ವಿಷಯಕ್ಕೆ ಹೋಗಿ

ಗ್ರಾಮಸಭೆಗೆ ನೀರಸ ಪ್ರತಿಕ್ರಿಯೆ

ಹುಳಿಯಾರು ಗ್ರಾಪಂ ಆವರಣದಲ್ಲಿ ನಡೆ ಗ್ರಾಮ ಸಭೆಯಲ್ಲಿ ಗ್ರಾ.ಪಂ. ಅಧ್ಯಕ್ಷೆ ಗೀತಾ ಪ್ರದೀಪ್,ಪಿಡಿಓ ಸಿದ್ದರಾಮಯ್ಯ,ದೇವರಾಜು,ದಯಾನಂದ್, ಉಮಾ ಮಹೇಶ್,ವೆಂಕಟೇಶ್ ಇದ್ದರು.
ಹುಳಿಯಾರು: ವಸತಿ ಯೋಜನೆಯಡಿಯಲ್ಲಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡಗಳ ಫಲಾನುಭವಿಗಳ ಪಟ್ಟಿಮಾಡಲು ಹುಳಿಯಾರು ಗ್ರಾಮ ಪಂಚಾಯ್ತಿ ಆವರಣದಲ್ಲಿ ಕರೆಯಲಾಗಿದ್ದ ಗ್ರಾಮಸಭೆಗೆ ನೀರಸ ಪ್ರತಿಕ್ರಿಯ ಕಂಡುಬಂತು.
          ವಸತಿ ಯೋಜನೆಯಲ್ಲದೆ ಐಪಿಪಿಇ-೨ ಮತ್ತು "ನಮ್ಮ ಗ್ರಾಮ ನಮ್ಮ ಯೋಜನೆ"ಯ ಬಗ್ಗೆ ಕೂಡ ಚರ್ಚಿಸಲು ಈ ಸಭೆ ಕರೆಯಲಾಗಿತ್ತು.
                 ಆಹ್ವಾನ ಪತ್ರಿಕೆಯಲ್ಲಿ ಸಚಿವರು,ಸಂಸದರು,ವಿಧಾನ ಪರಿಷತ್ ಸದಸ್ಯರು,ಶಾಸಕರು ಹೀಗೆ ಹಲವಾರು ಮಂದಿ ಜನಪ್ರತಿನಿಧಿಗಳ ಸಾಲುಸಾಲು ಹೆಸರಿದ್ದರೂ ಕೂಡ ಅವೆಲ್ಲಾ ಕೇವಲ ಶಿಷ್ಟಾಚಾರ ಪಾಲಿಸುವ ಸಲುವಾಗಿಯಾದ್ದರಿಂದ ಸಭೆಗೆ ಯಾವೊಬ್ಬ ಜನಪ್ರತಿನಿಧಿಗಳ ಆಗಮಿಸಿರಲಿಲ್ಲಾ.ಶಾಸಕರು ಈ ಸಭೆಗೂ ಮುಂಚೆ ಅದೇ ವೇದಿಕೆಯಲ್ಲೇ ಬೇರೊಂದು ಕಾರ್ಯಕ್ರಮ ಉದ್ಘಾಟಿಸಿ ಭಾಷಣ ಮಾಡಿ ಬೇರೊಂದು ಕಾರ್ಯಕ್ರಮಕ್ಕೆ ತೆರಳಿದ್ದರಿಂದ ಅವರೊಂದಿಗೆ ಅವರ ಬೆಂಬಲಿಗರು ಕೂಡ ಹೋಗಿದ್ದರಿಂದ ಸಭೆಯಲ್ಲಿ ಗ್ರಾಪಂ ಸದಸ್ಯರ ಸಂಖ್ಯೆ ಕಡಿಮೆಯಿತ್ತು.ಅಲ್ಲದೆ ಇದು ಕೇವಲ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಮಾತ್ರ ಸಿಮೀತವಾಗಿರುವುದರಿಂದ ಸಾರ್ವಜನಿಕರು ಹೆಚ್ಚಾಗಿ ಕಂಡುಬಾರದೆ ಕೇವಲ ಬೆರಳೇಣಿಕೆಯಷ್ಟು ಜನ ಕಂಡುಬಂತು.
                         ಪಿಡಿಓ ಸಿದ್ದರಾಮಯ್ಯ ಮಾತನಾಡಿ ಅಂಬೇಡ್ಕರ್ ವಸತಿ ಯೋಜನೆಯಲ್ಲಿ ಎಸ್‌ಸಿಗೆ ೧೧ ಮತ್ತು ಎಸ್‌ಟಿಗೆ ೨ ಮನೆ ಸೇರಿ ಒಟ್ಟು ೧೩ ಗ್ರ್ಯಾಂಟ್ ಗಳು ಸರಕಾರದಿಂದ ಬಂದಿದ್ದು ಫಲಾನುಭವಿಗಳ ಆಯ್ಕೆ ಹಾಗೂ ಅನುಸರಿಸಬೇಕಾದ ಕ್ರಮದ ಬಗ್ಗೆ ಮಾಹಿತಿ ನೀಡಿದರು.ಈ ಬಗ್ಗೆ ಗ್ರಾಪಂ ವ್ಯಾಪ್ತಿಯ ಎಲ್ಲಡೆ ಪ್ರಚಾರ ಕೈಗೊಂಡಿದ್ದಾಗ್ಯೂ ಕೇವಲ ೧೦ ಅರ್ಜಿಗಳು ಬಂದಿದ್ದವು. ಬಂದ ೧೦ ಅರ್ಜಿಗಳಿಗೂ ಗ್ರ್ಯಾಂಟ್ ನೀಡಿ ಉಳಿದ ಫಲಾನುಭವಿಗಳನ್ನು ಮೂರ್ನಾಲ್ಕು ದಿನಗಳಲ್ಲಿ ಆಯ್ಕೆ ಮಾಡಿ ಮುಂದಿನ ಕ್ರಮಕ್ಕೆ ಕಳುಹಿಸುವುದಾಗಿ ಸಭೆಯಲ್ಲಿ ತಿಳಿಸಿದರು.
                  ಇದೇ ಸಮಯದಲ್ಲಿ ಹುಳಿಯಾರು ಪಟ್ಟಣಕ್ಕೆ ಸರಬರಾಜಾಗುತ್ತಿರುವ ನೀರು ದುರ್ವಾಸನೆಯಿಂದ ಕೂಡಿದ್ದು ಜನರು ದಿನಬಳಕೆಗೂ ಸಹಾ ಬಳಸಲು ಅಸಾಧ್ಯವಾಗಿದ್ದು ಕೂಡಲೇ ಟ್ಯಾಂಕನ್ನು ಶುದ್ಧೀಕರಿಸಿ ನೀರು ಸರಬರಾಜು ಮಾಡುವಂತೆ ಗ್ರಾಮಸ್ಥ ಜಗದೀಶ್ ಮನವಿ ಮಾಡಿದರು.

                         ಒಟ್ಟಾರೆ ಸಭೆಯಲ್ಲಿ ಯೋಜನೆ ಬಗ್ಗೆ ಸಮರ್ಪಕವಾದ ಜನಸ್ಪಂದನೆ ದೊರೆಯದೆ ಕೇವಲ ಬೆರಳೆಣಿಕೆಯ ಅರ್ಜಿ ಬಂದಿತ್ತು.ಹಾಗೂ ಹೆಚ್ಚಿನ ಚರ್ಚೆ ,ಮನವಿಗಳಿಲ್ಲದೆ ,ಎಂದಿನ ಗದ್ದಲವಿಲ್ಲದೆ ಗ್ರಾಮ ಸಭೆ ಮುಕ್ತಾಯವಾಯಿತು.

                                  ಗ್ರಾ.ಪಂ. ಅಧ್ಯಕ್ಷೆ ಗೀತಾ ಪ್ರದೀಪ್ ಅಧ್ಯಕ್ಷತೆ ವಹಿಸಿದ್ದರು, ಉಪಾಧ್ಯಕ್ಷ    ಗಣೇಶ್, ನೋಡಲ್ ಅಧಿಕಾರಿ ದೇವರಾಜು,ಸದಸ್ಯರಾದ ಬಿಂದು ರಮೇಶ್, ಗೀತಬಾಬು, ಶಶಿಕಲಾ,  ಪುಟ್ಟಮ್ಮ, ವೆಂಕಟೇಶ್, ಬಡ್ಡಿಪುಟ್ಟಣ್ಣ,ಎಸ್.ಆರ್.ಎಸ್.ದಯಾನಂದ್, ಶಂಕರ್,
ಚಂದ್ರಶೇಖರ್, ಸಿದ್ದಗಂಗಮ್ಮ ಹಾಗೂ ಗ್ರಾ.ಪಂ. ಕಾರ್ಯದರ್ಶಿ ಉಮಾ ಮಹೇಶ್,ಬಿಲ್ ಕಲೆಕ್ಟರ್ ವೆಂಕಟೇಶ್ ಮತ್ತಿತರರಿದ್ದರು. 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...