ವಿಷಯಕ್ಕೆ ಹೋಗಿ

ಪರಿಷತ್ತನ್ನು ಮತ್ತೆ ಸಾಂಸ್ಕೃತಿಕವಾಗಿ ಕಟ್ಟಲು ಸ್ಪರ್ಧಿಸಿರುವೆ:ಎಂ.ಎಸ್.ರವಿಕುಮಾರ್

ಹುಳಿಯಾರಿನ ಮೈಸ್ ಕಂಪ್ಯೂಟರ್ ಸೆಂಟರ್‌ನಲ್ಲಿ ಜಿಲ್ಲಾ ಕಸಾಪಕ್ಕೆ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಎಂ.ಎಸ್.ರವಿಕುಮಾರ್ ಪತ್ರಿಕಾ ಗೋಷ್ಠಿ ನಡೆಸಿದರು. ದಿವ್ಯಜ್ಯೋತಿ ಹವ್ಯಾಸಿ ಕಲಾಸಂಘದ ನಿರೂಪ್ ರಾವತ್,ಸಂಗೊಳ್ಳಿ ರಾಯಣ್ಣ ಸಂಘದ ಅಧ್ಯಕ್ಷ ಸಿದ್ದು.ಜಿ.ಕೆರೆ ,ಕಸಾಪ ತಾಲ್ಲೂಕ್ ಸಂಚಾಲಕ ಹುಳಿಯಾರು ಷಬ್ಬೀರ್,ರಾಜಕುಮಾರ್ ಸಂಘದ ಸಿ.ಹೆಚ್.ರೂಪೇಶ್ ,ಹುಳಿಯಾರು ಘಟಕದ ಪ್ರದಾನ ಕಾರ್ಯದರ್ಶಿ ಶ್ರೇಯಸ್ ಇದ್ದಾರೆ.
ಇಂದು ಸಾಹಿತ್ಯಪರಿಷತ್ ಅದರ ಮೂಲಉದ್ದೇಶದಿಂದ ವಿಮುಖವಾಗಿದ್ದು ,ಪ್ರಸ್ತುತ ಸಾಹಿತ್ಯ ಪರಿಷತ್ತು ನಡೆಯುತ್ತಿರುವ ಹಾದಿ ಪಂಡಿತರ ಹಾದಿಯಾಗಿದ್ದು ಜನಸಾಮಾನ್ಯರನ್ನು ಯುವ ಸಮುದಾಯದವರನ್ನು ದೂರವಿಡುವ ಕೆಲಸ ನಡೆದಿದೆ.ಕೇವಲ ಅಕ್ಷರ ಬಲ್ಲಂತ ಅಕ್ಷರ ಜೋಡಿಸುವಂತ ವ್ಯಕ್ತಿಗಳಿಗಷ್ಟೆ ಪರಿಷತ್ತು ಸೀಮಿತವಾಗಿದ್ದು ಅದನ್ನು ಹೋಗಲಾಡಿಸುವ ಚಳುವಳಿಯ ಭಾಗ ನಾನಾಗಿದ್ದು ಈ ನಿಟ್ಟಿನಲ್ಲಿ ನನ್ನದೆ ಆದ ಯೋಜನೆಗಳು ಹಾಗೂ ಆಲೋಚನೆಗಳಿದ್ದು ಸಾಂಸ್ಕೃತಿಕವಾಗಿ ಪರಿಷತ್ತನ್ನು ಕಟ್ಟಲು ಉತ್ಸುಕನಾಗಿದ್ದೇನೆ ಎಂದು ಚಿ.ನಾ.ಹಳ್ಳಿ ತಾಲ್ಲೂಕು ಕಸಾಪ ಅಧ್ಯಕ್ಷ ಎಂ.ಎಸ್. ರವಿಕುಮಾರ್ ತಿಳಿಸಿದರು.

ಹುಳಿಯಾರಿನ ಮೈಸ್ ಕಂಪ್ಯೂಟರ್ ಸೆಂಟರ್‌ನಲ್ಲಿ ಜಿಲ್ಲಾ ಕಸಾಪಕ್ಕೆ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಕುರಿತು ಪತ್ರಿಕಾ ಗೋಷ್ಠಿ ನಡೆಸಿ ಅವರು ಮಾತನಾಡಿದರು. ಪರಿಷತ್ ಕೇವಲ ಅಕ್ಷರದಲ್ಲಾಡುವವರ ಸಂಸ್ಥೆಯಾಗದೆ ಆಟೋಚಾಲಕರಿಂದ ಹಿಡಿದು ಶ್ರೀ ಸಾಮಾನ್ಯರ ತನಕ ಇದು ಎಲ್ಲರನ್ನೂ ತಲುಪುವ ಸಂಸ್ಥೆಯಾಗಬೇಕು.ಪರಿಷತ್ತು ಕೇವಲ ಹೆಸರಿಗಷ್ಟೆ ಸಂಸ್ಥೆಯಾಗದೆ ಇದು ನಿಜವಾಗಲೂ ಸಕಲ ಕನ್ನಡಿಗರ ಪ್ರಾತಿನಿಧ್ಯದ ಸಂಸ್ಥೆಯಾಗಬೇಕು.ಇದಕ್ಕಾಗಿ ತಳಮಟ್ಟದಲ್ಲಿ ಕೆಲಸವಾಗಬೇಕಿದೆ.ಯುವಸಮುದಾಯವನ್ನು ನಮ್ಮ ನಂತರದ ಪೀಳಿಗೆಯವರನ್ನು ಸಾಹಿತ್ಯಕ್ಕೆ ಕರೆತರುವ ಕೆಲಸಮಾಡಬೇಕಿದೆ ಎಂದರು.

ಕಸಾಪಕ್ಕೆ ವರ್ತಮಾನದ ಪೀಳಿಗೆಯನ್ನು ಜೋಡಿಸುವ ಬೆಳಸುವ ನಿಟ್ಟಿನಲ್ಲಿ ತಾಲ್ಲೂಕ್ ಹಾಗೂ ಹೋಬಳಿ ಘಟಕಗಳ ಮೂಲಕ ಗ್ರಾಮೀಣ ಭಾಗಕ್ಕೆ ಸಾಹಿತ್ಯ ಪರಿಷತ್ತನ್ನು ಕೊಂಡೊಯ್ದು ವಿದ್ಯಾರ್ಥಿ ಸಮುದಾಯಗಳನ್ನು ಜಾಗೃತಗೊಳಿಸಿ ಸಾಹಿತ್ಯದ ಒಲವನ್ನು ಬಿತ್ತುವ ಕಾರ್ಯಾಗಾರ,ಕಮ್ಮಟ,ವಿಚಾರ ಸಂಕಿರಣಗಳನ್ನು ಏರ್ಪಡಿಸಿ ಶ್ರಮಿಕರ,ರೈತರ,ದಲಿತರ ನಡುವೆ ಸಾಹಿತ್ಯದ ಕೊಂಡಿಯಾಗುವೆ ಅಂದು ಭರವಸೆ ನೀಡಿದರು.










ತುಮಕೂರುಜಿಲ್ಲಾ ಕಸಾಪ ಕಟ್ಟಡ ಸೇರಿದಂತೆ ಚಿಕ್ಕನಾಯಕನಹಳ್ಳಿ,ಗುಬ್ಬಿ,ಪಾವಗಡ,ಕೊರಟಗೆರೆಯಲ್ಲಿ ಪರಿಷತ್ ಕಟ್ಟಡಗಳಾಗಬೇಕಿದ್ದು ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಕಟ್ಟಲು ನಾನು ಬದ್ದನಾಗಿರುವೆ ಎಂದರು.
ಯುವಕರ ಪ್ರತಿನಿಧಿಯಾಗಿ ಸಾಹಿತ್ಯ ಪರಿಷತ್‌ಗೆ ಬಂದಿದ್ದೇನೆ. ವಿದ್ಯಾರ್ಥಿಗಳ ಮಧ್ಯೆ ಕಲೆ, ಸಾಹಿತ್ಯ, ಸಾಂಸ್ಕೃತಿಕ ವಾತಾವರಣ ಸೃಷ್ಟಿಮಾಡಬೇಕಾಗಿದೆ. ಮುಚ್ಚಿ ರುವ ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೂಂಡು ಮಾದರಿ ಶಾಲೆಗಳನ್ನಾಗಿ ಮಾಡಬೇಕಿದೆ. ಇದುವರೆವಿಗೂ ಸಾಹಿತ್ಯ ಪರಿಷತ್‌ನಲ್ಲಿ ನಿಜವಾದ ಕಾಳಜಿಯುಳ್ಳ ಕೆಲಸಗಳಾಗಿಲ್ಲ. ನಾನು ಅಧ್ಯಕ್ಷನಾದರೆ ಕಟ್ಟಡ ನಿರ್ಮಾಣ,ಶಾಶ್ವತ ದತ್ತಿ ಕಾರ್ಯಕ್ರಮ,ದತ್ತಿ ಸಂಗ್ರಹಣೆಗಳನ್ನು ಕೈಗೊಂಡು ಸಾಂಸ್ಕೃತಿಕವಾಗಿ ಕನ್ನಡ ಕಟ್ಟುವ ಜವಾಬ್ದಾರಿ ಹೊತ್ತುಕೊಂಡು ಕಾರ್ಯ ನಿರ್ವಹಿಸುವುದಾಗಿ ತಿಳಿಸಿದರು.

ದಿವ್ಯಜ್ಯೋತಿ ಹವ್ಯಾಸಿ ಕಲಾಸಂಘದ ನಿರೂಪ್ ರಾವತ್ ಮಾತನಾಡಿ ರವಿಕುಮಾರ್ ಕ್ರಿಯಾಶೀಲ ವ್ಯಕ್ತಿಯಾಗಿದ್ದು ವಿದ್ಯಾರ್ಥಿ ದೆಸೆಯಿಂದಲೇ ಸಂಘಟನಾ ಚಟುವಟಿಕೆಗಳಲ್ಲಿ ತೊಡಗಿಕೊಂಡು ಬೆಳೆದುಬಂದವರು.ಕಸಾಪವನ್ನು ತಾಲ್ಲೂಕಿನಲ್ಲಿ ಸಮರ್ಥವಾಗಿ ಕಟ್ಟಿದ್ದು ಉತ್ತಮ ಕಾರ್ಯಗಳನ್ನು ಮಾಡಿದ್ದಾರೆ.ಗ್ರಾಮೀಣ ಭಾಗದಲ್ಲಿ ಸಾಹಿತ್ಯ ಪರಿಷತನ್ನು ರಚನಾತ್ಮಕವಾಗಿ ಕಟ್ಟಿ ಐದು ಹೋಬಳಿ ಘಟಕಗಳು ಅತ್ಯಂತ ಕ್ರಿಯಾಶೀಲವಾಗಿರುವಂತೆ ನೋಡಿಕೊಂಡಿದ್ದಾರೆ.ಅವರ ಅವಧಿಯಲ್ಲಿ ಮೂರು ತಾಲ್ಲೂಕ್ ಸಮ್ಮೇಳನವನ್ನು ಯಶಸ್ವಿಯಾಗಿ ನಿರ್ವಹಿಸಿ ರಾಜ್ಯಾಧ್ಯಕ್ಷ ಪುಂಡಲೀಕ ಹಾಲಂಬಿಯವರಿಂದ ರಾಜ್ಯದಲ್ಲೆ ಪ್ರಥಮ ಕ್ರಿಯಾಶೀಲ ಘಟಕ ಎಂಬ ಪ್ರಶಂಸೆಗೆ ಪಾತ್ರರಾಗಿದ್ದಾರೆ.ಇವರನ್ನು ಆರಿಸಿಸಲ್ಲಿ ಪರಿಷತ್ತು ಮತ್ತಷ್ಟು ಬೆಳಯುವದರಲ್ಲಿ ಅನುಮಾನವಿಲ್ಲ ಎಂದರು.

ಸಂಗೊಳ್ಳಿ ರಾಯಣ್ಣ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಸಿದ್ದು.ಜಿ.ಕೆರೆ ಮಾತನಾಡಿ ತಾಲ್ಲೂಕ್ ಕೇಂದ್ರದ ಅಧ್ಯಕ್ಷರಾಗಿದ್ದುಕೊಂಡು ಜಿಲ್ಲಾ ಮಟ್ಟದ ಸಮ್ಮೇಳನವನ್ನು ಹೋಬಳಿ ಕೇಂದ್ರಗಳಲ್ಲಿ ಆಯೋಜಿಸುವ ಮೂಲಕ ಜಿಲ್ಲೆಗೆ ಹೆಸರು ತಂದಿದ್ದಾರೆ ಎಂದರು.

ಕಸಾಪ ತಾಲ್ಲೂಕ್ ಸಂಚಾಲಕ ಹುಳಿಯಾರು ಷಬ್ಬೀರ್ ಮಾತನಾಡಿ ರವಿಕುಮಾರ್ ತಾಲ್ಲೂಕ್ ಅಧ್ಯಕ್ಷರಾಗಿ ಸ್ಥಳಿಯ ಪ್ರತಿಭೆಗಳನ್ನು ಗುರ್ತಿಸಿದ್ದಾರೆ. ಕಲಾವಿದರನ್ನು ,ಕ್ರಿಯಾಶೀಲ ವ್ಯಕ್ತಿಗಳನ್ನು ಸಂಘಟಿಸಿ ಬೆಳಸಿದ್ದಾರೆ..ಜಿಲ್ಲಾ ಸಾಹಿತ್ಯದಲ್ಲಿ ಗಝಲ್ ಗೆ ಸ್ಥಾನ ಕೊಡಿಸಿಕೊಟ್ಟಿದ್ದಾರೆ ಎಂದರು.

ರಾಜಕುಮಾರ್ ಸಂಘದ ಸಿ.ಹೆಚ್.ರೂಪೇಶ್ ಮಾತನಾಡಿ ರವಿಕುಮಾರ್ ಹೋರಾಟದ ಮೂಲಕ ಬೆಳೆದು ಬಂದಿದ್ದಾರೆ,ಜಿಲ್ಲೆಯಲ್ಲಿ ಚಿನಾಹಳ್ಳಿ ತಾಲ್ಲೂಕಿನ ಕಸಾಪ ಗುರ್ತಿಸುವಂತೆ ಮಾಡಿದ್ದಾರೆ.


ಹುಳಿಯಾರು ಘಟಕದ ಪ್ರದಾನ ಕಾರ್ಯದರ್ಶಿ ಶ್ರೇಯಸ್ ಗೋಷ್ಠಿಯಲ್ಲಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...