ವಿಷಯಕ್ಕೆ ಹೋಗಿ

ಸೀಗೆಬಾಗಿಯಲ್ಲಿ ಸಂಕ್ರಾಂತಿ ಜೋರು : ಮೊಲ ಬಿಡುವ ಮೂಲಕ ಸಂಕ್ರಾಂತಿಗೆ ತೆರೆ

ಹುಳಿಯಾರು :ಹೋಬಳಿಯ ಸೀಗೆಬಾಗಿ ಗ್ರಾಮದಲ್ಲಿ ಸುಗ್ಗಿಹಬ್ಬವಾದ ಸಂಕ್ರಾಂತಿಯನ್ನು ಎರಡು ದಿನಗಳಕಾಲ ವಿಜೃಂಭಣೆಯಿಂದ ನಡೆಸುತ್ತಾರೆ.

ಈ ಗ್ರಾಮದಲ್ಲಿ ಸಂಕ್ರಾಂತಿಯನ್ನು ವಿಶೇಷವಾಗಿ ಆಚರಿಸುವುದಿದ್ದು ಅಂದು ಪ್ರತಿಯೊಬ್ಬರು ತಮ್ಮ ಮನೆಗಳಲ್ಲಿ ವಿಶೇಷ ಅಡುಗೆ ಮಾಡಿಕೊಂಡು ವರದರಾಜಸ್ವಾಮಿ ದೇವಸ್ಥಾನಕ್ಕೆ ಅಡುಗೆಬುತ್ತಿಯನ್ನು ಹೊತ್ತು ತಂದು ಎಲ್ಲರು ಒಟ್ಟಾಗಿ ಹಂಚಿಕೊಂಡು ಊಟ ಮಾಡುವುದು ಇಲ್ಲಿನ ವಾಡಿಕೆಯಾಗಿದೆ.
ಹುಳಿಯಾರು ಹೋಬಳಿ ಸೀಗೆಬಾಗಿಯಲ್ಲಿ ಸಂಕ್ರಾಂತಿ ಹಬ್ಬದ ಅಂಗವಾಗಿ ದೇವರುಗಳ ಸಮ್ಮುಖದಲ್ಲಿ ಮೊಲ ಹಿಡಿದುನಿಂತಿರುವ ಗ್ರಾಮಸ್ಥರು.

ಈ ಗ್ರಾಮದ ವರದರಾಜಸ್ವಾಮಿ ಉದ್ಭವ ಮೂರ್ತಿಯಾಗಿದ್ದು ಇದೇ ದೇವಾಲಯದಲ್ಲಿ ಊರಿನಲ್ಲಿದ್ದ ಆಂಜನೇಯಸ್ವಾಮಿಯನ್ನು ಸಹ ಪ್ರತಿಷ್ಠಾಪಿಸಿ ಪೂಜಿಸಲು ಪ್ರಾರಂಭಿಸಿದ್ದರಿಂದ ವರದಾಂಜನೇಯಸ್ವಾಮಿ ಎಂದು ಪ್ರಸಿದ್ದಿಯಾಗಿದೆ.

ಮೊಲ ಬಿಡುವುದು : ಮೊಲ ಹಿಡಿದು ಮತ್ತೆ ಕಾಡಿಗೆ ಬಿಡುವ ವಿಶಿಷ್ಠ ಪದ್ಧತಿ ಇಲ್ಲಿ ಆಚರಣೆಯಲ್ಲಿದೆ. ಜಾನಪದ ಹಿನ್ನಲೆಯ ಕಥೆಯಂತೆ ಸಂಕ್ರಾಂತಿಯಂದು ಲಕ್ಷ್ಮಿತವರಿಗೆ ಹೊರಟಿದ್ದರಿಂದ ಕೋಪಗೊಂಡ ವಿಷ್ಣುವು ಬೇಟೆ ಆಡುವ ನೆಪದಲ್ಲಿ ಕಾಡಿಗೆ ತೆರಳುತ್ತಾನೆ. ಗಂಡನನ್ನು ತಡೆಯಲು ಲಕ್ಷ್ಮಿಯು ಕಾಡಿನಲ್ಲಿ ಮೊಲವನ್ನು ಆತನ ದಾರಿಗೆ ಅಡ್ಡವಾಗಿ ಬರುವಂತೆ ಮಾಡಿದ್ದರಿಂದ ಮೊಲ ಅಡ್ಡ ಬಂದಿದ್ದು ಅಪಶಕುನ ಎಂದು ಭಾವಿಸಿದ ವಿಷ್ಣುವು ವಾಪಸ್ಸ್ ನಾಡಿಗೆ ತೆರಳುತ್ತಾನೆ.ಈ ಹಿನ್ನಲೆಯೂ ಮೊಲ ಬಿಡುವ ಸಂಪ್ರದಾಯಕ್ಕೆ ಕಾರಣವಾಗಿದೆ.

ಮಕರ ಸಂಕ್ರಮಣದ ಹಿಂದಿನ ದಿನ ಕಾಡಿಗೆ ತೆರಳಿ ಮೊಲ ಹಿಡಿದು ತಂದು ಸಂಕ್ರಮಣದ ಮಾರನೆ ದಿನ ಕಾಡಿಗೆ ವಾಪಸ್ಸ್ ಬಿಡುವುದು ಅನುಚಾನವಾಗಿ ಆಚರಣೆಯಲ್ಲಿದೆ. ಬಹುದಿನಗಳಿಂದಲೂ ಈ ಮೊಲ ಬಿಡುವುದನ್ನು ವರದರಾಜಸ್ವಾಮಿ, ದುರ್ಗಮ್ಮದೇವಿ ಹಾಗೂ ಮುಳ್ಳಲಗೆ ಬೂತರಾಯಸ್ವಾಮಿಯ ಸಮ್ಮುಖದಲ್ಲಿ ಚನ್ನಜ್ಜನ ವಂಶಸ್ಥರು,ಒಕ್ಕಲಿನವರು ನಡೆಸಿಕೊಂಡು ಬರುತ್ತಿದ್ದಾರೆ.ವಿಷ್ಣುವಿನ ಅಪರಾವತಾರ ಎನ್ನುವ ಮೊಲಕ್ಕೆ ವರದರಾಜ ಸ್ವಾಮಿ ಸಮ್ಮುಖದಲ್ಲಿ ಪೂಜೆ ಸಲ್ಲಿಸಿ ಕಿವಿಗೆ ಮುರು ಚುಚ್ಚಿ ವಾದ್ಯ ಮೇಳದೊಂದಿಗೆ ದೇವರುಗಳ ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಮೊಲ ಬಿಡಲಾಗುತ್ತದೆ.ಈ ಮೊಲ ಯಾವ ದಿಕ್ಕಿನ ಕಡೆ ಜಿಗಿದು ಹೋಗುತ್ತದೋ ಆ ದಿಕ್ಕಿನಲ್ಲಿ ಉತ್ತಮ ಮಳೆ,ಬೆಳೆಯಾಗುತ್ತದೆ ಎಂಬ ಪ್ರತೀತಿ ಇದೆ.
ಹುಳಿಯಾರು ಹೋಬಳಿ ಸೀಗೆಬಾಗಿಯ ವರದರಾಜಸ್ವಾಮಿ ದೇವಾಲಯದಲ್ಲಿ ನಡೆದ ನೂರೊಂದೆಡೆ ಸೇವೆ.

ಈ ಹಿನ್ನಲೆಯಲ್ಲಿ ಸಂಕ್ರಾತಿಯು ಹೋಬಳಿಯ ಸೀಗೆಬಾಗಿ ಗ್ರಾಮದಲ್ಲಿ ಎರಡು ದಿನಗಳಕಾಲ ವಿಜೃಂಭಣೆಯಿಂದ ನಡೆಯಿತು.ಹಬ್ಬದ ದಿನದಂದು ಗ್ರಾಮದವರು ತಮ್ಮ ಮನೆಯಲ್ಲಿ ಸಿದ್ದ ಮಾಡಿದ ಎಡೆಯನ್ನು ತಂದು ವರದರಾಜ ಸ್ವಾಮಿಗೆ ಅರ್ಪಿಸುವ ಮೂಲಕ ಎಡೆಗೆಸೇವೆ ಹಾಗೂ ಪೂಜಾ ಕೈಂಕರ್ಯ ನಡೆಸಿದರು. ಹಬ್ಬದ ಮಾರನೇ ದಿನ ಶನಿವಾರ ಮುಂಜಾನೆ ವರದರಾಜ ಸ್ವಾಮಿ ದೇವಾಲಯದಲ್ಲಿ ಸಂಪ್ರದಾಯ ಉಡುಗೆ ತೊಟ್ಟು ದಾಸಪ್ಪಗಳು ನೂರೊಂದೆಡೆ ಸೇವೆ ಸಲ್ಲಿಸಿ ನಂತರ ಗ್ರಾಮದ ಪ್ರತಿಯೊಂದು ಮನೆಗೆ ಹೋಗಿ ಸಾಂಕೇತಿಕವಾಗಿ ಪಡಿ ಬೇಡಿದರು.ಸಂಜೆ ಗ್ರಾಮಸ್ಥರು ದುರ್ಗಮ್ಮ ದೇವಿಗೆ ಮಡಲಕ್ಕಿ ಹಾಕಿ ಪೂಜೆ ಸಲ್ಲಿಸಿದ ಬಳಿಕ ಸ್ವಾಮಿ ಹಾಗೂ ಅಮ್ಮನವರನ್ನು ಹೊರಡಿಸಿ ಮತ್ತೆ ಮೊಲವನ್ನು ಕಾಡಿಗೆ ಬಿಡುವ ಮೂಲಕ ಸಂಕ್ರಾಂತಿಗೆ ತೆರೆ ಎಳೆಯಲಾಯಿತು.
----------------

ವಿಷ್ಣುವಿನ ಹೆಸರಿನಲ್ಲಿ ಸಾಂಕೇತಿಕವಾಗಿ ಮೊಲ ಹಿಡಿದು ಬಿಡುವುದು ಇಲ್ಲಿ ರೂಢಿಗತವಾಗಿದ್ದು ಗುಡ್ಡಬೆಟ್ಟಗಳೆಲ್ಲ ಬಯಲಾಗಿ ಮೊಲ ಸಿಗುವುದೇ ಕಷ್ಟಕರವಾಗಿದ್ದರೂ ಸಹ ಸಂಪ್ರದಾಯವನ್ನು ಬಿಡದೆ ಪಾಲಿಸಿಕೊಂಡು ಬರಲಾಗುತ್ತಿದೆ: ಭಕ್ತೇಶ್,ಅರ್ಚಕರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...