ವಿಷಯಕ್ಕೆ ಹೋಗಿ

ಪಂಚಾಯ್ತಿ ಕಾರ್ಯವೈಖರಿಗೆ ಬೇಸತ್ತು ಸದಸ್ಯನಿಂದಲೇ ಪ್ರತಿಭಟನೆ

ಏಕಾಂಗಿ ಹೋರಾಟಕ್ಕೆ ತಾರ್ಕಿಕ ಅಂತ್ಯ
--------------------
ಕೆಂಕೆರೆ ಗ್ರಾಮಪಂಚಾಯ್ತಿಯಲ್ಲಿ ಅಭಿವೃದ್ಧಿ ವಿಚಾರವಾಗಿ ಸದಸ್ಯ ನಾಗರಾಜು ನಡೆಸಿದ ಧರಣಿ ಸ್ಥಳದಲ್ಲಿ ಇಓ ಕೃಷ್ಣಮೂರ್ತಿ ಆಗಮಿಸಿ ಸಮಸ್ಯೆ ಆಲಿಸಿ ಪಿಏಇಓ ಮೂಲಕ ಪಟ್ಟಿ ಮಾಡಿಸಿದರು.ರಾಜ್ಯರೈತಸಂಘದ ಸತೀಶ್,ಮೆಹಬೂಬ್ ಸಾಬ್ ಚಿತ್ರದಲ್ಲಿದ್ದಾರೆ.
ಹುಳಿಯಾರು ಸಮೀಪದ ಕೆಂಕೆರೆ ಗ್ರಾಮಪಂಚಾಯ್ತಿಯಲ್ಲಿ ಜನರ ನಿರೀಕ್ಷೆಗೆ ತಕ್ಕ ಕೆಲಸವಾಗುತ್ತಿಲ್ಲ,ಹೊಸ ಸದಸ್ಯರು ಆಯ್ಕೆಯಾಗಿ ಆರು ತಿಂಗಳಾಗುತ್ತಾ ಬಂದಿದ್ದು ಕಳೆದ ಆರು ತಿಂಗಳ ಅವಧಿಯಲ್ಲಿನ ಅಭಿವೃದ್ಧಿ ಕಾಮಗಾರಿಗಳ ಮೌಲ್ಯಮಾಪನ ಸಾರ್ವಜನಿಕರ ಎದುರಲ್ಲೆ ಆಗಲಿ ಎಂದು ಗ್ರಾಪಂ ಸದಸ್ಯ ಎಂ.ನಾಗರಾಜು(ಕಾಡಿನರಾಜ) ಒಂದು ದಿನದ ಸಾಂಕೇತಿಕ ಮುಷ್ಕರ ನಡೆಸಿದ ಘಟನೆ ಕೆಂಕೆರೆ ಪಂಚಾಯ್ತಿ ಆವರಣದಲ್ಲಿ ನಡೆಯಿತು.

ಈ ಬಗ್ಗೆ ಮಾತನಾಡಿದ ಅವರು ಕೆಂಕೆರೆ ಗ್ರಾಪಂನಲ್ಲಿ ಹಿರಿಯ ಪಂಚಾಯ್ತಿ ಸದಸ್ಯರಾಗಿರುವ ನಾನು ಈ ಹಿಂದೆ ಕೂಡ ಎರಡು ಬಾರಿ ಸದಸ್ಯನಾಗಿ ಆಯ್ಕೆಯಾಗಿದ್ದೆ.ನಯಾಪೈಸೆ ಖರ್ಚಿಲ್ಲದೆ ಈ ಬಾರಿ ಕೂಡ ಗೆದ್ದು ಬಂದಿರುವ ನನಗೆ ಸಾರ್ವಜನಿಕರ ಆಶೋತ್ತರಕ್ಕೆ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ,ಯಾವುದೇ ಕೆಲಸಗಳಿಗೂ ಪಂಚಾಯ್ತಿಯಲ್ಲಿ ಸಹಕಾರ ದೊರೆಯದ ಕಾರಣ ಜನ ಸಾಮಾನ್ಯರ ಸಮಸ್ಯೆಗೆ ಸ್ಪಂದಿಸಲು ಆಗದಿದ್ದು ಈ ಬಗ್ಗೆ ಸಾರ್ವಜನಿಕರ ಎದುರಿನಲ್ಲೆ ಸಮಸ್ಯೆ ಪರಿಹಾರಕ್ಕೆ ಉಪವಾಸ ಸತ್ಯಾಗ್ರಹ ಕೈಗೊಂಡಿರುವುದಾಗಿ ತಿಳಿಸಿದರು.


ಆರೋಪ ಏನು: ಕೆಂಕೆರೆಯ ಒಂದು ಮತ್ತು ಎರಡೆನೇ ಬ್ಲಾಕ್ ಸುವರ್ಣ ಗ್ರಾಮ ಯೋಜನೆಯಡಿ ಸ್ವಲ್ಪ ಮಟ್ಟಿನ ಅಭಿವೃದ್ಧಿ ಕಂಡಿದ್ದು ಮೂರು ಮತ್ತು ನಾಲ್ಕನೆ ಬ್ಲಾಕ್ ತೀರಾ ಹಿಂದುಳಿದಿದೆ.ಮೂರನೇ ಬ್ಲಾಕಿನ ವ್ಯಾಪ್ತಿಗೆ ಬರದಲೇಪಾಳ್ಯ,ವಳಗೆರೆಹಳ್ಳಿ ಯಿಂದ ಸುಬೇದಾರ್ ಪಾಳ್ಯದವರೆಗಿನ ಜಾಗ, ದುರ್ಗದಸೀಮೆ ಪಾಳ್ಯ,ಹೊನ್ನಯ್ಯನ ಪಾಳ್ಯ,ಅಡಾಣಿಕಲ್ಲು,ಬಸವನಗುಡಿ,ಉದಯ ದಿಬ್ಬ,ಪುರದಮಠದ ಗೇಟ್,ಬಕಾಯಪ್ಪನ ಗುಡ್ಲು ವರೆಗೆ ಹತ್ತಾರು ಹಳ್ಳಿಗಳು ಸೇರಿದೆ.ಕಳೆದೊಂದು ತಿಂಗಳಿನಿಂದ ಸುರಿಯುತ್ತಿರುವ ಮಳೆಗೆ ಈ ಭಾಗದ ಬಂಡೀ ಜಾಡಿನ ರಸ್ತೆಗಳೆಲ್ಲ ಕೆಸರುಮಯವಾಗಿದ್ದು ಸಂಚರಿಸುವುದೆ ದುಸ್ತರವಾಗಿದ್ದು ಈ ಬ್ಲಾಕನ್ನು ಪ್ರತಿನಿಧಿಸುವ ನಮಗೆ ಜನರಿಗೆ ಮುಖತೋರಿಸದ ಪರಿಸ್ಥಿತಿ ಬಂದೊದಗಿದೆ.ಜಾಡಿನ ಸುತ್ತಾ ಬಳ್ಳಾರಿ ಜಾಲಿ ಬೆಳೆದು ಮತ್ತಷ್ಟು ಸಮಸ್ಯೆ ತಂದೊಡ್ಡಿದೆ.ಈ ಬಗ್ಗೆ ಪಂಚಾಯ್ತಿ ಅಧ್ಯಕ್ಷರ ಹಾಗೂ ಉಪಾಧ್ಯಕ್ಷರ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ.ಮಾಸಿಕ ಸಭೆಗಳಲ್ಲು ಕೂಡ ಪಿಡಿಓ ನಮ್ಮ ಬೇಡಿಕೆ ಬಗ್ಗೆ ನಿರ್ಲಕ್ಷಿಸುತ್ತಲೆ ಬರುತ್ತಿದ್ದು ಪರೀಶೀಲನೆ ಮಾಡಿ ಎಂದರೂ ಯಾರೊಬ್ಬರು ಕಿವಿಗೊಡುತ್ತಿಲ್ಲ .ಗ್ರಾಮದ ರಸ್ತೆಗಳ ಬಗ್ಗೆ,ಸಮುದಾಯ ಭವನ ನಿರ್ಮಾಣದ ಬಗ್ಗೆ , ಸ್ಥಾಯಿ ಸಮಸ್ಯೆ ರಚಿಸುವ ಬಗ್ಗೆ ಕಾಳಜಿಯಿಲ್ಲದಂತೆ ವರ್ತಿಸುತ್ತಿದ್ದಾರೆ.ಸಭೆಗಳಲ್ಲಿ ಧ್ವನಿ ಎತ್ತಿದಾಗಲೆಲ್ಲಾ ಕೂಗಾಟದ ಮೂಲಕ ಬಾಯಿಮುಚ್ಚಿಸುತ್ತಾರೆಂದು ನಾಗರಾಜು ಆರೋಪಿಸಿದರು.


ಇಲ್ಲಿನ ಒಳ ಸಮಸ್ಯೆಗಳ ಬಗ್ಗೆ ಸಾರ್ವಜನಿಕರ ಗಮನಕ್ಕೆ ತರುವ ಪ್ರಯತ್ನವಾಗಿ ಮುಷ್ಕರ ಹೂಡಿದ್ದು ತಾಲ್ಲೂಕ್ ಕಾರ್ಯನಿರ್ವಹಣಾಧಿಕಾರಿ ಸ್ಥಳಕ್ಕೆ ಬಂದು ಸಮಸ್ಯೆ ಆಲಿಸುವವರೆಗೂ ಧರಣಿ ಮುಂದುವರಿಸುವುದಾಗಿ ಪಟ್ಟುಹಿಡಿದರು.ಹೆದ್ದಾರಿಯಲ್ಲಿರುವ ಗ್ರಾಮಪಂಚಾಯ್ತಿ ಕಛೇರಿ ಮುಂದೆ ಶಾಮಿಯಾನ ಹಾಕಿ ಗಾಂಧೀಜಿಗೆ ಪೂಜೆ ಸಲ್ಲಿಸಿ ಉಪವಾಸ ಕುಳಿತು ಪ್ರತಿಭಟಿಸಿದರು.

ಸುದ್ದಿ ತಿಳಿದು ಮಧ್ಯಾಹ್ನ ಸ್ಥಳಕ್ಕಾಗಮಿಸಿದ ತಾಲ್ಲೂಕ್ ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಮೂರ್ತಿ ಸದಸ್ಯನ ಸಮಸ್ಯೆ ಆಲಿಸಿ ಪಿಡಿಓ ಮೂಲಕ ಸಮಸ್ಯೆಗಳ ಪಟ್ಟಿ ಮಾಡಿಸಿದರು.ತುರ್ತಾಗಿ ಆಗಬೇಕಿರುವ ಕೆಲಸಗಳನ್ನು ಮಾಡಲು ತಿಳಿಸಿದಲ್ಲದೆ ಹದಗೆಟ್ಟ ರಸ್ತೆಯನ್ನು ಎನಾರ್ ಇಜಿ ಯಲ್ಲಿ ಸೇರಿಸಲು ತಿಳಿಸಿದರು.ಬರದಲೇಪಾಳ್ಯವನ್ನು ಸುವರ್ಣ ಗ್ರಾಮ ಯೋಜನೆಯಲ್ಲಿ ಸೇರಿಸುವ ಬಗ್ಗೆ ಶಾಸಕರೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.ಕೂಡಲೆ ಸ್ಥಾಯಿ ಸಮಿತಿ ರಚಿಸುವಂತೆ ತಾಕೀತು ಮಾಡಿದರು.

ಸ್ಥಳದಲ್ಲಿದ್ದ ಅಧ್ಯಕ್ಷೆ ಜಯಮ್ಮ ಹಾಗೂ ಉಪಾಧ್ಯಕ್ಷ ಪಂಚಣ್ಣ ಗ್ರಾಪಂಗೆ ಬರುವ ಅನುದಾನವೆ ತೀರಾ ಕಮ್ಮಿಯಿದ್ದು ಬರುವ ಅನುದಾನವೆಲ್ಲಾ ಈತ ಹೇಳುವ ಕೆಲಸಕ್ಕೆ ವಿನಿಯೋಗಮಾಡುವುದಾದರೆ ಮಿಕ್ಕ ಕೆಲಸಗಳಿಗೇನು ಮಾಡುವುದು.ಸಭೆಯಲ್ಲಿ ಕೋರಂ ಪಡೆದೆ ಕಾಮಗಾರಿಗಳನ್ನು ಮಾಡಿಸುತ್ತಿದ್ದು ಇದಕ್ಕೆ ಎಲ್ಲಾ ಸದಸ್ಯರುಗಳು ಸಹಕಾರ ಕೊಡಬೇಕೆಂದರು.


ಒಟ್ಟಾರೆ ಧರಣಿನಿರತ ನಾಗರಾಜುವಿನ ಸಮಸ್ಯೆ ಆಲಿಸಿದ ಇಓ ಕೃಷ್ಣಮೂರ್ತಿ ಸಮಸ್ಯೆ ಪರಿಹರಿಸುವ ಭರವಸೆ ನೀಡಿ ಹಣ್ಣಿನ ರಸ ಕುಡಿಸುವುದರ ಮೂಲಕ ಉಪವಾಸ ಸತ್ಯಾಗ್ರಹ ಹಿಂಪಡೆಯುವಂತೆ ಮಾಡಲು ಸಫಲರಾದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...