ವಿಷಯಕ್ಕೆ ಹೋಗಿ

ಶುದ್ಧಗಂಗಾ ಯೋಜನೆ ಸದುಪಯೋಗಪಡಿಸಿಕೊಳ್ಳಿ: ಶಾಸಕ ಸುರೇಶ್ ಬಾಬು

ತಾಲ್ಲೂಕಿನಾದ್ಯಂತ ಅಂತರ್ಜಲದ ಮಟ್ಟ ದಿನೆದಿನೆ ಕುಸಿಯುತ್ತಿದ್ದು ಕೊಳವೆ ಬಾವಿಗಳ ನೀರಿನಲ್ಲಿ ಅಗತ್ಯ ಪ್ರಮಾಣಕ್ಕಿಂತ ಹೆಚ್ಚು ಫ್ಲೋರೈಡ್, ನೈಟ್ರೇಟ್ ಅರ್ಸೆನಿಕ್ ಮತ್ತಿತರ ಅನುಪಯುಕ್ತ ಖನಿಜಗಳು ಸೇರಿ ನೀರು ಅಶುದ್ಧವಾಗಿದ್ದು ಜನ ಫ್ಲೋರೈಡ್ ನೀರು ಕುಡಿದು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಇದನ್ನು ತಪ್ಪಿಸಲು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಗ್ರಾಮಪಂಚಾಯ್ತಿಯಲ್ಲಿ ಶುದ್ಧಗಂಗಾ ಯೋಜನೆ ಪ್ರಾರಂಭಿಸಿ, 20 ಲೀ. ಮಿನರಲ್ ನೀರಿಗೆ ಕೇವಲ ರು. 2 ಗೆ ಮಾರುವ ವ್ಯವಸ್ಥೆ ಕಲ್ಪಿಸಿದ್ದು ಇದನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಿ ಎಂದು ಶಾಸಕ ಸಿ.ಬಿ.ಸುರೇಶ್ ಬಾಬು ನುಡಿದರು.
ಹುಳಿಯಾರಿನ ಗ್ರಾಮಪಂಚಾಯತಿ ಆವರಣದಲ್ಲಿ ನಡೆದ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಶುದ್ದಗಂಗಾ ಕುಡಿಯುವ ನೀರಿನ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಸಿ.ಬಿ.ಸುರೇಶ್ ಬಾಬು ಮಾತನಾಡಿದರು.ರೋಹಿತಾಕ್ಷ,ಜಬೀಉಲ್ಲಾ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಜಿಲ್ಲಾ ನಿರ್ದೇಶಕ ಗಣೇಶ್,ಜಿಪಂ ಸದಸ್ಯೆ ಮಂಜುಳ,ಗ್ರಾಪಂ ಅಧ್ಯಕ್ಷೆ ಗೀತಾ,ಗ್ರಾಪಂಉಪಾಧ್ಯಕ್ಷ ಗಣೇಶ್ ಇದ್ದಾರೆ.


ಅವರು ಪಟ್ಟಣದಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಹಾಗೂ ಗ್ರಾಪಂ ಸಹಯೋಗದಲ್ಲಿ ಪಂಚಾಯ್ತಿ ಆವರಣದಲ್ಲಿ ಶುದ್ದಗಂಗಾ ಕುಡಿಯುವ ನೀರಿನ ಘಟಕಕ್ಕೆ ಚಾಲನೆ ನೀಡಿ ಮಾತನಾಡಿದರು.

ಶುದ್ಧ ನೀರಿನ ಸೇವನೆಯಿಂದ ಮನುಷ್ಯ ಉತ್ತಮ ಆರೋಗ್ಯ ಪಡೆಯಬಲ್ಲ.ಈ ಹಿನ್ನೆಲೆಯಲ್ಲಿ ಶುದ್ಧ ಕುಡಿಯುವ ನೀರು ನೀಡುವ ದೃಷ್ಠಿಯಲ್ಲಿ ಗ್ರಾಮೀಣ ಪ್ರದೇಶದ ನೀರಿನ ಸಮಸ್ಯೆಗಳಿಗೆ ಸಂಸ್ಥೆಯು ಶ್ರಮಿಸುತ್ತಿರುವುದು ಪ್ರಶಂಸನೀಯ. ಇಂದಿನ ಯಾಂತ್ರಿಕ ದಿನದಲ್ಲಿ ಬಾಂಧವ್ಯ ಕಳೆದುಕೊಳ್ಳುತ್ತಿರುವ ಭಾವನೆ ಎದುರಾಗುತ್ತಿದ್ದು ಧರ್ಮಸ್ಥಳ ಸಂಸ್ಥೆಯು ಸಹಕಾರ ಸಂಘಗಳ ಮೂಲಕ ಎಲ್ಲರಲ್ಲೂ ಹೊಂದಾಣಿಕೆ ಸಹಬಾಳ್ವೆಗೆ ಮುನ್ನುಡಿಹಾಡುತ್ತಿರುವುದು ಶ್ಲಾಘನೀಯ ಎಂದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಜಿಲ್ಲಾ ನಿರ್ದೇಶಕ ಗಣೇಶ್ ಮಾತನಾಡಿ ಗ್ರಾಮೀಣ ಪ್ರದೇಶದ ಸಮುದಾಯದ ಅಭಿವೃದ್ಧಿಗಾಗಿ ಸಂಸ್ಥೆಯು ಅನೇಕ ಯೋಜನೆಗಳನ್ನು ಹಮ್ಮಿಕೊಂಡು ಯಶಸ್ವಿಯಾಗಿ ನಿರ್ವಹಿಸಿದೆ.ಕಳೆದ ಐದು ವರ್ಷಗಳಿಂದ ಸಂಸ್ಥೆಯು ಸಮುದಾಯ ಅಭಿವೃದ್ಧಿ ಯೋಜನೆಯಡಿ ೨೮೫ ನೀರಿನ ಘಟಕವನ್ನು ಸ್ಥಾಪಿಸಿದ್ದು ಪ್ರತಿ ಘಟಕದಲ್ಲೂ ೫೦೦ಕ್ಕೂ ಹೆಚ್ಚು ಕುಟುಂಬಗಳು ಶುದ್ದ ಕುಡಿಯುವ ನೀರನ್ನು ಬಳಕೆ ಮಾಡಿಕೊಳುತ್ತಿದ್ದಾರೆ.ಹೋಬಳಿಯಲ್ಲಿ ಹೊಯ್ಸಳಕಟ್ಟೆ ಹಾಗೂ ಹುಳಿಯಾರಿನಲ್ಲಿ ನೀರಿನ ಘಟಕಕ್ಕೆ ಚಾಲನೆ ನೀಡಲಾಗಿದ್ದು ಪ್ರತಿ ಲೀಟರ್ ನೀರಿಗೆ ಹತ್ತು ಪೈಸೆಯಂತೆ ಮಾರಾಟ ಮಾಡಲಾಗುತ್ತಿದ್ದು ಸದಸ್ಯತ್ವ ನೋಂದಣಿಮಾಡಿಸಿಕೊಳ್ಳುವ ಮೂಲಕ ನೀರನ್ನು ಪಡೆಯಬಹುದು ಎಂದರು.


ಗ್ರಾಮ ಪಂಚಾಯ್ತಿ ಸದಸ್ಯ ಹಾಗೂ ಮುತುವಲ್ಲಿ ಜಬೀಉಲ್ಲಾಸಾಬ್ ಮಾತನಾಡಿ ಗ್ರಾಮೀಣ ಭಾಗದ ಜನರಿಗೆ ಶುದ್ಧ ನೀರು ಪೂರೈಕೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿಯಲ್ಲಿ ನೀರಿನ ಘಟಕ ಸ್ಥಾಪಿಸಿರುವುದು ಅನುಕೂಲಕರ.ಪಟ್ಟಣದಲ್ಲಿ ಶಾಸಕರು ಎಂಟು ಬೋರ್ ಗಳನ್ನು ಹೊಸದಾಗಿ ಕೊರೆಸಿದ್ದು ಸಮೃದ್ಧಿಯಾಗಿ ನೀರಿದ್ದು ಇದನ್ನು ಬಳಸಿಕೊಂಡು ಇನ್ನು ಐದು ಕುಡಿಯುವ ನೀರಿನ ಘಟಕಕ್ಕೆ ಸ್ಥಾಪಿಸಿದಲ್ಲಿ ನೀರಿನ ಕೊರತೆ ನೀಗುತ್ತದೆ ಎಂದರು.
ಹುಳಿಯಾರಿನ ಗ್ರಾಮಪಂಚಾಯತಿ ಆವರಣದಲ್ಲಿ ಶುದ್ದಗಂಗಾ ಕುಡಿಯುವ ನೀರಿನ ಘಟಕಕ್ಕೆ ಶಾಸಕ ಸಿ.ಬಿ.ಸುರೇಶ್ ಬಾಬು ಚಾಲನೆ ನೀಡಿದರು.ಗ್ರಾಪಂ ಅಧ್ಯಕ್ಷೆ ಗೀತಾ, ಜಿಪಂ ಸದಸ್ಯೆ ಮಂಜುಳ,ಗ್ರಾಪಂ ಸದಸ್ಯರುಗಳಾದ ಸಿದ್ದಗಂಗಮ್ಮ,ಬಿಂಧು ರಮೇಶ್ ಬಾಬು ಮತ್ತಿತರರಿದ್ದಾರೆ.


ಸಮಾರಂಭದಲ್ಲಿ ಗ್ರಾಮಪಂಚಾಯತಿ ಅಧ್ಯಕ್ಷೆ ಗೀತಾಪ್ರದೀಪ್.ಜಿಲ್ಲಾಪಂಚಾಯ್ತಿ ಸದಸ್ಯೆ ಮಂಜುಳ,ಗ್ರಾಪಂಉಪಾಧ್ಯಕ್ಷ ಗಣೇಶ್,ಚಿಕ್ಕನಾಯಕನಹಳ್ಳಿ ತಾಲೂಕು ಯೋಜನಾಧಿಕಾರಿ ರೋಹಿತಾಕ್ಷ ವಲಯದ ಮೇಲ್ವಿಚಾರಕ ಕಮಲಾಕರ್,ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಸಿದ್ದರಾಮಣ್ಣ,ಕಾರ್ಯದರ್ಶಿ ಉಮಾಮಹೇಶ್ ಹಾಗೂ ಗ್ರಾ,ಪಂ ಸದಸ್ಯರುಗಳು ಹಾಜರಿದ್ದರು. 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.