊಂಡರು.

------------------

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...