ವಿಷಯಕ್ಕೆ ಹೋಗಿ

ಸಾಧಕರ ಆದರ್ಶ ದಾರಿದೀಪವಾಗಬೇಕು: ಶಿವರಾಜು

ಶಿಲ್ಪಕಲಾಕೃತಿಗಳ ಮೂಲಕ ಆದರ್ಶಪುರುಷರನ್ನು ನಮ್ಮೆದುರಿಗೆ ಕಡೆದು ನಿಲ್ಲಿಸಿದ್ದು ಈ ಸಾಧಕರ ಆದರ್ಶ ಜೀವನ ನಮಗೆ ಮಾರ್ಗದರ್ಶಕವಾಗಬೇಕು ಎಂದು ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಗೌರವ ಕಾರ್ಯದರ್ಶಿ ಜೆ.ಬಿ.ಶಿವರಾಜು ಹೇಳಿದರು.

                  ಹುಳಿಯಾರು ಸಮೀಪದ ಬೋರನಕಣಿವೆ ಸಾಯಿ ಸೇವಾ ಸಂಸ್ಥೆ ಅವರಣದಲ್ಲಿ ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಬೆಂಗಳೂರು ಹಾಗೂ ಸೇವಾ ಚೇತನಾ ಸಂಸ್ಥೆ ಬೋರನ ಕಣಿವೆ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಹದಿನೈದು ದಿನಗಳ ಕಾಲದ ರಾಜ್ಯ ಮಟ್ಟದ ಸಮಕಾಲೀನ ಶಿಲ್ಪಕಲಾ ಶಿಬಿರದ ಸಮಾರೋಪ ಹಾಗೂ ಶಿಲ್ಪಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

                 ಮುಂಚಿನ ದಿನಗಳಲ್ಲಿ ಕಲಾಕೃತಿಗಳನ್ನು ನಿರ್ಮಿಸಲು ವರ್ಷಾನುಗಟ್ಟಲೆ ಹಿಡಿಯುತ್ತಿದ್ದು ಶಿಲ್ಪಕಲಾ ಅಕಾಡೆಮಿ ಇಂತಹ ಶಿಬಿರಗಳನ್ನು ಏರ್ಪಡಿಸುವ ಮೂಲಕ ೧೫ ದಿನದಲ್ಲೆ ಇಲ್ಲಿ ಹಿರಿಯ ಕಿರಿಯ ಕಲಾವಿದರ ಉಳಿಯಿಂದ ಅನೇಕ ಅದ್ಭುತ ಕಲಾಕೃತಿಗಳು ಮೂಡುತ್ತಿರುವುದು ಶ್ಲಾಘನೀಯ. ಬೆಂಗಳೂರಿನ ಕಬ್ಬನ್ ಪಾರ್ಕಿನಲ್ಲಿ ಶಿಲ್ಪಕಲಾ ಅಕಾಡೆಮಿ ನಿರ್ಮಿಸಿರುವ ಕಾಷ್ಠ ಕಲಾಕೃತಿಗಳು ನಮ್ಮ ಸಾಂಸ್ಕೃತಿಕ ಹಿರಿಮೆ ಹೆಚ್ಚಿಸುತ್ತಿದೆ ಎಂದರು.
ಹುಳಿಯಾರು ಸಮೀಪದ ಬೋರನಕಣಿವೆ ಸಾಯಿ ಸೇವಾ ಸಂಸ್ಥೆ ಅವರಣದಲ್ಲಿ ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಏರ್ಪಡಿಸಿದ್ದ ಹದಿನೈದು ದಿನಗಳ ಕಾಲದ ರಾಜ್ಯ ಮಟ್ಟದ ಸಮಕಾಲೀನ ಶಿಲ್ಪಕಲಾ ಶಿಬಿರದ ಸಮಾರೋಪದಲ್ಲಿ ಸಾಹಿತಿ ಎಸ್.ಜೆ.ಸಿದ್ದರಾಮಯ್ಯ ವಿವಿಧ ಕಲಾಕೃತಿಗಳನ್ನು ಅನಾವರಣಗೊಳಿಸಿದರು.

              ಸಾಹಿತಿ ಎಸ್.ಜಿ.ಸಿದ್ದರಾಮಯ್ಯ ಮಾತನಾಡಿ ಶಿಲ್ಪಾಕೃತಿಗಳನ್ನು ಪ್ರತಿಷ್ಠಾಪಿಸುವುದೇ ಅಲ್ಲದೆ ಅವುಗಳ ಇತಿಹಾಸದ ಬಗ್ಗೆ ಮಕ್ಕಳಿಗೆ ತಿಳಿಸುವ ಕೆಲಸ ಸೇವಾ ಚೇತನ ಸಂಸ್ಥೆ ಮಾಡುತ್ತಿದೆ ಎಂದರು. ಟ್ರಸ್ಟ್ ಈ ಭಾಗದ ಯುವಕರಿಗೆ ಬದುಕು ಕಟ್ಟಿಕೊಳ್ಳಲು ಆಶ್ರಯ ತಾಣವಾಗಬೇಕೆಂದರು. ಪ್ರಸ್ತುತ ಸನ್ನಿವೇಶದಲ್ಲಿ ಶಿಲ್ಪಕಲಾ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವವರು ಇಲ್ಲವಾಗುತ್ತಿದ್ದು ಗ್ರಾಮೀಣ ಭಾಗದಲ್ಲಿ ಕಲಾವಿದರನ್ನು ಗುರ್ತಿಸಿ ಬೆಳಸುವ ನಿಟ್ಟಿನಲ್ಲಿ ಇಂತಹ ಶಿಬಿರಗಳು ಅವಶ್ಯವಾಗುತ್ತಿದ್ದು ಅಕಾಡೆಮಿ ಈ ನಿಟ್ಟಿನಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ.
ಕರ್ನಾಟಕ ಶಿಲ್ಪಾಕಲಾ ಆಕಾಡೆಮಿ ನಾಡಿನ ನಾನಾ ಜಿಲ್ಲೆಗಳಿಂದ ಇಪ್ಪತ್ತು ಮಂದಿ ಶಿಲ್ಪಿಗಳನ್ನು ಆಹ್ವಾನಿಸಿದ್ದು ಎಲ್ಲರು ನುರಿತ ಕಲಾವಿದರಾಗಿದ್ದಾರೆ.ಇವರುಗಳು ಕೆತ್ತಿರುವ ಅಂಬೇಡ್ಕರ್,ವಿವೇಕಾನಂದ,ಕುವೆಂಪು,ಕನಕದಾಸ,ಬಾಪುಲೆ,ಸಾವಿತ್ರಿ ಬಾಪುಲೆ,ಅಬ್ದುಲ್ ಕಲಾಂ,ಧ್ಯಾನಮಗ್ನ ಗಾಂಧಿ,ನಾಲ್ವಡಿ ಕೃಷ್ಣರಾಜ ಒಡೆಯರ್,ಶರಣ ಬಸವೇಶ್ವರರ ಶಿಲ್ಪಗಳು ಬೆರಗುಮೂಡಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು.

ಇದೇ ವೇಳೆ ಶಿಲ್ಪಿಗಳಾದ
ಚಿತ್ರದುರ್ಗ ಜಿಲ್ಲೆಯ ಮಂಜುನಾಥ್ ಆಚಾರ್ಯ,ಆಲೂರು ನರಸಿಂಹರಾಜ್
ತುಮಕೂರು ಜಿಲ್ಲೆಯ ಸಿ.ಪಿ.ವಿಶ್ವನಾಥ್,ಬುಕ್ಕಾಪಟ್ಟಣ ಹರೀಶ್,
ಕೋಲಾರ ಜಿಲ್ಲೆಯ ಆನಂದಕುಮಾರ್,
ಬೆಂಗಳೂರು ಜಿಲ್ಲೆಯ ಜಗದೀಶ್,
ಬಾಗಲಕೋಟೆ ಜಿಲ್ಲೆಯ ವಸಂತ ತಳವಾರ , ಅಶೋಕ ಹರಿಜನ,ಮಹದೇವ ಹುಲಿಗವ್ವ ಚಲುವಾದಿ, ರಮೇಶ್ ರಾಜಾಪುರ,ಅಜಯಕುಮಾರ್ ಕಲಗೋಡಿ,ಮೌನೇಶ ಬದನೂರು, ನರಸಿಂಹಸ್ವಾಮಿ, ದ್ಯಾಮಣ್ಣ ಸಂಗಳ,ರವಿಕಾಮಪ್ಪ ವಡ್ಡರ್
ಗದಗ ಜಿಲ್ಲೆಯ ಬಸಪ್ಪಶಿವಪ್ಪ,ಬಂಡಿವಡ್ಡರ,
ಯಾದಗಿರಿ ಜಿಲ್ಲೆಯ ಚಂದ್ರಪ್ಪ ಮಾದರ,
ಮೈಸುರು ಜಿಲ್ಲೆಯ ಶಂಕರ್,
ಚಿಕ್ಕಮಗಳೂರು ಜಿಲ್ಲೆಯ ಸುನೀಲ್ ಕುಮಾರ್,,
ದಕ್ಷಿಣ ಕನ್ನಡ ಜಿಲ್ಲೆಯ ವಿನಯ ಬಸಪ್ಪಗೌಡ ಇವರುಗಳನ್ನು ಸೇವಾ ಚೇತನಾ ಸಂಸ್ಥೆಯಿಂದ ಸನ್ಮಾನಿಸಲಾಯಿತು.


          ಶಿಲ್ಪಕಲಾ ಅಕಾಡೆಮಿ ರಿಜಿಸ್ಟ್ರಾರ್ ಎಚ್.ವಿ.ಇಂದ್ರಮ್ಮ, ಶಿಬಿರದ ನಿರ್ದೇಶಕ ಮರಿಸ್ವಾಮಿ, ಅಕಾಡೆಮಿ ಸದಸ್ಯ ಕುಮಾರ್ ಮಾತನಾಡಿದರು. ಸೇವಾಚೇತನ ಸಂಸ್ಥೆ ಕಾರ್ಯದರ್ಶಿ ವಿಠಲ್, ತಾಪಂ ಸದಸ್ಯೆ ಕವಿತಾಪ್ರಕಾಶ್, ಮಾಜಿ ಗ್ರಾಪಂ ಅಧ್ಯಕ್ಷ ರವಿಕುಮಾರ್ ಮತ್ತಿತರರಿದ್ದರು.ಉಪನ್ಯಾಸಕ ದೇವೇಂದ್ರಪ್ಪ ಸ್ವಾಗತಿಸಿದರು.ಶಿಕ್ಷಕಿ ಗಿರಿಜಾ ನಿರೂಪಿಸಿ,ವಂದಿಸಿದರು. 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...