ವಿಷಯಕ್ಕೆ ಹೋಗಿ

ಶುದ್ಧಗಂಗಾ ಯೋಜನೆ ಸದುಪಯೋಗಪಡಿಸಿಕೊಳ್ಳಿ: ಶಾಸಕ ಸುರೇಶ್ ಬಾಬು

ತಾಲ್ಲೂಕಿನಾದ್ಯಂತ ಅಂತರ್ಜಲದ ಮಟ್ಟ ದಿನೆದಿನೆ ಕುಸಿಯುತ್ತಿದ್ದು ಕೊಳವೆ ಬಾವಿಗಳ ನೀರಿನಲ್ಲಿ ಅಗತ್ಯ ಪ್ರಮಾಣಕ್ಕಿಂತ ಹೆಚ್ಚು ಫ್ಲೋರೈಡ್, ನೈಟ್ರೇಟ್ ಅರ್ಸೆನಿಕ್ ಮತ್ತಿತರ ಅನುಪಯುಕ್ತ ಖನಿಜಗಳು ಸೇರಿ ನೀರು ಅಶುದ್ಧವಾಗಿದ್ದು ಜನ ಫ್ಲೋರೈಡ್ ನೀರು ಕುಡಿದು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಇದನ್ನು ತಪ್ಪಿಸಲು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಗ್ರಾಮಪಂಚಾಯ್ತಿಯಲ್ಲಿ ಶುದ್ಧಗಂಗಾ ಯೋಜನೆ ಪ್ರಾರಂಭಿಸಿ, 20 ಲೀ. ಮಿನರಲ್ ನೀರಿಗೆ ಕೇವಲ ರು. 2 ಗೆ ಮಾರುವ ವ್ಯವಸ್ಥೆ ಕಲ್ಪಿಸಿದ್ದು ಇದನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಿ ಎಂದು ಶಾಸಕ ಸಿ.ಬಿ.ಸುರೇಶ್ ಬಾಬು ನುಡಿದರು.
ಹುಳಿಯಾರಿನ ಗ್ರಾಮಪಂಚಾಯತಿ ಆವರಣದಲ್ಲಿ ನಡೆದ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಶುದ್ದಗಂಗಾ ಕುಡಿಯುವ ನೀರಿನ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಸಿ.ಬಿ.ಸುರೇಶ್ ಬಾಬು ಮಾತನಾಡಿದರು.ರೋಹಿತಾಕ್ಷ,ಜಬೀಉಲ್ಲಾ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಜಿಲ್ಲಾ ನಿರ್ದೇಶಕ ಗಣೇಶ್,ಜಿಪಂ ಸದಸ್ಯೆ ಮಂಜುಳ,ಗ್ರಾಪಂ ಅಧ್ಯಕ್ಷೆ ಗೀತಾ,ಗ್ರಾಪಂಉಪಾಧ್ಯಕ್ಷ ಗಣೇಶ್ ಇದ್ದಾರೆ.


ಅವರು ಪಟ್ಟಣದಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಹಾಗೂ ಗ್ರಾಪಂ ಸಹಯೋಗದಲ್ಲಿ ಪಂಚಾಯ್ತಿ ಆವರಣದಲ್ಲಿ ಶುದ್ದಗಂಗಾ ಕುಡಿಯುವ ನೀರಿನ ಘಟಕಕ್ಕೆ ಚಾಲನೆ ನೀಡಿ ಮಾತನಾಡಿದರು.

ಶುದ್ಧ ನೀರಿನ ಸೇವನೆಯಿಂದ ಮನುಷ್ಯ ಉತ್ತಮ ಆರೋಗ್ಯ ಪಡೆಯಬಲ್ಲ.ಈ ಹಿನ್ನೆಲೆಯಲ್ಲಿ ಶುದ್ಧ ಕುಡಿಯುವ ನೀರು ನೀಡುವ ದೃಷ್ಠಿಯಲ್ಲಿ ಗ್ರಾಮೀಣ ಪ್ರದೇಶದ ನೀರಿನ ಸಮಸ್ಯೆಗಳಿಗೆ ಸಂಸ್ಥೆಯು ಶ್ರಮಿಸುತ್ತಿರುವುದು ಪ್ರಶಂಸನೀಯ. ಇಂದಿನ ಯಾಂತ್ರಿಕ ದಿನದಲ್ಲಿ ಬಾಂಧವ್ಯ ಕಳೆದುಕೊಳ್ಳುತ್ತಿರುವ ಭಾವನೆ ಎದುರಾಗುತ್ತಿದ್ದು ಧರ್ಮಸ್ಥಳ ಸಂಸ್ಥೆಯು ಸಹಕಾರ ಸಂಘಗಳ ಮೂಲಕ ಎಲ್ಲರಲ್ಲೂ ಹೊಂದಾಣಿಕೆ ಸಹಬಾಳ್ವೆಗೆ ಮುನ್ನುಡಿಹಾಡುತ್ತಿರುವುದು ಶ್ಲಾಘನೀಯ ಎಂದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಜಿಲ್ಲಾ ನಿರ್ದೇಶಕ ಗಣೇಶ್ ಮಾತನಾಡಿ ಗ್ರಾಮೀಣ ಪ್ರದೇಶದ ಸಮುದಾಯದ ಅಭಿವೃದ್ಧಿಗಾಗಿ ಸಂಸ್ಥೆಯು ಅನೇಕ ಯೋಜನೆಗಳನ್ನು ಹಮ್ಮಿಕೊಂಡು ಯಶಸ್ವಿಯಾಗಿ ನಿರ್ವಹಿಸಿದೆ.ಕಳೆದ ಐದು ವರ್ಷಗಳಿಂದ ಸಂಸ್ಥೆಯು ಸಮುದಾಯ ಅಭಿವೃದ್ಧಿ ಯೋಜನೆಯಡಿ ೨೮೫ ನೀರಿನ ಘಟಕವನ್ನು ಸ್ಥಾಪಿಸಿದ್ದು ಪ್ರತಿ ಘಟಕದಲ್ಲೂ ೫೦೦ಕ್ಕೂ ಹೆಚ್ಚು ಕುಟುಂಬಗಳು ಶುದ್ದ ಕುಡಿಯುವ ನೀರನ್ನು ಬಳಕೆ ಮಾಡಿಕೊಳುತ್ತಿದ್ದಾರೆ.ಹೋಬಳಿಯಲ್ಲಿ ಹೊಯ್ಸಳಕಟ್ಟೆ ಹಾಗೂ ಹುಳಿಯಾರಿನಲ್ಲಿ ನೀರಿನ ಘಟಕಕ್ಕೆ ಚಾಲನೆ ನೀಡಲಾಗಿದ್ದು ಪ್ರತಿ ಲೀಟರ್ ನೀರಿಗೆ ಹತ್ತು ಪೈಸೆಯಂತೆ ಮಾರಾಟ ಮಾಡಲಾಗುತ್ತಿದ್ದು ಸದಸ್ಯತ್ವ ನೋಂದಣಿಮಾಡಿಸಿಕೊಳ್ಳುವ ಮೂಲಕ ನೀರನ್ನು ಪಡೆಯಬಹುದು ಎಂದರು.


ಗ್ರಾಮ ಪಂಚಾಯ್ತಿ ಸದಸ್ಯ ಹಾಗೂ ಮುತುವಲ್ಲಿ ಜಬೀಉಲ್ಲಾಸಾಬ್ ಮಾತನಾಡಿ ಗ್ರಾಮೀಣ ಭಾಗದ ಜನರಿಗೆ ಶುದ್ಧ ನೀರು ಪೂರೈಕೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿಯಲ್ಲಿ ನೀರಿನ ಘಟಕ ಸ್ಥಾಪಿಸಿರುವುದು ಅನುಕೂಲಕರ.ಪಟ್ಟಣದಲ್ಲಿ ಶಾಸಕರು ಎಂಟು ಬೋರ್ ಗಳನ್ನು ಹೊಸದಾಗಿ ಕೊರೆಸಿದ್ದು ಸಮೃದ್ಧಿಯಾಗಿ ನೀರಿದ್ದು ಇದನ್ನು ಬಳಸಿಕೊಂಡು ಇನ್ನು ಐದು ಕುಡಿಯುವ ನೀರಿನ ಘಟಕಕ್ಕೆ ಸ್ಥಾಪಿಸಿದಲ್ಲಿ ನೀರಿನ ಕೊರತೆ ನೀಗುತ್ತದೆ ಎಂದರು.
ಹುಳಿಯಾರಿನ ಗ್ರಾಮಪಂಚಾಯತಿ ಆವರಣದಲ್ಲಿ ಶುದ್ದಗಂಗಾ ಕುಡಿಯುವ ನೀರಿನ ಘಟಕಕ್ಕೆ ಶಾಸಕ ಸಿ.ಬಿ.ಸುರೇಶ್ ಬಾಬು ಚಾಲನೆ ನೀಡಿದರು.ಗ್ರಾಪಂ ಅಧ್ಯಕ್ಷೆ ಗೀತಾ, ಜಿಪಂ ಸದಸ್ಯೆ ಮಂಜುಳ,ಗ್ರಾಪಂ ಸದಸ್ಯರುಗಳಾದ ಸಿದ್ದಗಂಗಮ್ಮ,ಬಿಂಧು ರಮೇಶ್ ಬಾಬು ಮತ್ತಿತರರಿದ್ದಾರೆ.


ಸಮಾರಂಭದಲ್ಲಿ ಗ್ರಾಮಪಂಚಾಯತಿ ಅಧ್ಯಕ್ಷೆ ಗೀತಾಪ್ರದೀಪ್.ಜಿಲ್ಲಾಪಂಚಾಯ್ತಿ ಸದಸ್ಯೆ ಮಂಜುಳ,ಗ್ರಾಪಂಉಪಾಧ್ಯಕ್ಷ ಗಣೇಶ್,ಚಿಕ್ಕನಾಯಕನಹಳ್ಳಿ ತಾಲೂಕು ಯೋಜನಾಧಿಕಾರಿ ರೋಹಿತಾಕ್ಷ ವಲಯದ ಮೇಲ್ವಿಚಾರಕ ಕಮಲಾಕರ್,ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಸಿದ್ದರಾಮಣ್ಣ,ಕಾರ್ಯದರ್ಶಿ ಉಮಾಮಹೇಶ್ ಹಾಗೂ ಗ್ರಾ,ಪಂ ಸದಸ್ಯರುಗಳು ಹಾಜರಿದ್ದರು. 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...