ವಿಷಯಕ್ಕೆ ಹೋಗಿ

ಗ್ರಾಮಸಭೆಗೆ ನೀರಸ ಪ್ರತಿಕ್ರಿಯೆ

ಹುಳಿಯಾರು ಗ್ರಾಪಂ ಆವರಣದಲ್ಲಿ ನಡೆ ಗ್ರಾಮ ಸಭೆಯಲ್ಲಿ ಗ್ರಾ.ಪಂ. ಅಧ್ಯಕ್ಷೆ ಗೀತಾ ಪ್ರದೀಪ್,ಪಿಡಿಓ ಸಿದ್ದರಾಮಯ್ಯ,ದೇವರಾಜು,ದಯಾನಂದ್, ಉಮಾ ಮಹೇಶ್,ವೆಂಕಟೇಶ್ ಇದ್ದರು.
ಹುಳಿಯಾರು: ವಸತಿ ಯೋಜನೆಯಡಿಯಲ್ಲಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡಗಳ ಫಲಾನುಭವಿಗಳ ಪಟ್ಟಿಮಾಡಲು ಹುಳಿಯಾರು ಗ್ರಾಮ ಪಂಚಾಯ್ತಿ ಆವರಣದಲ್ಲಿ ಕರೆಯಲಾಗಿದ್ದ ಗ್ರಾಮಸಭೆಗೆ ನೀರಸ ಪ್ರತಿಕ್ರಿಯ ಕಂಡುಬಂತು.
          ವಸತಿ ಯೋಜನೆಯಲ್ಲದೆ ಐಪಿಪಿಇ-೨ ಮತ್ತು "ನಮ್ಮ ಗ್ರಾಮ ನಮ್ಮ ಯೋಜನೆ"ಯ ಬಗ್ಗೆ ಕೂಡ ಚರ್ಚಿಸಲು ಈ ಸಭೆ ಕರೆಯಲಾಗಿತ್ತು.
                 ಆಹ್ವಾನ ಪತ್ರಿಕೆಯಲ್ಲಿ ಸಚಿವರು,ಸಂಸದರು,ವಿಧಾನ ಪರಿಷತ್ ಸದಸ್ಯರು,ಶಾಸಕರು ಹೀಗೆ ಹಲವಾರು ಮಂದಿ ಜನಪ್ರತಿನಿಧಿಗಳ ಸಾಲುಸಾಲು ಹೆಸರಿದ್ದರೂ ಕೂಡ ಅವೆಲ್ಲಾ ಕೇವಲ ಶಿಷ್ಟಾಚಾರ ಪಾಲಿಸುವ ಸಲುವಾಗಿಯಾದ್ದರಿಂದ ಸಭೆಗೆ ಯಾವೊಬ್ಬ ಜನಪ್ರತಿನಿಧಿಗಳ ಆಗಮಿಸಿರಲಿಲ್ಲಾ.ಶಾಸಕರು ಈ ಸಭೆಗೂ ಮುಂಚೆ ಅದೇ ವೇದಿಕೆಯಲ್ಲೇ ಬೇರೊಂದು ಕಾರ್ಯಕ್ರಮ ಉದ್ಘಾಟಿಸಿ ಭಾಷಣ ಮಾಡಿ ಬೇರೊಂದು ಕಾರ್ಯಕ್ರಮಕ್ಕೆ ತೆರಳಿದ್ದರಿಂದ ಅವರೊಂದಿಗೆ ಅವರ ಬೆಂಬಲಿಗರು ಕೂಡ ಹೋಗಿದ್ದರಿಂದ ಸಭೆಯಲ್ಲಿ ಗ್ರಾಪಂ ಸದಸ್ಯರ ಸಂಖ್ಯೆ ಕಡಿಮೆಯಿತ್ತು.ಅಲ್ಲದೆ ಇದು ಕೇವಲ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಮಾತ್ರ ಸಿಮೀತವಾಗಿರುವುದರಿಂದ ಸಾರ್ವಜನಿಕರು ಹೆಚ್ಚಾಗಿ ಕಂಡುಬಾರದೆ ಕೇವಲ ಬೆರಳೇಣಿಕೆಯಷ್ಟು ಜನ ಕಂಡುಬಂತು.
                         ಪಿಡಿಓ ಸಿದ್ದರಾಮಯ್ಯ ಮಾತನಾಡಿ ಅಂಬೇಡ್ಕರ್ ವಸತಿ ಯೋಜನೆಯಲ್ಲಿ ಎಸ್‌ಸಿಗೆ ೧೧ ಮತ್ತು ಎಸ್‌ಟಿಗೆ ೨ ಮನೆ ಸೇರಿ ಒಟ್ಟು ೧೩ ಗ್ರ್ಯಾಂಟ್ ಗಳು ಸರಕಾರದಿಂದ ಬಂದಿದ್ದು ಫಲಾನುಭವಿಗಳ ಆಯ್ಕೆ ಹಾಗೂ ಅನುಸರಿಸಬೇಕಾದ ಕ್ರಮದ ಬಗ್ಗೆ ಮಾಹಿತಿ ನೀಡಿದರು.ಈ ಬಗ್ಗೆ ಗ್ರಾಪಂ ವ್ಯಾಪ್ತಿಯ ಎಲ್ಲಡೆ ಪ್ರಚಾರ ಕೈಗೊಂಡಿದ್ದಾಗ್ಯೂ ಕೇವಲ ೧೦ ಅರ್ಜಿಗಳು ಬಂದಿದ್ದವು. ಬಂದ ೧೦ ಅರ್ಜಿಗಳಿಗೂ ಗ್ರ್ಯಾಂಟ್ ನೀಡಿ ಉಳಿದ ಫಲಾನುಭವಿಗಳನ್ನು ಮೂರ್ನಾಲ್ಕು ದಿನಗಳಲ್ಲಿ ಆಯ್ಕೆ ಮಾಡಿ ಮುಂದಿನ ಕ್ರಮಕ್ಕೆ ಕಳುಹಿಸುವುದಾಗಿ ಸಭೆಯಲ್ಲಿ ತಿಳಿಸಿದರು.
                  ಇದೇ ಸಮಯದಲ್ಲಿ ಹುಳಿಯಾರು ಪಟ್ಟಣಕ್ಕೆ ಸರಬರಾಜಾಗುತ್ತಿರುವ ನೀರು ದುರ್ವಾಸನೆಯಿಂದ ಕೂಡಿದ್ದು ಜನರು ದಿನಬಳಕೆಗೂ ಸಹಾ ಬಳಸಲು ಅಸಾಧ್ಯವಾಗಿದ್ದು ಕೂಡಲೇ ಟ್ಯಾಂಕನ್ನು ಶುದ್ಧೀಕರಿಸಿ ನೀರು ಸರಬರಾಜು ಮಾಡುವಂತೆ ಗ್ರಾಮಸ್ಥ ಜಗದೀಶ್ ಮನವಿ ಮಾಡಿದರು.

                         ಒಟ್ಟಾರೆ ಸಭೆಯಲ್ಲಿ ಯೋಜನೆ ಬಗ್ಗೆ ಸಮರ್ಪಕವಾದ ಜನಸ್ಪಂದನೆ ದೊರೆಯದೆ ಕೇವಲ ಬೆರಳೆಣಿಕೆಯ ಅರ್ಜಿ ಬಂದಿತ್ತು.ಹಾಗೂ ಹೆಚ್ಚಿನ ಚರ್ಚೆ ,ಮನವಿಗಳಿಲ್ಲದೆ ,ಎಂದಿನ ಗದ್ದಲವಿಲ್ಲದೆ ಗ್ರಾಮ ಸಭೆ ಮುಕ್ತಾಯವಾಯಿತು.

                                  ಗ್ರಾ.ಪಂ. ಅಧ್ಯಕ್ಷೆ ಗೀತಾ ಪ್ರದೀಪ್ ಅಧ್ಯಕ್ಷತೆ ವಹಿಸಿದ್ದರು, ಉಪಾಧ್ಯಕ್ಷ    ಗಣೇಶ್, ನೋಡಲ್ ಅಧಿಕಾರಿ ದೇವರಾಜು,ಸದಸ್ಯರಾದ ಬಿಂದು ರಮೇಶ್, ಗೀತಬಾಬು, ಶಶಿಕಲಾ,  ಪುಟ್ಟಮ್ಮ, ವೆಂಕಟೇಶ್, ಬಡ್ಡಿಪುಟ್ಟಣ್ಣ,ಎಸ್.ಆರ್.ಎಸ್.ದಯಾನಂದ್, ಶಂಕರ್,
ಚಂದ್ರಶೇಖರ್, ಸಿದ್ದಗಂಗಮ್ಮ ಹಾಗೂ ಗ್ರಾ.ಪಂ. ಕಾರ್ಯದರ್ಶಿ ಉಮಾ ಮಹೇಶ್,ಬಿಲ್ ಕಲೆಕ್ಟರ್ ವೆಂಕಟೇಶ್ ಮತ್ತಿತರರಿದ್ದರು. 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...